Homeಕರ್ನಾಟಕಲಾಕ್ ಡೌನ್ ನಿಂದ ಅಸ್ತವ್ಯಸ್ತಗೊಂಡ ಕಾರ್ಮಿಕರ ಬದುಕು; ಜನ ಸಾಹಸ್ ಸರ್ವೇ ಬಿಚ್ಚಿಟ್ಟ ಸತ್ಯಗಳು

ಲಾಕ್ ಡೌನ್ ನಿಂದ ಅಸ್ತವ್ಯಸ್ತಗೊಂಡ ಕಾರ್ಮಿಕರ ಬದುಕು; ಜನ ಸಾಹಸ್ ಸರ್ವೇ ಬಿಚ್ಚಿಟ್ಟ ಸತ್ಯಗಳು

ಕೋವಿಡ್-19ನಿಂದ ಭಾರತವನ್ನು ಲಾಕ್ ಡೌನ್ ಮಾಡಿದ ಮೇಲೆ ವಲಸೆಕಾರ್ಮಿಕರ ಜೀವನ ಅಸ್ತವ್ಯವಸ್ತವಾಗಿದೆ ಎಂದು ಸರ್ಕಾರೇತರ ಸಂಸ್ಥೆ ಜನ ಸಾಹಸ್ ಸರ್ವೇ ಹೇಳಿದೆ.

- Advertisement -
- Advertisement -

ಲಾಕ್ ಡೌನ್ ಪರಿಣಾಮ ಸೀಜನಲ್ ವಲಸಿಗರಲ್ಲಿ ಜಾಗೃತಿ ಮೂಡಿಸಲು ಸಾಧ್ಯವಾಗದೆ ಆರ್ಥಿಕ ಬೆಳವಣಿಗೆ ಕುಸಿತ ಕಾಣಲು ಕಾರಣವಾಗಿದೆ. ಹೀಗಾಗಿ ಶೇ. 92ರಷ್ಟು ಕಾರ್ಮಿಕರ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂದು ಸರ್ಕಾರೇತರ ಸಂಸ್ಥೆ ಜನ ಸಾಹಸ್ ಸರ್ವೇ ಹೇಳಿದೆ.

ಜನ ಸಾಹಸ್ ಸಂಸ್ಥೆ ಪ್ರಮುಖವಾಗಿ ಉತ್ತರ ಭಾರತ ಮತ್ತು ಮಧ್ಯಭಾರತದಲ್ಲಿ ದೂರವಾಣಿ ಮೂಲಕ ವಲಸೆ ಕಾರ್ಮಿಕರನ್ನು ಸಂಪರ್ಕಿಸಿ ಸರ್ವೆ ನಡೆಸಿ ಲಾಕ್ ಡೌನ್ ಸಮಯದಲ್ಲಿ ಶೇಕಡ 42ರಷ್ಟು ವಲಸೆ ಕಾರ್ಮಿಕರ ಬಳಿ ಆ ದಿನಕ್ಕೂ ಆಹಾರಧಾನ್ಯಗಳಿಲ್ಲ ಎಂದು ಸ್ಪಷ್ಟಪಡಿಸಿದೆ. 21 ದಿನಗಳ ಲಾಕ್ ಡೌನ್ ವೇಳೆಯಲ್ಲಿ ಶೇಕಡ 66 ರಷ್ಟು ಮಂದಿ ಕಾರ್ಮಿಕರಿಗೆ ಮನೆಯ ಖರ್ಚುವೆಚ್ಚ ನಿರ್ವಹಣೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಮಧ್ಯ ಮತ್ತು ಉತ್ತರ ಭಾರತದ ಮೂರನೇ ಒಂದರಷ್ಟು ವಲಸೆ ಕಾರ್ಮಿಕರು ಈ ಸಮೀಕ್ಷೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಲಾಕ್ ಡೌನ್ ನ  ಆರಂಭದ ದಿನದಿಂದಲೂ ಆಹಾರ, ನೀರು ಮತ್ತು ಹಣ ಸಿಗದೆ ನಗರಗಳಲ್ಲಿ ಸಿಲುಕಿ ಪರದಾಡುತ್ತಿದ್ದಾರೆ. ನೀರು ಮತ್ತು ಆಹಾರ ಸಿಕ್ಕರೂ ಅದು ಕಡಿಮೆ ಪ್ರಮಾಣದಲ್ಲಿ ದೊರೆತಿದೆ ಎಂಬುದರ ಮೇಲೆ ಈ ಸರ್ವೇ ಬೆಳಕು ಚೆಲ್ಲಿದೆ.

ಲಾಕ್ ಡೌನ್ ನಡುವೆಯೇ ಅರ್ಧದಷ್ಟು ವಲಸೆ ಕಾರ್ಮಿಕರು ತಮ್ಮ ಹಳ್ಳಿಗಳಿಗೆ ಹಿಂದಿರುಗಿದ್ದಾರೆ. ಆದರೂ ಅವರು ವಿವಿಧ ಸವಾಲುಗಳನ್ನು ಎದುರಿಸುತ್ತಿದ್ದು ಆಹಾರಧಾನ್ಯಗಳನ್ನು ಮತ್ತು ಯಾವುದೇ ಆದಾಯವನ್ನು ಹೊಂದಲು ಆಗಿಲ್ಲ. ಹೀಗಾಗಿ ಅವರ ಬದುಕು ದುಸ್ಥರವಾಗಿದೆ.

ಶೇಕಡ 31ರಷ್ಟು ಕಾರ್ಮಿಕರು ಸಾಲ ಪಡೆದಿದ್ದಾರೆ. ಆದರೆ ಉದ್ಯೋಗವಿಲ್ಲದೆ ಸಾಲ ಮರುಪಾವತಿ ಮಾಡುವುದು ಕಷ್ಟವಾಗುತ್ತಿದೆ. ಬಹುತೇಕ ಕಾರ್ಮಿಕರು ಈ ಸಾಲವನ್ನು ಖಾಸಗಿ ಲೇವಾದೇವಿದಾರರಿಂದ ಪಡೆದಿದ್ದಾರೆ. ಶೇಕಡ 79ರಷ್ಟು ವಲಸೆ ಕಾರ್ಮಿಕರು ಸಾಲ ಕಟ್ಟಲು ಸಾಧ್ಯವಾಗುತ್ತಿಲ್ಲ ಹಾಗಾಗಿ ಹಿಂಸೆಗೆ ತುತ್ತಾಗಬಹುದು ಎನ್ನುವ ಆತಂಕದಲ್ಲಿದ್ದಾರೆ ಎಂದು ಸರ್ವೇ ತಿಳಿಸಿದೆ.

ಮಾರ್ಚ್ 24ರ ನಂತರ ಕಾರ್ಮಿಕರಿಗೆ ಉದ್ಯೋವಿಲ್ಲ. ಹಾಗಾಗಿ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಕಟ್ಟಡ ಕಾರ್ಮಿಕರಿಗೆ ಕಲ್ಯಾಣ ಮಂಡಳಿಯಿಂದ ನೇರ ಹಣ ವರ್ಗಾವಣೆ ಮಾಡುವಂತೆ ಎಲ್ಲಾ ರಾಜ್ಯಗಳಿಗೆ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಸೂಚನೆ ನೀಡಿದೆ. ಆದರೆ ಶೇಕಡ 94ರಷ್ಟು ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಗುರುತಿನ ಚೀಟಿ ಇಲ್ಲ ಎಂಬುದರ ಮೇಲೆ ಈ ಸರ್ವೇ ಬೊಟ್ಟು ಮಾಡಿದೆ.

ಸರಾಸರಿ ನಾಲ್ವರು ಸದಸ್ಯರಿರುವ ಕುಟುಂಬದ ಜವಾಬ್ದಾರಿ ಹೊಂದಿರುವ ಕಾರ್ಮಿಕರಲ್ಲಿ ಶೇಕಡ 55ರಷ್ಟು ಕಾರ್ಮಿಕರು ದಿನವೊಂದಕ್ಕೆ 200-400 ರೂಪಾಯಿ ಕೂಲಿ ಪಡೆದರೆ, ಶೇಕಡ 39ರಷ್ಟು ಕಾರ್ಮಿಕರು 400-600 ರೂಪಾಯಿ ದಿನಕ್ಕೆ ಪಡೆಯುತ್ತಿದ್ದು,  ಕನಿಷ್ಠ ದಿನಗೂಲಿ ಕಾಯಿದೆಯ ಅನುಗುಣವಾಗಿ ಪಡೆಯಬೇಕಾದ್ದಕಿಂತ ಕಡಿಮೆ ಆದಾಯ ಹೊಂದಿದ್ದಾರೆ. ಈ ಕಾಯಿದೆಯ ಪ್ರಕಾರ ದೆಹಲಿಯಲ್ಲಿ  ಕೌಶಲ, ಅರೆಕೌಶಲ ಮತ್ತು ಕೌಶಲ್ಯವಿಲ್ಲದ ಕಾರ್ಮಿಕರಿಗೆ ಕ್ರಮವಾಗಿ 692, 629 ಮತ್ತು 571 ರೂ ಆದಾಯ ಪಡೆಯಬೇಕಿದೆ.

ನಿರ್ಮಾಣ ವಲಯವು ದೇಶದ ಜಿಡಿಪಿಗೆ ಶೇ.9ರಷ್ಟು ಕೊಡುಗೆ ನೀಡುತ್ತದೆ ಮತ್ತು ದೇಶದ ವಲಸೆ ಕಾರ್ಮಿಕರಿಗೆ ಅತಿಹೆಚ್ಚು ಉದ್ಯೋಗ ನೀಡುತ್ತದೆ. ಅಂದರೆ 5 ಕೋಟಿ ದಿನಗೂಲಿ ಕಾರ್ಮಿಕರಿಗೆ ಕೆಲಸ ಕೊಡುತ್ತದೆ. ಪ್ರತಿವರ್ಷ 90 ಲಕ್ಷ ಕಾರ್ಮಿಕರು ಗ್ರಾಮೀಣ ಪ್ರದೇಶದಿಂದ ನಗರಗಳತ್ತ ನಿರ್ಮಾಣ ಮತ್ತು ಫ್ಯಾಕ್ಟರಿಗಳಲ್ಲಿ ಕೆಲಸ ಮಾಡಲು ಚಲಿಸುತ್ತಾರೆ ಎಂದು ಸರ್ವೆ ಹೇಳಿದ್ದನ್ನು ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ. ಈಗ ಈ ಕೋಟ್ಯಾಂತರ ಜನರು ಅತಂತ್ರ ಸ್ಥಿತಿಯಲ್ಲಿ ಜೀವನ ಸಾಗಿಸಬೇಕಿದೆ. ಇವರೆಲ್ಲರ ಬವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಮತ್ತು ಕೇಂದ್ರ ಸರಕಾರಗಳು ತುರ್ತು ಕ್ರಮ ಕೈಗೊಳ್ಳಬೇಕಿದೆ.

ಕೃಪೆ: ಇಂಡಿಯನ್‌ ಎಕ್ಸ್‌ಪ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...