Homeನಿಜವೋ ಸುಳ್ಳೋಮೋದಿ ಕರೆಯಂತೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಸಹ ದೀಪ ಹಚ್ಚಿದ್ದರೆ? ಇಲ್ಲ ಇದು ಸುಳ್ಳು...

ಮೋದಿ ಕರೆಯಂತೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಸಹ ದೀಪ ಹಚ್ಚಿದ್ದರೆ? ಇಲ್ಲ ಇದು ಸುಳ್ಳು ಸುದ್ದಿ

- Advertisement -
- Advertisement -

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಅವರ ಕುಟುಂಬವು ತಮ್ಮ ನಿವಾಸದಲ್ಲಿ ದೀಪ ಹಚ್ಚಿ ಕುಳಿತಿರುವ ಚಿತ್ರವನ್ನು ಟೈಮ್ಸ್ ಆಫ್ ಇಂಡಿಯಾದ ಕೊಚ್ಚಿ ಆವೃತ್ತಿಯು ಇತ್ತೀಚೆಗೆ ತಮ್ಮ ಅಧಿಕೃತ ಟ್ವಿಟ್ಟರ್‌ ಹ್ಯಾಂಡಲ್‌ನಲ್ಲಿ ಟ್ವೀಟ್ ಮಾಡಿದೆ. COVID-19 ಸಾಂಕ್ರಾಮಿಕ ರೋಗವು ತಂದಿರುವ ಕತ್ತಲೆಯನ್ನು ಹೋಗಲಾಡಿಸಲು 2020 ರ ಏಪ್ರಿಲ್ 5 ರಂದು ರಾತ್ರಿ 9ಗಂಟೆಗೆ ಲೈಟ್‌ ಆರಿಸಿ ದೀಪ ಬೆಳಗಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರ ನೀಡಿದ ಕರೆಗೆ ಪಿಣರಾಯಿ ವಿಜಯನ್ ಭಾಗವಹಿಸುತ್ತಿದ್ದಾರೆ ಎಂದು ಆ ಟ್ವೀಟ್‌ಗೆ  ಶೀರ್ಷಿಕೆ ನೀಡಲಾಗಿದೆ.

ಅದೇ ರೀತಿ ಭಾರತೀಯ ಜನತಾ ಪಕ್ಷದ ತಮಿಳುನಾಡಿನ ಯುವ ವಿಭಾಗದ ಉಪಾಧ್ಯಕ್ಷ ಎಸ್.ಜಿ.ಸೂರ್ಯ ಅವರು ಪಿಣರಾಯಿ ವಿಜಯನ್ ಮತ್ತು ಪುದುಚೇರಿ ಮುಖ್ಯಮಂತ್ರಿ ವೇಲು ನಾರಾಯಣಸಾಮಿಯವರ ದೀಪ ಹಿಡಿದಿರುವ ಚಿತ್ರಗಳನ್ನು ಕೊಲಾಜ್‌ ಮಾಡಿ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.

“ಕೇವಲ ಈ ಎರಡು ಚಿತ್ರಗಳು ಪ್ರಧಾನ ಮಂತ್ರಿ ನರೇಂದ್ರಮೋಡಿಯವರ 9 ನಿಮಿಷಗಳು ದೀಪ ಹಚ್ಚುವ ಕರೆಯ ಯಶಸ್ಸನ್ನು ತೋರಿಸುತ್ತವೆ. ಕಮ್ಯುನಿಸ್ಟ್‌ನ ಏಕೈಕ ಸಿಎಂ ಕೇರಳ ಪಿಣರಾಯಿ ವಿಜಯನ್ ಮತ್ತು ಬಿಜೆಪಿಯ ತೀವ್ರ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಪಾಂಡಿಚೆರಿ ಸಿಎಂ ನಾರಾಯಣಸಾಮಿ ಇಂದು ಪ್ರಧಾನಿ ಮೋದಿ ಅವರೊಂದಿಗೆ ನಿಂತಿದ್ದಾರೆ! ಇದಕ್ಕಿಂತ ಬೇರೆ ಯಾವುದೂ ನಿಮಗೆ ಉತ್ತಮ ಕಥೆಯನ್ನು ಹೇಳುವುದಿಲ್ಲ!” ಎಂದು ಚಿತ್ರದ ಜೊತೆ ಅವರು ಬರೆದಿದ್ದಾರೆ.

ಆದರೆ ಈ ಎರಡು ಸುದ್ದಿಗಳು ಸಹ ಸುಳ್ಳು ಸುದ್ದಿಗಳಾಗಿವೆ. ಪಿಣರಾಯಿ ವಿಜಯನ್‌ ಮತ್ತು ನಾರಾಯಣಸಾಮಿಯವರು ಏಪ್ರಿಲ್‌ 5ರಂದು ತಮ್ಮ ನಿವಾಸಗಳ ದೀಪ ಆರಿಸಿ ಕ್ಯಾಂಡಲ್‌ ಹಚ್ಚಿದ್ದು ಬೇರೆಲ್ಲಿಯೂ ವರದಿಯಾಗಿಲ್ಲ ಎಂದು ಬೂಮ್‌ ಲೈವ್‌ ಫ್ಯಾಕ್ಟ್‌ಚೆಕ್‌ ನಡೆಸಿ ತಿಳಿಸಿದೆ.

ಈ ವಿಚಾರದ ಕುರಿತು ಬಿಜೆಪಿಯ ಎಸ್‌.ಜಿ ಸೂರ್ಯರನ್ನು ನುರಾರು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಸುಳ್ಳು ಸುದ್ದಿಗಳನ್ನು ಪ್ರಕಟಿಸುವ ಮುನ್ನವೇ ಪರಿಶೀಲಿಸಬೇಕು ಎನ್ನುವ ಕಾಮನ್ ಸೆನ್ಸ್‌ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ಅವರು ನಾನು ಕೊಚ್ಚಿಯ ಟೈಮ್ಸ್‌ ಆಫ್‌ ಇಂಡಿಯಾದ ವರದಿಯನ್ನು ಟ್ವೀಟ್‌ ಮಾಡಿದ್ದೇನೆ. ಅದು ತಪ್ಪಾಗಿದ್ದರೆ ನೀವು ನನ್ನನ್ನು ದೂರಬೇಡಿ, ಟೈಮ್ಸ್‌ ಆಫ್‌ ಇಂಡಿಯಾವನ್ನು ದೂರಿ ಎಂದು ಜಾರಿಕೊಳ್ಳಲು ಪ್ರಯತ್ನಿಸಿದ್ದಾರೆ. ಇನ್ನೊಂದು ಕಡೆ ಟೈಮ್ಸ್‌ ಆಫ್‌ ಇಂಡಿಯಾ ಆ ಚಿತ್ರವನ್ನು ಡಿಲಿಟ್‌ ಮಾಡಿದೆ.

ಪಿಣರಾಯಿ ವಿಜಯನ್‌ರವರ ಫೋಟೊದ ಕೀವರ್ಡ್‌ ಆಧಾರದಲ್ಲಿ ರಿವರ್ಸ್‌ ಸರ್ಚ್‌ ಮಾಡಿದಾಗ ಅದು 2018ರ ಫೋಟೊ ಎಂದು ಕಂಡುಬಂದಿದೆ. ಕ್ಲಿಫ್ ಹೌಸ್ ಎಂದು ಕರೆಯಲ್ಪಡುವ ತನ್ನ ಅಧಿಕೃತ ನಿವಾಸದ ವರಾಂಡಾದಲ್ಲಿ ವಿಜಯನ್‌ರವರು ತನ್ನ ಹೆಂಡತಿ, ಮಗಳು ಮತ್ತು ಮೊಮ್ಮಗನೊಂದಿಗೆ ಕುಳಿತಿರುವ ಚಿತ್ರ ಇದಾಗಿದೆ.

2018ರಲ್ಲಿ ಅರ್ಥ್‌ ಅವರ್‌ ಎಂಬ ಕಾರ್ಯಕ್ರಮ ನಡೆದಾಗ ತೆಗೆದ ಚಿತ್ರ ಅದಾಗಿದ್ದು ಈ ಚಿತ್ರವನ್ನು ಮಾರ್ಚ್ 25, 2018 ರಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಕೇರಳ ಆವೃತ್ತಿಯು ಪ್ರಕಟಿಸಿದೆ. ಶೀರ್ಷಿಕೆಯು “ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಪತ್ನಿ ಕಮಲಾ, ಮಗಳು ವೀಣಾ ಮತ್ತು ಮೊಮ್ಮಗ ಇಶಾನ್  ಅರ್ಥ್ ಅವರ್‌ ಪ್ರಯುಕ್ತ ಮೇಣದಬತ್ತಿಯ ಬೆಳಕಿನಲ್ಲಿ ಕುಳಿತುಕೊಳ್ಳುತ್ತಾರೆ ಎಂದು ಬರೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...