Homeಮುಖಪುಟರೇವಣ್ಣನವರ ಕುರಿತು ವ್ಯಂಗ್ಯವಾಡಲು ಹೋಗಿ ತೀವ್ರ ಟೀಕೆ-ನಿಂದನೆಗೊಳಗಾದ ವಿಶ್ವೇಶ್ವರ ಭಟ್‌!

ರೇವಣ್ಣನವರ ಕುರಿತು ವ್ಯಂಗ್ಯವಾಡಲು ಹೋಗಿ ತೀವ್ರ ಟೀಕೆ-ನಿಂದನೆಗೊಳಗಾದ ವಿಶ್ವೇಶ್ವರ ಭಟ್‌!

ಈ ಟ್ವೀಟ್‌ ಮೂಲಕ ವಿಶ್ವೇಶ್ವರ ಭಟ್ಟರು ಮಾಡಿದ್ದು ತಪ್ಪು ಎಂದು ಶೇ. 80ಕ್ಕೂ ಹೆಚ್ಚು ಜನ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಪ್ರಪಂಚದೆಲ್ಲೆಡೆ ಕೊರೊನಾ ಹಬ್ಬುತ್ತಿದೆ. ಸಾವು ನೋವುಗಳು ದಿನೇ ದಿನೇ ಹೆಚ್ಚುತ್ತಿವೆ. ಇಡೀ ವೈದ್ಯಕೀಯ ಸಮೂಹ ಅದರ ವಿರುದ್ಧ ಹೋರಾಡುತ್ತಿದೆ. ಇಂತಹ ಸಮಯದಲ್ಲಿ ಕೊರೊನಾ ವಿರುದ್ಧ ಐಕ್ಯಮತ್ಯ  ಸಾಧಿಸಲು ಭಾರತದ ಪ್ರಧಾನಿ ನರೇಂದ್ರ ಮೋದಿಯವರು 9 ನಿಮಿಷಗಳ ಕಾಲ ಲೈಟ್‌ ಬಂದ್‌ ಮಾಡಿ ದೀಪ ಹಚ್ಚಲು ಕರೆ ನೀಡಿದ್ದರು.

ಪ್ರಧಾನಿಗಳ ಕರೆ ಕೇಳಿಬರುತ್ತಿದ್ದಂತೆಯೇ ಅದಕ್ಕೆ ಮತ್ತಷ್ಟು ಸುಳ್ಳುಗಳು ಪೋಣಿಸಿಕೊಳ್ಳಲಾರಂಭಿಸಿದ್ದವು. ದೀಪದ ಬೆಳಕಿಗೆ ಕೊರೊನಾ ಸಾಯುತ್ತದೆ, ದೀಪದ ಶಾಖಕ್ಕೆ ಶಕ್ತಿ ಇದೆ ಎಂದೆಲ್ಲಾ ಜನ ನಂಬಲು ಆರಂಭಿಸಿದ್ದರು. ಅಷ್ಟರಲ್ಲಿ ಮೈಸೂರಿನ ಬಿಜೆಪಿ ಶಾಸಕ ರಾಮ್‌ದಾಸ್‌ “ದೀಪ ಹಚ್ಚಿದರೆ ವೈರಸ್ ದೀಪದ ಬಳಿ ಬಂದು ಶಾಖಕ್ಕೆ ಸಾಯುತ್ತದೆ” ಎಂದು ಹೇಳಿಕೆ ನೀಡಿ ತೀವ್ರ ಮುಜುಗರಕ್ಕೊಳಗಾಗಿದ್ದರು.

ಇದನ್ನೂ  ಓದಿ: ದೀಪದ ಶಾಖಕ್ಕೆ ಕ್ರಿಮಿ ಸಾಯುತ್ತದೆ ಎಂದ ಬಿಜೆಪಿ ಶಾಸಕ ರಾಮದಾಸ್: ವ್ಯಾಪಕ ಟ್ರೋಲ್‌

ಇನ್ನೊಂದು ಕಡೆ ದೇಶದೆಲ್ಲೆಡೆ ಪ್ರಧಾನಿಗಳ ಮನವಿಗೆ ಜನ ಸ್ಪಂದಿಸಿದ್ದರು. ಕರ್ನಾಟಕದ ಮಾಜಿ ಸಚಿವ ಎಚ್‌.ಡಿ ರೇವಣ್ಣ ಸಹ ಮೋಂಬತ್ತಿ ಹಚ್ಚಿ ಪ್ರಧಾನಿಗಳ ಕರೆಗೆ ಓಗೊಟ್ಟಿದ್ದರು. ಆದರೆ ಆ ಫೋಟೊವನ್ನೇ ಬಳಸಿ ರೇವಣ್ಣನವರ ತೇಜೋವಧೆಗೆ ಮಾಡಲು ಮುಂದಾಗಿದ್ದ ಪತ್ರಕರ್ತ ವಿಶ್ವೇಶ್ವರ ಭಟ್ ಮೇಲೆ ನೆಟ್ಟಿಗರು ಮುಗಿಬಿದ್ದಿದ್ದು ವ್ಯಾಪಕ ಟೀಕೆ-ನಿಂದನೆಗಳ ಸುರಿಮಳೆ ಸುರಿಸಿದ್ದಾರೆ.

ಈ ರೀತಿಯಾಗಿ ಟ್ವಿಟ್ಟರ್‌ನಲ್ಲಿ ಎಚ್‌.ಡಿ ರೇವಣ್ಣನವರ ತೇಜೋವಧೆ ಮಾಡುವಂತಹ ಎರಡು ಪೋಸ್ಟ್‌ಗಳನ್ನು ವಿಶ್ವೇಶ್ವರ ಭಟ್‌ ಹಾಕಿದ್ದಾರೆ. ಇದು ಸಹಜವಾಗಿಯೇ ನೆಟ್ಟಿಗರನ್ನು ಕೆರಳಿಸಿದೆ. ಕೂಡಲೇ ವಿಶ್ವೇಶ್ವರ ಭಟ್‌ ಮೇಲೆ ಮುಗಿಬಿದ್ದ ಅವರು ವ್ಯಾಪಕ ಟೀಕೆ ಜೊತೆಗೆ ನಿಂದನೆಗಳ ಸುರಿಮಳೆ ಸುರಿಸಿದ್ದಾರೆ. ಕೆಲವು ಕೆಳಗಿನಂತಿವೆ ನೋಡಿ.

“ಹೌದು ನಿಮ್ಮ ಈ ಟ್ವೀಟ್ ನೋಡಿದ ಮೇಲೆ ಇಂತ ವಿಷ ಜಂತುಗಳ ಮದ್ಯೆ ನನಗೇನು ಕೆಲಸ ಅಂತ ಕೊರೊನಾ ಈ ದೇಶ ಬಿಟ್ಟು ಓಡಿ ಹೋದರು ಹೋಗಬಹುದು , atleast ನಿಮ್ಮ ಹೆಸರಿನ ಮುಂದೆ ಇರೋ ಪತ್ರಕರ್ತ ಅನ್ನೋ ಶಬ್ದಕ್ಕಾದರೂ ಬೆಲೆ ಕೊಡಿ ಭಟ್ರೆ” ಎಂದು ವಿನಾಯಕ್‌ನಾಯಕ್‌ ಟ್ವೀಟ್‌ ಮಾಡಿದ್ದಾರೆ.

“ವಿಶ್ವೇಶ್ವರ ಬಟ್ಟರೆ.. ನಾನು ನೀವೊಬ್ಬ ಪತ್ರಕರ್ತರೆಂದು ಭಾವಿಸಿ ನಿಮ್ಮನ್ನು follow ಮಾಡ್ತಿದ್ದೆ, ಆದರೆ ನೀವು ಈ ರೀತಿ ವೈಯಕ್ತಿಕವಾಗಿ ಗೌಡರ ಮನೆಯವರ ಮೇಲೆ ವ್ಯಂಗ್ಯವಾಡುವುದು ಅಸಯ್ಯದ ಸಂಗತಿ.. ನಿಮ್ಮ ಸ್ಥಾನಕ್ಕೆ ತಕ್ಕಾಗಿ ನೆಡೆದುಕೊಳ್ಳಿ.. ಮನೆಯಲ್ಲಿದ್ದಾಗ ಪಂಚೆ ಹಾಕಿಕೊಳ್ಳದೆ ಇನ್ನೇನು ಸೂಟ್, ಬೂಟ್ ಹಾಕಿಕೊಂಡು ಪೋಸ್ ಕೊಡಬೇಕೆ..” ಎಂದು ಶರತ್‌ ಕುಮಾರ್‌ ಜಿ.ಡಿ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದು ಸ್ವಲ್ಪ ಅತಿಯಾಯಿತು ಭಟ್ರೇ. ಅವರು ಆಚರಿಸಿದರೂ ಅಣಕಿಸುತ್ತೀರ, ಆಚರಿಸದಿದ್ದರೂ ಅಣಕಿಸುತ್ತೀರ.. ಎಂದು ರೋಹಿತ್‌ ಸಿಂಹ ಅಭಿಪ್ರಾಯಪಟ್ಟಿದ್ದಾರೆ.

“ಭಟ್ರೇ ನಂಜು ಮೈ ಇಡೀ ತುಂಬಿದ ರೀತಿ ಕಾಣಿಸ್ತಾ ಇದೆ ನಿಮ್ಮ ಟ್ವೀಟ್ ನೋಡುವಾಗ. ಇಷ್ಟೊಂದು ವಿಷ ದೇಹದಲ್ಲಿ ಇಟ್ಕೊಂಡು ಹೇಗೆ ಜೀವಂತ ಇದ್ದೀರಿ?” ಎಂದು ಯಶ್ವಿನ್‌ಎಂಬುವವರು ಪ್ರಶ್ನಿಸಿದ್ದಾರೆ.

“ಒಂದು ಜನಾಂಗದ ಬಟ್ಟೆಯನ್ನು ಅಣುಕಿಸುವ ಮುಂಚೆ ನಿಮ್ಮ ಹಿರಿಯರ ಲಂಗೋಟಿ ಜ್ಞಾಪಸಿಕೋ” ಎಂದು ಮಂಜುನಾಥ್‌ ಜವರನಹಳ್ಳಿಯವರು ವ್ಯಂಗ್ಯವಾಡಿದ್ದಾರೆ.

Sir, ಪತ್ರಿಕೆಯೊಂದರ ಸಂಪಾದಕರಾಗಿ ನೀವು ಈ ರೀತಿ ಟ್ವೀಟ್ ಮಾಡುವುದು ಸರಿಯಲ್ಲ. ಪ್ರಧಾನಿಯ ಕರೆಗೆ ಇವರು ಸ್ಪಂದಿಸಿದ್ದಾರೆ, ಅದೇ ದೊಡ್ಡ ವಿಷಯ. ಈ ರೀತಿ ಟ್ರೋಲ್ ಮಾಡುವಷ್ಟು ಸಣ್ಣ ಸ್ಥಾನದಲ್ಲಿ ನೀವು ಇಲ್ಲ ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ.

ದೀಪ ಹಚ್ಚಿದರೂ ಟೀಕೆ ಹಚ್ಚದಿದ್ದರೂ ಟೀಕೆ….. ವಾವ್…..ನಿಮ್ಮಂತ ನಿಷ್ಪ್ರಯೋಜಕರಿಂದ ದೇಶಕ್ಕೆ ಏನು ಪ್ರಯೋಜನವಿಲ್ಲ…ಹೊರಡು… ನೀವು 365 ದಿನ ಹಾಕೋದು ಇದೆ ಪಾಂಡಿತ್ಯದ ಬಟ್ಟೆ ಅಲ್ಲವಾ…..??? ಎಂದು ಮೋಹನ್‌ ಪ್ರಶ್ನಿಸಿದ್ದಾರೆ.

“ಪತ್ರಕರ್ತರೇನು ದೈವಪುತ್ರರಲ್ಲ ಸಲೀಸಾಗಿ ಇನ್ನೊಬ್ಬರ ತೇಜೋವಧೆ ಮಾಡಲು. ಅದು ಅವರ ಇಚ್ಛೆ. ಏಕವಚನದಿಂದ ಮಾತನಾಡುವುದನ್ನು ಬಿಡಿ. ಗೌರವ ಕೊಡಿ” ಎಂದು ದೀಪಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಟ್ಟರೆ ತಾವು ಒಂದು ಪತ್ರಿಕೆಯ ಸಂಪಾದಕರಾ ಇಲ್ಲ ರಾಜಕೀಯ ಪಕ್ಷದ ಸಾಮಾಜಿಕ ಜಾಲತಾಣ ಸಂಚಾಲಕರಾ ಅಂತ ನನಗೆ ಅನುಮಾನ ಬರತಾ ಇದೆ ಸದ್ಯಕ್ಕೆ ಯಾವುದೆ ನಾಮಕರಣಗಳು ಇಲ್ಲ ಸ್ವಲ್ಪ ತಡೆಯಿರಿ ಎಂದು ಪರಮ ಆತ್ಮ ಎಂಬುವವರು ಟೀಕಿಸಿದ್ದಾರೆ.

ಆ ಫೋಟೊದಲ್ಲಿ ತಪ್ಪೇನಿದೆ. ರಾಮದಾಸ್ ನ ಮೂರ್ಖ ಹೇಳಿಕೆನಾ ಖಂಡಿಸದ ನೀನು, ರೇವಣ್ಣನನ್ನು ಕಂಡರೆ ಯಾಕೆ ಉರಿ? ಥೂ ನೀನು ಒಬ್ಬ ಮನುಷ್ಯನಾ? ನಿನ್ನಂಥ ಜಾತಿವ್ಯಾದಿ ಕ್ರಿಮಿನಾ ನೋಡಿರಲಿಲ್ಲ.. ಥೂ ಅಯೋಗ್ಯ ಎಂದು ಮತ್ತೊಬ್ಬರು ಕಿಡಿಕಾರಿದ್ದಾರೆ.

ಈ ಟ್ವೀಟ್‌ ಮೂಲಕ ವಿಶ್ವೇಶ್ವರ ಭಟ್ಟರು ಮಾಡಿದ್ದು ತಪ್ಪು ಎಂದು ಶೇ. 80ಕ್ಕೂ ಹೆಚ್ಚು ಜನ ಅಭಿಪ್ರಾಯಪಟ್ಟಿದ್ದಾರೆ. ಇದೇ ಭಟ್ಟರು ಸಹ ಅದೇ ರೀತಿಯಲ್ಲಿ ತಾವು ಕೂಡ ದೀಪ ಹಚ್ಚಿಕೊಂಡು ತಮ್ಮ ಮಗಳ ಜೊತೆ ನಿಂತಿರುವ ವಿಡಿಯೋವನ್ನು ಕೆಲವೇ ನಿಮಿಷಗಳ ಮುಂಚೆ ಷೇರ್ ಮಾಡಿದ್ದಾರೆ. ಅಲ್ಲದೇ ಅತ್ಯಾಚಾರದ ಆರೋಪ ಹೊತ್ತಿರುವ ರಾಘವೇಶ್ವರ ಭಾರತಿ ಸ್ವಾಮಿಯವರು ದೀಪಹಿಡಿದಿರುವ ಫೋಟೊವನ್ನು ಸಹ ಅವರೇ ಷೇರ್‌ ಮಾಡಿದ್ದಾರೆ. ಆದರೆ ರೇವಣ್ಣನವರ ಮೇಲೆ ಮಾತ್ರ ಅಸೂಯೆ ವ್ಯಕ್ತಪಡಿಸಲು ಹೋಗಿ ಸಿಕ್ಕಿಬಿದ್ದಿದ್ದಾರೆ.

ವಿಶ್ವೇಶ್ವರ ಭಟ್ಟರು ಈ ರೀತಿ ವಯಕ್ತಿಕ ತೇಜೋವಧೇ ಮಾಡಲು ಹೋಗಿ ತಾವೇ ಮುಜುಗರಕ್ಕೊಳಗಾಗಿರುವುದು ಇದೇ ಮೊದಲನೇನಲ್ಲ. ಗೌರಿ ಲಂಕೇಶ್‌ ಹತ್ಯಾ ವಿರೋಧಿ ಕಾರ್ಯಕ್ರಮದಲ್ಲಿ ಜನರಿಲ್ಲ ಎಂದು ತೋರಿಸಲು ಹೋಗಿ ಟೀಕೆಗೆ ಒಳಗಾಗಿದ್ದರು. ಮಹಿಳೆಯರ ಒಳವಸ್ತ್ರಗಳ ಕುರಿತೆಲ್ಲಾ ತಮಾಷೆ ಮಾಡಲು ಹೋಗಿ ವ್ಯಾಪಕ ಟ್ರೋಲ್‌ಗೆ ಒಳಗಾಗಿದ್ದರು.


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. Vishwanath bhatre, you showed your true colour. People like you are disgrace to the community. Instead of commenting on Revanna’s dress like an idiot, appreciate his concern about the society at this crucial stage. We need to be united at this stage. Shame on you.

  2. Ivnu obba ganji kendrada giraki.. eno sarkarda mattinalli kelsa irbeku.. 90 % mediagalu, rajakaranigalu patrakartaru ovatu enadaru success agidare, adu e gowdara kutumba dinda, avra bhage olledo, kettado mstadidre success agtini anta e papi nu hage madidane..

  3. What Mr. Revanna has done, it is what PM Mr. Modi ji wanted from him as a citizen, of India and what Mr. BHATT has done is wrong and should apologize for his misdeed.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...