Homeಮುಖಪುಟಲಾಕ್‌ಡೌನ್‌ನಿಂದ ಮುಚ್ಚಿದ ಜನರಿಕ್‌ ಮಳಿಗೆಗಳು : ಬಡವರ ಕೈಗೆಟುಕದ ಜನೌಷಧಿ

ಲಾಕ್‌ಡೌನ್‌ನಿಂದ ಮುಚ್ಚಿದ ಜನರಿಕ್‌ ಮಳಿಗೆಗಳು : ಬಡವರ ಕೈಗೆಟುಕದ ಜನೌಷಧಿ

- Advertisement -
- Advertisement -

ಕೊರೊನ ವೈರಸ್ ಸೋಂಕು ಹರಡದಂತೆ ಲಾಕ್ ಡೌನ್ ಮಾಡಿದ ಮೇಲೆ ರಾಜ್ಯದಲ್ಲಿ ಜನರಿಕ್ ಮಳಿಗೆಗಳು ಮುಚ್ಚಿವೆ. ಔಷಧಿಗಳ ಪೂರೈಕೆಯಿಲ್ಲದೆ ಜನರಿಕ್ ಜನೌಷಧಿ ಮಳಿಗೆಗಳನ್ನು ಬಂದ್ ಮಾಡಿರುವುದರಿಂದ ದಿನ ಬಳಕೆಯ ಮಾತ್ರೆಗಳು ಸಿಗದೆ ರೋಗಿಗಳು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಡಿಮೆ ಬೆಲೆಗೆ ಜನರಿಕ್ ಜನೌಷಧಿ ಮಳಿಗೆಯಲ್ಲಿ ಕಡಿಮೆ ಬೆಲೆಗೆ ದೊರೆಯುತ್ತಿದ್ದ ಔಷಧಿಗಳನ್ನು ಖಾಗಸಿ ಮೆಡಿಕಲ್ ಸ್ಟೋರ್ ಗಳಲ್ಲಿ ದುಬಾರಿ ಬೆಲೆತೆತ್ತು ಖರೀದಿ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಕೂಸು ಜನರಿಕ್ ಜನೌಷಧಿ ಮಳಿಗೆಗಳು. ದೇಶಾದ್ಯಂತ ಕಡಿಮೆ ಅಂದರೆ ಮೂಲ ಬೆಲೆಗೆ ಕೊಡುವುದಾಗಿ ಘೋಷಿಸಿದ ಪ್ರಧಾನಿ ಜನರಿಕ್ ಜನೌಷಧಿ ಮಳಿಗೆಗಳನ್ನು ಆರಂಭಿಸಿದರು ಇಲ್ಲಿಯವರೆಗೂ ಜನರು ತಮಗೆ ಬೇಕಾದ ಅಗತ್ಯ ಮಾತ್ರೆಗಳನ್ನು ಈ ಮಳಿಗೆಗಳಲ್ಲಿ ಕಡಿಮೆ ಬೆಲೆಗೆ ಖರೀದಿಸಿ ರೋಗ ನಿಯಂತ್ರಣದಲ್ಲಿರುವಂತೆ ಕಾಪಾಡಿಕೊಂಡು ಬಂದಿದ್ದರು. ಕೈಗೆಟಕುವ ದರದಲ್ಲಿ ದೊರೆಯುತ್ತಿದ್ದ ಮಾತ್ರೆ ಗಳ ಲಾಕ್ ಡೌನ್ ಆದ ಮೇಲೆ ಪೂರೈಕೆ ಸಂಪೂರ್ಣ ಸ್ಥಗಿತವಾಗಿದೆ. ಇದರಿಂದ ಎಲ್ಲೆಡೆ ಜನೌಷಧಿ ಮಳಿಗೆಗಳನ್ನು ಮುಚ್ಚಲಾಗಿದೆ.

ರಾಜ್ಯದಲ್ಲಿ 524 ಜನರಿಕ್ ಜನೌಷಧಿ ಮಳಿಗೆಗಳಿವೆ ಎಂಬುದನ್ನು ಸರ್ಕಾರದ ಅಂಕಿಅಂಶ ದೃಡೀಕರಿಸುತ್ತವೆ. ಪ್ರತಿಯೊಂದು ಜಿಲ್ಲಾ ಹಾಗೂ ತಾಲೂಕು ಕೇಂದ್ರದಲ್ಲೂ ಮಳಿಗೆ ತೆರೆದು ಬಡವರಿಗೆ ಕಡಿಮೆ ಬೆಲೆಗೆ ಮಾತ್ರೆ ನೀಡಲಾಗುತ್ತಿದೆ. ಜಿಲ್ಲಾ ಕೇಂದ್ರದ ಜನಸಂಖ್ಯೆಯ ಆಧಾರದಲ್ಲಿ ಮಳಿಗೆ ತೆರೆದಿದ್ದು ಬೆಂಗಳೂರಿನಲ್ಲಿ ರಾಜ್ಯದ ಅರ್ಧದಷ್ಟು ಮಳಿಗೆಗಳಿವೆ ಎಂಬ ಅಂದಾಜಿದೆ. ಮಾರ್ಚ್ 23 ರಂದು ಲಾಕ್ ಡೌನ್ ಮಾಡಿದ ನಂತರ ಜನೌಷಧಿ ಕೇಂದ್ರಗಳಲ್ಲಿದ್ದ ಮಾತ್ರೆಗಳು ಖಾಲಿಯಾಗಿವೆ. ರಕ್ತದೊತ್ತಡ, ಮಧುಮೇಹ, ನೋವು ನಿವಾರಕ, ಜಾಂಡೀಸ್, ಹೃದಯ ಸಂಬಂಧಿ ಕಾಯಿಲೆಗಳಿಗೂ ಸೇರಿ 200 ಬಗೆಯ ಮಾತ್ರೆಗಳು ದೊರೆಯುತ್ತವೆ ಎಂದು ಸರ್ಕಾರವೇ ಹೇಳಿಕೊಂಡಿದೆ.

2016ರ ಅಂಕಿಅಂಶಗಳು ಹೇಳುವಂತೆ ರಾಜ್ಯದ 21 ಜಿಲ್ಲೆಗಳಲ್ಲಿ 200 ಜನರಿಕ್ ಜನೌಷಧಿ ಕೇಂದ್ರಗಳಿದ್ದವು.  ಇದರಲ್ಲಿ 147 ತಾಲೂಕು ಕೇಂದ್ರದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲೂ ಮಳಿಗೆಗಳನ್ನು ತೆರೆದು ರೋಗಿಗಳಿಗೆ ಅಗತ್ಯ ಮಾತ್ರೆಗಳನ್ನು ಪೂರೈಕೆ ಮಾಡಲಾಗುತ್ತಿತ್ತು. ಲಾಕ್ ಡೌನ್ ಪರಿಣಾಮ ಈ ಜನರಿಕ್ ಕೇಂದ್ರ ಗಳ ಮೇಲೆ ಬೀರಿದ್ದು ಮಾತ್ರೆಗಳು ದೊರೆಯುತ್ತಿಲ್ಲ ಎಂಬ ಆರೋಪ ವ್ಯಾಪಕವಾಗಿ ಕೇಳಿಬಂದಿದೆ.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಸಿಐಟಿಯು ಮುಖಂಡ ಸೈಯದ್ ಮುಜೀಬ್, ತುಮಕೂರು ಜಿಲ್ಲಾಸ್ಪತ್ರೆಯಲ್ಲಿರುವ ಮಳಿಗೆಯೂ ಸೇರಿದಂತೆ ಎಲ್ಲೆಡೆ ಜನರಿಕ್ ಮಳಿಗೆಗಳು ಮುಚ್ಚಿವೆ. ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ಜಿಲ್ಲಾ ಸರ್ಜನ್ ಜನರಿಕ್ ಮಳಿಗೆಗಳಿಗೆ ಮಾತ್ರೆಗಳು ಪೂರೈಕೆ ಆಗುತ್ತಿಲ್ಲ ಎಂದು ಹೇಳುತ್ತಾರೆ. ಬಡಕುಟುಂಬದ ರೋಗಿಗಳಿಗೆ ಅತ್ಯಂತ ಕಡಿಮೆ ಬೆಲೆಗೆ ದೊರೆಯುತ್ತಿದ್ದ ಮಾತ್ರೆಗಳೇ ಸಿಗುತ್ತಿಲ್ಲ ಹೀಗಾಗಿ ತುರ್ತು ಸೇವೆಗಳಡಿ ತಂದು ಜನರಿಕ್ ಮಳಿಗೆಗಳಿಗೆ ಕೂಡಲೇ ಮಾತ್ರೆಗಳನ್ನು ಪೂರೈಕೆ ಮಾಡಬೇಕು. ರೋಗಿಗಳಿಗೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಜನರಿಕ್ ಜನೌಷಧಿ ಮಳಿಗೆಗಳನ್ನು ಮುಚ್ಚಿ ಖಾಸಗಿ ಮೆಡಿಕಲ್ ಶಾಪ್‌ಗಳನ್ನು ತೆರೆದಿದ್ದು ಖಾಸಗಿಯವರ ಲಾಬಿಗೆ ಸರ್ಕಾರ ಮಣಿದಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಕೊರೊನ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿರುವ ನಡುವೆಯೇ ದಿನಬಳಕೆಯ ಮಾತ್ರೆಗಳು ದೊರೆಯದಿರುವುದರಿಂದ ರೋಗಿಗಳು ಖಾಸಗಿಯಾಗಿ ದುಬಾರಿ ವೆಚ್ಚ ಮಾಡಿ ಮಾತ್ರೆಗಳನ್ನು ಖರೀದಿಸಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಕೂಡಲೇ ಸರ್ಕಾರ ಮಧ್ಯೆ ಪ್ರವೇಶ ಮಾಡಿ ಜನರಿಕ್ ಜನೌಷಧಿ ಮಳಿಗೆಗಳಿಗೆ ಮಾತ್ರೆಗಳನ್ನು ಪೂರೈಕೆ ಮಾಡುವಂತೆ ಒತ್ತಾಯ ಕೇಳಿಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...