Homeಸಿನಿಮಾಸಿನಿ ಸುದ್ದಿಕಿಚ್ಚನ ಆ ಎರಡು ಭೇಟಿಗಳು

ಕಿಚ್ಚನ ಆ ಎರಡು ಭೇಟಿಗಳು

- Advertisement -
- Advertisement -

ಕಿಚ್ಚ ಸುದೀಪ್ ಸಿನಿಮಾ ಫ್ರೇಮಿನ ಆಚೆಗೂ ತುಂಬಾ ಡೈನಾಮಿಕ್ ವ್ಯಕ್ತಿ. ಹಾಗಾಗಿ ಒಂದಿಲ್ಲೊಂದು ಕಾರಣಕ್ಕೆ ಅವರ ಹೆಸರು ಸುದ್ದಿಯಲ್ಲಿ ಇದ್ದೇ ಇರುತ್ತೆ. ಈಗ ಸುದೀಪ್ ಅಂತಹ ಮತ್ತೊಂದು ಸುದ್ದಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ಮಾಜಿ ಮುಖ್ಯಮಂತ್ರಿ ಕುಮಾರಣ್ಣನ ಮನೆ ಹೊಕ್ಕು ಬರೋಬ್ಬರಿ ಎರಡು ಗಂಟೆ ಕಾಲಕಳೆಯುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದರು. ಅದಾದ ಬೆನ್ನಿಗೇ ದಿಢೀರ್ ಅಂತ ಸಿಎಂ ಸಿದ್ರಾಮಯ್ಯರನ್ನು ಭೇಟಿ ಮಾಡಿ ಜನರಲ್ಲಿ ಸಿಕ್ಕಾಪಟ್ಟೆ ಕನ್‍ಫ್ಯೂಶನ್ ಕ್ರಿಯೇಟ್ ಮಾಡಿದ್ದಾರೆ. ಆಂದ್ರವಾಡು ನಟ ಪವನ್ ಕಲ್ಯಾಣ್ ಮೂಲಕ ತೆಲುಗು ಪ್ರಾಬಲ್ಯವಿರುವ ಕ್ಷೇತ್ರಗಳ ಮೇಲೆ ಲಗ್ಗೆ ಹಾಕಲು ಸಜ್ಜಾಗಿರುವ ಕುಮಾರಣ್ಣರನ್ನು ಅದ್ಯಾವಾಗ ಸುದೀಪ್ ಭೇಟಿಯಾಗಿದ್ದರೋ ಆಗ ಸುದೀಪ್ ಜೆಡಿಎಸ್ ಅಭ್ಯರ್ಥಿಯಾಗಿ, ನಾಯಕ ಮತಗಳು ಜೋರಾಗಿರುವ ದುರ್ಗ ಅಥವಾ ಬಳ್ಳಾರಿ ಕಡೆ ಸ್ಪರ್ಧಿಸುತ್ತಾರೆ ಎಂಬ ಮಾತು ಕೇಳಿ ಬಂದಿದ್ದವು. ಒಂದೊಮ್ಮೆ ಸ್ಪರ್ಧಿಸದಿದ್ದರೂ, ಜೆಡಿಎಸ್ ಪರ ಪ್ರಚಾರ ಮಾಡುತ್ತಾರೆ ಎಂಬ ಸುದ್ದಿ ಇತ್ತು.

ಯಾಕಂದ್ರೆ, ಸುದೀಪ್ ಯಾವತ್ತೂ ರಾಜಕಾರಣದ ಆಯ್ಕೆಯನ್ನು ಸಾರಾಸಗಟಾಗಿ ತಳ್ಳಿಹಾಕಿದವರಲ್ಲ. ರಾಜಕಾರಣದ ವಿಷಯ ಬಂದಾಗ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತಾಡಿ ಮುಗಿಸಿಬಿಡುತ್ತಿದ್ದರು. ಕುಮಾರಣ್ಣನ ಭೇಟಿಯ ನಂತರ ಇದೀಗ ಸಿದ್ದರಾಮಯ್ಯರನ್ನೂ ಭೇಟಿ ಮಾಡಿರುವ ಸುದೀಪ್ ಮತ್ತಷ್ಟೂ ಟಿಆರ್‍ಪಿ ಸರಕಾಗಿ ಬದಲಾಗಿದ್ದಾರೆ. ಎರಡು ವಿರುದ್ಧ ಧೃವಗಳ ನಡುವೆ ಸುದೀಪ್‍ನಂತಹ ನಟ ಅದ್ಯಾವ ಪೊಲಿಟಿಕಲ್ ಗೇಮ್ ನಡೆಸುತ್ತಿದ್ದಾರೆ ಎನ್ನುವ ಕುತೂಹಲ ಜನರನ್ನೂ ಕಾಡುತ್ತಿದೆ. ತಮ್ಮ ಸಾರಥ್ಯದಲ್ಲಿ ನಡೆಯುತ್ತಿರೋ `ಕೆಸಿಸಿ’ ಕ್ರಿಕೆಟ್ ಕಪ್‍ನ ಉದ್ಘಾಟನೆಗೆ ಆಹ್ವಾನಿಸಲು ಸಿಎಂ ಮನೆಗೆ ಹೋಗಿದ್ದರು ಅಷ್ಟೇ ಎಂಬ ನೆಪ ಕಿಚ್ಚ ಪಾಳಯದಿಂದ ಕೇಳಿಬರುತ್ತಿದೆಯಾದರು, ಮುಂದೆ ಈ ಭೇಟಿಗಳು ಪೊಲಿಟಿಕಲ್ ಪರಿಣಾಮಗಳಾಗಿ ಹೊರಹೊಮ್ಮಿದರೆ ಅಚ್ಚರಿಯೂ ಇಲ್ಲ… ಅಟ್ ದಿ ಸೇಮ್ ಟೈಮ್, ತಪ್ಪೂ ಅಲ್ಲ ಬಿಡಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...