Homeಕರ್ನಾಟಕ'ಗಂಗಮ್ಮ' ಸಾವಿನ ಹೊಣೆಯನ್ನು ರಾಜ್ಯ ಸರ್ಕಾರವೂ ಹೊರಬೇಕು: ಕುಮಾರಸ್ವಾಮಿ

‘ಗಂಗಮ್ಮ’ ಸಾವಿನ ಹೊಣೆಯನ್ನು ರಾಜ್ಯ ಸರ್ಕಾರವೂ ಹೊರಬೇಕು: ಕುಮಾರಸ್ವಾಮಿ

- Advertisement -
- Advertisement -

ಬೆಂಗಳೂರಿನಿಂದ ತನ್ನ ಊರಾದ ಸಿಂಧನೂರಿಗೆ ಕಾಲ್ನಡಿಗೆಯಿಂದ ಹೊರಟು ಬಳಲಿ ಮೃತಪಟ್ಟ ಕಾರ್ಮಿಕ ಮಹಿಳೆ ಗಂಗಮ್ಮ ಅವರ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ದ್ವನಿಯೆತ್ತಿದ್ದಾರೆ.

ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಗಂಗಮ್ಮ ತನ್ನ ಊರಾದ ರಾಯಚೂರಿನ ಸಿಂಧನೂರಿಗೆ ಹೊರಟಿದ್ದರು. ಇವರನ್ನು ದುಡಿಸುತ್ತಿದ್ದ ಗುತ್ತಿಗೆಗಾರ ಅವರು ದುಡಿದ ಹಣವನ್ನು ಕೊಡದ ಹಿನ್ನಲೆಯಲ್ಲಿ ಅವರು ನಡೆದುಕೊಂಡೆ ಅನ್ನ ನೀರಿಲ್ಲದೆ ಮೂರು ದಿನಗಳ ಕಾಲ ತನ್ನ ಊರಿಗೆ ಹೊರಟಿದ್ದ ವೇಳೆ ಅವರು ಸಾವನಪ್ಪಿದ್ದಾರೆ.

ಈ ಕುರಿತು ಕುಮಾರಸ್ವಾಮಿ ಅವರು “ಹುಟ್ಟೂರು ಸೇರಬೇಕೆಂಬ ಆಸೆಯೊಂದಿಗೆ ಹಸಿವಿನಲ್ಲೇ ರಾಯಚೂರಿನತ್ತ ಹೆಜ್ಜೆ ಹಾಕುತ್ತಿದ್ದ ಕಟ್ಟಡ ಕಾರ್ಮಿಕ ಮಹಿಳೆ ಗಂಗಮ್ಮ ಮಾರ್ಗ ಮಧ್ಯೆ ಅನ್ನಾಹಾರವಿಲ್ಲದೆ, ಸಕಾಲಕ್ಕೆ ಚಿಕಿತ್ಸೆ ಸಿಗದೇ ಮೃತಪಟ್ಟರೆಂಬ ಸುದ್ದಿ ತೀವ್ರ ನೋವುಂಟುಮಾಡಿತು” ಎಂದು ಸಂತಾಪ ವ್ಯಕ್ತ ಪಡಿಸಿದ್ದಾರೆ.


ಇದನ್ನೂ ಓದಿ: ಮಾಧ್ಯಮಗಳೇ, ಧರ್ಮವೀರರೇ ಗಂಗಮ್ಮನ ಸಾವಿನ ಹೊಣೆಯನ್ನು ನೀವೂ ಹೊರಬೇಕಲ್ಲವೇ?


“ಗಂಗಮ್ಮ ಅವರ ಈ ಪ್ರಕರಣ ವಲಸೆ ಕಾರ್ಮಿಕರು, ಕೂಲಿಕಾರ್ಮಿಕರ ಬದುಕನ್ನು ಸಾಕ್ಷಿಕರಿಸುವಂತಿದೆ. ಈ ಪ್ರಕರಣದಲ್ಲಿ ಕೂಲಿ ನೀಡದ ಗುತ್ತಿಗೆದಾರನೊಬ್ಬನದ್ದೇ ತಪ್ಪಿಲ್ಲ, ಸರ್ಕಾರದ್ದೂ ತಪ್ಪಿದೆ. ಕಾರ್ಮಿಕರ ಇಲಾಖೆಯಲ್ಲಿ 8000 ಕೋಟಿ ಹಣವಿದೆ. ಆದರೆ ಇಂಥವರಿಗೆ ವಿನಿಯೋಗವಾಗುತ್ತಿಲ್ಲವೇಕೆ? ಗಂಗಮ್ಮರನ್ನು ಬಳ್ಳಾರಿ ಜಿಲ್ಲಾಡಳಿತ ನಿರಾಶ್ರಿತರ ಕ್ಯಾಂಪ್‌ನಲ್ಲಿ ಇರಿಸಿತ್ತಂತೆ. ಕ್ಯಾಂಪ್‌ನಲ್ಲಿದ್ದೂ ಆಕೆಗೆ ಆಹಾರ, ಚಿಕಿತ್ಸೆ ಸಿಗಲಿಲ್ಲ ಏಕೆ?” ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

“ಲಾಕ್‌ಡೌನ್‌ ಮಧ್ಯಮ ವರ್ಗ ಮತ್ತು ಶ್ರೀಮಂತರನ್ನು ಮನೆಯಲ್ಲಿ ಬಂಧಿಸಿಟ್ಟಿರಬಹುದು. ಆದರೆ, ಕೂಲಿಕಾರ್ಮಿಕರನ್ನು, ವಲಸಿಗರನ್ನು ಬೀದಿಗೆ ತಳ್ಳಿದೆ. ಸರ್ಕಾರ ಕೂಡಲೇ ಇಂಥವರ ಕಡೆಗೂ ಗಮನ ಹರಿಸಬೇಕು. ದೂರದೂರುಗಳಿಗೆ ಹೆಜ್ಜೆ ಹಾಕಿರುವವರ ಬದುಕು ಬವಣೆನ್ನು ನೋಡಬೇಕು. ಮೃತ ಗಂಗಮ್ಮನ ಕುಟುಂಬಕ್ಕೆ ಪರಿಹಾರ ನೀಡಬೇಕು” ಎಂದು ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

“ವಿದೇಶದಿಂದ ಬಂದ ಸೋಂಕು ಅತ್ತ ಸಾವಿರಾರು ಸಂಖ್ಯೆಯಲ್ಲಿ ಜನರನ್ನು ಬಾಧಿಸುತ್ತಿದೆ. ಇತ್ತ, ದೇಶದ ಅಭಿವೃದ್ಧಿಗೆ ಹೆಗಲಾದವರು, ದೇಶ ಕಟ್ಟಿದವರು, ಕಟ್ಟುವ ಕೆಲಸಕ್ಕೆ ಮಣ್ಣು, ಕಲ್ಲು, ಇಟ್ಟಿಗೆ ಹೊತ್ತವರು ತಾವು ಮಾಡದ ತಪ್ಪಿಗೆ ಅನ್ನಾಹಾರಗಳಿಲ್ಲದೇ ಸಾವಿಗೆ ಶರಣಾಗುತ್ತಿರುವುದು ವಿಧಿಯ ಕ್ರೂರ ವ್ಯಂಗ್ಯ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...