ಪಡಿತರ ಚೀಟಿ ಇಲ್ಲದವರಿಗೂ ಆಹಾರ ಧಾನ್ಯಗಳನ್ನು ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಕೂಲಿ ಕಾರ್ಮಿಕರು, ಬಡವರು ಕೊರೊನ ಲಾಕ್ಡೌನ್ನಿಂದ ತೊಂದರೆಗೊಳಗಾಗಿರುವ ಹಿನ್ನಲೆಯಲ್ಲಿ ಜನ ಹಸಿವಿನಿಂದ ಪರಿತಪಿಸಬಾರದು ಎಂದು ಪಡಿತರ ಚೀಟಿ ಇಲ್ಲದವರಿಗೂ ಆಹಾರ ಧಾನ್ಯಗಳನ್ನು ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಡಿತರ ಚೀಟಿ ಇಲ್ಲದಿರುವರು ಸಂಬಂಧಪಟ್ಟ ಇಲಾಖೆಗಳಲ್ಲಿ ಹೋಗಿ ನಾಳೆಯಿಂದ ಆಹಾರ ಧಾನ್ಯಗಳನ್ನು ಪಡೆಯಬಹುದು. ಜನರಿಗೆ ಅಗತ್ಯ ವಸ್ತುಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚಿಸಿಲಾಗಿದೆ, ಹಾಪ್ ಕಾಮ್ಸ್ ಮೂಲಕ ನಗರ ಪ್ರದೇಶಗಳಲ್ಲಿ ತರಕಾರಿ ಒದಗಿಸಲಾಗುತ್ತಿದೆ ಎಂದರು.
ಇದೇ ಸಮಯದಲ್ಲಿ ವಿನಾಕಾರಣ ಮನೆಯಿಂದ ಹೊರಬಂದು ಲಾಕ್ಡೌನ್ ನಿಯಮ ಉಲ್ಲಂಘಿಸಬೇಡಿ ಎಂದು ಮುಖ್ಯಮಂತ್ರಿ ಜನತೆಯೊಂದಿಗೆ ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಕೊರೊನ ನಿಯಂತ್ರಣ ವಿಷಯವಾಗಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಬೆಂಗಳೂರಿನ ಶಾಸಕರು, ಸಚಿವರು, ಸಂಸದರು ಹಾಗೂ ಪಾಲಿಕೆ ಸದಸ್ಯರು ಭಾಗಿಯಾಗಿದ್ದರು.