HomeಮುಖಪುಟPPE ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು

PPE ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು

- Advertisement -
- Advertisement -

ಏಮ್ಸ್ ನ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ವೈಯಕ್ತಿಕ ರಕ್ಷಣಾ ಸಾಧನಗಳ ಲಭ್ಯತೆ,(ಪಿಪಿಇ) ಕೊವಿಡ್ -19 ಪರೀಕ್ಷಾ ಕಿಟ್‌ಗಳು ಮತ್ತು ಸಂಪರ್ಕತಡೆಯ ಸೌಲಭ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕಾಗಿ ​​ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈದ್ಯಕೀಯ ಕಾರ್ಯಕರ್ತರನ್ನು ಗುರಿಯಾಗಿಸುವುದನ್ನು ಖಂಡಿಸಿದ ಏಮ್ಸ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಆರೋಗ್ಯ ಕಾರ್ಯಕರ್ತರ ಮನವಿಗಳನ್ನು ರಚನಾತ್ಮಕ ನೆಲೆಯಲ್ಲಿ ನೋಡಬೇಕು. ಆರೋಗ್ಯ ಕಾರ್ಯಕರ್ತರೊಂದಿಗೆ ಆರೋಗ್ಯಕರ ಚರ್ಚೆ ಮತ್ತು ಸಂವಾದ ನಡೆಸಬೇಕೆಂದು ಕೋರಿದ್ದಾರೆ.

ಕೊವಿಡ್ -19 ಸಾಂಕ್ರಾಮಿಕವನ್ನು ನಿಭಾಯಿಸುವಲ್ಲಿ ಮೋದಿಯವರ ಪ್ರಬಲ ನಾಯಕತ್ವವನ್ನು ಶ್ಲಾಘಿಸಿದ ಅಸೋಸಿಯೇಷನ್, ಆರೋಗ್ಯ ಸೌಲಭ್ಯಗಳು ಮತ್ತು ಲಾಕ್‌ಡೌನ್ ಘೋಷಣೆ ಸ್ವಾಗತಾರ್ಹ ಹೆಜ್ಜೆಯಾಗಿದೆ ಎಂದು ಹೇಳಿದೆ.

“ಕೊರೊನಾ ವಿರುದ್ಧ ಮೂಂಚೂಣಿಯಲ್ಲಿ ನಿಂತು ಹೋರಾಡುತ್ತಿರುವ ನಮ್ಮ ಆರೋಗ್ಯ ಕಾರ್ಯಕರ್ತರು ವೈಯಕ್ತಿಕ ರಕ್ಷಣಾ ಸಲಕರಣೆಗಳ (ಪಿಪಿಇ) ಕುರಿತು, ಕೊವಿಡ್ ಪರೀಕ್ಷಾ ಕಿಟ್‌ಗಳ ಲಭ್ಯತೆ,  ಸಂಪರ್ಕತಡೆಯ ಸೌಲಭ್ಯಗಳ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಂಡಿದ್ದಾರೆ. ಅಧಿಕಾರಿಗಳು ಈ ವಿಚಾರಗಳನ್ನು ರಚನಾತ್ಮಕವಾಗಿ ನೋಡಬೇಕು” ಎಂದು ಏಮ್ಸ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಅಧ್ಯಕ್ಷ ಆದರ್ಶ್ ಪ್ರತಾಪ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ರಾಜ್‌ಕುಮಾರ್ ಟಿ ಪತ್ರದಲ್ಲಿ ತಿಳಿಸಿದ್ದಾರೆ.

“ರೋಗಿಗಳ ಕಲ್ಯಾಣಕ್ಕಾಗಿ ಅವರು ಮಾಡಿದ ಪ್ರಯತ್ನಗಳಿಗೆ ಶ್ಲಾಘನೆಯ ಬದಲು ಟೀಕೆ ಎದುರಿಸಬೇಕಾಗಿದೆ. ಕೊರೊನ ವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ, ಆರೋಗ್ಯ ಕಾರ್ಯಕರ್ತರನ್ನು ಅವಮಾನಿಸುವ ಬದಲು ಅವರ ಅಭಿಪ್ರಾಯಗಳನ್ನು ಗೌರವಿಸುವುದನ್ನು ಖಚಿತಪಡಿಸಿಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ” ಎಂದು ಅವರು ಹೇಳಿದ್ದಾರೆ.

“ರಚನಾತ್ಮಕ ಉದ್ದೇಶಗಳಿಗಾಗಿ ಸಾಮಾಜಿಕ ಮಾಧ್ಯಮದ ಸಕ್ರಿಯ ಬಳಕೆದಾರರಾಗಿರುವುದರಿಂದ, ಈ ಪರಿಸ್ಥಿತಿಯಲ್ಲಿರುವ ವೈದ್ಯರನ್ನು ನೀವು ಅರ್ಥಮಾಡಿಕೊಳ್ಳಬಹುದು” ಎಂದು ಪತ್ರದಲ್ಲಿ ಬರೆಯಲಾಗಿದೆ.

“ನಾವು ಈ ಘಟನೆಗಳನ್ನು ಬಲವಾಗಿ ಖಂಡಿಸುತ್ತೇವೆ ಮತ್ತು ಆರೋಗ್ಯ ಕಾರ್ಯಕರ್ತರನ್ನು ಅಪಹಾಸ್ಯ ಮಾಡುವ ಬದಲು ಸರ್ಕಾರವು ಅವರೊಂದಿಗೆ ಆರೋಗ್ಯಕರ ಸಂವಾದ ಮತ್ತು ಚರ್ಚೆಗೆ ನಡೆಸಬೇಕು. ಅವರ ಮೇಲಿನ ಎಲ್ಲಾ ಶಿಕ್ಷೆಗಳನ್ನು ಹಿಂಪಡೆಯಬೇಕು ಮತ್ತು ಅವರ ಗೌರವವನ್ನು ಪುನಃಸ್ಥಾಪಿಸಬೇಕು ”ಎಂದು ಅಸೋಸಿಯೇಷನ್ ಹೇಳಿದೆ.

ಸಾಮಾಜಿಕ ಜಾಲತಾಣದಲ್ಲಿ ಸಫ್ದರ್ಜಂಗ್ ಆಸ್ಪತ್ರೆಯ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಹೆಸರಿನಲ್ಲಿ ಹರಿದಾಡುತ್ತಿರುವ ಸಾರ್ವಜನಿಕ ಪ್ರಕಟಣೆಯ ಪ್ರಕಾರ,  ವೈಯಕ್ತಿಕ ರಕ್ಷಣಾ ಸಾಧನಗಳು, ಎನ್ -95 ಮಾಸ್ಕುಗಳು, ಟ್ರಿಪಲ್ ಲೇಯರ್ ಮಾಸ್ಕ್ ಮತ್ತು ಹ್ಯಾಂಡ್ ಸ್ಯಾನಿಟೈಜರ್‌ಗಳ ದೇಣಿಗೆಯನ್ನು ಕೋರಿದೆ.

“ಸರ್ಕಾರವು ಸಹ ಈ ಉಪಕರಣಗಳನ್ನು ನೀಡಲು ಪ್ರಯತ್ನಿಸುತ್ತಿದೆ. ಆದರೆ ಬೇಡಿಕೆಯು ಪೂರೈಕೆಗಿಂತಲೂ ಹೆಚ್ಚಿದೆ, ದಯವಿಟ್ಟು ಮೇಲೆ ತಿಳಿಸಿದ ಉಪಕರಣಗಳನ್ನು ಸಾಧ್ಯವಾದಷ್ಟು ಪ್ರಮಾಣದಲ್ಲಿ ದಾನ ಮಾಡಿ. ದಯವಿಟ್ಟು ಸಫ್ದರ್ಜಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರ ಕಚೇರಿಯ ಮೂಲಕ ದೇಣಿಗೆ ನೀಡಬಹುದು” ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಆದರೆ, ಆಸ್ಪತ್ರೆಯ ಆಡಳಿತವು ರಕ್ಷಣಾತ್ಮಕ ಸಾಧನಗಳ ಕೊರತೆಯನ್ನು ನಿರಾಕರಿಸಿದೆ. ಸಫ್ದರ್ಜಂಗ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಅಧ್ಯಕ್ಷ ಮನೀಶ್ “ವೈದ್ಯಕೀಯ ಉಪಕರಣಗಳನ್ನು ದಾನ ಮಾಡಲು ಆಸಕ್ತಿ ತೋರಿಸಿದ ಲಾಭ ರಹಿತ ಸಂಸ್ಥೆಗಳಿಗೆ ಈ ನೋಟಿಸ್ ಹೊರಡಿಸಲಾಗಿತ್ತು, ಆದರೆ ಅನೇಕ ಜನರು ನಮ್ಮ ನೋಟಿಸ್‌ನ ಸ್ವರೂಪವನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ದೇಣಿಗೆಯ ಬ್ಯಾಂಕ್ ಖಾತಾ ಸಂಖ್ಯೆಯನ್ನು ತಪ್ಪಾಗಿ ಲಗತ್ತಿಸಿದ್ದಾರೆ ಎಂಬುದು ನಮ್ಮ ಗಮನಕ್ಕೆ ಬಂದಿದೆ” ಎಂದು ಹೇಳಿದ್ದಾರೆ.

ಸಫ್ದರ್ಜಂಗ್ ಆಸ್ಪತ್ರೆಗೆ ನಾವು ಯಾವತ್ತೂ ಹಣವನ್ನು ಕೇಳಲಿಲ್ಲ ಮತ್ತು ಬದಲಿಗೆ ಸಫ್ದರ್ಜಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರ ಮೂಲಕ ಸರಿಯಾದ ಆಡಳಿತಾತ್ಮಕ ರೀತಿಯಲ್ಲಿ ವೈದ್ಯಕೀಯ ಉಪಕರಣಗಳನ್ನು ಮಾತ್ರ ದೇಣಿಗೆಯಾಗಿ ಕೇಳಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪ್ರಸ್ತುತ, ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಸಲಕರಣೆಗಳ ಕೊರತೆಯಿಲ್ಲ, ಆದರೆ ಈ ಸಾಂಕ್ರಾಮಿಕ ರೋಗದ ಭವಿಷ್ಯದ ಹಾದಿಯು ಇನ್ನೂ ಅನಿಶ್ಚಿತವಾಗಿಯೇ ಉಳಿದಿದೆ. ಆದ್ದರಿಂದ ಅದಕ್ಕಾಗಿ ನಮ್ಮ ಸನ್ನದ್ಧತೆಯಲ್ಲಿ ನಾವು ಕಾರ್ಯಪ್ರವೃತ್ತರಾಗಿರಬೇಕು” ಎಂದು ಮನೀಶ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...