Homeಅಂತರಾಷ್ಟ್ರೀಯಅಮೆರಿಕಾಕ್ಕೆ ಮಲೇರಿಯಾ ಔಷಧಿ ಪೂರೈಸದಿದ್ದರೆ ಪ್ರತಿಕಾರ: ಭಾರತದ ಉತ್ತರ?

ಅಮೆರಿಕಾಕ್ಕೆ ಮಲೇರಿಯಾ ಔಷಧಿ ಪೂರೈಸದಿದ್ದರೆ ಪ್ರತಿಕಾರ: ಭಾರತದ ಉತ್ತರ?

- Advertisement -
- Advertisement -

ಪ್ರಪಂಚದೆಲ್ಲೆಡೆ ಕೊರೊನಾ ಸೋಂಕು ವೇಗವಾಗಿ ಹರಡುತ್ತಿದೆ. ಇಂತಹ ಸಂದರ್ಭದಲ್ಲಿ ಸದ್ಯಕ್ಕೆ ಮಲೇರಿಯಾ ನಿರೋಧಕ ಔಷಧಿ ಹೈಡ್ರಾಕ್ಸಿಕ್ಲೋರೋಕ್ವಿನ್ ಅನ್ನು ಕೊರೊನಾ ಸೋಂಕಿತರಿಗೂ ನೀಡಲಾಗುತ್ತದೆ. ಹಾಗಾಗಿ ಭಾರತ ಮಲೇರಿಯಾ ನಿರೋಧಕ ಹೈಡ್ರಾಕ್ಸಿಕ್ಲೋರೋಕ್ವಿನ್ ಮೇಲಿನ ರಫ್ತು ನಿರ್ಬಂಧವನ್ನು ತೆರವುಗೊಳಿಸದಿದ್ದರೆ ಪ್ರತಿಕಾರ ಅನಿವಾರ್ಯ ಎಂದು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಧಮಕಿ ಹಾಕಿದ್ದಾರೆ.

ವೈಟ್‌ಹೌಸ್‌ನಲ್ಲಿ ಮಾತನಾಡಿದ ಅವರು “ಕೊರೊನಾ ಹಿನ್ನೆಲೆಯಲ್ಲಿ ಮಲೇರಿಯಾ ನಿರೋಧಕವನ್ನು ಕಳಿಸಿಕೊಡುವಂತೆ ಭಾರತರವನ್ನು ಕೋರಲಾಗಿದೆ. ಆದರೂ ಅವರು ಅದರ ಮೇಲಿನ ರಫ್ತುನಿರ್ಬಂದವನ್ನು ತೆರವುಗೊಳಿಸದಿರುವುದು ಏಕೆಂದು ತಿಳಿಯುತ್ತಿಲ್ಲ. ಹಾಗೇನಾದರೂ ಅವರು ನಮ್ಮ ಮನವಿಯನ್ನು ತಿರಸ್ಕರಿಸಿ ಔಷಧಿ ಪೂರೈಸದಿದ್ದರೆ ಪ್ರತಿಕಾರವಂತೂ ಇದ್ದೇ ಇರುತ್ತದೆ ಎಂದು ಟ್ರಂಪ್‌ ತಿಳಿಸಿದ್ದಾರೆ.

ಭಾರತದಲ್ಲಿಯೂ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಕಾರಣದಿಂದ ಮಾರ್ಚ್‌ 25ರಂದು ಭಾರತವು ಹೈಡ್ರಾಕ್ಸಿಕ್ಲೋರೋಕ್ವಿನ್ ಮೇಲೆ ರಫ್ತು ನಿರ್ಬಂಧವನ್ನು ಹೇರಿತ್ತು. ಆದರೆ ಟ್ರಂಪ್‌ ಮೋದಿಯವರಿಗೆ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳನ್ನು ಕಳಿಸುವಂತೆ ಇತ್ತೀಚೆಗೆ ಮನವಿ ಮಾಡಿದ್ದರು. ಆದರೆ ಭಾರತದಲ್ಲಿಯೂ ಕೊರೊನಾ ಉಲ್ಬಣಗೊಳ್ಳುತ್ತಿರುವ ಕಾರಣದಿಂದ ಭಾರತ ಸರ್ಕಾರ ಇದುವರೆಗೂ ಯಾವುದೇ ತೀರ್ಮಾನವನ್ನು ತೆಗೆದುಕೊಂಡಿರಲಿಲ್ಲ.

ಈ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ “ಪ್ರತೀಕಾರದ” ಬೆದರಿಕೆಗೆ ಗುರಿಯಾಗಲು ಭಾರತವು ನಿರಾಕರಿಸಿದ್ದು, ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ಮೇಲಿನ ನಿರ್ಬಂಧವನ್ನು ಭಾರತ ಭಾಗಶಃ ಸಡಿಲಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಸಾಂಕ್ರಾಮಿಕ ರೋಗದ ಮಾನವೀಯ ಅಂಶಗಳನ್ನು ಗಮನದಲ್ಲಿಟ್ಟುಕೊಂಡು, ನಮ್ಮ ಸಾಮರ್ಥ್ಯಗಳ ಮೇಲೆ ಅವಲಂಬಿತವಾಗಿರುವ ನಮ್ಮ ಎಲ್ಲಾ ನೆರೆಯ ರಾಷ್ಟ್ರಗಳಿಗೆ ಭಾರತವು ಪ್ಯಾರಸಿಟಮಾಲ್ ಮತ್ತು ಹೈಡ್ರಾಕ್ಸಿಕ್ಲೋರೊಕ್ವಿನ್‌ ರಫ್ತಿಗೆ ಸೂಕ್ತ ಪ್ರಮಾಣದಲ್ಲಿ ಪರವಾನಗಿ ನೀಡಲಿದೆ ಎಂದು ನಿರ್ಧರಿಸಲಾಗಿದೆ. ನಾವು ಈ ಅಗತ್ಯ ಔಷಧಿಗಳನ್ನು ಸಾಂಕ್ರಾಮಿಕ ರೋಗದಿಂದ ವಿಶೇಷವಾಗಿ ಕೆಟ್ಟ ಪರಿಣಾಮ ಬೀರಿದ ಕೆಲವು ರಾಷ್ಟ್ರಗಳಿಗೆ ಪೂರೈಸುತ್ತೇವೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ.

ಎಲ್ಲಾ ದೇಶೀಯ ಅವಶ್ಯಕತೆಗಳನ್ನು ಪೂರೈಸಿದ ನಂತರವೇ ಹೈಡ್ರಾಕ್ಸಿಕ್ಲೋರೋಕ್ವಿನ್ ಮತ್ತು ಪ್ಯಾರೆಸಿಟಮಾಲ್‌ ಮಾತ್ರೆಗಳನ್ನು ಇತರ ದೇಶಗಳಿಗೆ ರಫ್ತು ಮಾಡಲಾಗುವುದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ಪ್ರಪಂಚದೆಲ್ಲಿಯೇ ಹೈಡ್ರಾಕ್ಸಿಕ್ಲೋರೊಕ್ವಿನ್ ಉತ್ಪಾದಿಸುವಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಆರಂಭದಲ್ಲಿ ದೇಶೀಯ ಸರಬರಾಜನ್ನು ಖಚಿತಪಡಿಸಿಕೊಳ್ಳಲು ಮಾರ್ಚ್ 25 ರಂದು ಭಾರತವು ರಫ್ತು ಮಾಡುವುದನ್ನು ನಿಷೇಧಿಸಿತು. ನಂತರ ಏಪ್ರಿಲ್ 4 ರಂದು ನಿಯಮಗಳನ್ನು ಬಿಗಿಗೊಳಿಸಲಾಯಿತು.

ಈ ಕುರಿತು ಶಶಿ ತರೂರ್‌ ಟ್ವೀಟ್‌ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ವಿಶ್ವ ವ್ಯವಹಾರಗಳ ನನ್ನ ದಶಕಗಳ ಅನುಭವದಲ್ಲಿ ಎಂದಿಗೂ ಯಾವುದೇ ರಾಷ್ಟ್ರದ ಮುಖ್ಯಸ್ಥರು ಅಥವಾ ಸರ್ಕಾರ ಈ ರೀತಿಯ ಇನ್ನೊಬ್ಬರಿಗೆ ಬಹಿರಂಗವಾಗಿ ಬೆದರಿಕೆ ಹಾಕುವುದನ್ನು ನಾನು ಕೇಳಿಲ್ಲ. ಮಿಸ್ಟರ್ ಪ್ರೆಸಿಡೆಂಟ್, ಭಾರತೀಯ ಹೈಡ್ರಾಕ್ಸಿಕ್ಲೋರೋಕ್ವಿನ್ ಅದು “ನಮ್ಮ ಪೂರೈಕೆ”ಯಾಗಿರುತ್ತದೆ. ಭಾರತವು ಅದನ್ನು ನಿಮಗೆ ಮಾರಾಟ ಮಾಡಲು ನಿರ್ಧರಿಸಿದಾಗ ಮಾತ್ರ ಅದು ನಿಮ್ಮ ಪೂರೈಕೆಯಾಗುತ್ತದೆ ತಿಳಿಯಿರಿ” ಎಂದು ಕಿಡಿಕಾರಿದ್ದಾರೆ.

ನರೇಂದ್ರ ಮೋದಿಯವರು ತೆರಿಗೆ ಪಾವತಿದಾರರ ಹಣವನ್ನು ಕೋಟಿಗಟ್ಟಲೆ ಖರ್ಚು ಮಾಡಿ ಡೊನಾಲ್ಡ್‌ ಟ್ರಂಪ್‌ಗೆ ಭರ್ಜರಿ ಸ್ವಾಗತ ನೀಡಿದ್ದರು. ಇಂದು ಅದೇ ವ್ಯಕ್ತಿ ಭಾರತದ ವಿರುದ್ಧ ಪ್ರತೀಕಾರದ ಬಗ್ಗೆ ಮಾತನಾಡುತ್ತಾನೆ. ಭಾರತವು ಪ್ರತಿ ದೇಶಕ್ಕೂ ಎಲ್ಲ ರೀತಿಯಿಂದಲೂ ಸಹಾಯ ಮಾಡಬೇಕು ಆದರೆ ಮೊದಲು ಅದು ತನ್ನ ನಾಗರಿಕರ ಅಗತ್ಯಗಳನ್ನು ಪೂರೈಸಿರಬೇಕು ಎಂದು ಆಲ್ಟ್‌ನ್ಯೂಸ್‌ ಸ್ಥಾಪಕ ಪ್ರತೀಕ್‌ ಸಿನ್ಹಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...