Homeಮುಖಪುಟತಬ್ಲಿಘಿಗಳ ಮೇಲೆ ಮತ್ತೊಂದು ಸುಳ್ಳು ಸುದ್ದಿ ಪ್ರಕಟಿಸಿ ಸಿಕ್ಕಿಬಿದ್ದ ಝೀ ನ್ಯೂಸ್‌!

ತಬ್ಲಿಘಿಗಳ ಮೇಲೆ ಮತ್ತೊಂದು ಸುಳ್ಳು ಸುದ್ದಿ ಪ್ರಕಟಿಸಿ ಸಿಕ್ಕಿಬಿದ್ದ ಝೀ ನ್ಯೂಸ್‌!

- Advertisement -
- Advertisement -

ಝೀ ಮೀಡಿಯಾವು “ತಬ್ಲಿಘಿ ಜಮಾಅತ್ ಸದಸ್ಯರು ವೈದ್ಯರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಟ್ವೀಟ್‌ ಮಾಡಿ ಸುಳ್ಳು ಸುದ್ದಿ” ಹರಡಿದೆ. ಆದರೆ ಕೆಲವೇ ಕ್ಷಣಗಳಲ್ಲಿ ಬಿಜೆಪಿ ಪರವಿರುವ ಝಿ ನ್ಯೂಸ್‌ ಹರಡಿರುವುದು ಸುಳ್ಳು ಸುದ್ದಿ ಎಂದು ಗೊತ್ತಾಗಿ ಅದು ಸಿಕ್ಕಿಬಿದ್ದಿದೆ. ನಂತರ ಉತ್ತರ ಪ್ರದೇಶದ ಫಿರೋಜಾಬಾದ್ ಪೊಲೀಸರು ಎಚ್ಚರಿಕೆ ನೀಡಿದ ನಂತರ ಟ್ವೀಟ್ ಅನ್ನು ಅಳಿಸಲಾಗಿದೆ.

ಈಗ ಅಳಿಸಲಾಗಿರುವ ತನ್ನ ಟ್ವೀಟ್‌ನಲ್ಲಿ, ಉತ್ತರ ಪ್ರದೇಶ ಉತ್ತರಾಖಂಡ್ ಝೀ ನ್ಯೂಸ್‌ ಟ್ವಿಟ್ಟರ್‌ ಅಕೌಂಟ್‌ನಿಂದ “ಫಿರೋಜಾಬಾದ್‌ನಲ್ಲಿ ನಾಲ್ಕು ತಬ್ಲೀಘಿ ಜಮಾತ್‌ ಸದಸ್ಯರ ಕೊರನಾ ಪರೀಕ್ಷೆಯಲ್ಲಿ ಧನಾತ್ಮಕ ಬಂದಿದೆ. ಅದರ ವರದಿ ತೆಗೆದುಕೊಳ್ಳಲು ಬಂದಾಗ ಅವರು ಅಲ್ಲಿರುವ ವೈದ್ಯಕೀಯ ತಂಡದ ಮೇಲೆ ಕಲ್ಲು ತೂರಿದ್ದಾರೆ” ಎಂದು ಟ್ವೀಟ್‌ ಮಾಡಿದೆ.

ಝೀ ನ್ಯೂಸ್‌ನ ನಕಲಿ ಸುದ್ದಿಗೆ ಕೂಡಲೇ ಪ್ರತಿಕ್ರಿಯಿಸಿದ ಫಿರೋಜಾಬಾದ್ ಪೊಲೀಸರು, “ನೀವು ನಕಲಿ ಮತ್ತು ದಾರಿತಪ್ಪಿಸುವ ಸುದ್ದಿಗಳನ್ನು ಹರಡುತ್ತಿದ್ದೀರಿ. ಫಿರೋಜಾಬಾದ್‌ನಲ್ಲಿ ವೈದ್ಯಕೀಯ ತಂಡ ಅಥವಾ ಆಂಬುಲೆನ್ಸ್‌ ಮೇಲೆ ಯಾವುದೇ ಕಲ್ಲು ತೂರಾಟದ ಘಟನೆಗಳು ನಡೆದಿಲ್ಲ. ನೀವು ಪೋಸ್ಟ್ ಮಾಡಿದ ಈ ಟ್ವೀಟ್ ಅನ್ನು ನೀವು ತಕ್ಷಣ ಅಳಿಸಬೇಕು” ಎಂದು ತಾಕೀತು ಮಾಡಿದ್ದಾರೆ.

ಝೀ ನ್ಯೂಸ್ ನಿಜಕ್ಕೂ ಮುಸ್ಲಿಂ ಸಮುದಾಯವನ್ನು ಅವಮಾನಿಸಲು ಈ ನಕಲಿ ಸುದ್ದಿಗಳನ್ನು ಪೋಸ್ಟ್ ಮಾಡಿದೆ. ಕೆಲವು ಟ್ವಿಟ್ಟರ್‌ ಬಳಕೆದಾರರು ಫಿರೋಜಾಬಾದ್ ಪೊಲೀಸರಿಂದ ಈ ದೃಢೀಕರಣವನ್ನು ಕೋರಿದಾಗ, ಆ ಟ್ವೀಟ್ ಅನ್ನು ಈಗ ಅಳಿಸಲಾಗಿದೆ ಎಂದು ಅವರು ದೃಢಪಡಿಸಿದ್ದಾರೆ.

ಝೀ ನ್ಯೂಸ್ ಅಂದಿನಿಂದ ತಬ್ಲೀಘಿ ಜಮಾಅತ್ ಬಗ್ಗೆ ನಕಲಿ ಸುದ್ದಿಗಳನ್ನು ಒಳಗೊಂಡಿರುವ ಟ್ವೀಟ್ ಅನ್ನು ಅಳಿಸಿದೆ. ಅದರ ಶೀರ್ಷಿಕೆಯಿಂದ ಕಲ್ಲು ತೂರಿದ್ದಾರೆ ಎಂಬುದನ್ನು ತೆಗೆದುಹಾಕುವ ಮೂಲಕ ಅದು ತನ್ನ ಸುದ್ದಿಯನ್ನು ಎಡಿಟ್‌ ಮಾಡಿದೆ. ಈಗ “ಫಿರೋಜಾಬಾದ್‌ನ ಫಾರ್ಸಿ ಮಸೀದಿಯಲ್ಲಿದ್ದ ತಬ್ಲಿಘಿ ಜಮಾಅತ್‌ನ ನಾಲ್ಕು ಜನರು ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್‌” ಆಗಿದ್ದಾರೆ. ಎಂದು ಬರೆದಿದೆ.

ಈ ಹಿಂದೆ, ಕೆಲವು ಮಾಧ್ಯಮಗಳು “ಕ್ಯಾರೆಂಟೈನ್ ನಲ್ಲಿರುವ ತಬ್ಲೀಘಿ ಜಮಾಅತ್ ಸದಸ್ಯರು ಮಾಂಸಹಾರಿ ಆಹಾರಕ್ಕಾಗಿ ಬೇಡಿಕೆಯಿಟ್ಟಿದ್ದಾರೆ ಮತ್ತು ಅವರ ಬೇಡಿಕೆಗಳನ್ನು ಈಡೇರಿಸದಿದ್ದಾಗ ಗಲಾಟೆ ಉಂಟುಮಾಡಿದ್ದಾರೆ” ಎಂದು ಆರೋಪಿಸಿದ್ದರು. ಆದರೆ ಈ ಹೇಳಿಕೆಯನ್ನು ಉತ್ತರ ಪ್ರದೇಶದ ಸಹರಾನ್ಪುರ್ ಪೊಲೀಸರು ನಕಲಿ ಸುದ್ದಿ ಎಂದು ಸ್ಪಷ್ಟಪಡಿಸಿ ವಿವರವಾದ ಹೇಳಿಕೆ ನೀಡಿದ್ದರು.

ದೆಹಲಿ ಪೊಲೀಸರು ತಬ್ಲಿಘಿ ಜಮಾಅತ್ ಸದಸ್ಯರನ್ನು ನಿಜಾಮುದ್ದೀನ್ ಮಾರ್ಕಾಜ್‌ನಿಂದ ಸ್ಥಳಾಂತರಿಸಿದಾಗಿನಿಂದಲೂ, ಹಲವಾರು ಮಾಧ್ಯಮಗಳು ಭಾರತದ ಮುಸ್ಲಿಂ ಸಮುದಾಯದ ವಿರುದ್ಧ ನಿರಂತರವಾಗಿ ದುರುದ್ದೇಶಪ್ರೇರಿತ ಅಭಿಯಾನವನ್ನು ನಡೆಸುತ್ತಿದ್ದಾರೆ. ತಬ್ಲಿಘಿ ಜಮಾಅತ್ ಸದಸ್ಯರು ವೈದ್ಯರು ಮತ್ತು ಪೊಲೀಸರ ಮೇಲೆ ಉಗುಳಿದ್ದಾರೆ ಎಂದು ಕೆಲವರು ಸುದ್ದಿ ಮಾಡಿದರೆ ಮತ್ತೆ ಕೆಲವರು ದಾದಿಯರೊಂದಿಗೆ ಕೆಟ್ಟದಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದರು.

ಆದರೆ, ನಿಜಾಮುದ್ದೀನ್ ಮಾರ್ಕಾಜ್ ಅವರನ್ನು ಸ್ಥಳಾಂತರಿಸಿದ ತಂಡದ ಭಾಗವಾಗಿದ್ದ ವೈದ್ಯಕೀಯ ಅಧಿಕಾರಿ ಎಂದು ಹೇಳಿಕೊಂಡ ಮಹಿಳೆಯೊಬ್ಬರು ಅವರು ಯಾರೊಂದಿಗೆ ಕೆಟ್ಟದಾಗಿ ವರ್ತಿಸಿಲ್ಲ ಎಂದು ಬಹಿರಂಗಪಡಿಸಿದ್ದಾರೆ.

ಕೃಪೆ: ಜನತಾ ಕಾ ರಿಪೋರ್ಟರ್‌


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...