Homeಕರ್ನಾಟಕಕಾರ್ಮಿಕರಿಗೆ ಪಡಿತರ ವಿತರಿಸುತ್ತಿದ್ದ ಸ್ವರಾಜ್ ಅಭಿಯಾನದ ಕಾರ್ಯಕರ್ತರ ಮೇಲೆ RSS ಬೆಂಬಲಿಗರಿಂದ ಹಲ್ಲೆ - ಆರೋಪ

ಕಾರ್ಮಿಕರಿಗೆ ಪಡಿತರ ವಿತರಿಸುತ್ತಿದ್ದ ಸ್ವರಾಜ್ ಅಭಿಯಾನದ ಕಾರ್ಯಕರ್ತರ ಮೇಲೆ RSS ಬೆಂಬಲಿಗರಿಂದ ಹಲ್ಲೆ – ಆರೋಪ

- Advertisement -
- Advertisement -

ಯೋಗೇಂದ್ರ ಯಾದವ್ ಮತ್ತು ಪ್ರಶಾಂತ್‌ ಭೂಷಣ್‌ ಅವರು ಸ್ಥಾಪಿಸಿರುವ ಸ್ವರಾಜ್ ಅಭಿಯಾನ್‌ ಸಂಘಟನೆಯ ಕಾರ್ಯಕರ್ತರು ಬೆಂಗಳೂರಿನಲ್ಲಿ ಲಾಕ್‌ಡೌನ್‌ನಿಂದ ಸಂತ್ರಸ್ತರಾದ ಕಾರ್ಮಿಕರಿಗೆ ಪರಿಹಾರ ಸಾಮಗ್ರಿಗಳನ್ನು ವಿತರಿಸುವಾಗ ಆರ್‌ಎಸ್‌ಎಸ್ ಬೆಂಬಲಿಗರು ಹಲ್ಲೆ ನಡೆಸಿರುವ ಘಟನೆ ಜರುಗಿದೆ.

ಕಳೆದ ವಾರ ಏಪ್ರಿಲ್ 04 ರಂದು ಬೆಂಗಳೂರಿನ ದಾಸರಹಳ್ಳಿಯಲ್ಲಿ ಕೊರೊನಾ ಲಾಕ್‌ಡೌನ್ ಮಧ್ಯೆ ಪರಿಹಾರ ಸಾಮಗ್ರಿಗಳನ್ನು ವಿತರಿಸುವಾಗ ಈ ಘಟನೆ ನಡೆದಿದೆ. ಅಪರಿಚಿತ ಜನರು ಸ್ವರಾಜ್ ಅಭಿಯಾನದ ಕಾರ್ಯಕರ್ತೆಯಾದ ಝರೀನ್ ತಾಜ್ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು “ದಿ ಹಿಂದೂ” ವರದಿ ಮಾಡಿದೆ. ದಾಳಿಕೋರರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರು ಎಂದು ತಾಜ್ ಆರೋಪಿಸಿದ್ದಾರೆ.

ಈ ಘಟನೆಯಲ್ಲಿ ಅವರ ಮಗ ಮತ್ತು ಅವನ ಸ್ನೇಹಿತ ಸೇರಿದಂತೆ ನಾಲ್ವರು ಕುಟುಂಬ ಸದಸ್ಯರು ಗಾಯಗೊಂಡಿದ್ದಾರೆ ಎಂದು ತಾಜ್ ಹೇಳಿದ್ದಾರೆ. “ಆರೋಗ್ಯ ಇಲಾಖೆಯು ಪರಿಶೀಲನೆ ನಡೆಸಿ ಇದನ್ನು ಸುರಕ್ಷಿತವೆಂದು ಪ್ರಮಾಣಗೊಳಿಸುವವರೆಗೂ ಪಡಿತರವನ್ನು ವಿತರಿಸಲು ಬಿಡುವುದಿಲ್ಲ ಎಂದು ಧಮಕಿ ಹಾಕಿದ ಆರ್‌ಎಸ್‌ಎಸ್‌ ಕಾರ್ಯಕರ್ತರು ನಾವು ಉದ್ದೇಶಪೂರ್ವಕವಾಗಿ ವೈರಸ್ ಹರಡುತ್ತಿದ್ದೇವೆ ಎಂದು ನಿಂದಿಸಿದ್ದಾರೆ” ಎಂದು ತಾಜ್ ಕಿಡಿಕಾರಿದ್ದಾರೆ. ದಾಳಿ ಮಾಡಿದ ನಂತರ ನಮ್ಮ ಮೇಲೆಯೇ ಪಡಿತರ ವಿತರಿಸುವಾಗ ಸಾಮಾಜಿಕ ಅಂತರವನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಿ ದೂರು ಸಹ ದಾಖಲಿಸಿದ್ದಾರೆ ಎಂದು ತಾಜ್‌ ತಿಳಿಸಿದ್ದಾರೆ.

ಈ ಬಗ್ಗೆ ಸ್ವರಾಜ್ ಅಭಿಯಾನ ಮುಖ್ಯಸ್ಥರಾರ ಯೋಗೇಂದ್ರ ಯಾದವ್ ಟ್ವೀಟ್ ಮಾಡಿದ್ದಾರೆ.

ಹಲ್ಲೆಗೊಳಗಾದವರನ್ನು ಝರೀನ್ ತಾಜ್ ಅವರ ಪುತ್ರ ಹಾಗೂ ಸ್ವರಾಜ್ ಅಭಿಯಾನದ ಬೆಂಗಳೂರು ಜಿಲ್ಲಾ ಕಾರ್ಯದರ್ಶಿಯಾದ ಸೈಯದ್ ತಬ್ರೆಜ್, ಕಿರಣ್, ಜುನೈದ್, ರಿಯಾಜ್, ಫಿರೋಜ್ ಮತ್ತು ಅಮ್ಜದ್ ಎಂದು ಗುರುತಿಸಲಾಗಿದೆ.

ಈ ಕುರಿತು ಝರಿನಾ ತಾಜ್‌ರವರು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮುಂದಕ್ಕೆ ಇಂತಹ ಅಡೆತಡೆಗಳು ನಡೆಯದಂತೆ ಕ್ರಮಕೈಗೊಳ್ಳುತ್ತೇವೆ ಎಂದು ಪೋಲಿಸರು ಭರವಸೆ ನೀಡಿದ್ದರು, ಆದರೆ ಸೋಮವಾರವೂ ಸಹ ಅವರು ಪಡಿತರವನ್ನು ವಿತರಿಸುವಾಗ, ಏಪ್ರಿಲ್ 4 ರಂದು ಎದುರಿಸಿದವರಿಗಿಂತ ಭಿನ್ನವಾದ ಆರು ಜನರ ಗುಂಪು ಕ್ರಿಕೆಟ್ ಬ್ಯಾಟ್ ಗಳಿಂದ ಹಲ್ಲೆ ಮಾಡಿದೆ ಎಂದು ಆರೋಪಿಸಿದ್ದಾರೆ. ಈ ಕುರಿತು ಮತ್ತೊಂದು ದೂರು ನೀಡಲು ಹೋದರೆ ಪೊಲೀಸರು ರಾಜಿ ಮಾಡಿಕೊಳ್ಳಿ ಎಂದು ಒತ್ತಡ ಮಾಡುತ್ತಿದ್ದಾರೆ ಅವರು ಆರೋಪಿಸಿದ್ದಾರೆ.

“ನಮ್ಮಲ್ಲಿ ಐದು ಜನರು ತೀವ್ರವಾಗಿ ಗಾಯಗೊಂಡಿದ್ದೇವೆ, ನಾವು ಹಸಿದವರಿಗೆ ಸಹಾಯ ಮಾಡಲು ಬಯಸುವುದು ತಪ್ಪೇ?” ಎಂದು ತಾಜ್ ಹೇಳಿದ್ದಾರೆ.

“ಮುಸ್ಲಿಮರು ಪಡಿತರದಲ್ಲಿ ವಿಷವನ್ನು ನೀಡುತ್ತಿದ್ದಾರೆ, ನೀವು ಇಲ್ಲಿ ಆಹಾರವನ್ನು ತಲುಪಿಸುವಂತಿಲ್ಲ, ಕೂಡಲೆ ನೀವು ಕೊಳೆಗೇರಿ ಬಿಟ್ಟು ಬೇರೆಡೆಗೆ ಹೋಗಬೇಕು” ಎಂದು ಹಲ್ಲೆ ನಡೆಸಿದವರು ಹೇಳಿದ್ದಾರೆ ಎಂದು ತಾಜ್ ಆರೋಪಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಶಾಂಪುರದ ಡಾ.ಅಂಬೇಡ್ಕರ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.

ಕೋಮು ದ್ವೇಷವನ್ನು ಹರಡುವ ಯಾರೊಬ್ಬನ್ನೂ ಪೊಲೀಸರು ಸಹಿಸುವುದಿಲ್ಲ ಎಂದು ಬೆಂಗಳೂರು ಉಪ ಪೊಲೀಸ್ ಆಯುಕ್ತ (ಈಶಾನ್ಯ) ಭೀಮಾಶಂಕರ್ ಗುಳೆದ್‌ ಹೇಳಿದ್ದಾರೆ. ಈ ವಿಷಯದಲ್ಲಿ ಪ್ರಕರಣ ದಾಖಲಿಸಿ ಮತ್ತು ಆರೋಪಿಗಳನ್ನು ಬಂಧಿಸಲಾಗುವುದು ಎಂದಿದ್ದಾರೆ. ಇದನ್ನು ಮೊದಲು ಏಕೆ ಮಾಡಲಾಗಿಲ್ಲ ಎಂದು ಪ್ರಶ್ನಿಸಿದಾಗ, ಸಂತ್ರಸ್ತರು ಪ್ರಕರಣ ದಾಖಲಿಸಲು ಬಯಸಿರಲಿಲ್ಲ ಎಂದು ಗುಳೆದ್‌ ಹೇಳಿದ್ದಾರೆ.

ಕಳೆದ ವಾರ, ಮುಸ್ಲಿಂ ಸಮುದಾಯದ ನಿಯೋಗವು, ಎಲ್ಲಾ ಪೊಲೀಸ್ ಆಯುಕ್ತರು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದ್ವೇಷದ ಹರಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡುವಂತೆ, ಮಹಾನಿರ್ದೇಶಕರು ಮತ್ತು ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಪ್ರವೀಣ್ ಸೂದ್ ಅವರಿಗೆ ಮನವಿ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...