Homeಕರ್ನಾಟಕಸುಳ್ಳು ಸುದ್ದಿಗಳ ವಿರುದ್ಧ ಎಚ್ಚರಿಕೆ ಕೊಟ್ಟ ಯಡಿಯೂರಪ್ಪ ಅವರ ಹೇಳಿಕೆಗೆ ಟ್ವಿಟ್ಟರಿನಲ್ಲಿ ಪರ ವಿರೋಧದ ಟ್ರೆಂಡ್

ಸುಳ್ಳು ಸುದ್ದಿಗಳ ವಿರುದ್ಧ ಎಚ್ಚರಿಕೆ ಕೊಟ್ಟ ಯಡಿಯೂರಪ್ಪ ಅವರ ಹೇಳಿಕೆಗೆ ಟ್ವಿಟ್ಟರಿನಲ್ಲಿ ಪರ ವಿರೋಧದ ಟ್ರೆಂಡ್

- Advertisement -
- Advertisement -

ಕೊರೊನಾ ವೈರಸನ್ನು ಮುಸ್ಲಿಮರು ಹರಡುತ್ತಿದ್ದಾರೆ ಎಂದು ಅಪಪ್ರಚಾರ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು  ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನಿನ್ನೆ ಎಚ್ಚರಿಕೆ ಕೊಟ್ಟಿರುವುದು ಭಾರಿ ವಾದ ಪ್ರತಿವಾದಗಳಿಗೆ ಎಡೆಮಾಡಿಕೊಟ್ಟಿದೆ.

ನಿನ್ನೆಯಿಂದ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆಗಳಾಗುತ್ತಿದ್ದು, ಈಗ ಟ್ವಿಟ್ಟರಿನಲ್ಲಿ ಯಡಿಯೂರಪ್ಪ ಅವರ ಹೇಳಿಕೆಯನ್ನು ಬೆಂಬಲಿಸಿ ಹಾಗೂ ವಿರೋಧಿಸುವ ಪೋಸ್ಟುಗಳು ಟ್ರೆಂಡ್ ಆಗುತ್ತಿವೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇನ್ನೊಂದು ಚಾನಲ್ ಜತೆ ಮಾತಾಡಿದಾಗಲೂ ಅದದೇ ಶಬ್ದಗಳನ್ನೂ, ಖಡಕ್ಕಾಗಿ, ಸ್ಪಷ್ಟವಾಗಿ ಹೇಳಿದ್ದಾರೆ. ಇದರಲ್ಲೂ…

Posted by Dinesh Kumar Dinoo on Monday, April 6, 2020

ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬೆಂಬಲಿಸಿ ಹಲವರು ಟ್ವೀಟ್ ಮಾಡಿದ್ದು, ಮುಖ್ಯಮಂತ್ರಿಗಳು ಮಾಡಿದ್ದು ಸರಿಯಾಗಿಯೆ ಇದೆ, ಒಂದು ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ರಾಜಧರ್ಮ ಪಾಲಿಸಿದ್ದಾರೆ ಎಂದು #WeStandWithBSY ಎಂಬ ಹ್ಯಾಶ್ ಟ್ಯಾಗ್ ಬಳಸಿ ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಸರೇಶ್ ಕುಮಾರ್. ಜಿ. ಆರ್ ಎನ್ನುವ ಟ್ವಿಟ್ಟರ್ ಹ್ಯಾಂಡೆಲ್ ನಿಂದ “ರಾಷ್ಟ್ರಕವಿ ಕುವೆಂಪುರವರ ವಿಶ್ವಮಾನವ ಸಂದೇಶವನ್ನ ಅರ್ಥ ಆಗುವ ರೀತಿಯಲ್ಲಿ ಮಾಧ್ಯಮಗಳಿಗೆ ಬೆವರಿಳಿಸಿದ, ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಎಂದು ತೋರಿಸಿರುವ ಯಡಿಯೂರಪ್ಪ ಜೊತೆ ಜೊತೆ ನಾವಿದ್ದೇವೆ” ಎಂದು ಟ್ವೀಟ್ ಮಾಡಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು “ಕೊರೊನಾ ಹಾವಳಿಗೆ ಜಾತಿ-ಧರ್ಮಗಳ ಬಣ್ಣಹಚ್ಚಿ ಸಮಾಜವನ್ನು ಒಡೆಯುವ ಕೆಲಸವನ್ನು ಕೆಲವರು, ಸುಳ್ಳು ಸುದ್ದಿ,ತಿರುಚಿದ ವಿಡಿಯೋ ತುಣುಕುಗಳ ಮೂಲಕ ಮಾಡುತ್ತಿದ್ದಾರೆ. ಇಂತಹವರ ಬಗ್ಗೆ ಯಡಿಯೂರಪ್ಪನವರು ಖಡಕ್ ಎಚ್ಚರಿಕೆ ನೀಡಿರುವುದನ್ನು ನಾನು ಸ್ವಾಗತಿಸಿ ಬೆಂಬಲಿಸುತ್ತೇನೆ. ಅವರು ನುಡಿದಂತೆ ನಡೆಯ ಬೇಕೆಂದು ಆಗ್ರಹಿಸುತ್ತೇನೆ” ಎಂದು ಇಂದು ಮಧ್ಯಾಹ್ನ ಟ್ವೀಟ್‌ ಮಾಡಿದ್ದರು.

ನಮ್ಮ ರಾಹುಲ್ ಎನ್ನುವ ಟ್ವಿಟ್ಟರ್ ಹ್ಯಾಂಡಲ್ “ಕೊರೋನಾ ಸೋಂಕಿನ ಜೊತೆ ಕೋಮುವಾದದ ಸೋಂಕನ್ನು ಅಂಟಿಸಬೇಡಿ ಎಂಬ ಹೇಳಿಕೆ ನೀಡಿದ ಯಡಿಯೂರಪ್ಪನವರಿಗೆ ಅಭಿನಂದನೆಗಳು. ಅನ್ಯ ಕೆಲವು ಭಾಜಪ ಮುಖಂಡರಗಳು ಇದನ್ನು ನೋಡಿ ಕಲಿಯಲಿ. ಬನ್ನಿ ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಡೋಣ” ಎನ್ನುವ ಟ್ವಿಟ್ಟರ್ ಹಾಕಿ ದಿನೇಶ್ ಗುಂಡುರಾವ್ ಮಾತು ಎಂದು ಹೇಳಿ ಯಡಿಯೂರಪ್ಪರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಪ್ರತೀಕ್ ಗುಪ್ತ ಎಂಬವರು “ನಾನು ಬಿಜೆಪಿಯ ಮುಖ್ಯಮಂತ್ರಿಯೊಬ್ಬರ ಪರವಾಗಿ ನಿಲ್ಲುತ್ತೇನೆ ಎಂದು ಭಾವಿಸಿಯೇ ಇರಲಿಲ್ಲ” ಎಂದು ಟ್ವೀಟ್ ಮಾಡುತ್ತಿದ್ದಾರೆ.

ಸಂಘ ಪರಿವಾರವು ಮುಸ್ಲಿಮರ ಬಗ್ಗೆ ದ್ವಂದ್ವ ನಿಲುವು ಹೊಂದಿದೆ ಎಂದು ಇನ್ನೊಂದು ಟ್ವೀಟ್ ಹೇಳಿದೆ.

ಇದಲ್ಲದೆ ಮುಖ್ಯಮಂತ್ರಿಗಳ ಹೇಳಿಕೆಗೆ ಬಿಜಿಪಿ ಬೆಂಬಲಿಗರಿಂದಲೇ ವಿರೋಧ ಎದ್ದಿದೆ. ಮುಖ್ಯಮಂತ್ರಿಗಳನ್ನು ಬದಲಿಸಿ, ನಾವು ಮುಖ್ಯಮಂತ್ರಿಗಳನ್ನು ವಿರೋಧಿಸುತ್ತೇವೆ ಎಂದು ಹೇಳಿ #WELOSTHOPEBSY ಹ್ಯಾಶ್ ಟ್ಯಾಗ್ ಮೂಲಕ ಅವರನ್ನು ಬದಲಾಯಿಸುವಂತೆ ಅಮಿತ್ ಶಾ ಅವರಿಗೆ ಮನವಿ ಮಾಡುತ್ತಿದ್ದಾರೆ.

ಚೌಕಿದಾರ್ ಅಜಯ್ ಎಂಬ ಟ್ವಿಟ್ಟರ್ ಹ್ಯಾಂಡಲ್ “ಕರ್ನಾಟಕದ ಮುಖ್ಯಮಂತ್ರಿಯನ್ನು ಬದಲಿಸಿ” ಎಂದು ಬರೆದುಕೊಂಡಿದ್ದಾರೆ.

 

ಒಟ್ಟಿನಲ್ಲಿ ಯಡಿಯೂರಪ್ಪ ಅವರ ಹೇಳಿಕೆಯೂ ರಾಜಕೀಯವಾಗಿ ಬಿಸಿ ಬಿಸಿ ಚರ್ಚೆಯನ್ನು ಉಂಟು ಮಾಡಿದ್ದು. ಸಾಮಾಜಿಕ ಜಾಲತಾಣದಾದ್ಯಂತ ಭಾರೀ ಚರ್ಚೆಯನ್ನು ಉಂಟುಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...