HomeUncategorizedಚಪ್ಪಾಳೆ ಬದಲು ಜಾಗಟೆ, ದೀಪದ ಬದಲು ದೊಂದಿಗಳು : ಇದು ಯಾರ ಮುರ್ಖತನ?

ಚಪ್ಪಾಳೆ ಬದಲು ಜಾಗಟೆ, ದೀಪದ ಬದಲು ದೊಂದಿಗಳು : ಇದು ಯಾರ ಮುರ್ಖತನ?

ಕೆಲವು ಜನ ದೀಪ ಹಚ್ಚುವುದರ ಬದಲು ದೊಂದಿ ಹಿಡಿದು ಬೀದಿಗಿಳಿದರು. ಮನಸೋ ಇಚ್ಛೆ ಪಟಾಕಿ ಸಿಡಿಸಿದರು. ಗುಂಪು ಗುಂಪಾಗಿ ಸೇರಿ ಬೆಂಕಿ ಹಾಕಿ ಕೂಗಾಡಿದರು. ಒಟ್ಟಿನಲ್ಲಿ ಲಾಕ್‌ಡೌನ್‌ನ ಮುಖ್ಯ ಉದ್ದೇಶ ಸಾಮಾಜಿಕ ಅಂತರದಲ್ಲಿರಬೇಕಾದುದ್ದನ್ನು ಮಣ್ಣು ಪಾಲು ಮಾಡಿದರು.

- Advertisement -
- Advertisement -

ಒಂದೆಡೆ ದೇಶದಲ್ಲಿ ವೈದ್ಯಕೀಯ ಸಿಬ್ಬಂದಿಗಳ ಕೊರತೆಯಿದೆ. ದೇಶ ವೈದ್ಯಕೀಯ ಸಲಕರಣೆ ಮತ್ತು ಜೀವ ರಕ್ಷಕಗಳ ಕೊರತೆ ಎದುರಿಸುತ್ತಿದೆ. ಉಚಿತ ವೈದ್ಯಕೀಯ ಸೌಲಭ್ಯ ನೀಡುವಂತೆ ಜನ ಆಗ್ರಹಿಸುತ್ತಿದ್ದಾರೆ. ಕೊರೋನಾ ಮಹಾಮಾರಿ ವೈದ್ಯಕೀಯ ಸಿಬ್ಬಂದಿಗಳನ್ನು, ಐಎಎಸ್ ಅಧಿಕಾರಿಗಳನ್ನು ಕೂಡ ಬಿಡದೇ ವ್ಯಾಪಿಸುತ್ತಿದೆ. ಇಂತಹ ಸಂದರ್ಭದಲ್ಲಿ ಕೂಡಲೇ ಸಾಕಷ್ಟು ವೈದ್ಯಕೀಯ ಸಲಕರಣೆಗಳ ಒದಗಿಸಲು ಮುಂದಾಗಬೇಕಿದ್ದ ಪ್ರಧಾನಿಗಳು ಒಗ್ಗಟ್ಟಿನ ಮಂತ್ರದ ಹೆಸರಲ್ಲಿ ಜನರ ಜೀವವನ್ನು ಸಾವಿನೆಡೆಗೆ ತಳ್ಳುತ್ತಿದ್ದಾರೆ.

ಕೋವಿಡ್ -19 ಹಿನ್ನೆಲೆಯಲ್ಲಿ ಜನತಾ ಕರ್ಫ್ಯೂ ದಿನ ಚಪ್ಪಾಳೆ ತಟ್ಟಲು ಮೋದಿ ಕೋರಿದ್ದರು. ನಮ್ಮ ರಾಜ್ಯದ ರಾಜ್ಯಪಾಲರಾದ ವಜುಭಾಯಿ ವಾಲಾ ಸೇರಿದಂತೆ ಅನೇಕ ಶಾಸಕರು, ಸಚಿವರು, ಸಂಸದರು ಸಾಮಾಜಿಕ ಅಂತರವನ್ನು ಉಲ್ಲಂಘಿಸಿ ಮೋದಿಯ ಚಪ್ಪಾಳೆಯ ಕರೆಯಿಂದಾಗಿ ಬೀದಿಗಿಳಿದಿದ್ದರು. ಮನೆಯ ಬಾಲ್ಕನಿಯ ಮುಂದೆ ನಿಂತು ಚಪ್ಪಾಳೆ ತಟ್ಟಿ ಎಂದಿದ್ದಕ್ಕೆ ಈ ರೀತಿಯ ಮೂರ್ಖತನವನ್ನು ಜನ ಪ್ರದರ್ಶಿಸಿದ್ದರು.

ಸಾಮಾಜಿಕ ಅಂತರವನ್ನು ದೇಶದಾದ್ಯಂತ ಉಲ್ಲಂಘಿಸಿ. ಬೀದಿಯಲ್ಲಿ ಜಾಥಾ ಮಾಡಿ ತಟ್ಟೆ ಜಾಗಟೆಗಳನ್ನು ಬಡಿದಾಗಲಾದರೂ ದೇಶದ ಪ್ರಧಾನಿ ಮೋದಿಯವರು ಇದೆ ರೀತಿಯ ಇನ್ನೊಂದು ಕರೆ ಕೊಡುವ ಮುನ್ನ ಯೋಚಿಸಬೇಕಿತ್ತು. ಆದರೆ ಹಾಗಾಗಲಿಲ್ಲ. ಭಾರತದಲ್ಲಿ 4067 ಪ್ರಕರಣಗಳು ಬೆಳಕಿಗೆ ಬಂದಿವೆ. 109 ಮಂದಿ ಮೃತಪಟ್ಟಿದ್ದಾರೆ. ದಿನದಿಂದ ದಿನಕ್ಕೆ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಹೀಗಿದ್ದ ಪರಿಸ್ಥಿಯಲ್ಲಿ ಮತ್ತೆ ಮನೆ ಮುಂದೆ ದೀಪಗಳನ್ನು ಬೆಳಗಲು ಹೇಳಿದರೆ ಜನರು ಏನು ಮಾಡಬಹುದು ಎಂಬ ಊಹೆ ಪ್ರಧಾನಿ ಮೋದಿಯವರಿಗೆ ಇರಬೇಕಿತ್ತು. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಅವಶ್ಯಕತೆ ಮತ್ತು ಅನಿವಾರ್ಯತೆ ಇರುವ ಸಂದರ್ಭದಲ್ಲಿ ಈ ರೀತಿಯ ಕರೆ ಕೊಡುವುದು ಎಷ್ಟು ಸರಿ?

ಕೊನೆಗೂ ಪರಿಸ್ಥಿತಿ ಕೈಮೀರಿತು. ಕೆಲವು ಜನ ದೀಪ ಹಚ್ಚುವುದರ ಬದಲು ದೊಂದಿ ಹಿಡಿದು ಬೀದಿಗಿಳಿದರು. ಮನಸೋ ಇಚ್ಛೆ ಪಟಾಕಿ ಸಿಡಿಸಿದರು. ಗುಂಪು ಗುಂಪಾಗಿ ಸೇರಿ ಬೆಂಕಿ ಹಾಕಿ ಕೂಗಾಡಿದರು. ಒಟ್ಟಿನಲ್ಲಿ ಲಾಕ್‌ಡೌನ್‌ನ ಮುಖ್ಯ ಉದ್ದೇಶ ಸಾಮಾಜಿಕ ಅಂತರದಲ್ಲಿರಬೇಕಾದುದ್ದನ್ನು ಮಣ್ಣು ಪಾಲು ಮಾಡಿದರು. ಇದಕ್ಕೆ ನಾವು ಯಾರನ್ನು ದೂರೋಣ?

ಪ್ರಧಾನಿಗಳು ವೈದ್ಯಕೀಯ ಅಗತ್ಯಗಳೆಡೆ ಗಮನ ನೀಡಬೇಕು. ಜನರನ್ನು ರಕ್ಷಣೆ ಮಾಡಬೇಕು. ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿ ಹೇಳಬೇಕು. ಜಾಗೃತಿ ಮೂಡಿಸುವ ಬದಲಾಗಿ ಒಂದರ ಮೇಲೊಂದು ಕರೆ ಕೊಡುವುದು ಎಷ್ಟು ಸರಿ ? ದೇಶದ ಜನರನ್ನು ನಿಯಂತ್ರಿಸುವುದು ಎಷ್ಟು ಕಷ್ಟ ಎಂದು ಅರಿತ ಮೇಲು ದೇಶದ ಪ್ರಧಾನಿಯವರು ಹೀಗೆ ಮಾಡುತ್ತಾರೆ ಎಂದರೆ ಏನನ್ನುವುದು? ಇದು ಪ್ರಧಾನಿಯವರ ಮೂರ್ಖತನವೋ ಅಥವಾ ಜನರ ಮೂರ್ಖತನವೋ?

(ಲೇಖಕರು ಸಾಮಾಜಿಕ ಕಾರ್ಯಕರ್ತರು. ಅಭಿಪ್ರಾಯಗಳು ವಯಕ್ತಿಕವಾದವುಗಳು)


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...