Homeಅಂತರಾಷ್ಟ್ರೀಯಅಮೆರಿಕಾಕ್ಕೆ ಮಲೇರಿಯಾ ಔಷಧಿ ಪೂರೈಸದಿದ್ದರೆ ಪ್ರತಿಕಾರ: ಭಾರತದ ಉತ್ತರ?

ಅಮೆರಿಕಾಕ್ಕೆ ಮಲೇರಿಯಾ ಔಷಧಿ ಪೂರೈಸದಿದ್ದರೆ ಪ್ರತಿಕಾರ: ಭಾರತದ ಉತ್ತರ?

- Advertisement -
- Advertisement -

ಪ್ರಪಂಚದೆಲ್ಲೆಡೆ ಕೊರೊನಾ ಸೋಂಕು ವೇಗವಾಗಿ ಹರಡುತ್ತಿದೆ. ಇಂತಹ ಸಂದರ್ಭದಲ್ಲಿ ಸದ್ಯಕ್ಕೆ ಮಲೇರಿಯಾ ನಿರೋಧಕ ಔಷಧಿ ಹೈಡ್ರಾಕ್ಸಿಕ್ಲೋರೋಕ್ವಿನ್ ಅನ್ನು ಕೊರೊನಾ ಸೋಂಕಿತರಿಗೂ ನೀಡಲಾಗುತ್ತದೆ. ಹಾಗಾಗಿ ಭಾರತ ಮಲೇರಿಯಾ ನಿರೋಧಕ ಹೈಡ್ರಾಕ್ಸಿಕ್ಲೋರೋಕ್ವಿನ್ ಮೇಲಿನ ರಫ್ತು ನಿರ್ಬಂಧವನ್ನು ತೆರವುಗೊಳಿಸದಿದ್ದರೆ ಪ್ರತಿಕಾರ ಅನಿವಾರ್ಯ ಎಂದು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಧಮಕಿ ಹಾಕಿದ್ದಾರೆ.

ವೈಟ್‌ಹೌಸ್‌ನಲ್ಲಿ ಮಾತನಾಡಿದ ಅವರು “ಕೊರೊನಾ ಹಿನ್ನೆಲೆಯಲ್ಲಿ ಮಲೇರಿಯಾ ನಿರೋಧಕವನ್ನು ಕಳಿಸಿಕೊಡುವಂತೆ ಭಾರತರವನ್ನು ಕೋರಲಾಗಿದೆ. ಆದರೂ ಅವರು ಅದರ ಮೇಲಿನ ರಫ್ತುನಿರ್ಬಂದವನ್ನು ತೆರವುಗೊಳಿಸದಿರುವುದು ಏಕೆಂದು ತಿಳಿಯುತ್ತಿಲ್ಲ. ಹಾಗೇನಾದರೂ ಅವರು ನಮ್ಮ ಮನವಿಯನ್ನು ತಿರಸ್ಕರಿಸಿ ಔಷಧಿ ಪೂರೈಸದಿದ್ದರೆ ಪ್ರತಿಕಾರವಂತೂ ಇದ್ದೇ ಇರುತ್ತದೆ ಎಂದು ಟ್ರಂಪ್‌ ತಿಳಿಸಿದ್ದಾರೆ.

ಭಾರತದಲ್ಲಿಯೂ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಕಾರಣದಿಂದ ಮಾರ್ಚ್‌ 25ರಂದು ಭಾರತವು ಹೈಡ್ರಾಕ್ಸಿಕ್ಲೋರೋಕ್ವಿನ್ ಮೇಲೆ ರಫ್ತು ನಿರ್ಬಂಧವನ್ನು ಹೇರಿತ್ತು. ಆದರೆ ಟ್ರಂಪ್‌ ಮೋದಿಯವರಿಗೆ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳನ್ನು ಕಳಿಸುವಂತೆ ಇತ್ತೀಚೆಗೆ ಮನವಿ ಮಾಡಿದ್ದರು. ಆದರೆ ಭಾರತದಲ್ಲಿಯೂ ಕೊರೊನಾ ಉಲ್ಬಣಗೊಳ್ಳುತ್ತಿರುವ ಕಾರಣದಿಂದ ಭಾರತ ಸರ್ಕಾರ ಇದುವರೆಗೂ ಯಾವುದೇ ತೀರ್ಮಾನವನ್ನು ತೆಗೆದುಕೊಂಡಿರಲಿಲ್ಲ.

ಈ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ “ಪ್ರತೀಕಾರದ” ಬೆದರಿಕೆಗೆ ಗುರಿಯಾಗಲು ಭಾರತವು ನಿರಾಕರಿಸಿದ್ದು, ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ಮೇಲಿನ ನಿರ್ಬಂಧವನ್ನು ಭಾರತ ಭಾಗಶಃ ಸಡಿಲಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಸಾಂಕ್ರಾಮಿಕ ರೋಗದ ಮಾನವೀಯ ಅಂಶಗಳನ್ನು ಗಮನದಲ್ಲಿಟ್ಟುಕೊಂಡು, ನಮ್ಮ ಸಾಮರ್ಥ್ಯಗಳ ಮೇಲೆ ಅವಲಂಬಿತವಾಗಿರುವ ನಮ್ಮ ಎಲ್ಲಾ ನೆರೆಯ ರಾಷ್ಟ್ರಗಳಿಗೆ ಭಾರತವು ಪ್ಯಾರಸಿಟಮಾಲ್ ಮತ್ತು ಹೈಡ್ರಾಕ್ಸಿಕ್ಲೋರೊಕ್ವಿನ್‌ ರಫ್ತಿಗೆ ಸೂಕ್ತ ಪ್ರಮಾಣದಲ್ಲಿ ಪರವಾನಗಿ ನೀಡಲಿದೆ ಎಂದು ನಿರ್ಧರಿಸಲಾಗಿದೆ. ನಾವು ಈ ಅಗತ್ಯ ಔಷಧಿಗಳನ್ನು ಸಾಂಕ್ರಾಮಿಕ ರೋಗದಿಂದ ವಿಶೇಷವಾಗಿ ಕೆಟ್ಟ ಪರಿಣಾಮ ಬೀರಿದ ಕೆಲವು ರಾಷ್ಟ್ರಗಳಿಗೆ ಪೂರೈಸುತ್ತೇವೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ.

ಎಲ್ಲಾ ದೇಶೀಯ ಅವಶ್ಯಕತೆಗಳನ್ನು ಪೂರೈಸಿದ ನಂತರವೇ ಹೈಡ್ರಾಕ್ಸಿಕ್ಲೋರೋಕ್ವಿನ್ ಮತ್ತು ಪ್ಯಾರೆಸಿಟಮಾಲ್‌ ಮಾತ್ರೆಗಳನ್ನು ಇತರ ದೇಶಗಳಿಗೆ ರಫ್ತು ಮಾಡಲಾಗುವುದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ಪ್ರಪಂಚದೆಲ್ಲಿಯೇ ಹೈಡ್ರಾಕ್ಸಿಕ್ಲೋರೊಕ್ವಿನ್ ಉತ್ಪಾದಿಸುವಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಆರಂಭದಲ್ಲಿ ದೇಶೀಯ ಸರಬರಾಜನ್ನು ಖಚಿತಪಡಿಸಿಕೊಳ್ಳಲು ಮಾರ್ಚ್ 25 ರಂದು ಭಾರತವು ರಫ್ತು ಮಾಡುವುದನ್ನು ನಿಷೇಧಿಸಿತು. ನಂತರ ಏಪ್ರಿಲ್ 4 ರಂದು ನಿಯಮಗಳನ್ನು ಬಿಗಿಗೊಳಿಸಲಾಯಿತು.

ಈ ಕುರಿತು ಶಶಿ ತರೂರ್‌ ಟ್ವೀಟ್‌ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ವಿಶ್ವ ವ್ಯವಹಾರಗಳ ನನ್ನ ದಶಕಗಳ ಅನುಭವದಲ್ಲಿ ಎಂದಿಗೂ ಯಾವುದೇ ರಾಷ್ಟ್ರದ ಮುಖ್ಯಸ್ಥರು ಅಥವಾ ಸರ್ಕಾರ ಈ ರೀತಿಯ ಇನ್ನೊಬ್ಬರಿಗೆ ಬಹಿರಂಗವಾಗಿ ಬೆದರಿಕೆ ಹಾಕುವುದನ್ನು ನಾನು ಕೇಳಿಲ್ಲ. ಮಿಸ್ಟರ್ ಪ್ರೆಸಿಡೆಂಟ್, ಭಾರತೀಯ ಹೈಡ್ರಾಕ್ಸಿಕ್ಲೋರೋಕ್ವಿನ್ ಅದು “ನಮ್ಮ ಪೂರೈಕೆ”ಯಾಗಿರುತ್ತದೆ. ಭಾರತವು ಅದನ್ನು ನಿಮಗೆ ಮಾರಾಟ ಮಾಡಲು ನಿರ್ಧರಿಸಿದಾಗ ಮಾತ್ರ ಅದು ನಿಮ್ಮ ಪೂರೈಕೆಯಾಗುತ್ತದೆ ತಿಳಿಯಿರಿ” ಎಂದು ಕಿಡಿಕಾರಿದ್ದಾರೆ.

ನರೇಂದ್ರ ಮೋದಿಯವರು ತೆರಿಗೆ ಪಾವತಿದಾರರ ಹಣವನ್ನು ಕೋಟಿಗಟ್ಟಲೆ ಖರ್ಚು ಮಾಡಿ ಡೊನಾಲ್ಡ್‌ ಟ್ರಂಪ್‌ಗೆ ಭರ್ಜರಿ ಸ್ವಾಗತ ನೀಡಿದ್ದರು. ಇಂದು ಅದೇ ವ್ಯಕ್ತಿ ಭಾರತದ ವಿರುದ್ಧ ಪ್ರತೀಕಾರದ ಬಗ್ಗೆ ಮಾತನಾಡುತ್ತಾನೆ. ಭಾರತವು ಪ್ರತಿ ದೇಶಕ್ಕೂ ಎಲ್ಲ ರೀತಿಯಿಂದಲೂ ಸಹಾಯ ಮಾಡಬೇಕು ಆದರೆ ಮೊದಲು ಅದು ತನ್ನ ನಾಗರಿಕರ ಅಗತ್ಯಗಳನ್ನು ಪೂರೈಸಿರಬೇಕು ಎಂದು ಆಲ್ಟ್‌ನ್ಯೂಸ್‌ ಸ್ಥಾಪಕ ಪ್ರತೀಕ್‌ ಸಿನ್ಹಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...