Homeಕರ್ನಾಟಕಮಾಧ್ಯಮಗಳೇ, ಧರ್ಮವೀರರೇ ಗಂಗಮ್ಮನ ಸಾವಿನ ಹೊಣೆಯನ್ನು ನೀವೂ ಹೊರಬೇಕಲ್ಲವೇ?

ಮಾಧ್ಯಮಗಳೇ, ಧರ್ಮವೀರರೇ ಗಂಗಮ್ಮನ ಸಾವಿನ ಹೊಣೆಯನ್ನು ನೀವೂ ಹೊರಬೇಕಲ್ಲವೇ?

ಈ ನಾಡಿನಲ್ಲಾದ ಒಂದು ಸಾವಿಗೆ ಸಂಬಂಧವೇ ಇಲ್ಲದ ನೂರಾರು ಆತ್ಮಸಾಕ್ಷಿಯುಳ್ಳ ಮನಸ್ಸುಗಳು ಇದಕ್ಕೆ ನಾನು ಹೊಣೆ ಎಂದು ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಆದರೆ ದಿನವೀಡಿ ಇನ್ನೊಬ್ಬರ ಮೇಲೆ ದ್ವೇಷ ಕಾರುವ ಧರ್ಮವೀರರು ಮತ್ತು ಮಾಧ್ಯಮಗಳಿಗೆ ಈ ಸಾವು ಏನು ಅನ್ನಿಸುತ್ತಿಲ್ಲ ಏಕೆ? 

- Advertisement -
- Advertisement -

ಏಪ್ರಿಲ್ 5ರ ರಾತ್ರಿ 9ಗಂಟೆಗೆ ದೇಶದ ಬಹುತೇಕರು ದೇಶದ ಪ್ರಧಾನಿಗಳ ಕರೆಗೆ ಓಗೊಟ್ಟು 9 ನಿಮಿಷಗಳ ಕಾಲ ದೀಪ ಹಚ್ಚಿದರು. ಇನ್ನು ಕೆಲವರು ಪಟಾಕಿ ಹೊಡೆದು ಹುಚ್ಚೆದ್ದು ಕುಣಿದರು. ಅದೇ ಸಂದರ್ಭದಲ್ಲಿ ಅನ್ನ ಆಹಾರವಿಲ್ಲದೇ, ಮನೆ ತಲುಪುವ ಉದ್ದೇಶದಿಂದ ಮೂರು ದಿನ ನಡೆದ ಕಾರಣಕ್ಕೆ ಬಳಲಿದ್ದ ಗಂಗಮ್ಮ ಎಂಬ ಅಮಾಯಕ ಮಹಿಳೆ ತನ್ನ ಸಾವಿನ ಕ್ಷಣಗಳನ್ನು ಎಣಿಸುತ್ತಾ ಬಳ್ಳಾರಿಯ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಒದ್ದಾಡುತ್ತಿದ್ದಳು.

ಪೂರ್ವ ಸಿದ್ದತೆ ಮತ್ತು ಬಡವರ ಸ್ಥಿತಿಗತಿ ಏನಾಗಬಹುದೆಂದು ಯೋಚಿಸದೇ ಘೋಷಿಸಿದ ಲಾಕ್‌ಡೌನ್‌ನಿಂದ 30ಕ್ಕೂ ಹೆಚ್ಚು ಜನರು ಜೀವತೆತ್ತಿದ್ದಾರೆ. ಹಸಿವಿನಿಂದ ಸತ್ತವರ ಲೆಕ್ಕ ಸಿಕ್ಕಿಲ್ಲ ಮತ್ತು ಸಿಗುವುದೂ ಇಲ್ಲ. ಈ ನಡುವೆ ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಸಿಂಧನೂರಿನ 29 ವರ್ಷದ ಗಂಗಮ್ಮ ಎಂಬ ಮಹಿಳೆ ತನ್ನೂರಿಗೆ ತೆರಳಲು ನಡೆದು ನಡೆದು ಸುಸ್ತಾಗಿ, ಅನ್ನ ನೀರಿಲ್ಲದೆ ಸೋಮವಾರ ಪ್ರಾಣ ಬಿಟ್ಟ ಹೃದಯವಿದ್ರಾವಕ ಘಟನೆ ಪತ್ರಿಕೆಗಳಲ್ಲಿ ವರದಿಯಾಗಿದೆ.

ಬೆಂಗಳೂರಿನ ಗ್ಲೋಬಲ್ ವಿಲೇಜ್ ಎಂಬ ಐಟಿ ಕಂಪನಿಯು ಪ್ರಪಂಚದಲ್ಲಿಯೇ ಫೇಮಸ್. ಆದರೆ ಅದೇ ಅಪಾರ್ಟ್ಮೆಂಟ್ ನಿರ್ಮಾಣದಲ್ಲಿ ತೊಡಗಿಸಿಕೊಂಡ ಕೂಲಿ ಕಾರ್ಮಿಕರ ಬಗ್ಗೆ ಯಾರೂ ಕಾಳಜಿ ವಹಿಸುವುದಿಲ್ಲ. ಅಂತಹ ನತದೃಷ್ಟರಲ್ಲಿ ಗಂಗಮ್ಮಳು ಕೂಡ ಒಬ್ಬಳು. ಅವಳ ಸಾವಿನ ನಂತರದ ಅವರ ಮನೆ ಪರಿಸ್ಥಿತಿಯನ್ನು ಗಮನಿಸಿದರೆ ನಾವೆಲ್ಲರೂ ನಾಗರಿಕರು ಎನಿಸಿಕೊಳ್ಳಲು ಸಹ ನಾಚಿಕೆಯಾಗುತ್ತದೆ.

ಗಂಗಮ್ಮಳ ಗಂಡ ಕುಡಿತದ ದಾಸನಾಗಿದ್ದನು. ಈತನ ಕಿರುಕುಳದಿಂದ ರೋಸಿಹೋಗಿದ್ದ ಗಂಗಮ್ಮ ಒಮ್ಮೆ ಮಲೇರಿಯಾ ರೋಗಕ್ಕೆ ತುತ್ತಾದಳು. ಇನ್ನು ಅಲ್ಲಿರುವುದು ಅಸಾಧ್ಯ ಎನಿಸಿದಾಗ ಉಳಿದೊಂದು ದಾರಿಯಂತೆ ಬೆಂಗಳೂರಿಗೆ ಗುಳೆ ಹೊರಟಳು.

ಕಟ್ಟಡ ನಿರ್ಮಾಣದಲ್ಲಿ ದುಡಿದು ದುಡಿದು ಬಸವಳಿದಿದ್ದ ಆಕೆ ಇಲ್ಲಿ ಒಂದಷ್ಟು ನೆಮ್ಮದಿಯನ್ನಾದರೂ ಕಂಡುಕೊಂಡಿದ್ದಳು. ಅಷ್ಟರಲ್ಲಿ ಅಪ್ಪಳಿಸಿದ್ದೆ 21 ದಿನಗಳ ಕೊರೊನಾ ಲಾಕ್‌ಡೌನ್. ಎಷ್ಟು ದಿನ ಕಾದರೂ ಕೆಲಸ ಸಿಗದಾಗ ಮತ್ತೆ ತನ್ನೂರು ಸಿಂಧನೂರಿಗೆ ಹೊರಟು ನಿಂತಿದ್ದಾಳೆ. ಕೈಯಲ್ಲಿ ದುಡ್ಡಿಲ್ಲ, ಹೊಟ್ಟೆಗೆ ಆಹಾರವಿಲ್ಲ. ಊರು ತಲುಪಿದರೆ ಏನಾದರೂ ಸಿಗಬಹುದೆಂಬ ಆಸೆಯೊತ್ತು ಹೊರಟ ಗಂಗಮ್ಮ ಕೊನೆಗೆ ಸೇರಿದ್ದು ಮಾತ್ರ ಸ್ಮಶಾನಕ್ಕೆ.

ಟ್ರಾಕ್ಟರ್‌ನಲ್ಲಿ ಒಂದಷ್ಟು ಜೊತೆಗಾರರೊಂದಿಗೆ ಗಂಗಮ್ಮ ಹೊರಟಿದ್ದಾಗ ತುಮಕೂರಿನಲ್ಲಿ ಪೊಲೀಸರು ತಡೆದಿದ್ದಾರೆ. ಅಲ್ಲಿಂದ ಕಾಲ್ನಡಿಗೆ ಆರಂಭಿಸಿದ ಆಕೆಗೆ ಆಹಾರ ನೀರು ದಕ್ಕಿಲ್ಲ. ಮೊದಲೇ ಅನಾರೋಗ್ಯವಿದ್ದ ಆಕೆ ಛಲಬಿಡದೇ ನಡೆದಿದ್ದಾಳೆ. ನಂತರ ಟ್ರಾಕ್ಟರ್ ಬಂದು ಬಳ್ಳಾರಿವರೆಗೂ ತಲುಪಿಸಿದೆ. ಅಷ್ಟರಲ್ಲಿ ಬಸವಳಿದಿದ್ದ ಆಕೆಯನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರು ದಿನ ಅಲ್ಲಿಯೂ ನರಳಿದ ಆಕೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾಳೆ.

ಸತ್ತ ನಂತರವೂ ಬಿಡದ ಅವಮಾನ

ಗಂಗಮ್ಮ ಸಾವನಪ್ಪುವ ಮುನ್ನ ಒಂದು ವಾರಗಳ ಮುಂಚೆ ತಾನೇ ಆಕೆಯ ಅತ್ತೆ (ಗಂಡನ ತಾಯಿ) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಗಂಗಮ್ಮನ ಮೃತದೇಹವನ್ನು ಸಿಂಧನೂರಿಗೆ ತರಬಾರದು, ಇದರಿಂದ ಇಡೀ ನಗರಕ್ಕೆ ತೊಂದರೆಯಾಗುತ್ತದೆ ಎಂದು ವೆಂಕಟೇಶ್ವರ ನಗರದ ಕೆಲವರು ತಗಾದೆ ತೆಗೆದಿದ್ದಾರೆ.

ಇದರಿಂದ ಮತ್ತಷ್ಟು ಭೀತಿಕ್ಕೊಳಗಾದ ಕುಟುಂಬವು ಸಾಸಲುಮರೆ ಎಂಬ ಗ್ರಾಮದಲ್ಲಿ ರಾತ್ರೋರಾತ್ರಿ ದಫನ್ ಮಾಡಿದೆ. ಕುಟುಂಬದ ಕಡೆ ಯಾರೂ ಸಹ ತಿರುಗಿ ನೋಡಿಲ್ಲ. ಬಡವರ ಸಾವಿಗೆ ಅಳುವವರು ಯಾರು ಎಂಬಂಥ ಪರಿಸ್ಥಿತಿ ನಿರ್ಮಾಣವಾಗಿದೆ.

ಸಾಲುತ್ತಿಲ್ಲ ಸಹಾಯ

ಮೋದಿ ಸರ್ಕಾರವೇನೋ ಲಾಕ್‌ಡೌನ್‌ ಘೋಷಿಸಿ ಮಧ್ಯಮ ವರ್ಗದ ಜನರಿಗೆ ಬೇಸರವಾಗದಿರಲೆಂದು ಟಿವಿಯಲ್ಲಿ ರಾಮಾಯಣ, ಮಹಾಭಾರತ ಪ್ರದರ್ಶನ ಮಾಡುತ್ತಿದೆ. ಇನ್ನೂ ಮುಂದೆ ಹೋಗಿ ಚಪ್ಪಾಳೆ ತಟ್ಟಿ, ದೀಪ ಹಚ್ಚಿ ಎಂದು ವಾರಕ್ಕೊಂದು ಕರೆ ನೀಡಲಾಗುತ್ತಿದೆ. ಆದರೆ ದೇಶದ ಅರ್ಧ ಸಂಖ್ಯೆಯಷ್ಟಿರುವ ಬಡವರು ಎಲ್ಲಿದ್ದಾರೆ, ಏನು ಮಾಡುತ್ತಿದ್ದಾರೆ, ಅವರಿಗೆ ಊಟ ವಸತಿ ಸಿಗುತ್ತಿದೆಯೇ ಎಂದು ಯೋಚಿಸುವ ಗೋಜಿಗೆ ಸರ್ಕಾರ ಹೋಗಿಲ್ಲ. ಚಿಲ್ಲರೆ ಪ್ಯಾಕೇಜ್ ಘೋಷಿಸಿ ಕೇಂದ್ರ ಸರ್ಕಾರ ಕೈತೊಳೆದುಕೊಂಡರೆ ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಊಟ ಕೊಡಲಾರದಷ್ಟು ಬೊಕ್ಕಸದಲ್ಲಿ ಹಣವಿಲ್ಲದೇ ಒದ್ದಾಡುತ್ತಾ ದಾನಿಗಳತ್ತ ಮುಖ ಮಾಡಿದೆ.

ಅಂದ ಮಾತ್ರಕ್ಕೆ ಪ್ರಜ್ಞಾವಂತರು, ಮಾನವೀಯ ಕಾಳಜಿಯುಳ್ಳವರು ಕೈಕಟ್ಟಿ ಕುಳಿತಿದ್ದಾರೆ ಅಂತಲ್ಲ. ದೇಶಾದ್ಯಂತ ಲಕ್ಷಾಂತರ ಮಂದಿ ಪ್ರಾಣದ ಹಂಗು ತೊರೆದು ಬಡವರಿಗೆ ತುತ್ತು ಊಟ ಕೊಡಲು ಶ್ರಮಿಸುತ್ತಿದ್ದಾರೆ. ದಿನಕ್ಕೆ ಲಕ್ಷಾಂತರ ಖರ್ಚು ಮಾಡಿ ಊಟ ಬೇಯಿಸಿ ಅಗತ್ಯವಿದ್ದವರಿಗೆ ತಲುಪಿಸುವ ಮಾದರಿ ಕೆಲಸ ಮಾಡುತ್ತಿದ್ದಾರೆ. ಬಹುತೇಕ ಮುಸ್ಲಿಂ ಧರ್ಮಿಯರು ಸಹಾಯಹಸ್ತ ಕೆಲಸದಲ್ಲಿ ನಿರತರಾಗಿದ್ದಾರೆ ಎಂಬುದನ್ನು ಒತ್ತಿಯೇ ಹೇಳಬೇಕಾಗಿದೆ.

ಆದರೂ ಸಾಲುತ್ತಿಲ್ಲ. ಹಸಿದ ಎಲ್ಲರ ಹೊಟ್ಟೆ ಹೊರೆಯಲು ಸಾಧ್ಯವಾಗುತ್ತಿಲ್ಲ. ಏಕೆಂದರೆ ಭಾರತ ಬೃಹತ್ ರಾಷ್ಟ್ರ. ಇಲ್ಲಿನ ಎಲ್ಲರ ಹೊಟ್ಟೆ ತುಂಬಿಸಬೇಕಾದರೆ ಸರ್ಕಾರವೇ ಮುಂದೆ ನಿಂತು ಸಾವಿರಾರು ಕೋಟಿ ಖರ್ಚಾದರೂ ಸರಿಯೇ ಬಡವರ ಜೀವ ಮುಖ್ಯ ಅನ್ನುವ ದಿಟ್ಟತನ ಪ್ರದರ್ಶಿಸಬೇಕು. ಹಸಿವಿನಿಂದ ಸಾಯದಂತೆ ಕಾಯುವುದೇ ತನ್ನ ಪರಮ ಗುರಿಯಾಗಿ ತೆಗೆದುಕೊಳ್ಳಬೇಕಿತ್ತು. ಆದರೆ ಅದು ಆಗುತ್ತಿಲ್ಲ. ಆದ್ದರಿಂದಲೇ ಗಂಗಮ್ಮನಂತಹ ಅದೆಷ್ಟು ಜನ ಅನಾಥ ಶವವಾಗುತ್ತಿದ್ದಾರೋ. ಅವೆಲ್ಲವೂ ವರದಿಯಾಗುತ್ತಿಲ್ಲವಷ್ಟೇ.
ಏಕೆಂದರೆ, ಗಡ್ಡ ಬಿಟ್ಟು ಟೊಪ್ಪಿ ತೊಟ್ಟ ಮುಸ್ಲಿಮರು ಯಾವ್ಯಾವುದೋ ಕಾಲದ ವಿಡಿಯೋಗಳನ್ನೆಲ್ಲಾ ಹುಡುಕುವುದರಲ್ಲಿ ಐಟಿ ಸೆಲ್‌ಗಳು ಬ್ಯುಸಿಯಾಗಿದ್ದರೆ, ಎಲ್ಲವನ್ನೂ ಸೆನ್ಸೇಷನ್ ಮಾಡಲು ಟಿಆರ್‌ಪಿ ಟಿವಿಗಳು ನಿರತವಾಗಿವೆ.

ಗಂಗಮ್ಮನ ಸಾವಿಗೆ ನೂರಾರು ಜನ ಸಾಮಾಜಿಕ ಜಾಲತಾಣದಲ್ಲಿ ಕಂಬನಿ ಮಿಡಿದಿದ್ದಾರೆ. ಕೊಲೆಗಾರರು ನಾವೇ ಎನ್ನುವಷ್ಟರ ಮಟ್ಟಿಗೆ ತಪ್ಪನ್ನು ಒಪ್ಪಿಕೊಳ್ಳುತ್ತಿದ್ದಾರೆ. ಅವರೆಲ್ಲರೂ ತಮ್ಮ ಕೈಲಾದಷ್ಟು ಜನರಿಗೆ ಸಹಾಯ ಮಾಡಿದವರೆ. ಆದರೆ ಯಾರಿಗೂ ಒಂದು ಪೈಸೆ ಸಹಾಯ ಮಾಡದ ಕೆಲವು ಧರ್ಮಾಂಧರು ಇಂದಿಗೂ ಮುಸ್ಲಿಮರಿಂದಲೇ ಕೊರೊನಾ ಹರಡಿದೆ, ಜಿಹಾದಿ ವೈರಸ್ ಎನ್ನುವ ಸುಳ್ಳು ಸುದ್ದಿ ಹರಡಲು ಮುಂದಾಗಿದ್ದಾರೆ. ಮುಖ್ಯವಾಹಿನಿ ಮಾಧ್ಯಮಗಳು ಇದಕ್ಕೆ ಕುಮ್ಮಕ್ಕು ಕೊಡುತ್ತಿದ್ದು ಇಡೀ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಹರಡಲು ಕೊರೊನಾವನ್ನು ಬಳಸಿಕೊಳ್ಳುತ್ತಿದ್ದಾರೆ. ನೆನಪಿಸಿಕೊಳ್ಳಿ ಇದುವರೆಗೂ ಯಾವ ಟಿವಿ ಚಾನೆಲ್‌ನವರೂ ಸಹ ಕೊರೊನಾ ವಿರುದ್ಧದ ಹೋರಾಟಕ್ಕೆ ಒಂದು ರೂಪಾಯಿ ಕೂಡ ನೆರವು ನೀಡಿಲ್ಲ. ಬದಲಿಗೆ ದ್ವೇಷದ ವಿಷ ಬಿತ್ತುತ್ತಾ ಅಮಾಯಕ ಜನರ ಸಾವನ್ನು ಸಂಭ್ರಮಿಸುತ್ತಿದ್ದಾರೆ. ಈ ನಾಡಿನಲ್ಲಾದ ಒಂದು ಸಾವಿಗೆ ಸಂಬಂಧವೇ ಇಲ್ಲದ ನೂರಾರು ಆತ್ಮಸಾಕ್ಷಿಯುಳ್ಳ ಮನಸ್ಸುಗಳು ಇದಕ್ಕೆ ನಾನು ಹೊಣೆ ಎಂದು ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಆದರೆ ದಿನವೀಡಿ ಇನ್ನೊಬ್ಬರ ಮೇಲೆ ದ್ವೇಷ ಕಾರುವ ಧರ್ಮವೀರರು ಮತ್ತು ಮಾಧ್ಯಮಗಳಿಗೆ ಈ ಸಾವು ಏನು ಅನ್ನಿಸುತ್ತಿಲ್ಲ ಏಕೆ?

ಗಂಗಮ್ಮನ ಸಾವನ್ನು ಯಾವ ಮುಸ್ಲಿಮರ ತಲೆಗೂ ಕಟ್ಟಲು ಸಾಧ್ಯವಿಲ್ಲವಾದ್ದರಿಂದ ಅದು ಸುದ್ದಿಯಾಗಿಲ್ಲ ಎಂಬುದನ್ನು ಮರೆಯದಿರೋಣ. ನಾವೆಂತಹ ದೇಶದಲ್ಲಿ ಬದುಕುತ್ತಿದ್ದೇವೆ? ಮಾನವೀಯತೆ ಇಲ್ಲದ ದೇಶ ಉಳಿದೀತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...