Homeಮುಖಪುಟವಿಡಿಯೊ| ಅಯ್ಯಯ್ಯೊ ಪದ್ಮಕ್ಕ; ಅಂಥಾದ್ದೇನಾಗಿಲ್ಲ ಎಲ್ಲ ಅರಾಮು; ಎಲ್ಲಾ ಆರಾಮು.

ವಿಡಿಯೊ| ಅಯ್ಯಯ್ಯೊ ಪದ್ಮಕ್ಕ; ಅಂಥಾದ್ದೇನಾಗಿಲ್ಲ ಎಲ್ಲ ಅರಾಮು; ಎಲ್ಲಾ ಆರಾಮು.

- Advertisement -
- Advertisement -

ಎಲ್ಲಾ ಆರಾಮು

ಪಾಮರರಿಗೆ: ಈ ಹಾಡನ್ನು ಬರೆದ ಕಾಲದ ಬಗ್ಗೆ ಕಾಳಿದಾಸನ ಕಾಲದೇಶದ ಬಗ್ಗೆಯಿರುವಷ್ಟೇ ಗೊಂದಲಗಳಿವೆ. ಮೂಲದ ಬಗ್ಗೆ ನದಿಮೂಲದಷ್ಟೆ ಕುತೂಹಲವಿದೆ. ಇದನ್ನು ಬರೆದವರು ಯಾರು ಎಂಬುದು ಇದರ ಕತೃಗಳ ಜಗಳಾನಂತರವೂ ನಿರ್ಧಾರವಾಗಲಿಲ್ಲ. ೧೮೯೩ ಡಿಸೆಂಬರ್ ೧೬ ರಂದು ಆಡಲ್ಪಟ್ಟ “ಲಾಟ್ರೆಕ್ ನ ಎಚ್” ಎಂಬ ಒಂದು ಇಂಗ್ಲೀಷ್ ಕಾಮಿಡಿಯಲ್ಲಿದ್ದ ಒಂದು ಸಂಭಾಷಣೆಯ ತುಣುಕನ್ನಿಟ್ಟುಕೊಂಡು ೧೯೩೬ ರಲ್ಲಿ ಪೌಲ್ ಮಿಸ್’ರಕಿ ಎಂಬುವವನು ಈ ಹಾಡು ಬರೆದನಂತೆ ಎಂಬ ಇನ್ನೊಂದು ಉಹಾಪೋಹವೂ ಇದೆ.  ಇದೆಲ್ಲದರ ನಂತರ ರೇ ವೆಂಟ್ಯುರಾ ಎಂಬ ಫ್ರೆಂಚ್ ಸಂಗೀತದ ಅಪೂರ್ವನೂ, ಜಾಝ್‌ಅನ್ನು ಫ್ರಾನ್ಸಿನಲ್ಲಿ ಸಮೃದ್ಧವಾಗಿ ಬೆಳೆಸಿದವನೂ ಈ ಹಾಡಿಗೆ ಸಂಗೀತ ನೀಡಿದ. ಫ್ರೆಂಚ್ ಗೀತೆಗಳಲ್ಲಿ ಅಬ್ಬರವೆನ್ನುವುದು ಇಲ್ಲವೇ ಇಲ್ಲ. ಬಾಯಿಯಿಂಬ ಹೊರಟ ಹೊಗೆ ಸುರುಳಿಗಳನ್ನು ವರ್ಣಿಸುತ್ತ ಮಗುವನ್ನು ಮಲಗಿಸುವ ಜೋಗುಳದಂಥ ಹಾಡುಗಳಿವೆ ಅಲ್ಲಿ. ತೀರಾ ಸರಳ. ಈ ಕೆಳಗಿನ ಹಾಡಿನಲ್ಲಿ ಬಹುತೇಕ ಸಾಲುಗಳು ಪುನರಾವರ್ತಿತ. ನಿಜವಾಗಿ ಇರುವುದು ನಾಲ್ಕೋ ಐದೋ ಸಾಲುಗಳಷ್ಟೇ. ಬಿಡುಗಡೆಗೊಂಡಾಗ ಈ ಹಾಡು ಯೂರೋಪಿನ ತುಂಬ ಎಷ್ಟು ಪ್ರಿಯವಾದ ಗೀತೆಯಾಗಿ ಹೋಯಿತೆಂದರೆ ರೇ ವೆಂಟ್ಯುರಾ ಮತ್ತು ಪೌಲ್ ಮಿಸ್’ರಕಿ “ಎಲ್ಲಾ ಆರಾಮು” ನ ಕತೃಗಳಾಗಿಯೇ ಇವತ್ತಿಗೂ ಉಳಿದಿದ್ದಾರೆ.

ನಮ್ಮಲ್ಲೂ ಈ ಹಾಡಿನ ಲಾಜಿಕ್ಕಿನ ಥರದವುಗಳು ಇಲ್ಲವೆಂದಲ್ಲ. ಇಂಗ್ಲೀಷ್, ಫ್ರೆಂಚ್, ಸ್ಪಾನಿಷ್, ಆಸ್ಟ್ರಿಯನ್ ಗಳಲ್ಲಿ ಇದೇ ರೀತಿಯ ಸಂಭಾಷಣೆಗಳು ತುಂಬ ಸಿಗುತ್ತವೆ. ಆದರೆ ಈ ಹಾಡಿನ ವ್ಯಂಗ್ಯ ಮತ್ತು ತಿಳಿ ಹಾಸ್ಯಗಳು ಆಗಿನ ಭಯಗ್ರಸ್ಥ ಯೂರೋಪಿನಲ್ಲಿ ಶೀಘ್ರವಾಗಿ ಹರಡಿತೆಂದರೆ ೧೯೩೬ ರಲ್ಲಿ ಇದೇ ಹೆಸರಿನ ಒಂದು ಸಿನೆಮಾ ಕೂಡ ತೆರೆಕಂಡಿತು.  ನನ್ನ ಅನುವಾದದಲ್ಲಿ ಎರಡು ಬದಲಾವಣೆ ಮಾಡಿಕೊಂಡಿದ್ದೇನೆ ನಾನು. ಮೂಲದಲ್ಲಿ ಕುದುರೆ ಸಾಯುತ್ತದೆ; ಇಲ್ಲಿ ಎಮ್ಮೆ. ಮತ್ತು ಅಲ್ಲಿ ಮನೆ ಕುಸಿದ ಮೇಲೆ ಗಂಡ ಸಾಯುತ್ತಾನೆ. ಇಲ್ಲಿ ಅದನ್ನು ಉಲ್ಟಾ ಮಾಡಿಕೊಂಡೆ- ಫ್ರೆಂಚಿನ ಮತ್ತು ಕನ್ನಡದ ವಾಕ್ಯರಚನೆಗಳ ಭಿನ್ನತೆಯ ಕಾರಣದಿಂದ. ಹಾಡಿನ ಮೂಲ ಲಯ ಮತ್ತು ತಾಳದಲ್ಲಿಯೇ ಈ ಅನುವಾದವೂ ಇದೆ. ಹಾಗಾಗಿ ಈ ಕೆಳಗಿನ ಲಿಂಕ್ ನಲ್ಲಿ ಹಾಡು ಕೇಳಿ ಅದೇ ರಿದಮ್ ಅನ್ನು ಮನಸ್ಸಿನಲ್ಲಿಟ್ಟುಕೊಂಡು ಈ ಹಾಡನ್ನು ಕನ್ನಡದಲ್ಲಿ ಹಾಡಿಕೊಳ್ಳಬಹುದು. ಇದೊಂದು “ಗೀತೆ” ಎನ್ನುವುದು ಮನಸ್ಸಿನಲ್ಲಿರಲಿ ಎಂದು ಕೋರಿಕೆ.

ವಿಡಿಯೊ ನೋಡಿ.

ಪಂಡಿತರಿಗೆ: ’ರಾಜಕೀಯ ಮತ್ತು ಸಾಮಾಜಿಕವಾಗಿ’ ಈ ಹಾಡು ಹೊರಗೆ ಬಂದು, ಮೆಡಿಟರೇನಿಯನ್ ದೇಶಗಳಾದ್ಯಂತ ಪ್ರಸಿದ್ಧವಾದ ಕಾಲ ನಾಝೀಸಂ ನ ಬರ್ಭರತೆ ಯೂರೋಪಿನ ಮನಸ್ಸನ್ನು ಕೊರೆಯತೊಡಗಿದಂತದ್ದು- ಎಂಬುದಾಗಿ ಯೂಟ್ಯೂಬಿನಲ್ಲಿ ಫ್ರೆಂಚ್ ಗೀತೆಗಳ ಬಗ್ಗೆ ಆಳವಾದ ಗ್ರಹಿಕೆಗಳನ್ನು ದಾಖಲಿಸುವವಳೊಬ್ಬಳು ಬರೆಯುತ್ತಾಳೆ. ಮುಖ್ಯವಾದ್ದನ್ನು ನಿರ್ಲಕ್ಷಿಸುವ ಅಥವಾ ಲಕ್ಷಿಸಲು ಭಯಪಡುವ ಕಾಲವನ್ನು ಗೇಲಿ ಮಾಡಲು ರೇ ವೆಂಟ್ಯುರಾ ಇದನ್ನು ಅಳವಡಿಸಿಕೊಂಡನಂತೆ. ವಾಸ್ತವದಲ್ಲಿ ಫ್ರೆಂಚ್ ಕಾವ್ಯದಷ್ಟೇ ತೀವ್ರವಾಗಿ ರಾಜಕೀಯವನ್ನು ವಿಮರ್ಶಿಸಿದವು ಈ ಫ್ರೆಂಚ್ ಗೀತೆಗಳು. ಈ ಸರಳ ಹಾಡು ಎಷ್ಟು ಚೂಪಾದ ಒಂದು ರಾಜಕೀಯ ಹಾಡೂ ಆಯಿತೆಂದರೆ- ಯೂರೋಪಿನ ಪತ್ರಿಕೆಗಳು “ಎಲ್ಲಾ ಅರಾಮು ಮುಸಲೋನಿ ಮಹಾಶಯ” ಎಂದು ಇಟಲಿ-ಇಥಿಯೋಪಿಯನ್ ಯುದ್ಧದ ಸಮಯದಲ್ಲಿಯೂ, “ಎಲ್ಲಾ ಅರಾಮು ಸ್ಟಾಲಿನ್ ಮಹಾಶಯ” ಎಂದು ಸ್ಪಾನಿಷ್ ಅಂತರ್ಯುದ್ಧದ. ಸಮಯದಲ್ಲೂ ತಮಾಷೆ ಮಾಡಲು ಶುರುಮಾಡಿದ್ದವು. ತಣ್ಣನೆಯ ರಾಜಕೀಯ ಫ್ರೆಂಚ್ ಗೀತೆಗಳಿಗೆ ಇನ್ನೊಂದು ದೊಡ್ಡ ಉದಾಹಾರಣೆಯೆಂದರೆ ಬೋರಿಸ್ ವಿಯಾಂ ಎಂಬಾತ ಬರೆದು ಹಾಡಿದ “ಲ್ ಡೆಸರ್ಟರ್” ಎಂಬ ರಚನೆ. ಸರ್ವಾಧಿಕಾರದ ವಿರುದ್ಧ ದುಃಖ ಮತ್ತು ಸ್ಪಷ್ಟತೆಯಲ್ಲಿ ದನಿಯೆತ್ತುವ ಈ ಹಾಡನ್ನು ಅಪಾರ ವಿನಯ ಹಾಗೂ ದೃಢತೆಯಲ್ಲಿ ಹಾಡುತಾನೆ ಬೋರಿಸ್. ಹಾಡಿದು ಕೇವಲ ಫ್ರೆಂಚ್ ಭಾಷೆಯೊಂದರಲ್ಲೇ ಮೂವತ್ತಕ್ಕಿಂತ ಹೆಚ್ಚಿನ ರೂಪಗಳಲ್ಲಿ ಅಫ್ರಿಕಾದ ಅನೇಕ ಸರ್ವಾಧಿಕಾರೀ ರಾಷ್ಟ್ರಗಳಲ್ಲಿ ಕಾಣಿಸಿಕೊಂಡಿತು. ಸಾಹಿತ್ಯ ಬೇರೆಯಾದರೂ ಧ್ವನಿ, ದೃಢತೆ ಮತ್ತು ವಿನಯಗಳು ಈ ಹಾಡಿನ ಎಲ್ಲ ರೂಪಗಳಲ್ಲೂ ಹಾಗೆಯೇ ಇದ್ದವು ಎಂಬುದು ಈ ಗೀತೆಗಳ ವ್ಯಾಪಕತೆಯನ್ನು ತೊರಿಸುತ್ತವೆ ಅಂದುಕೊಂಡಿದ್ದೇನೆ.

೨೦೧೦ರಲ್ಲಿ ಕೆಂಡಸಂಪಿಗೆ ಗೆ ಮಾಡಿದ್ದ ಮೂಲ ಹಾಡಿನ ನಿಷ್ಟ ಅನುವಾದ ಇಲ್ಲಿದೆ. ಈಗಿನ ವೀಡಿಯೋ ಹಾಡು ಸಧ್ಯದ ಪರಿಸ್ಥಿತಿಗೆ ಬದಲಿಸಿ ಬರೆದದ್ದು.

“ಹಲೋ ಹಲೋ ಕಿಟ್ಟಿ

ಎನಪ್ಪಾ ವಿಶೇಷ?

ಇರಲಿಲ್ಲ ಊರಲ್ಲಿ; ಹದಿನೈದು ದಿನದಿಂದ

ನಾ ಮರಳಿ ಬಂದಾಗ

ಏನೇನು ಕಂಡೇನು?

ಏನಾಯಿತಲ್ಲಿ; ಹದಿನೈದು ದಿನದಿಂದ?”

“ಅಂಥಾದ್ದೇನಿಲ್ಲ; ಏನಿಲ್ಲ ಪದ್ಮಕ್ಕ

ಎಲ್ಲ ಆರಾಮು; ಎಲ್ಲಾ ಅರಾಮು.

ಅದ್ರೂನೂ ನಾಮಿಮ್ಗೆ ಹೇಳೋದು ಹೇಳ್ತೀನಿ

ಸಣ್ಣ್-ಪುಟ್ಟ ಮಾತಷ್ಟೇ; ತಲೆ ಹೋಗೋದೇನಿಲ್ಲ.

ನಿಮ್ ಮುದ್ದು ಎಮ್ಮೆ-ಬೆಳ್ಳಿ ಇತ್ತಲ್ಲ?

ಅದೊಂದು ಸತ್ತೋಯ್ತು. ಅದು ಬಿಟ್ರೆ ಪದ್ಮಕ್ಕ

ಇನ್ನೇನು ಇಲ್ಲ; ಎಲ್ಲ ಆರಾಮು, ಎಲ್ಲಾ ಅರಾಮು.”

“ಹಲೋ ಹಲೋ ಕಿಟ್ಟಿ!

ಎಂಥಾ ಮಾತಂದೇ?

ನನ್ನೆಮ್ಮೆ ಸತ್ತೋಯ್ತಾ

ಓ ನನ್ನ ಬಂಗಾರ!

ಹೇಳಪ್ಪಾ ನಂಗೆ-

ಇದಾಗಿದ್ ಹೆಂಗೆ?”

“ಅಯ್ಯಯ್ಯೊ ಪದ್ಮಕ್ಕ; ಅಂಥಾದ್ದೇನಾಗಿಲ್ಲ

ಎಲ್ಲ ಅರಾಮು; ಎಲ್ಲಾ ಆರಾಮು.

ಅದ್ರೂನೂ ನಾಮಿಮ್ಗೆ ಹೇಳೋದು ಹೇಳ್ತೀನಿ

ಸಣ್ಣ್-ಪುಟ್ಟ ಮಾತಷ್ಟೇ; ತಲೆ ಹೋಗೋದೇನಿಲ್ಲ.

ನಿಮ್ ಕೊಟ್ಗೇಗ್’ ಮೊನ್ನೆ

ಬೆಂಕಿ ಬಿತ್ತಲ್ಲ?- ಅದ್ರಲ್ಲಿ ಬೆಳ್ಳಿ

ಸಿಕ್ಕೊಂಡಳಲ್ಲ? ಅಷ್ಟೇನೆ ಪದ್ಮಕ್ಕ

ಅದು ಬಿಟ್ರೆ ಏನಿಲ್ಲ

ಏನೇನು ಇಲ್ಲ; ಎಲ್ಲ ಆರಾಮು, ಎಲ್ಲಾ ಅರಾಮು”

“ಹಲೋ ಹಲೋ ಕಿಟ್ಟಿ!

ಎಂಥಾ ಮಾತಂದೇ?

ನನ್ ಕೊಟ್ಗೆ ಸುಟ್ಟೋಯ್ತಾ

ಓ ಹಾಳು ದೇವ್ರೆ!

ಹೇಳಪ್ಪಾ ನಂಗೆ-

ಇದಾಗಿದ್ ಹೇಂಗೆ?”

“ಅಯ್ಯಯ್ಯೊ ಪದ್ಮಕ್ಕ; ಅಂಥಾದ್ದೇನಾಗಿಲ್ಲ

ಎಲ್ಲ ಅರಾಮು; ಎಲ್ಲಾ ಆರಾಮು.

ಅದ್ರೂನೂ ನಾಮಿಮ್ಗೆ ಹೇಳೋದು ಹೇಳ್ತೀನಿ

ಸಣ್ಣ್-ಪುಟ್ಟ ಮಾತಷ್ಟೇ; ತಲೆ ಹೋಗೋದೇನಿಲ್ಲ.

ನಿಮ್ಮನೆಗ್’ ಮೊನ್ನೆ ಬೆಂಕಿ ಬಿತ್ತಲ್ಲ?

ಅದೊಂಚೂರ್ ಕೊಟ್ಗೆಗೆ

ಹತ್ಕೊಂಡಿತ್ತಷ್ಟೇ! ಅಷ್ಟೇನೆ ಪದ್ಮಕ್ಕ

ಅದು ಬಿಟ್ರೆ ಏನಿಲ್ಲ

ಏನೇನು ಇಲ್ಲ; ಎಲ್ಲ ಆರಾಮು, ಎಲ್ಲಾ ಅರಾಮು.”

“ಹಲೋ ಹಲೋ ಕಿಟ್ಟಿ!

ಎಂಥಾ ಮಾತಂದೇ?

ನಮ್ಮನೆ ಬಿದ್ದೋಯ್ತಾ?

ಓ ನನ್ನ ಗೋಳೇ!

ಹೇಳಪ್ಪಾ ನಂಗೆ-

ಇದಾಗಿದ್ ಹೆಂಗೆ?”

“ಅದಿಷ್ಟೇ ಪದ್ಮಕ್ಕಾ; ಹೆಚ್ಚೇನು ಇಲ್ಲ.

ನಿನ್ ಗಂಡ ರಾಮಣ್ಣ

ಕುಡ್ಕೊಂಡು ಬಂದ್’ನಲ್ಲಾ.

ಏನ್ ಬೇಜಾರೋ ಏನೋ; ನೇಣಾಕ್ಕೊಂಡ್’ಬಿಟ್ನಲ್ಲ.

ಆಗವ್ನ ಕಾಲಿಗೆ ತಾಗಿತು ಚಿಮಣಿ

ಹತ್ಗೊಂತು ಬೆಂಕಿ- ಸುಟ್ಟೋಯ್ತು ನಿಮ್ಮನೆ.

ಆಗಂತೂ ಏನ್ ಗಾಳಿ, ತುಂಬಾನೇ ಪದ್ಮಕ್ಕಾ!

ಅಂಟಿತು ಬೆಂಕಿ-ಉರಿದೋಯ್ತು ಕೊಟ್ಟಿಗೆ.

ನಿಮ್ಮನೆ ಎಮ್ಮೆ ಸತ್ತಿದ್ದು ಹಿಂಗೆ. ಅಷ್ಟೇನೆ ಪದ್ಮಕ್ಕ

ಅದು ಬಿಟ್ರೆ ಏನಿಲ್ಲ

ಏನೇನು ಇಲ್ಲ; ಎಲ್ಲ ಆರಾಮು, ಎಲ್ಲಾ ಅರಾಮು.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...