Homeಅಂತರಾಷ್ಟ್ರೀಯಕೊರೊನಾ ತಯಾರಿಸಿ ಚೈನಾಗೆ ಮಾರಿದ ಹಾರ್ವಡ್‌ ಪ್ರಾಧ್ಯಾಪಕನ ಬಂಧನ: ಮತ್ತೊಂದು ಸುಳ್ಳು ಸುದ್ದಿ

ಕೊರೊನಾ ತಯಾರಿಸಿ ಚೈನಾಗೆ ಮಾರಿದ ಹಾರ್ವಡ್‌ ಪ್ರಾಧ್ಯಾಪಕನ ಬಂಧನ: ಮತ್ತೊಂದು ಸುಳ್ಳು ಸುದ್ದಿ

ಯುಎಸ್ ಅಧಿಕಾರಿಗಳು ಡಾ. ಲೈಬರ್‌ಗೆ ಕೊರೊನಾ ವೈರಸ್‌ನೊಂದಿಗೆ ಯಾವುದೇ ಸಂಪರ್ಕ ಇಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ.

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕ ಹರಡುವಷ್ಟೇ ವೇಗದಲ್ಲಿ ಸುಳ್ಳು ಸುದ್ದಿಗಳು ಸಹ ಹರಡುತ್ತಿವೆ. ಅದನ್ನು ಬಯಲು ಮಾಡಿ ಸತ್ಯ ತಿಳಿಸುವುದೇ ದೊಡ್ಡ ಕೆಲಸವಾಗಿದೆ. ನಾವೆಲ್ಲರೂ ನಂಬಿಬಿಡುವ ಸುಳ್ಳು ಸುದ್ದಿಯೊಂದು ಇಲ್ಲಿದೆ ನೋಡಿ.

ಕೊರೊನಾ ವೈರಸ್ ತಯಾರಿಸಿ ಚೀನಾಕ್ಕೆ ಮಾರಾಟ ಮಾಡಿದ್ದಕ್ಕಾಗಿ ಯುಎಸ್ ಅಧಿಕಾರಿಗಳು ಹಾರ್ವರ್ಡ್ ಪ್ರಾಧ್ಯಾಪಕ ಡಾ. ಚಾರ್ಲ್ಸ್ ಲೈಬರ್ ಅವರನ್ನು ಬಂಧಿಸಿದ್ದಾರೆ ಎಂಬ ಸಂದೇಶವುಳ್ಳ ವಿಡಿಯೋ ಕ್ಲಿಪ್ ಫೇಸ್‌ಬುಕ್, ಟ್ವಿಟರ್ ಮತ್ತು ವಾಟ್ಸಾಪ್‌ನಲ್ಲಿ ಹರಿದಾಡುತ್ತಿದೆ.

USA just discovered the man who manufactured and sold the #coronavirus to #China.Dr #CharlesLieber, head of the chemistry and biology department at #HarvardUniversity, USA. He was just arrested today according to American department sources.

Posted by Meera Singh on Saturday, April 4, 2020

 

“ಅಲೆಕ್ಸ್ ಅಲ್ವಾರೆಜ್” ಮತ್ತು “ಮೀರಾ ಸಿಂಗ್” ನಂತಹ ಫೇಸ್ಬುಕ್ ಬಳಕೆದಾರರು ಯುಎಸ್ ಸುದ್ದಿ ಚಾನೆಲ್ “ಡಬ್ಲ್ಯೂಸಿವಿಬಿ” ಯ ವಿಡಿಯೋ ಕ್ಲಿಪಿಂಗ್ ಅನ್ನು “ಯುಎಸ್ಎ ಕೊರೊನಾ ವೈರಸ್ ಅನ್ನು ಚೀನಾಕ್ಕೆ ತಯಾರಿಸಿ ಮಾರಾಟ ಮಾಡಿದ ವ್ಯಕ್ತಿಯನ್ನು ಕಂಡುಹಿಡಿದಿದೆ” ಎಂದು ಟೈಟಲ್‌ ಕೊಟ್ಟು ಪೋಸ್ಟ್ ಮಾಡಿದ್ದಾರೆ.

ಡಾ. ಚಾರ್ಲ್ಸ್ ಲೈಬರ್ ಅವರನ್ನು ಏಕೆ ಬಂಧಿಸಲಾಯಿತು?

ಡಾ. ಚಾರ್ಲ್ಸ್ ಲೈಬರ್ ನ್ಯಾನೊ ಸೈಂಟಿಸ್ಟ್ ಆಗಿದ್ದು ಅವರಿಗೂ ಕೊರೊನಾ ವೈರಸ್‌ಗೂ ಯಾವುದೇ ಸಂಬಂಧವಿಲ್ಲ. ಆತನ ಬಂಧನದ ಸುದ್ದಿಯನ್ನು ಯುಎಸ್ ನ ಮುಖ್ಯವಾಹಿನಿಯ ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡಿವೆ. “ದಿ ನ್ಯೂಯಾರ್ಕ್ ಟೈಮ್ಸ್” ಪ್ರಕಾರ, ಹಾರ್ವರ್ಡ್ ಪ್ರಾಧ್ಯಾಪಕನು ಚೀನಾದಿಂದ ಹಣ ಪಡೆದ ವಿಷಯವನ್ನು ಮರೆಮಾಚಿದ ಕಾರಣಕ್ಕಾಗಿ ಆತನನ್ನು ಬಂಧಿಸಲಾಗಿದೆಯೇ ಹೊರತು ಬೇಹುಗಾರಿಕೆ ಅಥವಾ ಚೀನಾಕ್ಕೆ ಯಾವುದೇ ಸೂಕ್ಷ್ಮ ಮಾಹಿತಿಯನ್ನು ಕಳುಹಿಸಿದ ಆರೋಪದ ಮೇಲೆ ಆತನನ್ನು ಬಂಧಿಸಲಾಗಿಲ್ಲ.

BOSTON, MA. – JANUARY 30: Charles Lieber, left, a Harvard professor charged with concealing his income from federal authorities, leaves Federal Court with his attorney Peter Gelhaar on January 30, 2020 in Boston, Massachusetts. (Staff Photo By Matt Stone/MediaNews Group/Boston Herald)

ಡಾ. ಲೈಬರ್ ಅವರನ್ನು 2020 ರ ಜನವರಿಯಲ್ಲಿ ಯುಎಸ್ ಫೆಡರಲ್ ಅಧಿಕಾರಿಗಳು ಚೀನಾದಿಂದ ಪಡೆದ ಹಣದ ಮೇಲೆ “ಸುಳ್ಳು, ಕಾಲ್ಪನಿಕ ಮತ್ತು ಮೋಸದ ಹೇಳಿಕೆ ನೀಡಿದ್ದಕ್ಕಾಗಿ” ಬಂಧಿಸಿದ್ದರು.

ಯುಎಸ್ ಡಿಪಾರ್ಟ್ಮೆಂಟ್ ಆಫ್ ಜಸ್ಟಿಸ್ ಜನವರಿ 28, 2020 ರಂದು ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ,  ನ್ಯಾನೊ ಸೈನ್ಸ್‌ನಲ್ಲಿ ಪರಿಣತಿ ಹೊಂದಿರುವ ಹಾರ್ವರ್ಡ್ ವಿಶ್ವವಿದ್ಯಾಲಯದ ಲೈಬರ್ ರಿಸರ್ಚ್ ಗ್ರೂಪ್‌ನ ಪ್ರಧಾನ ತನಿಖಾಧಿಕಾರಿಯಾಗಿ ಸೇವೆ ಸಲ್ಲಿಸಿರುವ ಡಾ. ಲೈಬರ್ ಅವರು ರಕ್ಷಣಾ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಸಂಸ್ಥೆಗಳಿಂದ 15 ಮಿಲಿಯನ್‌ ಡಾಲರ್‌ಗಳಿಗಿಂತ ಹೆಚ್ಚಿನ ಅನುದಾನವನ್ನು ಪಡೆದಿದ್ದಾರೆ ಎನ್ನಲಾಗಿದೆ.

ಡಾ. ಲೈಬರ್ ಅವರು ಚೀನಾದ ವುಹಾನ್ ಯೂನಿವರ್ಸಿಟಿ ಆಫ್ ಟೆಕ್ನಾಲಜಿಯಲ್ಲಿ (ಡಬ್ಲ್ಯುಯುಟಿ) “ಕಾರ್ಯತಂತ್ರದ ವಿಜ್ಞಾನಿ” ಮತ್ತು ಚೀನಾದ “ಸಾವಿರ ಟ್ಯಾಲೆಂಟ್ಸ್ ಪ್ಲ್ಯಾನ್” ನಲ್ಲಿ ಗುತ್ತಿಗೆದಾರರಾಗಿದ್ದು, ಚೀನಾ ಸರ್ಕಾರದಿಂದ ಅಪಾರ ಪ್ರಮಾಣದ ಹಣವನ್ನು ಪಡೆದಿದ್ದಾರೆ. ಅವರು ಈ ಮಾಹಿತಿಯನ್ನು ರಹಸ್ಯವಾಗಿ ಇಟ್ಟುಕೊಂಡಿದ್ದಾರೆ ಮತ್ತು ಹಾರ್ವರ್ಡ್ ವಿಶ್ವವಿದ್ಯಾಲಯ ಅಥವಾ ಯುಎಸ್ ಅಧಿಕಾರಿಗಳಿಗೆ ಮಾಹಿತಿ ನೀಡಿಲ್ಲ ಎಂದು ಆರೋಪಿಸಲಾಗಿದೆ.

“ಸಾವಿರ ಪ್ರತಿಭೆಗಳ ಯೋಜನೆ” ಚೀನಾದ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾಗಿದೆ, ಅದರ ವೈಜ್ಞಾನಿಕ ಅಭಿವೃದ್ಧಿಗೆ ಕೊಡುಗೆ ನೀಡಲು ಸಾಗರೋತ್ತರ ಪ್ರತಿಭೆಗಳನ್ನು ಮತ್ತು ವಿದೇಶಿ ತಜ್ಞರನ್ನು ಆಕರ್ಷಿಸಲು ಮತ್ತು ನೇಮಿಸಿಕೊಳ್ಳಲು ಅದನ್ನು ವಿನ್ಯಾಸಗೊಳಿಸಲಾಗಿದೆ.

ಹಾರ್ವರ್ಡ್ ಪ್ರಾಧ್ಯಾಪಕರಾದ ಡಾ. ಚಾರ್ಲ್ಸ್ ಲೈಬರ್ ಅವರು ಚೀನಾದ ಸರ್ಕಾರದಿಂದ ಅಪಾರ ಹಣವನ್ನು ಪಡೆದುದ್ದಕ್ಕಾಗಿ ಯುಎಸ್ ಫೆಡರಲ್ ಅಧಿಕಾರಿಗಳಿಂದ ಬಂಧನವಾಗಿರುವುದು ಸತ್ಯಸಂಗತಿಯಾಗಿದೆ. ಆದರೆ ಅವರು ಚೀನಾದ ವುಹಾನ್ ಟೆಕ್ನಾಲಜಿ ವಿಶ್ವವಿದ್ಯಾಲಯದಲ್ಲಿ “ಕಾರ್ಯತಂತ್ರದ ವಿಜ್ಞಾನಿ” ಯಾಗಿ ಕೆಲಸ ಮಾಡಿದ್ದಾರೆ ಎಂಬ ಅಂಶವನ್ನು ಮರೆಮಾಚಿದ್ದಕ್ಕಾಗಿ ಅವರನ್ನು ಬಂಧಿಸಲಾಯಿತು ಎಂಬುದು ನಿಜ. ಆದರೆ ಯುಎಸ್ ಅಧಿಕಾರಿಗಳು ಡಾ. ಲೈಬರ್‌ಗೆ ಕೊರೊನಾ ವೈರಸ್‌ನೊಂದಿಗೆ ಯಾವುದೇ ಸಂಪರ್ಕ ಇಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....