Homeಕರ್ನಾಟಕಕಾರ್ಮಿಕರಿಗೆ ಪಡಿತರ ವಿತರಿಸುತ್ತಿದ್ದ ಸ್ವರಾಜ್ ಅಭಿಯಾನದ ಕಾರ್ಯಕರ್ತರ ಮೇಲೆ RSS ಬೆಂಬಲಿಗರಿಂದ ಹಲ್ಲೆ - ಆರೋಪ

ಕಾರ್ಮಿಕರಿಗೆ ಪಡಿತರ ವಿತರಿಸುತ್ತಿದ್ದ ಸ್ವರಾಜ್ ಅಭಿಯಾನದ ಕಾರ್ಯಕರ್ತರ ಮೇಲೆ RSS ಬೆಂಬಲಿಗರಿಂದ ಹಲ್ಲೆ – ಆರೋಪ

- Advertisement -
- Advertisement -

ಯೋಗೇಂದ್ರ ಯಾದವ್ ಮತ್ತು ಪ್ರಶಾಂತ್‌ ಭೂಷಣ್‌ ಅವರು ಸ್ಥಾಪಿಸಿರುವ ಸ್ವರಾಜ್ ಅಭಿಯಾನ್‌ ಸಂಘಟನೆಯ ಕಾರ್ಯಕರ್ತರು ಬೆಂಗಳೂರಿನಲ್ಲಿ ಲಾಕ್‌ಡೌನ್‌ನಿಂದ ಸಂತ್ರಸ್ತರಾದ ಕಾರ್ಮಿಕರಿಗೆ ಪರಿಹಾರ ಸಾಮಗ್ರಿಗಳನ್ನು ವಿತರಿಸುವಾಗ ಆರ್‌ಎಸ್‌ಎಸ್ ಬೆಂಬಲಿಗರು ಹಲ್ಲೆ ನಡೆಸಿರುವ ಘಟನೆ ಜರುಗಿದೆ.

ಕಳೆದ ವಾರ ಏಪ್ರಿಲ್ 04 ರಂದು ಬೆಂಗಳೂರಿನ ದಾಸರಹಳ್ಳಿಯಲ್ಲಿ ಕೊರೊನಾ ಲಾಕ್‌ಡೌನ್ ಮಧ್ಯೆ ಪರಿಹಾರ ಸಾಮಗ್ರಿಗಳನ್ನು ವಿತರಿಸುವಾಗ ಈ ಘಟನೆ ನಡೆದಿದೆ. ಅಪರಿಚಿತ ಜನರು ಸ್ವರಾಜ್ ಅಭಿಯಾನದ ಕಾರ್ಯಕರ್ತೆಯಾದ ಝರೀನ್ ತಾಜ್ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು “ದಿ ಹಿಂದೂ” ವರದಿ ಮಾಡಿದೆ. ದಾಳಿಕೋರರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರು ಎಂದು ತಾಜ್ ಆರೋಪಿಸಿದ್ದಾರೆ.

ಈ ಘಟನೆಯಲ್ಲಿ ಅವರ ಮಗ ಮತ್ತು ಅವನ ಸ್ನೇಹಿತ ಸೇರಿದಂತೆ ನಾಲ್ವರು ಕುಟುಂಬ ಸದಸ್ಯರು ಗಾಯಗೊಂಡಿದ್ದಾರೆ ಎಂದು ತಾಜ್ ಹೇಳಿದ್ದಾರೆ. “ಆರೋಗ್ಯ ಇಲಾಖೆಯು ಪರಿಶೀಲನೆ ನಡೆಸಿ ಇದನ್ನು ಸುರಕ್ಷಿತವೆಂದು ಪ್ರಮಾಣಗೊಳಿಸುವವರೆಗೂ ಪಡಿತರವನ್ನು ವಿತರಿಸಲು ಬಿಡುವುದಿಲ್ಲ ಎಂದು ಧಮಕಿ ಹಾಕಿದ ಆರ್‌ಎಸ್‌ಎಸ್‌ ಕಾರ್ಯಕರ್ತರು ನಾವು ಉದ್ದೇಶಪೂರ್ವಕವಾಗಿ ವೈರಸ್ ಹರಡುತ್ತಿದ್ದೇವೆ ಎಂದು ನಿಂದಿಸಿದ್ದಾರೆ” ಎಂದು ತಾಜ್ ಕಿಡಿಕಾರಿದ್ದಾರೆ. ದಾಳಿ ಮಾಡಿದ ನಂತರ ನಮ್ಮ ಮೇಲೆಯೇ ಪಡಿತರ ವಿತರಿಸುವಾಗ ಸಾಮಾಜಿಕ ಅಂತರವನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಿ ದೂರು ಸಹ ದಾಖಲಿಸಿದ್ದಾರೆ ಎಂದು ತಾಜ್‌ ತಿಳಿಸಿದ್ದಾರೆ.

ಈ ಬಗ್ಗೆ ಸ್ವರಾಜ್ ಅಭಿಯಾನ ಮುಖ್ಯಸ್ಥರಾರ ಯೋಗೇಂದ್ರ ಯಾದವ್ ಟ್ವೀಟ್ ಮಾಡಿದ್ದಾರೆ.

ಹಲ್ಲೆಗೊಳಗಾದವರನ್ನು ಝರೀನ್ ತಾಜ್ ಅವರ ಪುತ್ರ ಹಾಗೂ ಸ್ವರಾಜ್ ಅಭಿಯಾನದ ಬೆಂಗಳೂರು ಜಿಲ್ಲಾ ಕಾರ್ಯದರ್ಶಿಯಾದ ಸೈಯದ್ ತಬ್ರೆಜ್, ಕಿರಣ್, ಜುನೈದ್, ರಿಯಾಜ್, ಫಿರೋಜ್ ಮತ್ತು ಅಮ್ಜದ್ ಎಂದು ಗುರುತಿಸಲಾಗಿದೆ.

ಈ ಕುರಿತು ಝರಿನಾ ತಾಜ್‌ರವರು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮುಂದಕ್ಕೆ ಇಂತಹ ಅಡೆತಡೆಗಳು ನಡೆಯದಂತೆ ಕ್ರಮಕೈಗೊಳ್ಳುತ್ತೇವೆ ಎಂದು ಪೋಲಿಸರು ಭರವಸೆ ನೀಡಿದ್ದರು, ಆದರೆ ಸೋಮವಾರವೂ ಸಹ ಅವರು ಪಡಿತರವನ್ನು ವಿತರಿಸುವಾಗ, ಏಪ್ರಿಲ್ 4 ರಂದು ಎದುರಿಸಿದವರಿಗಿಂತ ಭಿನ್ನವಾದ ಆರು ಜನರ ಗುಂಪು ಕ್ರಿಕೆಟ್ ಬ್ಯಾಟ್ ಗಳಿಂದ ಹಲ್ಲೆ ಮಾಡಿದೆ ಎಂದು ಆರೋಪಿಸಿದ್ದಾರೆ. ಈ ಕುರಿತು ಮತ್ತೊಂದು ದೂರು ನೀಡಲು ಹೋದರೆ ಪೊಲೀಸರು ರಾಜಿ ಮಾಡಿಕೊಳ್ಳಿ ಎಂದು ಒತ್ತಡ ಮಾಡುತ್ತಿದ್ದಾರೆ ಅವರು ಆರೋಪಿಸಿದ್ದಾರೆ.

“ನಮ್ಮಲ್ಲಿ ಐದು ಜನರು ತೀವ್ರವಾಗಿ ಗಾಯಗೊಂಡಿದ್ದೇವೆ, ನಾವು ಹಸಿದವರಿಗೆ ಸಹಾಯ ಮಾಡಲು ಬಯಸುವುದು ತಪ್ಪೇ?” ಎಂದು ತಾಜ್ ಹೇಳಿದ್ದಾರೆ.

“ಮುಸ್ಲಿಮರು ಪಡಿತರದಲ್ಲಿ ವಿಷವನ್ನು ನೀಡುತ್ತಿದ್ದಾರೆ, ನೀವು ಇಲ್ಲಿ ಆಹಾರವನ್ನು ತಲುಪಿಸುವಂತಿಲ್ಲ, ಕೂಡಲೆ ನೀವು ಕೊಳೆಗೇರಿ ಬಿಟ್ಟು ಬೇರೆಡೆಗೆ ಹೋಗಬೇಕು” ಎಂದು ಹಲ್ಲೆ ನಡೆಸಿದವರು ಹೇಳಿದ್ದಾರೆ ಎಂದು ತಾಜ್ ಆರೋಪಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಶಾಂಪುರದ ಡಾ.ಅಂಬೇಡ್ಕರ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.

ಕೋಮು ದ್ವೇಷವನ್ನು ಹರಡುವ ಯಾರೊಬ್ಬನ್ನೂ ಪೊಲೀಸರು ಸಹಿಸುವುದಿಲ್ಲ ಎಂದು ಬೆಂಗಳೂರು ಉಪ ಪೊಲೀಸ್ ಆಯುಕ್ತ (ಈಶಾನ್ಯ) ಭೀಮಾಶಂಕರ್ ಗುಳೆದ್‌ ಹೇಳಿದ್ದಾರೆ. ಈ ವಿಷಯದಲ್ಲಿ ಪ್ರಕರಣ ದಾಖಲಿಸಿ ಮತ್ತು ಆರೋಪಿಗಳನ್ನು ಬಂಧಿಸಲಾಗುವುದು ಎಂದಿದ್ದಾರೆ. ಇದನ್ನು ಮೊದಲು ಏಕೆ ಮಾಡಲಾಗಿಲ್ಲ ಎಂದು ಪ್ರಶ್ನಿಸಿದಾಗ, ಸಂತ್ರಸ್ತರು ಪ್ರಕರಣ ದಾಖಲಿಸಲು ಬಯಸಿರಲಿಲ್ಲ ಎಂದು ಗುಳೆದ್‌ ಹೇಳಿದ್ದಾರೆ.

ಕಳೆದ ವಾರ, ಮುಸ್ಲಿಂ ಸಮುದಾಯದ ನಿಯೋಗವು, ಎಲ್ಲಾ ಪೊಲೀಸ್ ಆಯುಕ್ತರು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದ್ವೇಷದ ಹರಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡುವಂತೆ, ಮಹಾನಿರ್ದೇಶಕರು ಮತ್ತು ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಪ್ರವೀಣ್ ಸೂದ್ ಅವರಿಗೆ ಮನವಿ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...