Homeಮುಖಪುಟಹಾಲು ವಿತರಣೆಯಲ್ಲಿ ಅನ್ಯಾಯ, ಅರ್ಹ ಕುಟುಂಬಗಳಿಗೆ ಇಲ್ಲ ಹಾಲು: ಆರೋಪ

ಹಾಲು ವಿತರಣೆಯಲ್ಲಿ ಅನ್ಯಾಯ, ಅರ್ಹ ಕುಟುಂಬಗಳಿಗೆ ಇಲ್ಲ ಹಾಲು: ಆರೋಪ

- Advertisement -
- Advertisement -

ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸ್ಲಂನಿವಾಸಿ ಕುಟುಂಬಗಳಿಗೆ ಹಾಲು ವಿತರಿಸಲು ಮುಂದಾಗಿರುವುದು ಶ್ಲಾಘನೀಯ ಸಂಗತಿ. ಹಾಗೆ ಹಾಲು ವಿತರಿಸುವ ವೇಳೆಯಲ್ಲಿ ಎಲ್ಲ ಕುಟುಂಬಗಳಿಗೆ ಹಾಲು ದೊರೆಯುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕಾದುದು ಸರ್ಕಾರದ ಕರ್ತವ್ಯ ಮತ್ತು ಜವಾಬ್ದಾರಿ ಕೂಡ ಆಗಿದೆ. ಆತುರದಲ್ಲಿ ಹಾಲು ನೀಡುವುದಕ್ಕೆ ಚಾಲನೆ ಕೊಟ್ಟಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇವಲ ಘೋಷಿತ ಸ್ಲಂಗಳಿಗೆ ಮಾತ್ರ ಹಾಲು ನೀಡುತ್ತಿದ್ದು ಅಘೋಷಿತ ಸ್ಲಂ ಕುಟುಂಬಗಳಿಗೆ ಹಾಲು ದೊರೆಯುತ್ತಿಲ್ಲ. ಕೆಲವು ಸ್ಲಂಗಳು ಪರಿವರ್ತನೆ ಆಗಿ ಬಡಾವಣೆಗಳಾಗಿವೆ. ಸ್ಲಂಗಳ ನಡುವೆ ಬಲಾಢ್ಯ ಕುಟುಂಬಗಳು ಸೇರಿ ಹೋಗಿವೆ. ಹೀಗಾಗಿ ಅರ್ಹ ಕುಟುಂಬಗಳಿಗೆ ಸಿಗಬೇಕಾದ ಹಾಲು ಬೇರೆಯವರ ಪಾಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ  ಸರ್ಕಾರವೇ ಘೋಷಿಸಿರುವಂತೆ 2804 ಸ್ಲಂಗಳಿವೆ. ಈ ಸ್ಲಂಗಳಲ್ಲಿ 45 ಲಕ್ಷ ಮಂದಿ ಜನ ವಾಸಿಸುತ್ತಿದ್ದಾರೆ. ಇವರ ಪೈಕಿ 12 ಲಕ್ಷ ಮಂದಿ ಮಕ್ಕಳೇ ಇದ್ದಾರೆಂಬುದು ಗಮನಾರ್ಹ ಸಂಗತಿ. ಘೋಷಿತ ಸ್ಲಂ ನಿವಾಸಿಗಳಿಗೆ ಒಟ್ಟು 7 ಲಕ್ಷ ಲೀಟರ್ ಹಾಲು ವಿತರಿಸುವ ಒಳ್ಳೆಯ ಕೆಲಸಕ್ಕೆ ಸರ್ಕಾರ ಕೈಹಾಕಿದ್ದರೂ ನಿಜವಾಗಿಯೂ ತಲುಪಬೇಕಾದವರಿಗೆ ಹಾಲು ತಲುಪುತ್ತಿಲ್ಲ. ರಾಜ್ಯ ಸರ್ಕಾರ 2011 ಗಣತಿಯನ್ನಾಧರಿಸಿ ಸ್ಲಂ ಕುಟುಂಬಗಳಿಗೆ ಹಾಲು ವಿತರಿಸುತ್ತಿದೆ. ಕಳೆದ 8 ವರ್ಷಗಳಲ್ಲಿ ಸ್ಲಂಗಳ ಸಂಖ್ಯೆ ಹೆಚ್ಚಾಗಿದೆ. ಸಾವಿರಾರು ಬಡ ಕುಟುಂಬಗಳು ಹೊಸದಾಗಿ ಸೇರ್ಪಡೆಯಾಗಿದೆ. ಈ ಕುಟುಂಬಗಳಿಗೆ ಹಾಲು ಸಿಗುತ್ತಿಲ್ಲ. ಅರ್ಹ ಫಲನುಭವಿ ಕುಟುಂಬಗಳು ಸರ್ಕಾರದ ಆಪತ್ಕಾಲದ ಯೋಜನೆಯಿಂದ ವಂಚಿತವಾಗಲಿದ್ದು ಸರ್ಕಾರ ಈ ಬಗ್ಗೆ ಯೋಚಿಸಬೇಕಾಗಿದೆ.

ಬೆಂಗಳೂರು ನಗರದಲ್ಲಿ 800 ಘೋಷಿತ ಅಂದರೆ ಅಧಿಕೃತ ಸ್ಲಂಗಳಿವೆ. ಅಘೋಷಿತ ಸ್ಲಂಗಳು 200 ಇವೆ. ಅಂದರೆ ಸರ್ಕಾರ ಘೋಷಿಸಿರುವ ಅರ್ಧದಷ್ಟು ಸ್ಲಂಗಳು ಬೆಂಗಳೂರಿನಲ್ಲಿಯೇ ಇವೆ. ಬೆಂಗಳೂರು ಒಂದಕ್ಕೆ 25 ಸಾವಿರ ಲೀಟರ್ ಹಾಲು ವಿತರಿಸಲಾಗುತ್ತಿದೆ. ಇದು ಅರೆಕಾಸಿನ ಮಜ್ಜಿಗೆಯಂತಾಗಿದೆ. 2011 ನಂತರ ಹೊಸ ಕುಟುಂಬಗಳು ವಲಸೆ ಬಂದು ಸೇರ್ಪಡೆಯಾಗಿವೆ. ಚಿಕ್ಕಚಿಕ್ಕ ಕುಟೀರಗಳಲ್ಲಿ, ಡೇರೆಗಳಲ್ಲಿ ವಾಸಿಸುವ ಈ ಕುಟುಂಬಗಳು ಮೂಲಭೂತ ಸೌಕರ್ಯಗಳಿಲ್ಲದೆ ಸಮಸ್ಯೆಗಳನ್ನು ಎದುರಿಸುತ್ತಿವೆ. ಒಂದೊಂದು ಕುಟುಂಬದಲ್ಲಿ 6-7 ಮಂದಿ ಇದ್ದು ಮಕ್ಕಳ ಸಂಖ್ಯೆ ಅಧಿಕವಾಗಿದೆ. ಬೆಂಗಳೂರಿನಂಥ ನಗರದಲ್ಲಿ ಸ್ಲಂಗಳಲ್ಲಿ ಬಂದು ಸೇರಿಕೊಂಡಿರುವ ಬಲಾಢ್ಯರಿಂದಾಗಿ ಅವು ಬಡಾವಣೆಗಳಾಗಿ ಪರಿವರ್ತನೆಯಾಗಿವೆ. ಅಲ್ಲಿ ವಾಸಿಸುತ್ತಿದ್ದ ಸ್ಲಂ ನಿವಾಸಿ ಕುಟುಂಬಗಳು ಬೇರೆ ಕಡೆಗೆ ಹೋಗಿದ್ದು ಅರ್ಹ ಕುಟುಂಬಗಳಿಗೆ ಸಿಗಬೇಕಾದ ಸೌಲಭ್ಯಗಳ ಲಾಭ ಬಲಾಢ್ಯರು ಪಡೆಯುವಂತಹ ಸ್ಥಿತಿ ನಿರ್ಮಾಣವಾಗಿದೆ.

ಸ್ಲಂ ಜನರು, ಅಲೆಮಾರಿಗಳು ಹಂದಿಜೋಗಿ ಕುಟುಂಬಗಳ ನಡುವೆ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಸ್ಲಂ ಜನಾಂದೋಲನ ಸಂಚಾಲಕ ಎ. ನರಸಿಂಹಮೂರ್ತಿ ಹೇಳುವಂತೆ ರಾಜ್ಯದಲ್ಲಿ 1500 ಸ್ಲಂಗಳನ್ನು ಸರ್ಕಾರ ಘೋಷಣೆ ಮಾಡುವುದು ಬಾಕಿ ಇದೆ. ಈ ಸ್ಲಂಗಳಲ್ಲಿ ಸುಮಾರು 55 ಲಕ್ಷ ಜನ ವಾಸ ಮಾಡುತ್ತಿದ್ದಾರೆ. ಅವರಲ್ಲಿ 20 ರಿಂದ 22 ಲಕ್ಷ ಮಂದಿ ಮಕ್ಕಳಿದ್ದಾರೆ. 18 ಲಕ್ಷ ಮಂದಿ ಯುವಜನರು ಇದ್ದಾರೆ. ಈಗ ಸರ್ಕಾರದ ಆಪತ್ಕಾಲದ ಹಾಲು ವಿತರಣೆ ಯೋಜನೆಯ ಲಾಭ ಈ ಅಘೋಷಿತ ಸ್ಲಂ ಜನರಿಗೆ ಸಿಗುತ್ತಿಲ್ಲ. ಸರ್ಕಾರ ಒಂದು ಕುಟುಂಬಕ್ಕೆ ಒಂದು ಲೀಟರ್ ವಿತರಿಸುವುದಾಗಿ ಹೇಳಿತ್ತು. ತಲುಪಬೇಕಾದವರಿಗೆ ತಲುಪದ ಹಿನ್ನೆಲೆಯಲ್ಲಿ ಎಲ್ಲರಿಗೂ ದೊರೆಯಲಿ ಎಂಬ ಉದ್ದೇಶದಿಂದ ಪ್ರತಿ ಕುಟುಂಬಕ್ಕೆ ಅರ್ಧ ಲೀಟರ್ ಹಾಲು ವಿತರಿಸುವಂತೆ ಮನವಿ ಮಾಡಿದ್ದೇವೆ. ಸರ್ಕಾರ ಹಾಲು ವಿತರಣೆ ಮಾಡುವುದರಲ್ಲಿ ಅನ್ಯಾಯವಾಗುತ್ತಿದೆ. ಅರ್ಹ ಕುಟುಂಬಗಳು ಈ ತಾತ್ಕಾಲಿಕ ಯೋಜನೆಯಿಂದ ವಂಚಿತವಾಗಿವೆ ಎಂದು ನಾನುಗೌರಿ.ಕಾಂಗೆ ತಿಳಿಸಿದರು.

ಪ್ರತಿಯೊಂದು ಜಿಲ್ಲೆಯಲ್ಲಿಯೂ ಸ್ಲಂಗಳು ನಿರ್ಮಾಣವಾಗಿವೆ. ವಲಸೆ ಬರುವವರ ಸಂಖ್ಯೆ ಹೆಚ್ಚಾಗಿದೆ. ಕೆಲಸ ಅರಸಿಕೊಂಡು ಬಂದಿರುವ ಕುಟುಂಬಗಳು ಸ್ಲಂ ಪ್ರದೇಶದಲ್ಲಿ ಹಂಚಿಕೊಂಡು ಸೌರ್ಹಾತೆಯಿಂದ ಬದುಕುತ್ತಿವೆ. ಒಗ್ಗೂಡಿ ಸಹಬಾಳ್ವೆ ನಡೆಸುವ ಸ್ಲಂ ನಿವಾಸಿಗಳಿಗೆ ಕನಿಷ್ಠ ಸೌಲಭ್ಯಗಳು ದೊರೆಯುತ್ತಿಲ್ಲ. ಕುಡಿಯುವ ನೀರು ಸಿಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಅಘೋಷಿತ ಸ್ಲಂಗಳಲ್ಲಿರುವ ಕುಟುಂಬಗಳು ಹಾಲು ಪಡೆಯಲು ಸಾಧ್ಯವಾಗಿಲ್ಲ. ಹಾಲು, ದಿನಸಿ ಎಲ್ಲರಿಗೂ ಸಿಗುವಂತೆ ಸರ್ಕಾರ ನೋಡಿಕೊಳ್ಳಬೇಕು. ಅಪೌಷ್ಠಿಕತೆಯಲ್ಲಿ ಬಳಲುತ್ತಿರುವ ಮಕ್ಕಳು ಪೌಷ್ಟಿಕತೆಯಿಂದ ಬೆಳೆಯಲು ಅನುವಾಗುವಂತೆ ಸರ್ಕಾರ ನಿಗಾ ವಹಿಸಿದರೆ ಹೆಚ್ಚು ಅನುಕೂಲವಾಗುತ್ತದೆ. ಸರ್ಕಾರ ಇತ್ತ ಗಮನಹರಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...