Homeಮುಖಪುಟಲಾಕ್‌ಡೌನ್‌ನಿಂದ ಮುಚ್ಚಿದ ಜನರಿಕ್‌ ಮಳಿಗೆಗಳು : ಬಡವರ ಕೈಗೆಟುಕದ ಜನೌಷಧಿ

ಲಾಕ್‌ಡೌನ್‌ನಿಂದ ಮುಚ್ಚಿದ ಜನರಿಕ್‌ ಮಳಿಗೆಗಳು : ಬಡವರ ಕೈಗೆಟುಕದ ಜನೌಷಧಿ

- Advertisement -
- Advertisement -

ಕೊರೊನ ವೈರಸ್ ಸೋಂಕು ಹರಡದಂತೆ ಲಾಕ್ ಡೌನ್ ಮಾಡಿದ ಮೇಲೆ ರಾಜ್ಯದಲ್ಲಿ ಜನರಿಕ್ ಮಳಿಗೆಗಳು ಮುಚ್ಚಿವೆ. ಔಷಧಿಗಳ ಪೂರೈಕೆಯಿಲ್ಲದೆ ಜನರಿಕ್ ಜನೌಷಧಿ ಮಳಿಗೆಗಳನ್ನು ಬಂದ್ ಮಾಡಿರುವುದರಿಂದ ದಿನ ಬಳಕೆಯ ಮಾತ್ರೆಗಳು ಸಿಗದೆ ರೋಗಿಗಳು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಡಿಮೆ ಬೆಲೆಗೆ ಜನರಿಕ್ ಜನೌಷಧಿ ಮಳಿಗೆಯಲ್ಲಿ ಕಡಿಮೆ ಬೆಲೆಗೆ ದೊರೆಯುತ್ತಿದ್ದ ಔಷಧಿಗಳನ್ನು ಖಾಗಸಿ ಮೆಡಿಕಲ್ ಸ್ಟೋರ್ ಗಳಲ್ಲಿ ದುಬಾರಿ ಬೆಲೆತೆತ್ತು ಖರೀದಿ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಕೂಸು ಜನರಿಕ್ ಜನೌಷಧಿ ಮಳಿಗೆಗಳು. ದೇಶಾದ್ಯಂತ ಕಡಿಮೆ ಅಂದರೆ ಮೂಲ ಬೆಲೆಗೆ ಕೊಡುವುದಾಗಿ ಘೋಷಿಸಿದ ಪ್ರಧಾನಿ ಜನರಿಕ್ ಜನೌಷಧಿ ಮಳಿಗೆಗಳನ್ನು ಆರಂಭಿಸಿದರು ಇಲ್ಲಿಯವರೆಗೂ ಜನರು ತಮಗೆ ಬೇಕಾದ ಅಗತ್ಯ ಮಾತ್ರೆಗಳನ್ನು ಈ ಮಳಿಗೆಗಳಲ್ಲಿ ಕಡಿಮೆ ಬೆಲೆಗೆ ಖರೀದಿಸಿ ರೋಗ ನಿಯಂತ್ರಣದಲ್ಲಿರುವಂತೆ ಕಾಪಾಡಿಕೊಂಡು ಬಂದಿದ್ದರು. ಕೈಗೆಟಕುವ ದರದಲ್ಲಿ ದೊರೆಯುತ್ತಿದ್ದ ಮಾತ್ರೆ ಗಳ ಲಾಕ್ ಡೌನ್ ಆದ ಮೇಲೆ ಪೂರೈಕೆ ಸಂಪೂರ್ಣ ಸ್ಥಗಿತವಾಗಿದೆ. ಇದರಿಂದ ಎಲ್ಲೆಡೆ ಜನೌಷಧಿ ಮಳಿಗೆಗಳನ್ನು ಮುಚ್ಚಲಾಗಿದೆ.

ರಾಜ್ಯದಲ್ಲಿ 524 ಜನರಿಕ್ ಜನೌಷಧಿ ಮಳಿಗೆಗಳಿವೆ ಎಂಬುದನ್ನು ಸರ್ಕಾರದ ಅಂಕಿಅಂಶ ದೃಡೀಕರಿಸುತ್ತವೆ. ಪ್ರತಿಯೊಂದು ಜಿಲ್ಲಾ ಹಾಗೂ ತಾಲೂಕು ಕೇಂದ್ರದಲ್ಲೂ ಮಳಿಗೆ ತೆರೆದು ಬಡವರಿಗೆ ಕಡಿಮೆ ಬೆಲೆಗೆ ಮಾತ್ರೆ ನೀಡಲಾಗುತ್ತಿದೆ. ಜಿಲ್ಲಾ ಕೇಂದ್ರದ ಜನಸಂಖ್ಯೆಯ ಆಧಾರದಲ್ಲಿ ಮಳಿಗೆ ತೆರೆದಿದ್ದು ಬೆಂಗಳೂರಿನಲ್ಲಿ ರಾಜ್ಯದ ಅರ್ಧದಷ್ಟು ಮಳಿಗೆಗಳಿವೆ ಎಂಬ ಅಂದಾಜಿದೆ. ಮಾರ್ಚ್ 23 ರಂದು ಲಾಕ್ ಡೌನ್ ಮಾಡಿದ ನಂತರ ಜನೌಷಧಿ ಕೇಂದ್ರಗಳಲ್ಲಿದ್ದ ಮಾತ್ರೆಗಳು ಖಾಲಿಯಾಗಿವೆ. ರಕ್ತದೊತ್ತಡ, ಮಧುಮೇಹ, ನೋವು ನಿವಾರಕ, ಜಾಂಡೀಸ್, ಹೃದಯ ಸಂಬಂಧಿ ಕಾಯಿಲೆಗಳಿಗೂ ಸೇರಿ 200 ಬಗೆಯ ಮಾತ್ರೆಗಳು ದೊರೆಯುತ್ತವೆ ಎಂದು ಸರ್ಕಾರವೇ ಹೇಳಿಕೊಂಡಿದೆ.

2016ರ ಅಂಕಿಅಂಶಗಳು ಹೇಳುವಂತೆ ರಾಜ್ಯದ 21 ಜಿಲ್ಲೆಗಳಲ್ಲಿ 200 ಜನರಿಕ್ ಜನೌಷಧಿ ಕೇಂದ್ರಗಳಿದ್ದವು.  ಇದರಲ್ಲಿ 147 ತಾಲೂಕು ಕೇಂದ್ರದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲೂ ಮಳಿಗೆಗಳನ್ನು ತೆರೆದು ರೋಗಿಗಳಿಗೆ ಅಗತ್ಯ ಮಾತ್ರೆಗಳನ್ನು ಪೂರೈಕೆ ಮಾಡಲಾಗುತ್ತಿತ್ತು. ಲಾಕ್ ಡೌನ್ ಪರಿಣಾಮ ಈ ಜನರಿಕ್ ಕೇಂದ್ರ ಗಳ ಮೇಲೆ ಬೀರಿದ್ದು ಮಾತ್ರೆಗಳು ದೊರೆಯುತ್ತಿಲ್ಲ ಎಂಬ ಆರೋಪ ವ್ಯಾಪಕವಾಗಿ ಕೇಳಿಬಂದಿದೆ.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಸಿಐಟಿಯು ಮುಖಂಡ ಸೈಯದ್ ಮುಜೀಬ್, ತುಮಕೂರು ಜಿಲ್ಲಾಸ್ಪತ್ರೆಯಲ್ಲಿರುವ ಮಳಿಗೆಯೂ ಸೇರಿದಂತೆ ಎಲ್ಲೆಡೆ ಜನರಿಕ್ ಮಳಿಗೆಗಳು ಮುಚ್ಚಿವೆ. ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ಜಿಲ್ಲಾ ಸರ್ಜನ್ ಜನರಿಕ್ ಮಳಿಗೆಗಳಿಗೆ ಮಾತ್ರೆಗಳು ಪೂರೈಕೆ ಆಗುತ್ತಿಲ್ಲ ಎಂದು ಹೇಳುತ್ತಾರೆ. ಬಡಕುಟುಂಬದ ರೋಗಿಗಳಿಗೆ ಅತ್ಯಂತ ಕಡಿಮೆ ಬೆಲೆಗೆ ದೊರೆಯುತ್ತಿದ್ದ ಮಾತ್ರೆಗಳೇ ಸಿಗುತ್ತಿಲ್ಲ ಹೀಗಾಗಿ ತುರ್ತು ಸೇವೆಗಳಡಿ ತಂದು ಜನರಿಕ್ ಮಳಿಗೆಗಳಿಗೆ ಕೂಡಲೇ ಮಾತ್ರೆಗಳನ್ನು ಪೂರೈಕೆ ಮಾಡಬೇಕು. ರೋಗಿಗಳಿಗೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಜನರಿಕ್ ಜನೌಷಧಿ ಮಳಿಗೆಗಳನ್ನು ಮುಚ್ಚಿ ಖಾಸಗಿ ಮೆಡಿಕಲ್ ಶಾಪ್‌ಗಳನ್ನು ತೆರೆದಿದ್ದು ಖಾಸಗಿಯವರ ಲಾಬಿಗೆ ಸರ್ಕಾರ ಮಣಿದಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಕೊರೊನ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿರುವ ನಡುವೆಯೇ ದಿನಬಳಕೆಯ ಮಾತ್ರೆಗಳು ದೊರೆಯದಿರುವುದರಿಂದ ರೋಗಿಗಳು ಖಾಸಗಿಯಾಗಿ ದುಬಾರಿ ವೆಚ್ಚ ಮಾಡಿ ಮಾತ್ರೆಗಳನ್ನು ಖರೀದಿಸಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಕೂಡಲೇ ಸರ್ಕಾರ ಮಧ್ಯೆ ಪ್ರವೇಶ ಮಾಡಿ ಜನರಿಕ್ ಜನೌಷಧಿ ಮಳಿಗೆಗಳಿಗೆ ಮಾತ್ರೆಗಳನ್ನು ಪೂರೈಕೆ ಮಾಡುವಂತೆ ಒತ್ತಾಯ ಕೇಳಿಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...