Homeಮುಖಪುಟ21 ದಿನದ ಲಾಕ್‌ಡೌನ್‌ ಜನ ಹೀಗೆಂದರೆ, ಸತತ 6 ತಿಂಗಳ ಕಾಶ್ಮೀರಿಗಳ ಕಥೆ ಏನಾಗಿರಬೇಡ?

21 ದಿನದ ಲಾಕ್‌ಡೌನ್‌ ಜನ ಹೀಗೆಂದರೆ, ಸತತ 6 ತಿಂಗಳ ಕಾಶ್ಮೀರಿಗಳ ಕಥೆ ಏನಾಗಿರಬೇಡ?

“ಲಾಕ್‌ಡೌನ್‌ ” ಭಾಗಶಃ ಈ ಪದವನ್ನು ಈ ಹಿಂದೆ ಭಾರತೀಯರು ಎಂದಿಗೂ ಕೇಳಿರಲಿಕ್ಕಿಲ್ಲವೇನೋ? ಆದರೆ ಕಳೆದ 10 ದಿನಗಳಿಂದ ಈ ಪದವನ್ನು ಕೇಳುವುದಿರಲಿ, ಲಾಕ್‌ಡೌನ್‌ ನೀಡುತ್ತಿರುವ ಎಫೆಕ್ಟ್‌ಗೆ ಅಕ್ಷರಶಃ ನಲುಗಿ ಹೋಗಿದ್ದಾರೆ. ನಿನ್ನೆ ಮೊನ್ನೆವರೆಗೆ ಆಫೀಸು, ಕೆಲಸ, ಮೋಜು ಮಸ್ತಿ ಎಂದು ಕೈಲಿ ಬೈಕ್-ಕಾರು ಹಿಡಿದು ಜಾಲಿ ರೌಂಡ್ ಹೊಡೆಯುತ್ತಿದ್ದವರು ಇಂದು ಮೈ ಮುದುಡಿ ಮನೆಯಲ್ಲೇ ಕೂರುವಂತಾಗಿದೆ.

- Advertisement -
- Advertisement -

ಮನೆಯಲ್ಲಿ ಇದ್ದು ಬೇಸರವಾಗಿ ರೌಂಡ್ ಹೊಡೆಯಲು ಹೊರ ಬಂದವರಿಗೆ ಪೊಲೀಸರು ಬೀಸುತ್ತಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 176. ಆದರೆ ಕಳೆದ 10 ದಿನದ ಅವಧಿಯಲ್ಲಿ ಪೊಲೀಸರ ಲಾಠಿ ರುಚಿ ಕಂಡವರ ಸಂಖ್ಯೆ 5600 ನ್ನೂ ಮೀರುತ್ತಿದೆ. ಅಲ್ಲದೆ ಸಿಎಂ ಸ್ವಕ್ಷೇತ್ರ ಶೀಕಾರಿಪುರದಲ್ಲಿ ಪೊಲೀಸರ ಏಟು ತಾಳಲಾರದೆ ಸುರೇಶ್ ನಾಯ್ಕ ಎಂಬ ಓರ್ವ ಪ್ರಾಣವನ್ನೇ ಕಳೆದುಕೊಂಡಿದ್ದಾನೆ.

130 ಕೋಟಿ ಜನ ಸಂಖ್ಯೆ ಹೊಂದಿರುವ ಭಾರತದಂತಹ ದೇಶದಲ್ಲಿ ದಿಢೀರನೆ ಲಾಕ್ಡೌನ್ ಘೋಷಣೆ ಮಾಡಿದರೆ ಜನ ಹೇಗೆ ನಲುಗಬಹುದು ಎಂಬುದು ಭಾರತೀಯರಿಗೆ ಈಗ  ಅರ್ಥವಾಗಿರಬೇಕು. ಆದರೆ ಕಳೆದ 70 ವರ್ಷಗಳಲ್ಲಿ ಕಾಶ್ಮೀರದಲ್ಲಿ ಎಷ್ಟು ಬಾರಿ ಲಾಕ್‌ಡೌನ್‌ ಮಾಡಲಾಗಿದೆ. ಕಳೆದ ವರ್ಷ ಕಲಂ 370 ರದ್ದು ಪಡಿಸುವ ಸಂದರ್ಭದಲ್ಲಿ ಕಣಿವೆ ರಾಜ್ಯವನ್ನು ಸತತ 6 ತಿಂಗಳ ಕಾಲ ಲಾಕ್‌ಡೌನ್‌ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ಅಲ್ಲಿನ ಜನ ಹೇಗೆ ಕಷ್ಟಪಟ್ಟಿರಬೇಕು? ಜನ ಜೀವನ ಎಷ್ಟರ ಮಟ್ಟಿಗೆ ನಲುಗಿರಬೇಕು? ಆ 6 ತಿಂಗಳ ಅವಧಿಯಲ್ಲಿ ಅಲ್ಲಿನ ವ್ಯಾಪಾರ ವಹಿವಾಟು ಎಷ್ಟು ನಷ್ಟ ಅನುಭವಿಸಿರಬೇಕು? ಇದ್ಯಾವುದರ ಬಗ್ಗೆಯಾದರೂ ನಮಗೆ ಮಾಹಿತಿ ಇದೆಯಾ? ಈ ಕುರಿತು ಯೋಚಿಸುವ ಗೋಜಿಗೂ ನಾವು ಹೋಗಿರಲಿಕ್ಕಿಲ್ಲವೇನೋ? ಆದರೆ ಈಗ ಆ ಸಂದರ್ಭ ಎದುರಾಗಿದೆ. ಕಾಶ್ಮೀರದ ಆ 180 ದಿನದ ಲಾಕ್‌ಡೌನ್‌ ಎಂಬ ಕಪ್ಪು ದಿನದ ಕತೆಗಳನ್ನು ಹಾಗೂ ಅಲ್ಲಿನ ಬದುಕನ್ನು ಯೋಚಿಸಬೇಕಿದೆ.

6 ತಿಂಗಳು ಮನೆಯಲ್ಲೇ ಬಂದಿ

ಕೊರೋನಾ ಕಾರಣಕ್ಕೆ ಭಾರತದಲ್ಲಿ 21 ದಿನಗಳ ಲಾಕ್‌ಡೌನ್‌ ಘೋಷಿಸಲಾಗಿದೆ. ಈ 21 ದಿನಗಳ ಕಾಲ ನಾವು ಮನೆಯಲ್ಲಿ ಕೂರುವುದೇ ನಮಗೆ ಕಷ್ಟವಾಗಿದೆ. ಆದರೆ, ಕಾಶ್ಮೀರಕ್ಕೆ ಕೇಂದ್ರ ಸರ್ಕಾರ ನೀಡುತ್ತಿದ್ದ ವಿಶೇಷ ಸ್ಥಾನಮಾನ ಕಲಂ 370ನ್ನು ರದ್ದುಗೊಳಿಸಿದ ನಂತರ ಕಳೆದ ಆಗಸ್ಟ್ 05ರ ನಂತರ 6 ತಿಂಗಳು ಕಣಿವೆ ರಾಜ್ಯದ ಜನ ಮನೆಯಲ್ಲೇ ಕಳೆಯಬೇಕಾದ ಪರಿಸ್ಥಿತಿ ಎದುರಾಯಿತು.

ಅಗತ್ಯ ವಸ್ತುಗಳ ಖರೀದಿ ಹೊರತಾಗಿ ಬೇರೆ ಯಾವುದೇ ವಿಚಾರಕ್ಕೆ ಅವರು ಮನೆಯಿಂದ ಹೊರ ಬರುವಂತಿರಲಿಲ್ಲ. ರಾಜ್ಯದಲ್ಲಾದರೂ ಲಾಕ್‌ಡೌನ್‌ ಪಾಲನೆಗೆ ಪೊಲೀಸರನ್ನು ನೇಮಕ ಮಾಡಲಾಗಿದೆ. ಆದರೆ, ಕಾಶ್ಮೀರದಲ್ಲಿ ಮಿಲಿಟರಿಯನ್ನೇ ನೇಮಕ ಮಾಡಲಾಗಿತ್ತು ಎಂದರೆ ಮನೆಯಿಂದ ಹೊರ ಬಂದವರಿಗೆ ಶಿಕ್ಷೆ ಹೇಗಿರುತ್ತಿತ್ತು ಎಂಬುದನ್ನು ಬೇರೆ ಬಿಡಿಸಿ ಹೇಳಬೇಕಿಲ್ಲ.

ಕಣಿವೆ ರೈತರ ಗೋಳು ಕೇಳುವರ್ಯಾರು?

ದೇಶದಲ್ಲಿ ಯಾವುದೇ ಮೂಲೆಯಲ್ಲಿ ಓರ್ವ ರೈತ ಸಾಲದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡರೆ ಅದು ರಾಷ್ಟ್ರೀಯ ಸುದ್ದಿ. ಇನ್ನು ರಾಜ್ಯದಲ್ಲಿ ಓರ್ವ ರೈತ ಸತ್ತರೆ ಆಡಳಿತ ಪಕ್ಷದ ಕಾಲೆಳೆಯಲು ಟೀಕಿಸಲು ವಿರೋಧ ಪಕ್ಷಕ್ಕೆ ಸಿಕ್ಕ ದೊಡ್ಡ ಆಯುಧ. ಇನ್ನು ಮಾಧ್ಯಮಗಳಿಗೆ ಅದು ಹಾಟ್ ಬ್ರೇಕಿಂಗ್ ನ್ಯೂಸ್.

ಆದರೆ, ಕಾಶ್ಮೀರದಲ್ಲಿ ರೈತರು ಇಲ್ಲವೇ? ಅವರಿಗೆ ಸಾಲ ಇಲ್ಲವೇ? ಅಲ್ಲಿನ ರೈತರೂ ಮನುಷ್ಯರಲ್ಲವೇ? ಕಾಶ್ಮೀರದಲ್ಲಿ ಸಾಲದ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗುವ ರೈತರ ಕುರಿತು ನಾವು ಮರುಗುವುದು ಬೇಡ, ಎಂದಾದರೂ ಈ ಕುರಿತು ಕನಿಷ್ಟ ಯೋಚನೆ ಮಾಡಿದ್ದೇವೆಯೇ ಎಂದು ನಮ್ಮ ಆತ್ಮಸಾಕ್ಷಿಯನ್ನು ನಾವು ಪ್ರಶ್ನೆ ಮಾಡಿಕೊಂಡರೆ ಉತ್ತರ ದಕ್ಕುತ್ತದೆ.

ಅಸಲಿಗೆ ಕಾಶ್ಮೀರದ ಪ್ರಮುಖ ಬೆಳೆ ಸೇಬು ಮತ್ತು ಕೇಸರಿ. ಭಾರತಕ್ಕೆ ಶೇ.90 ರಷ್ಟು ಸೇಬಿನ ಹಣ್ಣು ಕಣಿವೆ ರಾಜ್ಯ ಕಾಶ್ಮೀರದಿಂದಲೇ ಲಭ್ಯವಾಗುತ್ತದೆ. ಇನ್ನು ಶೇ.100 ರಷ್ಟು ಕೇಸರಿ ಇಲ್ಲಿಂದಲೇ ಪೂರೈಕೆಯಾಗುತ್ತಿದೆ. ಕಾಶ್ಮೀರದ ಕೇಸರಿಗೆ ವಿಶ್ವದಾದ್ಯಂತ ಡಿಮ್ಯಾಂಡ್ ಇದೆ. ವಿಶ್ವದ ಕೇಸರಿ ಉತ್ಪಾದನೆಯಲ್ಲಿ ಕಾಶ್ಮೀರದ ಪಾಲು ಶೇ.07 ರಷ್ಟು. ಕಾಶ್ಮೀರದ ಸೇಬು ಸಹ ಸಾಕಷ್ಟು ಪ್ರಮಾಣದಲ್ಲಿ ವಿದೇಶಗಳಿಗೆ ರಫ್ತಾಗುತ್ತದೆ.

2019ರಲ್ಲಿ ಕೇಸರಿ ಮತ್ತು ಸೇಬಿನ ಬೆಳೆ ಕಾಶ್ಮೀರಿ ರೈತರಿಗೆ ಉತ್ತಮವಾಗಿಯೇ ಕೈಸೇರಿತ್ತು. ಆದರೆ ಈ ಬೆಳೆ ಮಾರುಕಟ್ಟೆಗೆ ಸೇರುವ ಹೊತ್ತಿಗೆ ಲಾಕ್‌ಡೌನ್‌ ಘೋಷಿಸಿಯಾಗಿತ್ತು. ಪರಿಣಾಮ ಕಾಶ್ಮೀರ ಸೇಬು ಉದ್ಯಮ ಆಗಸ್ಟ್‌ನಿಂದ ಅಕ್ಟೋಬರ್ ವರೆಗಿನ ಕೇವಲ ಎರಡು ತಿಂಗಳಿನಲ್ಲಿ ಅನುಭವಿಸಿದ ನಷ್ಟ ಬರೋಬ್ಬರಿ 12,000 ಕೋಟಿ ಎನ್ನುತ್ತಿವೆ ಆರ್ಥಿಕ ವಿಶ್ಲೇಷಣೆಗಳು.

ಅಕ್ಟೋಬರ್ ನಂತರ ಕೇಂದ್ರ ಸರ್ಕಾರವೇ ನೇರ ಸೇಬು ಕೊಳ್ಳಲು ಮುಂದಾದರೂ ಅಷ್ಟರೊಳಗಾಗಲೇ ಶೇ. 60ಕ್ಕೂ ಹೆಚ್ಚು ಸೇಬು ಕೊಳೆತು ಅನುಪಯುಕ್ತವಾಗಿ ಹೋಗಿತ್ತು. ಆಕ್ಟೋಬರ್ ನಂತರವೂ ಅಲ್ಲಿನ ರೈತನ ಪರಿಸ್ಥಿತಿ ಸುಧಾರಿಸಿರಲಿಲ್ಲ.

ಇನ್ನೂ ಕುರಿ ಸಾಕಾಣಕೆ ಮತ್ತು ಉತ್ಕೃಷ್ಟ ಉಣ್ಣೆ ತಯಾರಿಕೆ ಇಲ್ಲಿನ ಉಪ ಕಸುಬು. ವರ್ಷಕ್ಕೆ ಸಾವಿರಾರು ಕೋಟಿ ಹಣ ಸಂಚಯಿಸುವ ಮತ್ತೊಂದು ದೊಡ್ಡ ಉದ್ಯಮವೇ ಸರಿ. ಆದರೆ, ಸತತ 6 ತಿಂಗಳ ಲಾಕ್‌ಡೌನ್‌ ಇಲ್ಲಿನ ಉಣ್ಣೆ ಉದ್ಯಮವನ್ನೂ ಇನ್ನಿಲ್ಲದಂತೆ ಕಾಡಿತ್ತು, ಅತ್ತ ಪ್ರಮುಖ ಉದ್ಯಮವಾದ ಸೇಬು ಕೇಸರಿಯೂ ಕೈಕೊಟ್ಟಿತ್ತು, ಇತ್ತ ಉಪ ಕಸುಬು ಇಲ್ಲದೆ ಇಲ್ಲಿನ ರೈತ ಸಂಕಷ್ಟಕ್ಕೆ ಒಳಗಾದದ್ದು ಹೊರ ಜಗತ್ತಿಗೆ ತಿಳಿಯಲೇ ಇಲ್ಲ.

ಪ್ರವಾಸೋದ್ಯಮವೂ ಮಕಾಡೆ ಮಲಗಿತ್ತು

ಪ್ರವಾಸೋದ್ಯಮ ಕಣಿವೆ ರಾಜ್ಯದ ಪ್ರಮುಖ ಉದ್ಯಮಗಳಲ್ಲೊಂದು. ಇಲ್ಲಿನ ಜನ ಅತಿಹೆಚ್ಚು ಅವಲಂಬಿತವಾಗಿರುವುದು ಪ್ರವಾಸೋದ್ಯಮವನ್ನೆ. ಪ್ರವಾಸೋದ್ಯಮ ಈ ಭಾಗದ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಆಮ್ಲ ಜನಕ ಎಂದರೂ ತಪ್ಪಾಗಲಾರದು. ಪ್ರವಾಸೋದ್ಯಮವನ್ನೇ ನಂಬಿ ಇಲ್ಲಿ ಸಾವಿರಾರು ಕುಟುಂಬಗಳು ಬದುಕುತ್ತಿವೆ.

ಆದರೆ, ದಿಢೀರನೆ ಬಂದೆರಗಿದ ಲಾಕ್ಡೌನ್ ಈ ಭಾಗದಲ್ಲಿ ಪ್ರವಾಸೋದ್ಯಮವನ್ನೇ ನಂಬಿ ಬದುಕುತ್ತಿದ್ದವರ ಬದುಕನ್ನೇ ಕಸಿದಿತ್ತು. ಭಾರತದಲ್ಲೇ ಅತಿಹೆಚ್ಚು ನಿರುದ್ಯೋಗಿಗಳನ್ನು ಹೊಂದಿರುವ ರಾಜ್ಯಗಳ ಪೈಕಿ ಕಾಶ್ಮೀರವೂ ಒಂದು. ನಿರುದ್ಯೋಗದ ಜೊತೆಗೆ ಲಾಕ್‌ಡೌನ್‌‌ನಿಂದ ಪ್ರವಾಸೋದ್ಯಮವನ್ನೇ ನಂಬಿ ಬದುಕಿದ್ದವರ ಬದುಕು ಬೀದಿಗೆ ಬಂದದ್ದು ಈ ಕಾಲಾವಧಿಯಲ್ಲಿ, ಅಲ್ಲಿನ ಬಡತನ ರೇಖೆಗಿಂತ ಕೆಳಗಿದ್ದ ಶೇ.21.63 ರಷ್ಟು ಜನ ಅನುಭವಿಸಿದ ಕಷ್ಟವನ್ನು ಯಾವ ಅಂತಾರಾಷ್ಟ್ರೀಯ ಮಾಧ್ಯಮಗಳೂ ಸೆರೆ ಹಿಡಿಯಲೇ ಇಲ್ಲ.

ಲಾಕ್‌ಡೌನ್‌ ನೆಪದಲ್ಲಿ ಇಂಟರ್ನೆಟ್ ತಡೆ

ಭಾರತದಲ್ಲಿ ಇದೀಗ 21 ದಿನಗಳ ಲಾಕ್‌ಡೌನ್‌ ಘೋಷಿಸಲಾಗಿದೆ. ಲಾಕ್‌ಡೌನ್‌ ನಡುವೆಯೂ ಎಲ್ಲಾ ಜನರಿಗೆ 4ಜಿ ಇಂಟರ್ನೆಟ್ ವ್ಯವಸ್ಥೆ ಕಲ್ಪಿಸಲಾಗಿದೆ. ಜನ ಮನೆಯಲ್ಲೇ ಇದ್ದೂ ವಿಶ್ವದ ಆಗುಹೋಗುಗಳನ್ನು ತಿಳಿದುಕೊಳ್ಳಲು ಬೇಕಾದ ಎಲ್ಲಾ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.

ಆದರೆ ಲಾಕ್‌ಡೌನ್‌ ಸಮಯದಲ್ಲಿ ಕಾಶ್ಮೀರದಲ್ಲಿ ಇಂಟರ್ನೆಟ್ ಮತ್ತು ಟೆಲಿಫೋನ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ಕಡಿತಗೊಳಿಸಲಾಗಿತ್ತು. ಪರಿಣಾಮ ಕಣಿವೆ ರಾಜ್ಯ 50 ವರ್ಷಗಳಷ್ಟು ಹಿಂದುಳಿಯುವಂತಾಗಿತ್ತು.

ಶಾಲಾ ಕಾಲೇಜುಗಳನ್ನು ಸತತ 6 ತಿಂಗಳು ಬಂದ್ ಮಾಡಲಾಗಿತ್ತು. ಮಕ್ಕಳಿಗೆ ಶಿಕ್ಷಣವೂ ದೂರ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಲಾಕ್ಡೌನ್ ತೆರವಾದ ನಂತರವೂ ಕಾಶ್ಮೀರಕ್ಕೆ ಸಮರ್ಪಕ ಇಂಟರ್ನೆಟ್ ವ್ಯವಸ್ಥೆ ಕಲ್ಪಿಸಲಾಗಿರಲಿಲ್ಲ. ಪರಿಣಾಮ ಅಲ್ಲಿನ ಶಾಲಾ ಬಾಲಕನೊಬ್ಬ ದಯವಿಟ್ಟು ಇಂಟರ್ನೆಟ್ ಕೊಡಿ ಇಲ್ಲಿ ಶಾಲೆಯೂ ಇಲ್ಲ ಇಂಟರ್ನೆಟ್ ಸಹ ಇಲ್ಲದೆ ನಾವು ಏನನ್ನೂ ಕಲಿಯಲಾಗುತ್ತಿಲ್ಲ. ದಶಕಗಳಷ್ಟು ಹಿಂದುಳಿದಂತೆ ಭಾಸವಾಗುತ್ತಿದೆ ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದನ್ನು ಭಾಗಶಃ ಯಾರೂ ಮರೆತಿರಲು ಸಾಧ್ಯವಿಲ್ಲ.

ಕಳೆದ 70 ವರ್ಷಗಳ ಅವಧಿಯಲ್ಲಿ ಎರಡು ರಾಷ್ಟ್ರಗಳ ರಾಜಕೀಯ ಲಾಭಕ್ಕೆ ಇಲ್ಲಿನ ಜನ ಬಲಿಯಾಗಿದ್ದಾರೆ, ಇಲ್ಲಿನ ಜನರ ಬದುಕು ಹರಿದು ಮೂರಾಬಟ್ಟೆಯಾಗಿದೆ ಎಂಬುದೂ ಎಷ್ಟು ಸತ್ಯವೋ, ಅಲ್ಲಿನ ಜನರ ಬದುಕಿನ ಕುರಿತು ದೇಶದ ಯಾವ ಭಾಗದ ಜನರಿಗೂ ಅಷ್ಟಾಗಿ ಆಸಕ್ತಿ ಇಲ್ಲ ಎಂಬುದು ಅದಕ್ಕಿಂತ ದೊಡ್ಡ ಸತ್ಯ.

ಭಾರತದ 21 ದಿನಗಳ ಲಾಕ್‌ಡೌನ್‌ ನೆಪದಲ್ಲಿ ಈಗಲೂ ನಾವು ಕಾಶ್ಮೀರದ ವ್ಯಥೆಯನ್ನು, ಕಪ್ಪು ಇತಿಹಾಸವನ್ನು, ಇಲ್ಲಿನ ಜನರ ಬದುಕಿನೊಳಗೆ ನುಸುಳಿ ಬದುಕನ್ನೇ ಹರಿದು ಹಾಕಿದ ಸ್ವಾರ್ಥ ರಾಜಕಾರಣದ ಕುರಿತು ಅವಲೋಕಿಸದಿದ್ದರೆ ಇನ್ಯಾವಾಗ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಶ್ಟೊ ಇಶ್ಟೋ ಪ್ಯಾಕೇಜ್ ಕರೋನಾ ಪ್ಯಾಕೇಜ್ ಸಾರಲಾಗಿದೆ.
    ಅಲ್ಲಿ!

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...