Homeರಾಜಕೀಯಬೆಳಗಾವಿಯ ಕಾಂಗ್ರೆಸ್ ರಿಯಲ್ ಫೈಟ್ ಇನ್ಮುಂದೆ ಶುರು!

ಬೆಳಗಾವಿಯ ಕಾಂಗ್ರೆಸ್ ರಿಯಲ್ ಫೈಟ್ ಇನ್ಮುಂದೆ ಶುರು!

- Advertisement -
- Advertisement -

ಆಗಸ್ಟ್ 27ರ ರಾತ್ರಿಯಿಂದ ಸೆಪ್ಟೆಂಬರ್ 7ರವರೆಗೆ ಇಡೀ ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದು ಬೆಳಗಾವಿಯ ಪಿಎಲ್‍ಡಿ ಬ್ಯಾಂಕ್ ಚುನಾವಣೆ. ಸಹಕಾರಿ ಕ್ಷೇತ್ರದ ಈ ಚುನಾವಣೆಗೆ ಇಷ್ಟೊಂದು ಮಹತ್ವ ಬರಲು ಪ್ರತಿಷ್ಠಿತರ ನಡುವೆ ನಡೆದ ಜಿದ್ದಾಜಿದ್ದಿನ ಹೋರಾಟ ಕಾರಣವಾಗಿತ್ತು. ಬೆಳಗಾವಿಯ ಸಾಹುಕಾರರು ಎಂದೇ ಖ್ಯಾತಿ ಗಳಿಸಿದ ಜಾರಕಿಹೊಳಿ ಸಹೋದರರಿಗೆ ಸವಾಲ್ ಎಸೆದಿದ್ದು ಮಾತ್ರ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್. ಇದೀಗ ಚುನಾವಣೆ ಮುಗಿದಿದ್ದು ಈ ಕದನ ಕೂಡ ಮುಗಿದಿದೆ ಎಂದುಕೊಂಡರೆ ತಪ್ಪಾಗುತ್ತದೆ. ರಿಯಲ್ ಆಗಿ ಫೈಟ್ ಆರಂಭವಾಗಿರುವುದೇ ಈಗ.
ಹೆಬ್ಬಾಳ್ಕರ್ ಬೆಳೆಸಿದ್ದು ಜಾರಕಿಹೊಳಿ ಸಹೋದರರು…!
ಕಳೆದ 20 ವರ್ಷಗಳಿಂದ ಜಾರಕಿಹೊಳಿ ಸಹೋದರರ ನೆರಳಲ್ಲಿಯೇ ಲಕ್ಷ್ಮೀ ಹೆಬ್ಬಾಳ್ಕರ್ ರಾಜಕೀಯ ಮಾಡಿಕೊಂಡು ಬೆಳೆದಿದ್ದಾರೆ. ಹೆಬ್ಬಾಳ್ಕರ್ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ, ನಂತರ 2013ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ, 2014ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಹಾಗೂ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸ್ಥಾನಮಾನ. ಎಲ್ಲದರ ಹಿಂದೆ ಜಾರಕಿಹೊಳಿ ಸಹೋದರರ ಶ್ರೀರಕ್ಷೆ ಇದ್ದೇ ಇತ್ತು. ಕಳೆದ ಲೋಕಸಭೆ ಚುಣಾವಣೆ ಸಂದರ್ಭದಲ್ಲಿ ಮೋದಿ ಅಲೆಯ ನಡುವೆಯೂ ಗೋಕಾಕ್, ಅರಭಾವಿ ಕ್ಷೇತ್ರದಿಂದ ಜಾರಕಿಹೊಳಿ ಸಹೋದರರು ಅತಿಹೆಚ್ಚು ಮತಗಳನ್ನು ಹೆಬ್ಬಾಳ್ಕರ್‍ಗೆ ಹಾಕಿಸುವ ಮೂಲಕ ಬೆನ್ನೆಲುಬಾಗಿ ನಿಂತಿದ್ದರು. ಅಷ್ಟೇ ಅಲ್ಲ, ಚುನಾವಣೆ ಸಂದರ್ಭಗಳನ್ನೂ ಸೇರಿ ಅನೇಕ ಸಂದರ್ಭದಲ್ಲಿ ಆರ್ಥಿಕವಾಗಿಯೂ ಹೆಬ್ಬಾಳ್ಕರ್‍ಗೆ ಸಹಾಯ ಮಾಡಿದ್ದಾರೆ. ಇತ್ತೀಚಿನ 2018ರ ವಿಧಾನಸಭೆ ಚುನಾವಣೆಯಲ್ಲಿ 50 ಸಾವಿರಕ್ಕೂ ಅಧಿಕ ಮತಗಳಿಂದ ಹೆಬ್ಭಾಳ್ಕರ್ ಗೆಲ್ಲಿಸಲಿಕ್ಕಾಗಿ ಸಚಿವ ರಮೇಶ ಜಾರಕಿಹೊಳಿ, ಉದ್ಯಮಿ ಲಖನ್ ಜಾರಕಿಹೊಳಿ ಪ್ರಚಾರ ನಡೆಸಿದ್ದಕ್ಕೆ ಕ್ಷೇತ್ರದ ಜನತೆ ಸಾಕ್ಷಿಯಾಗಿದ್ದಾರೆ.
ರಮೇಶ ಜಾರಕಿಹೊಳಿ ಹಾಗೂ ಹೆಬ್ಭಾಳ್ಕರ್ ನಡುವೆ ಯಾಕೆ ವೈಮನಸ್ಸು…?
ದಶಕಗಳಿಂದ ಸಚಿವ ರಮೇಶ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಉತ್ತಮ ಬಾಂಧವ್ಯವಿತ್ತು. ‘ಹೆಬ್ಬಾಳ್ಕರ್ ತಂದೆಯ ಅನಾರೋಗ್ಯ, ಸಹೋದರ ಹಾಗೂ ಮಗನ ವಿದ್ಯಾಭ್ಯಾಸಕ್ಕೂ ಸಹಾಯ ಮಾಡಿದ್ದೇನೆ. ಆದರೆ ಇದನ್ನೆಲ್ಲಾ ಈಗ ಹೆಬ್ಬಾಳ್ಕರ್ ಮರೆತುಬಿಟ್ಟಿದ್ದಾರೆ’ ಎಂದು ರಮೇಶ ಜಾರಕಿಹೊಳಿ ಆರೋಪಿಸುತ್ತಿದ್ದಾರೆ. ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಸತೀಶ್ ಜಾರಕಿಹೊಳಿ ಸಚಿವರಾಗಿದ್ದ ವೇಳೆಯಲ್ಲಿ, ರಮೇಶ ಜಾರಕಿಹೊಳಿ ವರಿಷ್ಠರ ಸಂಪರ್ಕ ಸಾಧಿಸಿದ್ದು ಇದೇ ಹೆಬ್ಬಾಳ್ಕರ್ ಮೂಲಕವೇ. ಸತೀಶ ಬದಲಾಗಿ ತಮಗೆ ಸಚಿವ ಸ್ಥಾನ ಪಡೆದುಕೊಳ್ಳುವಲ್ಲಿ ಕೂಡ ಹೆಬ್ಬಾಳ್ಕರ್ ಕೈಜೋಡಿಸಿದ್ದರು. ನಂತರ ಜಿಲ್ಲೆಯ ಎಲ್ಲಾ ಕೆಲಸಗಳಲ್ಲಿಯೂ ರಮೇಶ ಜಾರಕಿಹೊಳಿ ಹಾಗೂ ಹೆಬ್ಬಾಳ್ಕರ್ ಒಟ್ಟಗೂಡಿಯೇ ಮಾಡುತ್ತಿದ್ದರು. ಆದರೆs 2018ರ ವಿಧಾನಸಭೆ ಚುನಾವಣೆ ಬಳಿಕ ರಚನೆಯಾದ ಸಮ್ಮಿಶ್ರ ಸರ್ಕಾರದಲ್ಲಿ ಸತೀಶ ಜಾರಕಿಹೊಳಿ, ರಮೇಶ ಜಾರಕಿಹೊಳಿ ಇಬ್ಬರು ಸಚಿವ ಸ್ಥಾನಕ್ಕೆ ಪೈಪೋಟಿ ನಡೆಸಲು ಆರಂಭಿಸಿದ್ರು. ಈ ವೇಳೆಯಲ್ಲಿ ತನ್ನ ಪರವಾಗಿ ಹೈಕಮಾಂಡ್ ಬಳಿ ಬರುವಂತೆ ಹೆಬ್ಬಾಳ್ಕರ್‍ಗೆ ರಮೇಶ್ ಸೂಚನೆ ನೀಡಿದ್ದರು. ಆದರೆ ಅಷ್ಟರಲ್ಲಾಗಲೇ ಸನ್ನಿವೇಶ ಬದಲಾಗಿತ್ತು. ಇದಕ್ಕೆ ಕ್ಯಾರೆ ಎನ್ನದ ಹೆಬ್ಬಾಳ್ಕರ್ ಲಿಂಗಾಯತ ಮಹಿಳಾ ಕೋಟಾದಲ್ಲಿ ತಾನೇ ಮಂತ್ರಿಗಿರಿಯ ಆಕಾಂಕ್ಷಿ ಎನ್ನುವ ಮೂಲಕ ರಮೇಶ ಜಾರಕಿಹೊಳಿಗೆ ಟಾಂಗ್ ನೀಡಿದ್ದರು. ನಂತರ ಸಿದ್ದರಾಮಯ್ಯ ಪ್ರಭಾವದ ಕಾರಣ ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನ ಸಿಕ್ಕಿತ್ತು. ಇದಾದ ನಂತರ ರಮೇಶ ಜಾರಕಿಹೊಳಿ ಹಾಗೂ ಹೆಬ್ಬಾಳ್ಕರ್ ನಡುವಿನ ಸಂಬಂಧ ದಿನದಿಂದ ದಿನಕ್ಕೆ ಹಳಸಿದೆ. ವರ್ಗಾವಣೆ ವಿಚಾರಗಳಲ್ಲಿ ಇದು ಮತ್ತಷ್ಟು ವಿಕೋಪಕ್ಕೆ ಹೋಗಿದೆ. ಆದರೆ ಈ ಮುಸುಕಿನ ಜಗಳ ಬೀದಿಗೆ ಬರಲು ಕಾಣವಾಗಿದ್ದು ಮಾತ್ರ ಪಿಎಲ್‍ಡಿ ಬ್ಯಾಂಕ್ ಚುನಾವಣೆ.
ಪಿ ಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ ಗೆದ್ದಿದ್ದು ಯಾರು..?
ಜಾರಕಿಹೊಳಿ ಸಹೋದರರು ಮತ್ತು ಹೆಬ್ಬಾಳ್ಕರ್ ನಡುವೆ ಪೈಪೋಟಿಗೆ ಕಾರಣವಾಗಿದ್ದ ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಅಸಲಿಗೆ ಗೆದ್ದಿದ್ದು ಯಾರು? ತೀವ್ರ ಪ್ರತಿಷ್ಠೆ, ಜಿದ್ದಾಜಿದ್ದಿಗೆ ಕಾರಣವಾಗಿದ್ದ ಚುನಾವಣೆಯಲ್ಲಿ ಹೆಬ್ಬಾಳ್ಕರ್ ಗೆದ್ದು ಸೋತಂತಾಗಿದ್ದರೆ, ಜಾರಕಿಹೊಳಿ ಸಹೋದರರು ಸೋತ್ತು ಗೆದ್ದಂತಾಗಿದ್ದಾರೆ. ಹೀಗಾಗಲು ಪ್ರಮುಖ ಕಾರಣ ಶಾಸಕ ಸತೀಶ್ ಜಾರಕಿಹೊಳಿ ನಡೆಸಿದ ಮಾಸ್ಟರ್ ಪ್ಲ್ಯಾನ್. ಮೊದಲು ಸತೀಶ್ ಜಾರಕಿಹೊಳಿ ಬಲಗೈ ಭಂಟನಂತೆ ಇದ್ದ ಬಾಪುಗೌಡ ಪಾಟೀಲ್ ನಂತರ ಸತೀಶಗೆ ಕೈಕೊಟ್ಟು ಹೆಬ್ಬಾಳ್ಕರ್ ಗುಂಪು ಸೇರಿದ್ದರು. ಹೆಬ್ಬಾಳ್ಕರ್ ಗುಂಪಿನಿಂದ ಅಧ್ಯಕ್ಷರಾಗಲು ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿದ್ದರು. ಬಾಪುಗೌಡನ ಮಾತಿನಂತೆಯೆ ಹೆಬ್ಬಾಳ್ಕರ್ ಈ ಚುನಾವಣೆಯನ್ನು ಇಷ್ಟೊಂದು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದರು. ಆದರೇ ಹೆಬ್ಬಾಳ್ಕರ್ ಹಾಗೂ ಜಾರಕಿಹೊಳಿ ಸಂಧಾನದ ವೇಳೆಯಲ್ಲಿ ಸತೀಶ ಜಾರಕಿಹೊಳಿ ಇಟ್ಟ ಮೊದಲ ಬೇಡಿಕೆ ಬಾಪುಗೌಡರನ್ನು ಯಾವುದೇ ಕಾರಣಕ್ಕೂ ಅಧ್ಯಕ್ಷರನ್ನಾಗಿ ಮಾಡಬಾರದು ಅಂತ. ಇದಕ್ಕೆ ಅನಿವಾರ್ಯವಾಗಿ ಹೆಬ್ಬಾಳ್ಕರ್ ಒಪ್ಪಿಗೆ ಸೂಚಿಸಬೇಕಾಗಿ ನಂತರ ಮರಾಠ ಸಮುದಾಯದ 83 ವರ್ಷದ ವಯೋವೃದ್ಧ ಮಹಾದೇವ ಪಾಟೀಲ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಿ, ಜಾರಕಿಹೊಳಿ ಸಹೋದರರು ಸೋಲಿನಲ್ಲೂ ನಗೆ ಬೀರಿದ್ದರು. ಆದರೇ ಹೆಬ್ಬಾಳ್ಕರ್ ಗೆದ್ದು ಸಹ ಲಿಂಗಾಯತ ಸಮುದಾಯ ವ್ಯಕ್ತಿಗೆ ಅಧ್ಯಕ್ಷ ಸ್ಥಾನ ಕೊಡಿಸುವಲ್ಲಿ ವಿಫಲರಾಗಿದ್ದರು.
ಸೈಲೆಂಟ್ ಸತೀಶ್ ಮುಂದಿನ ನಡೆ ನಿಗೂಢ….!
ಇನ್ನೂ ಬೆಳಗಾವಿಯ ಪಿಎಲ್‍ಡಿ ಬ್ಯಾಂಕ್ ಚುನಾವಣೆಯನ್ನು ರಾಜ್ಯದ 6 ಕೋಟಿ ಕನ್ನಡಿಗರು ಮಾಧ್ಯಮಗಳ ಮೂಲಕ ವೀಕ್ಷಣೆ ಮಾಡಿದರು. ಒಂದು ಯಕಶ್ಚಿತ್ ಪಿಎಲ್‍ಡಿ ಬ್ಯಾಂಕ್ ಚುನಾವಣೆಯಿಂದಾಗಿ ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೇ ಕುತ್ತು ಬರಲಿದೆ ಎಂದೇ ಬಿಂಬಿಸಲಾಗಿತ್ತು. ಆದರೇ ಮೈತ್ರಿ ಸರ್ಕಾರದ ನಾಯಕರಿಗೆ ಹೇಗಾದರೂ ತಕ್ಷಣಕ್ಕೆ ಬೆಂಕಿ ಶಮನ ಆಗೋದುಬೇಕಿತ್ತು. ಹಾಗಾಗೀ ವಿವಾದ ಇತ್ಯರ್ಥ ಪಡಿಸಲಾಗಿದೆ. ಆದರೆ ಎಲ್ಲವೂ ಬೂದಿಮುಚ್ಚಿದ ಕೆಂಡದಂತಿದೆ. ಮುಂದೆ ಲೋಕಸಭೆ ಚುನಾವಣೆಯ ವೇಳೆಯಲ್ಲಿ ಸಂಘರ್ಷ ಏರ್ಪಡಲಿದೆ ಎಂದು ಸ್ವತಃ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಇನ್ನೂ ಶಾಸಕ ಸತೀಶ್ ಜಾರಕಿಹೊಳಿ ರಾಜಕಾರಣದಲ್ಲಿ ಎಂದಿಗೂ ಸೋಲು ಒಪ್ಪಿಕೊಳ್ಳದ ವ್ಯಕ್ತಿ. ಯಾವುದನ್ನು ಬಹಿರಂಗವಾಗಿ ಹೇಳಲ್ಲ. ಆದರೇ ಒಳಗೊಳಗೆ ಅನೇಕ ಮಾಸ್ಟರ್ ಪ್ಲ್ಯಾನ್ ಮಾಡುವುದು ಕರಗತವಾಗಿದೆ. ಸತೀಶ್ ಜಾರಕಿಹೊಳಿ ಮುಂದಿನ ನಡೆ ಏನು? ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಣಿಸುವ ನಿಟ್ಟಿನಲ್ಲಿ ಯಾವ ಪ್ಲ್ಯಾನ್ ಮಾಡಲಿದ್ದಾರೆ ಎಂಬುದು ಕಾದು ನೋಡಬೇಕು. ಇನ್ನೂ ಸತೀಶ ಜಾರಕಿಹೊಳಿ ಹಾಗೂ ಬಿಜೆಪಿ ಪ್ರಭಾವಿ ಶಾಸಕ ಉಮೇಶ ಕತ್ತಿ ಒಂದೇ ತಾಲೂಕಿನ ಎರಡು ಕ್ಷೇತ್ರಗಳಲ್ಲಿ ಶಾಸಕರಾಗಿ ಕೆಲಸ ಮಾಡುತ್ತಿದ್ದಾರೆ. ಆದರೇ ಒಮ್ಮೆಯೂ ಇಬ್ಬರ ನಡುವೆ ಪೈಪೋಟಿ ನಡೆದಿಲ್ಲ. ಎಂಥದೇ ಮಹತ್ವದ ವಿಚಾರವಿದ್ದರೂ ಇಬ್ಬರು ಒಟ್ಟಿಗೆ ಮಾತನಾಡಿ ಇತ್ಯರ್ಥ ಪಡಿಸಿಕೊಳ್ಳುತ್ತಾರೆ. ಆದರೇ ತಮ್ಮದೇ ಪಕ್ಷದ ಹೆಬ್ಬಾಳ್ಕರ್ ಜೊತೆ ಜಾರಕಿಹೊಳಿ ಸಹೋದರರಿಗೆ ಇಷ್ಟೋಂದು ವೈರತ್ವ ಯಾಕಾಗಿ? ಜಿಲ್ಲಾ ಕಾಂಗ್ರೆಸ್‍ನ ರಾಜಕೀಯ ಭವಿಷ್ಯದ ಮೇಲೆ ಇದು ಯಾವರೀತಿಯ ಪರಿಣಾಮ ಬೀರಲಿದೆ ಎಂಬುದೇ ಅಸಲಿ ಪ್ರಶ್ನೆ.

ಕೌಜಲಗಿ ಮುಗಿಸಲು ಹೆಬ್ಬಾಳ್ಕರ್ ದಾಳ?
ಅದು ದಶಕಗಳ ಹಿಂದಿನ ಮಾತು ಬೆಳಗಾವಿಯಲ್ಲಿ ಮಾಜಿ ಸಚಿವ ದಿ ವಿ.ಎಸ್ ಂಕೌಜಲಗಿ ದೊಡ್ಡ ಪ್ರಭಾವಿಯಾಗಿದ್ದರು. ಅವರನ್ನು ರಾಜಕೀಯವಾಗಿ ಮುಗಿಸಲು ಸ್ಕೆಚ್ ಹಾಕಿದ್ದು ಸತೀಶ ಜಾರಕಿಹೊಳಿ… ಆಗಲೇ ರಾಜಕೀಯದಲ್ಲಿ ಪ್ರಥಮ ಬಾರಿಗೆ ಸ್ಟ್ರಿಂಗ್ ಆಪರೇಷನ್ ನಡೆದಿತ್ತು. ಇದಕ್ಕೆ ಸತೀಶ ಜಾರಕಿಹೊಳಿ ಬಳಸಿಕೊಂಡಿದ್ದು ಇದೇ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನ ಅನ್ನೋ ಆರೋಪವಿದೆ.
ಈ ಸಿಡಿಯನ್ನು ಹೈಕಮಾಂಡ್ ಅಂಗಳಕ್ಕೆ ತಲುಪಿಸಿ, ನಂತರ ಕೌಜಲಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಡಲಾಗಿತ್ತು. ಆಗಲೇ ಜಾರಕಿಹೊಳಿ ಸಹೋದರರು ಹೆಬ್ಬಾಳ್ಕರ್ ಬಳಸಿಕೊಂಡು ದೊಡ್ಡ ತಂತ್ರ ಮಾಡಿ ಯಶಸ್ಸು ಗಳಿಸಿದ್ದರು. ಅರಬಾವಿ ಕ್ಷೇತ್ರದಿಂದ ಸತತವಾಗಿ ಗೆದ್ದಿದ್ದ ಕೌಜಲಗಿ ವಿರುದ್ಧವಾಗಿ ಸಹೋದರ ಬಾಲಚಂದ್ರ ಜಾರಕಿಹೊಳಿ ಅವರನ್ನು ಕಣಕ್ಕೆ ಇಳಿಸಿ ಸೋಲಿಸಿ ಕೌಜಲಗಿ ಅವರನ್ನು ರಾಜಕೀಯವಾಗಿ ಮುಗಿಸಿ ಹಾಕಿದ್ದರು ಎಂಬುದನ್ನು ಇಂದಿಗೂ ಜನ ಮರೆತಿಲ್ಲ.

 

– ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...