Homeಮುಖಪುಟವಿಡಿಯೊ| ಅಯ್ಯಯ್ಯೊ ಪದ್ಮಕ್ಕ; ಅಂಥಾದ್ದೇನಾಗಿಲ್ಲ ಎಲ್ಲ ಅರಾಮು; ಎಲ್ಲಾ ಆರಾಮು.

ವಿಡಿಯೊ| ಅಯ್ಯಯ್ಯೊ ಪದ್ಮಕ್ಕ; ಅಂಥಾದ್ದೇನಾಗಿಲ್ಲ ಎಲ್ಲ ಅರಾಮು; ಎಲ್ಲಾ ಆರಾಮು.

- Advertisement -
- Advertisement -

ಎಲ್ಲಾ ಆರಾಮು

ಪಾಮರರಿಗೆ: ಈ ಹಾಡನ್ನು ಬರೆದ ಕಾಲದ ಬಗ್ಗೆ ಕಾಳಿದಾಸನ ಕಾಲದೇಶದ ಬಗ್ಗೆಯಿರುವಷ್ಟೇ ಗೊಂದಲಗಳಿವೆ. ಮೂಲದ ಬಗ್ಗೆ ನದಿಮೂಲದಷ್ಟೆ ಕುತೂಹಲವಿದೆ. ಇದನ್ನು ಬರೆದವರು ಯಾರು ಎಂಬುದು ಇದರ ಕತೃಗಳ ಜಗಳಾನಂತರವೂ ನಿರ್ಧಾರವಾಗಲಿಲ್ಲ. ೧೮೯೩ ಡಿಸೆಂಬರ್ ೧೬ ರಂದು ಆಡಲ್ಪಟ್ಟ “ಲಾಟ್ರೆಕ್ ನ ಎಚ್” ಎಂಬ ಒಂದು ಇಂಗ್ಲೀಷ್ ಕಾಮಿಡಿಯಲ್ಲಿದ್ದ ಒಂದು ಸಂಭಾಷಣೆಯ ತುಣುಕನ್ನಿಟ್ಟುಕೊಂಡು ೧೯೩೬ ರಲ್ಲಿ ಪೌಲ್ ಮಿಸ್’ರಕಿ ಎಂಬುವವನು ಈ ಹಾಡು ಬರೆದನಂತೆ ಎಂಬ ಇನ್ನೊಂದು ಉಹಾಪೋಹವೂ ಇದೆ.  ಇದೆಲ್ಲದರ ನಂತರ ರೇ ವೆಂಟ್ಯುರಾ ಎಂಬ ಫ್ರೆಂಚ್ ಸಂಗೀತದ ಅಪೂರ್ವನೂ, ಜಾಝ್‌ಅನ್ನು ಫ್ರಾನ್ಸಿನಲ್ಲಿ ಸಮೃದ್ಧವಾಗಿ ಬೆಳೆಸಿದವನೂ ಈ ಹಾಡಿಗೆ ಸಂಗೀತ ನೀಡಿದ. ಫ್ರೆಂಚ್ ಗೀತೆಗಳಲ್ಲಿ ಅಬ್ಬರವೆನ್ನುವುದು ಇಲ್ಲವೇ ಇಲ್ಲ. ಬಾಯಿಯಿಂಬ ಹೊರಟ ಹೊಗೆ ಸುರುಳಿಗಳನ್ನು ವರ್ಣಿಸುತ್ತ ಮಗುವನ್ನು ಮಲಗಿಸುವ ಜೋಗುಳದಂಥ ಹಾಡುಗಳಿವೆ ಅಲ್ಲಿ. ತೀರಾ ಸರಳ. ಈ ಕೆಳಗಿನ ಹಾಡಿನಲ್ಲಿ ಬಹುತೇಕ ಸಾಲುಗಳು ಪುನರಾವರ್ತಿತ. ನಿಜವಾಗಿ ಇರುವುದು ನಾಲ್ಕೋ ಐದೋ ಸಾಲುಗಳಷ್ಟೇ. ಬಿಡುಗಡೆಗೊಂಡಾಗ ಈ ಹಾಡು ಯೂರೋಪಿನ ತುಂಬ ಎಷ್ಟು ಪ್ರಿಯವಾದ ಗೀತೆಯಾಗಿ ಹೋಯಿತೆಂದರೆ ರೇ ವೆಂಟ್ಯುರಾ ಮತ್ತು ಪೌಲ್ ಮಿಸ್’ರಕಿ “ಎಲ್ಲಾ ಆರಾಮು” ನ ಕತೃಗಳಾಗಿಯೇ ಇವತ್ತಿಗೂ ಉಳಿದಿದ್ದಾರೆ.

ನಮ್ಮಲ್ಲೂ ಈ ಹಾಡಿನ ಲಾಜಿಕ್ಕಿನ ಥರದವುಗಳು ಇಲ್ಲವೆಂದಲ್ಲ. ಇಂಗ್ಲೀಷ್, ಫ್ರೆಂಚ್, ಸ್ಪಾನಿಷ್, ಆಸ್ಟ್ರಿಯನ್ ಗಳಲ್ಲಿ ಇದೇ ರೀತಿಯ ಸಂಭಾಷಣೆಗಳು ತುಂಬ ಸಿಗುತ್ತವೆ. ಆದರೆ ಈ ಹಾಡಿನ ವ್ಯಂಗ್ಯ ಮತ್ತು ತಿಳಿ ಹಾಸ್ಯಗಳು ಆಗಿನ ಭಯಗ್ರಸ್ಥ ಯೂರೋಪಿನಲ್ಲಿ ಶೀಘ್ರವಾಗಿ ಹರಡಿತೆಂದರೆ ೧೯೩೬ ರಲ್ಲಿ ಇದೇ ಹೆಸರಿನ ಒಂದು ಸಿನೆಮಾ ಕೂಡ ತೆರೆಕಂಡಿತು.  ನನ್ನ ಅನುವಾದದಲ್ಲಿ ಎರಡು ಬದಲಾವಣೆ ಮಾಡಿಕೊಂಡಿದ್ದೇನೆ ನಾನು. ಮೂಲದಲ್ಲಿ ಕುದುರೆ ಸಾಯುತ್ತದೆ; ಇಲ್ಲಿ ಎಮ್ಮೆ. ಮತ್ತು ಅಲ್ಲಿ ಮನೆ ಕುಸಿದ ಮೇಲೆ ಗಂಡ ಸಾಯುತ್ತಾನೆ. ಇಲ್ಲಿ ಅದನ್ನು ಉಲ್ಟಾ ಮಾಡಿಕೊಂಡೆ- ಫ್ರೆಂಚಿನ ಮತ್ತು ಕನ್ನಡದ ವಾಕ್ಯರಚನೆಗಳ ಭಿನ್ನತೆಯ ಕಾರಣದಿಂದ. ಹಾಡಿನ ಮೂಲ ಲಯ ಮತ್ತು ತಾಳದಲ್ಲಿಯೇ ಈ ಅನುವಾದವೂ ಇದೆ. ಹಾಗಾಗಿ ಈ ಕೆಳಗಿನ ಲಿಂಕ್ ನಲ್ಲಿ ಹಾಡು ಕೇಳಿ ಅದೇ ರಿದಮ್ ಅನ್ನು ಮನಸ್ಸಿನಲ್ಲಿಟ್ಟುಕೊಂಡು ಈ ಹಾಡನ್ನು ಕನ್ನಡದಲ್ಲಿ ಹಾಡಿಕೊಳ್ಳಬಹುದು. ಇದೊಂದು “ಗೀತೆ” ಎನ್ನುವುದು ಮನಸ್ಸಿನಲ್ಲಿರಲಿ ಎಂದು ಕೋರಿಕೆ.

ವಿಡಿಯೊ ನೋಡಿ.

ಪಂಡಿತರಿಗೆ: ’ರಾಜಕೀಯ ಮತ್ತು ಸಾಮಾಜಿಕವಾಗಿ’ ಈ ಹಾಡು ಹೊರಗೆ ಬಂದು, ಮೆಡಿಟರೇನಿಯನ್ ದೇಶಗಳಾದ್ಯಂತ ಪ್ರಸಿದ್ಧವಾದ ಕಾಲ ನಾಝೀಸಂ ನ ಬರ್ಭರತೆ ಯೂರೋಪಿನ ಮನಸ್ಸನ್ನು ಕೊರೆಯತೊಡಗಿದಂತದ್ದು- ಎಂಬುದಾಗಿ ಯೂಟ್ಯೂಬಿನಲ್ಲಿ ಫ್ರೆಂಚ್ ಗೀತೆಗಳ ಬಗ್ಗೆ ಆಳವಾದ ಗ್ರಹಿಕೆಗಳನ್ನು ದಾಖಲಿಸುವವಳೊಬ್ಬಳು ಬರೆಯುತ್ತಾಳೆ. ಮುಖ್ಯವಾದ್ದನ್ನು ನಿರ್ಲಕ್ಷಿಸುವ ಅಥವಾ ಲಕ್ಷಿಸಲು ಭಯಪಡುವ ಕಾಲವನ್ನು ಗೇಲಿ ಮಾಡಲು ರೇ ವೆಂಟ್ಯುರಾ ಇದನ್ನು ಅಳವಡಿಸಿಕೊಂಡನಂತೆ. ವಾಸ್ತವದಲ್ಲಿ ಫ್ರೆಂಚ್ ಕಾವ್ಯದಷ್ಟೇ ತೀವ್ರವಾಗಿ ರಾಜಕೀಯವನ್ನು ವಿಮರ್ಶಿಸಿದವು ಈ ಫ್ರೆಂಚ್ ಗೀತೆಗಳು. ಈ ಸರಳ ಹಾಡು ಎಷ್ಟು ಚೂಪಾದ ಒಂದು ರಾಜಕೀಯ ಹಾಡೂ ಆಯಿತೆಂದರೆ- ಯೂರೋಪಿನ ಪತ್ರಿಕೆಗಳು “ಎಲ್ಲಾ ಅರಾಮು ಮುಸಲೋನಿ ಮಹಾಶಯ” ಎಂದು ಇಟಲಿ-ಇಥಿಯೋಪಿಯನ್ ಯುದ್ಧದ ಸಮಯದಲ್ಲಿಯೂ, “ಎಲ್ಲಾ ಅರಾಮು ಸ್ಟಾಲಿನ್ ಮಹಾಶಯ” ಎಂದು ಸ್ಪಾನಿಷ್ ಅಂತರ್ಯುದ್ಧದ. ಸಮಯದಲ್ಲೂ ತಮಾಷೆ ಮಾಡಲು ಶುರುಮಾಡಿದ್ದವು. ತಣ್ಣನೆಯ ರಾಜಕೀಯ ಫ್ರೆಂಚ್ ಗೀತೆಗಳಿಗೆ ಇನ್ನೊಂದು ದೊಡ್ಡ ಉದಾಹಾರಣೆಯೆಂದರೆ ಬೋರಿಸ್ ವಿಯಾಂ ಎಂಬಾತ ಬರೆದು ಹಾಡಿದ “ಲ್ ಡೆಸರ್ಟರ್” ಎಂಬ ರಚನೆ. ಸರ್ವಾಧಿಕಾರದ ವಿರುದ್ಧ ದುಃಖ ಮತ್ತು ಸ್ಪಷ್ಟತೆಯಲ್ಲಿ ದನಿಯೆತ್ತುವ ಈ ಹಾಡನ್ನು ಅಪಾರ ವಿನಯ ಹಾಗೂ ದೃಢತೆಯಲ್ಲಿ ಹಾಡುತಾನೆ ಬೋರಿಸ್. ಹಾಡಿದು ಕೇವಲ ಫ್ರೆಂಚ್ ಭಾಷೆಯೊಂದರಲ್ಲೇ ಮೂವತ್ತಕ್ಕಿಂತ ಹೆಚ್ಚಿನ ರೂಪಗಳಲ್ಲಿ ಅಫ್ರಿಕಾದ ಅನೇಕ ಸರ್ವಾಧಿಕಾರೀ ರಾಷ್ಟ್ರಗಳಲ್ಲಿ ಕಾಣಿಸಿಕೊಂಡಿತು. ಸಾಹಿತ್ಯ ಬೇರೆಯಾದರೂ ಧ್ವನಿ, ದೃಢತೆ ಮತ್ತು ವಿನಯಗಳು ಈ ಹಾಡಿನ ಎಲ್ಲ ರೂಪಗಳಲ್ಲೂ ಹಾಗೆಯೇ ಇದ್ದವು ಎಂಬುದು ಈ ಗೀತೆಗಳ ವ್ಯಾಪಕತೆಯನ್ನು ತೊರಿಸುತ್ತವೆ ಅಂದುಕೊಂಡಿದ್ದೇನೆ.

೨೦೧೦ರಲ್ಲಿ ಕೆಂಡಸಂಪಿಗೆ ಗೆ ಮಾಡಿದ್ದ ಮೂಲ ಹಾಡಿನ ನಿಷ್ಟ ಅನುವಾದ ಇಲ್ಲಿದೆ. ಈಗಿನ ವೀಡಿಯೋ ಹಾಡು ಸಧ್ಯದ ಪರಿಸ್ಥಿತಿಗೆ ಬದಲಿಸಿ ಬರೆದದ್ದು.

“ಹಲೋ ಹಲೋ ಕಿಟ್ಟಿ

ಎನಪ್ಪಾ ವಿಶೇಷ?

ಇರಲಿಲ್ಲ ಊರಲ್ಲಿ; ಹದಿನೈದು ದಿನದಿಂದ

ನಾ ಮರಳಿ ಬಂದಾಗ

ಏನೇನು ಕಂಡೇನು?

ಏನಾಯಿತಲ್ಲಿ; ಹದಿನೈದು ದಿನದಿಂದ?”

“ಅಂಥಾದ್ದೇನಿಲ್ಲ; ಏನಿಲ್ಲ ಪದ್ಮಕ್ಕ

ಎಲ್ಲ ಆರಾಮು; ಎಲ್ಲಾ ಅರಾಮು.

ಅದ್ರೂನೂ ನಾಮಿಮ್ಗೆ ಹೇಳೋದು ಹೇಳ್ತೀನಿ

ಸಣ್ಣ್-ಪುಟ್ಟ ಮಾತಷ್ಟೇ; ತಲೆ ಹೋಗೋದೇನಿಲ್ಲ.

ನಿಮ್ ಮುದ್ದು ಎಮ್ಮೆ-ಬೆಳ್ಳಿ ಇತ್ತಲ್ಲ?

ಅದೊಂದು ಸತ್ತೋಯ್ತು. ಅದು ಬಿಟ್ರೆ ಪದ್ಮಕ್ಕ

ಇನ್ನೇನು ಇಲ್ಲ; ಎಲ್ಲ ಆರಾಮು, ಎಲ್ಲಾ ಅರಾಮು.”

“ಹಲೋ ಹಲೋ ಕಿಟ್ಟಿ!

ಎಂಥಾ ಮಾತಂದೇ?

ನನ್ನೆಮ್ಮೆ ಸತ್ತೋಯ್ತಾ

ಓ ನನ್ನ ಬಂಗಾರ!

ಹೇಳಪ್ಪಾ ನಂಗೆ-

ಇದಾಗಿದ್ ಹೆಂಗೆ?”

“ಅಯ್ಯಯ್ಯೊ ಪದ್ಮಕ್ಕ; ಅಂಥಾದ್ದೇನಾಗಿಲ್ಲ

ಎಲ್ಲ ಅರಾಮು; ಎಲ್ಲಾ ಆರಾಮು.

ಅದ್ರೂನೂ ನಾಮಿಮ್ಗೆ ಹೇಳೋದು ಹೇಳ್ತೀನಿ

ಸಣ್ಣ್-ಪುಟ್ಟ ಮಾತಷ್ಟೇ; ತಲೆ ಹೋಗೋದೇನಿಲ್ಲ.

ನಿಮ್ ಕೊಟ್ಗೇಗ್’ ಮೊನ್ನೆ

ಬೆಂಕಿ ಬಿತ್ತಲ್ಲ?- ಅದ್ರಲ್ಲಿ ಬೆಳ್ಳಿ

ಸಿಕ್ಕೊಂಡಳಲ್ಲ? ಅಷ್ಟೇನೆ ಪದ್ಮಕ್ಕ

ಅದು ಬಿಟ್ರೆ ಏನಿಲ್ಲ

ಏನೇನು ಇಲ್ಲ; ಎಲ್ಲ ಆರಾಮು, ಎಲ್ಲಾ ಅರಾಮು”

“ಹಲೋ ಹಲೋ ಕಿಟ್ಟಿ!

ಎಂಥಾ ಮಾತಂದೇ?

ನನ್ ಕೊಟ್ಗೆ ಸುಟ್ಟೋಯ್ತಾ

ಓ ಹಾಳು ದೇವ್ರೆ!

ಹೇಳಪ್ಪಾ ನಂಗೆ-

ಇದಾಗಿದ್ ಹೇಂಗೆ?”

“ಅಯ್ಯಯ್ಯೊ ಪದ್ಮಕ್ಕ; ಅಂಥಾದ್ದೇನಾಗಿಲ್ಲ

ಎಲ್ಲ ಅರಾಮು; ಎಲ್ಲಾ ಆರಾಮು.

ಅದ್ರೂನೂ ನಾಮಿಮ್ಗೆ ಹೇಳೋದು ಹೇಳ್ತೀನಿ

ಸಣ್ಣ್-ಪುಟ್ಟ ಮಾತಷ್ಟೇ; ತಲೆ ಹೋಗೋದೇನಿಲ್ಲ.

ನಿಮ್ಮನೆಗ್’ ಮೊನ್ನೆ ಬೆಂಕಿ ಬಿತ್ತಲ್ಲ?

ಅದೊಂಚೂರ್ ಕೊಟ್ಗೆಗೆ

ಹತ್ಕೊಂಡಿತ್ತಷ್ಟೇ! ಅಷ್ಟೇನೆ ಪದ್ಮಕ್ಕ

ಅದು ಬಿಟ್ರೆ ಏನಿಲ್ಲ

ಏನೇನು ಇಲ್ಲ; ಎಲ್ಲ ಆರಾಮು, ಎಲ್ಲಾ ಅರಾಮು.”

“ಹಲೋ ಹಲೋ ಕಿಟ್ಟಿ!

ಎಂಥಾ ಮಾತಂದೇ?

ನಮ್ಮನೆ ಬಿದ್ದೋಯ್ತಾ?

ಓ ನನ್ನ ಗೋಳೇ!

ಹೇಳಪ್ಪಾ ನಂಗೆ-

ಇದಾಗಿದ್ ಹೆಂಗೆ?”

“ಅದಿಷ್ಟೇ ಪದ್ಮಕ್ಕಾ; ಹೆಚ್ಚೇನು ಇಲ್ಲ.

ನಿನ್ ಗಂಡ ರಾಮಣ್ಣ

ಕುಡ್ಕೊಂಡು ಬಂದ್’ನಲ್ಲಾ.

ಏನ್ ಬೇಜಾರೋ ಏನೋ; ನೇಣಾಕ್ಕೊಂಡ್’ಬಿಟ್ನಲ್ಲ.

ಆಗವ್ನ ಕಾಲಿಗೆ ತಾಗಿತು ಚಿಮಣಿ

ಹತ್ಗೊಂತು ಬೆಂಕಿ- ಸುಟ್ಟೋಯ್ತು ನಿಮ್ಮನೆ.

ಆಗಂತೂ ಏನ್ ಗಾಳಿ, ತುಂಬಾನೇ ಪದ್ಮಕ್ಕಾ!

ಅಂಟಿತು ಬೆಂಕಿ-ಉರಿದೋಯ್ತು ಕೊಟ್ಟಿಗೆ.

ನಿಮ್ಮನೆ ಎಮ್ಮೆ ಸತ್ತಿದ್ದು ಹಿಂಗೆ. ಅಷ್ಟೇನೆ ಪದ್ಮಕ್ಕ

ಅದು ಬಿಟ್ರೆ ಏನಿಲ್ಲ

ಏನೇನು ಇಲ್ಲ; ಎಲ್ಲ ಆರಾಮು, ಎಲ್ಲಾ ಅರಾಮು.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...