Homeಅಂತರಾಷ್ಟ್ರೀಯಅಮೆರಿಕಾಕ್ಕೆ ಮಲೇರಿಯಾ ಔಷಧಿ ಪೂರೈಸದಿದ್ದರೆ ಪ್ರತಿಕಾರ: ಭಾರತದ ಉತ್ತರ?

ಅಮೆರಿಕಾಕ್ಕೆ ಮಲೇರಿಯಾ ಔಷಧಿ ಪೂರೈಸದಿದ್ದರೆ ಪ್ರತಿಕಾರ: ಭಾರತದ ಉತ್ತರ?

- Advertisement -
- Advertisement -

ಪ್ರಪಂಚದೆಲ್ಲೆಡೆ ಕೊರೊನಾ ಸೋಂಕು ವೇಗವಾಗಿ ಹರಡುತ್ತಿದೆ. ಇಂತಹ ಸಂದರ್ಭದಲ್ಲಿ ಸದ್ಯಕ್ಕೆ ಮಲೇರಿಯಾ ನಿರೋಧಕ ಔಷಧಿ ಹೈಡ್ರಾಕ್ಸಿಕ್ಲೋರೋಕ್ವಿನ್ ಅನ್ನು ಕೊರೊನಾ ಸೋಂಕಿತರಿಗೂ ನೀಡಲಾಗುತ್ತದೆ. ಹಾಗಾಗಿ ಭಾರತ ಮಲೇರಿಯಾ ನಿರೋಧಕ ಹೈಡ್ರಾಕ್ಸಿಕ್ಲೋರೋಕ್ವಿನ್ ಮೇಲಿನ ರಫ್ತು ನಿರ್ಬಂಧವನ್ನು ತೆರವುಗೊಳಿಸದಿದ್ದರೆ ಪ್ರತಿಕಾರ ಅನಿವಾರ್ಯ ಎಂದು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಧಮಕಿ ಹಾಕಿದ್ದಾರೆ.

ವೈಟ್‌ಹೌಸ್‌ನಲ್ಲಿ ಮಾತನಾಡಿದ ಅವರು “ಕೊರೊನಾ ಹಿನ್ನೆಲೆಯಲ್ಲಿ ಮಲೇರಿಯಾ ನಿರೋಧಕವನ್ನು ಕಳಿಸಿಕೊಡುವಂತೆ ಭಾರತರವನ್ನು ಕೋರಲಾಗಿದೆ. ಆದರೂ ಅವರು ಅದರ ಮೇಲಿನ ರಫ್ತುನಿರ್ಬಂದವನ್ನು ತೆರವುಗೊಳಿಸದಿರುವುದು ಏಕೆಂದು ತಿಳಿಯುತ್ತಿಲ್ಲ. ಹಾಗೇನಾದರೂ ಅವರು ನಮ್ಮ ಮನವಿಯನ್ನು ತಿರಸ್ಕರಿಸಿ ಔಷಧಿ ಪೂರೈಸದಿದ್ದರೆ ಪ್ರತಿಕಾರವಂತೂ ಇದ್ದೇ ಇರುತ್ತದೆ ಎಂದು ಟ್ರಂಪ್‌ ತಿಳಿಸಿದ್ದಾರೆ.

ಭಾರತದಲ್ಲಿಯೂ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಕಾರಣದಿಂದ ಮಾರ್ಚ್‌ 25ರಂದು ಭಾರತವು ಹೈಡ್ರಾಕ್ಸಿಕ್ಲೋರೋಕ್ವಿನ್ ಮೇಲೆ ರಫ್ತು ನಿರ್ಬಂಧವನ್ನು ಹೇರಿತ್ತು. ಆದರೆ ಟ್ರಂಪ್‌ ಮೋದಿಯವರಿಗೆ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳನ್ನು ಕಳಿಸುವಂತೆ ಇತ್ತೀಚೆಗೆ ಮನವಿ ಮಾಡಿದ್ದರು. ಆದರೆ ಭಾರತದಲ್ಲಿಯೂ ಕೊರೊನಾ ಉಲ್ಬಣಗೊಳ್ಳುತ್ತಿರುವ ಕಾರಣದಿಂದ ಭಾರತ ಸರ್ಕಾರ ಇದುವರೆಗೂ ಯಾವುದೇ ತೀರ್ಮಾನವನ್ನು ತೆಗೆದುಕೊಂಡಿರಲಿಲ್ಲ.

ಈ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ “ಪ್ರತೀಕಾರದ” ಬೆದರಿಕೆಗೆ ಗುರಿಯಾಗಲು ಭಾರತವು ನಿರಾಕರಿಸಿದ್ದು, ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ಮೇಲಿನ ನಿರ್ಬಂಧವನ್ನು ಭಾರತ ಭಾಗಶಃ ಸಡಿಲಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಸಾಂಕ್ರಾಮಿಕ ರೋಗದ ಮಾನವೀಯ ಅಂಶಗಳನ್ನು ಗಮನದಲ್ಲಿಟ್ಟುಕೊಂಡು, ನಮ್ಮ ಸಾಮರ್ಥ್ಯಗಳ ಮೇಲೆ ಅವಲಂಬಿತವಾಗಿರುವ ನಮ್ಮ ಎಲ್ಲಾ ನೆರೆಯ ರಾಷ್ಟ್ರಗಳಿಗೆ ಭಾರತವು ಪ್ಯಾರಸಿಟಮಾಲ್ ಮತ್ತು ಹೈಡ್ರಾಕ್ಸಿಕ್ಲೋರೊಕ್ವಿನ್‌ ರಫ್ತಿಗೆ ಸೂಕ್ತ ಪ್ರಮಾಣದಲ್ಲಿ ಪರವಾನಗಿ ನೀಡಲಿದೆ ಎಂದು ನಿರ್ಧರಿಸಲಾಗಿದೆ. ನಾವು ಈ ಅಗತ್ಯ ಔಷಧಿಗಳನ್ನು ಸಾಂಕ್ರಾಮಿಕ ರೋಗದಿಂದ ವಿಶೇಷವಾಗಿ ಕೆಟ್ಟ ಪರಿಣಾಮ ಬೀರಿದ ಕೆಲವು ರಾಷ್ಟ್ರಗಳಿಗೆ ಪೂರೈಸುತ್ತೇವೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ.

ಎಲ್ಲಾ ದೇಶೀಯ ಅವಶ್ಯಕತೆಗಳನ್ನು ಪೂರೈಸಿದ ನಂತರವೇ ಹೈಡ್ರಾಕ್ಸಿಕ್ಲೋರೋಕ್ವಿನ್ ಮತ್ತು ಪ್ಯಾರೆಸಿಟಮಾಲ್‌ ಮಾತ್ರೆಗಳನ್ನು ಇತರ ದೇಶಗಳಿಗೆ ರಫ್ತು ಮಾಡಲಾಗುವುದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ಪ್ರಪಂಚದೆಲ್ಲಿಯೇ ಹೈಡ್ರಾಕ್ಸಿಕ್ಲೋರೊಕ್ವಿನ್ ಉತ್ಪಾದಿಸುವಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಆರಂಭದಲ್ಲಿ ದೇಶೀಯ ಸರಬರಾಜನ್ನು ಖಚಿತಪಡಿಸಿಕೊಳ್ಳಲು ಮಾರ್ಚ್ 25 ರಂದು ಭಾರತವು ರಫ್ತು ಮಾಡುವುದನ್ನು ನಿಷೇಧಿಸಿತು. ನಂತರ ಏಪ್ರಿಲ್ 4 ರಂದು ನಿಯಮಗಳನ್ನು ಬಿಗಿಗೊಳಿಸಲಾಯಿತು.

ಈ ಕುರಿತು ಶಶಿ ತರೂರ್‌ ಟ್ವೀಟ್‌ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ವಿಶ್ವ ವ್ಯವಹಾರಗಳ ನನ್ನ ದಶಕಗಳ ಅನುಭವದಲ್ಲಿ ಎಂದಿಗೂ ಯಾವುದೇ ರಾಷ್ಟ್ರದ ಮುಖ್ಯಸ್ಥರು ಅಥವಾ ಸರ್ಕಾರ ಈ ರೀತಿಯ ಇನ್ನೊಬ್ಬರಿಗೆ ಬಹಿರಂಗವಾಗಿ ಬೆದರಿಕೆ ಹಾಕುವುದನ್ನು ನಾನು ಕೇಳಿಲ್ಲ. ಮಿಸ್ಟರ್ ಪ್ರೆಸಿಡೆಂಟ್, ಭಾರತೀಯ ಹೈಡ್ರಾಕ್ಸಿಕ್ಲೋರೋಕ್ವಿನ್ ಅದು “ನಮ್ಮ ಪೂರೈಕೆ”ಯಾಗಿರುತ್ತದೆ. ಭಾರತವು ಅದನ್ನು ನಿಮಗೆ ಮಾರಾಟ ಮಾಡಲು ನಿರ್ಧರಿಸಿದಾಗ ಮಾತ್ರ ಅದು ನಿಮ್ಮ ಪೂರೈಕೆಯಾಗುತ್ತದೆ ತಿಳಿಯಿರಿ” ಎಂದು ಕಿಡಿಕಾರಿದ್ದಾರೆ.

ನರೇಂದ್ರ ಮೋದಿಯವರು ತೆರಿಗೆ ಪಾವತಿದಾರರ ಹಣವನ್ನು ಕೋಟಿಗಟ್ಟಲೆ ಖರ್ಚು ಮಾಡಿ ಡೊನಾಲ್ಡ್‌ ಟ್ರಂಪ್‌ಗೆ ಭರ್ಜರಿ ಸ್ವಾಗತ ನೀಡಿದ್ದರು. ಇಂದು ಅದೇ ವ್ಯಕ್ತಿ ಭಾರತದ ವಿರುದ್ಧ ಪ್ರತೀಕಾರದ ಬಗ್ಗೆ ಮಾತನಾಡುತ್ತಾನೆ. ಭಾರತವು ಪ್ರತಿ ದೇಶಕ್ಕೂ ಎಲ್ಲ ರೀತಿಯಿಂದಲೂ ಸಹಾಯ ಮಾಡಬೇಕು ಆದರೆ ಮೊದಲು ಅದು ತನ್ನ ನಾಗರಿಕರ ಅಗತ್ಯಗಳನ್ನು ಪೂರೈಸಿರಬೇಕು ಎಂದು ಆಲ್ಟ್‌ನ್ಯೂಸ್‌ ಸ್ಥಾಪಕ ಪ್ರತೀಕ್‌ ಸಿನ್ಹಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...