Homeನಿಜವೋ ಸುಳ್ಳೋFact check: ಕೇಂದ್ರ ಸರ್ಕಾರ ನಮ್ಮ ಮೊಬೈಲ್‌ಗಳನ್ನು ಮೇಲ್ವಿಚಾರಣೆ ಮಾಡುತ್ತಿದೆಯೇ?

Fact check: ಕೇಂದ್ರ ಸರ್ಕಾರ ನಮ್ಮ ಮೊಬೈಲ್‌ಗಳನ್ನು ಮೇಲ್ವಿಚಾರಣೆ ಮಾಡುತ್ತಿದೆಯೇ?

2019 ರ ವರದಿಯು ಫೇಸ್‌ಬುಕ್ ಮೆಸೆಂಜರ್, ಸಿಗ್ನಲ್, ವಾಟ್ಸಾಪ್ ಮತ್ತು ಟೆಲಿಗ್ರಾಮ್ ನೀಡುವ ಸುರಕ್ಷತೆಯನ್ನು ಹೋಲಿಸಿದಾಗ ನಾಲ್ಕು ಅಪ್ಲಿಕೇಶನ್‌ಗಳಲ್ಲಿ ಸಿಗ್ನಲ್ ಎಂಬ ಆಪ್ ಅತ್ಯುನ್ನತ ಗುಣಮಟ್ಟದ ಭದ್ರತೆಯನ್ನು ಹೊಂದಿದೆ.

- Advertisement -
- Advertisement -

ಭಾರತ ಸರ್ಕಾರವು ಎಲ್ಲಾ ರೀತಿಯ ಆನ್‌ಲೈನ್ ಮತ್ತು ದೂರವಾಣಿ ಸಂವಹನಗಳನ್ನು ಮೇಲ್ವಿಚಾರಣೆ ಮಾಡುತ್ತಿದೆ ಮತ್ತು ರಾಜಕೀಯ ಅಥವಾ ಧರ್ಮಕ್ಕೆ ಸಂಬಂಧಿಸಿದ ಸಂದೇಶಗಳನ್ನು ರವಾನಿಸದಂತೆ ಜನರನ್ನು ಕೇಳಿದೆ ಎಂದು ವಾಟ್ಸಾಪ್ ಸಂದೇಶವೊಂದು ವೈರಲ್ ಆಗಿದ್ದು “ಅಲ್ಟ್ ನ್ಯೂಸ್” ಇದರ ಬಗ್ಗೆ ಫ್ಯಾಕ್ಟ್ ಚೆಕ್ ನಡೆಸಿದೆ.

ವೈರಲ್ ಸಂದೇಶಗಳು ಹೀಗಿವೆ “ನಾಳೆಯಿಂದ ಭಾರತದಲ್ಲಿ ಹೊಸ ಸಂವಹನ ನಿಯಮಗಳಿವೆ. ಎಲ್ಲಾ ಕರೆಗಳನ್ನು ದಾಖಲಿಸಲಾಗುತ್ತದೆ, ಎಲ್ಲಾ ಫೋನ್ ಕರೆ ರೆಕಾರ್ಡಿಂಗ್‌ಗಳನ್ನು ಉಳಿಸಲಾಗತ್ತದೆ, ವಾಟ್ಸಾಪ್, ಟ್ವಿಟರ್, ಫೇಸ್‌ಬುಕ್, ಹಾಗೂ ಎಲ್ಲಾ ಸಾಮಾಜಿಕ ಮಾಧ್ಯಮಗಳನ್ನು ಮೇಲ್ವಿಚಾರಣೆ ಮಾಡಲಾಗುತ್ತದೆ. ನಿಮ್ಮ ಸಾಧನಗಳು ಸಚಿವಾಲಯ ವ್ಯವಸ್ಥೆಗಳಿಗೆ ಸಂಪರ್ಕ ಹೊಂದಿವೆ. ಯಾವುದೇ ಪೋಸ್ಟ್‌ಗಳು ಅಥವಾ ವೀಡಿಯೊಗಳನ್ನು ಫಾರ್ವರ್ಡ್ ಮಾಡಬೇಡಿ, ಸರ್ಕಾರ / ಪ್ರಧಾನಿ ಇತ್ಯಾದಿಗಳ ಬಗ್ಗೆ ರಾಜಕೀಯ / ಪ್ರಸ್ತುತ ಪರಿಸ್ಥಿತಿಯ ಬಗ್ಗೆ ನೀವು ಸ್ವೀಕರಿಸುತ್ತೀರಿ. ಯಾವುದೇ ರಾಜಕೀಯ ಮತ್ತು ಧಾರ್ಮಿಕ ಚರ್ಚೆಯಲ್ಲಿ ಯಾವುದೇ ಸಂದೇಶವನ್ನು ಬರೆಯುವುದು ಅಥವಾ ರವಾನಿಸುವುದು ಈಗ ಅಪರಾಧ …. ವಾರಂಟ್ ಇಲ್ಲದೆ ಬಂಧನ …ಇದು ತುಂಬಾ ಗಂಭೀರವಾಗಿದೆ. ಅನಗತ್ಯ ಸಂದೇಶಗಳನ್ನು ಕಳುಹಿಸದಂತೆ ನೋಡಿಕೊಳ್ಳಿ. ಕಾಳಜಿ ವಹಿಸಲು ಈ ಬಗ್ಗೆ ಎಲ್ಲರಿಗೂ ತಿಳಿಸಿ. ನಿಮ್ಮ ಸ್ನೇಹಿತರು ಮತ್ತು ಇತರರಿಗೆ ತಿಳಿಸಿ”

ಈ ಮಾಹಿತಿ ಹರಡುತ್ತಿದ್ದಂತೆ ವಾಟ್ಸಪ್ ಗಳಲ್ಲಿ ಸಂದೇಶವನ್ನು ಕೇವಲ ಅಡ್ಮಿನ್‌ಗಳು ಮಾತ್ರ ಹಾಕುವಂತೆ ಮಾಡಲಾಗಿತ್ತು. ಹಲವರು ಇದು ಸಂವಿಧಾನ ವಿರೋಧಿಯಾದ್ದು ಜನರ ಅಭಿವ್ಯಕ್ತಿಯನ್ನು ಹತ್ತಿಕ್ಕಲು ಸರ್ಕಾರಕ್ಕೆ ಯಾವುದೇ ಹಕ್ಕಿಲ್ಲವೆಂದು ವಾದಿಸಿದ್ದರೂ ಸುಳ್ಳು ಸಂದೇಶ ನಿರಂತರವಾಗಿ ಹರಡಲಾಗುತ್ತಿತ್ತು.

ಮಾರ್ಚ್ 24 ರಂದು, ಪ್ರೆಸ್ ಇನ್ಫಾರ್ಮೇಷನ್ ಬ್ಯೂರೋ “ಅಂತಹ ಯಾವುದೇ ಕೆಲಸವನ್ನು ಸರ್ಕಾರ ಮಾಡುತ್ತಿಲ್ಲ” ಎಂಬ ಸಂದೇಶವನ್ನು ಟ್ವಿಟರ್ ಮೂಲಕ ಹೇಳಿತ್ತು.

ವಾಟ್ಸಾಪ್‌ನಲ್ಲಿ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ (E2EE) ಎಂಬ ವಿಷಯವಿದೆ, ಇದರರ್ಥ “ನೀವು ಮತ್ತು ನೀವು ಸಂವಹನ ನಡೆಸುತ್ತಿರುವ ವ್ಯಕ್ತಿ ಮಾತ್ರ ಕಳುಹಿಸಿದದನ್ನು ಓದಬಹುದು. ಇದರ ನಡುವೆ ಯಾರೂ ಇರುವುದಿಲ್ಲ, ವಾಟ್ಸಾಪ್ ಕೂಡಾ ಓದುವುದಿಲ್ಲ”. ನೀವು ಸಂದೇಶ ಕಳುಹಿಸಿರುವ ವ್ಯಕ್ತಿ ನಿಮ್ಮ ಸಂಭಾಷಣೆಯ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಳ್ಳದ ಹೊರತು ಹಾಗೂ ಅಥವಾ ನಿಮ್ಮ ಮೊಬೈಲ್ ಸುರಕ್ಷತೆಯಲ್ಲಿ ಉಲ್ಲಂಘನೆಯಾಗದಿದ್ದರೆ E2EE ಸಂಭಾಷಣೆಗಳು ಖಾಸಗಿಯಾಗಿರುತ್ತವೆ.

ಫೇಸ್‌ಬುಕ್ ಮೆಸೆಂಜರ್ ನಲ್ಲಿ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ಅನ್ನು ಸಕ್ರಿಯಗೊಳಿಸಿ ಬರುವುದಿಲ್ಲ. ಆದರೆ ಇದು ‘ರಹಸ್ಯ ಸಂಭಾಷಣೆ’ ಎಂಬ ವೈಶಿಷ್ಟ್ಯವನ್ನು ಹೊಂದಿದೆ, ಅದು ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ನಂತೆಯೇ ಕೆಲಸ ಮಾಡುತ್ತದೆ. ಅಂತೆಯೇ, ಟ್ವಿಟರ್ ತನ್ನ ನೇರ ಸಂದೇಶಗಳಿಗಾಗಿ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ಹೊಂದಿಲ್ಲ. 2018 ರ ಟೆಕ್ ಕ್ರಂಚ್ ವರದಿಯ ಪ್ರಕಾರ, ಟ್ವಿಟರ್ ಫೇಸ್‌ಬುಕ್‌ನ ರಹಸ್ಯ ಸಂಭಾಷಣೆಯನ್ನು ಹೋಲುವ ವೈಶಿಷ್ಟ್ಯವನ್ನು ಹೊಂದಲು ಪರೀಕ್ಷೆಗಳನ್ನು ನಡೆಸುತ್ತಿದೆ.

ಎಲ್ಲಾ E2EE ಮೆಸೇಜಿಂಗ್ ಅಪ್ಲಿಕೇಶನ್‌ಗಳು ಒಂದೇ ರೀತಿ ಇರುವುದಿಲ್ಲ. ಟೆಕ್ ಬ್ಲಾಗ್ ಆದ ಟಾಮ್ಸ್ ಗೈಡ್, ಆಂಡ್ರಾಯ್ಡ್ ಅಥವಾ iOS ಆಗಿ ಲಭ್ಯವಿರುವ ವಿವಿಧ E2EE ಅಪ್ಲಿಕೇಶನ್ಗಳನ್ನು ಪಟ್ಟಿ ಮಾಡಿದೆ. ಯುಎಸ್ ಮೂಲದ ಎಂಗಡ್ಜೆಟ್ ಎಂಬ ಟೆಕ್ ನ್ಯೂಸ್ ವೆಬ್‌ಸೈಟ್  2019 ರ ವರದಿಯು ಫೇಸ್‌ಬುಕ್ ಮೆಸೆಂಜರ್, ಸಿಗ್ನಲ್, ವಾಟ್ಸಾಪ್ ಮತ್ತು ಟೆಲಿಗ್ರಾಮ್ ನೀಡುವ ಸುರಕ್ಷತೆಯನ್ನು ಹೋಲಿಸಿದಾಗ ನಾಲ್ಕು ಅಪ್ಲಿಕೇಶನ್‌ಗಳಲ್ಲಿ ಸಿಗ್ನಲ್ ಎಂಬ ಆಪ್ ಅತ್ಯುನ್ನತ ಗುಣಮಟ್ಟದ ಭದ್ರತೆಯನ್ನು ಹೊಂದಿದೆ.

ಇದಕ್ಕೂ ಮೊದಲು ವಾಟ್ಸಪ್ಪಿನಲ್ಲಿ, ಫೋನ್ ಸಂಭಾಷಣೆಯ ಆಡಿಯೊ ಕ್ಲಿಪ್ ವೈರಲ್ ಆಗಿದ್ದು, ಜೂನ್ 15 ರವರೆಗೆ ಭಾರತದಲ್ಲಿ ಲಾಕ್ ಡೌನ್ ಮಾಡಲು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಶಿಫಾರಸು ಮಾಡಿದೆ ಎಂದು ತಪ್ಪಾಗಿ ಸಂದೇಶ ಹರಡಲಾಗಿತ್ತು.


ಇದನ್ನೂ ಓದಿ: ವಿಶ್ವ ಆರೋಗ್ಯ ಸಂಸ್ಥೆಯ ಪ್ರೋಟೋಕಾಲ್ ಪ್ರಕಾರ ಲಾಕ್‌ಡೌನ್‌ ಜೂನ್‌ವರೆಗೂ ವಿಸ್ತರಣೆಯೆಂಬುದು ಸುಳ್ಳು ಸುದ್ದಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...