Homeಮುಖಪುಟಪ್ರೀತಿಯ ಜರೀನ್ ತಾಜ್, : ದೇವನೂರು ಮಹದೇವರವರು ಬರೆದ ಕ್ಷಮಾಪಣಾ ಪತ್ರ

ಪ್ರೀತಿಯ ಜರೀನ್ ತಾಜ್, : ದೇವನೂರು ಮಹದೇವರವರು ಬರೆದ ಕ್ಷಮಾಪಣಾ ಪತ್ರ

ಎಲ್ಲಾ ಜಾತಿ, ಧರ್ಮಗಳಲ್ಲಿ ಇಂತಹ ಅನಾಗರಿಕತೆ ಇದ್ದೇ ಇದೆ. ಅಂತಹವರು ಇಂತಹ ಅಮಾನವೀಯವಾದ ಕೃತ್ಯಗಳಿಗೆ ಇಳಿಯುತ್ತಾರೆ. ಇಂದಿನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ನೀವು ಕಹಿ ಅನುಭವಿಸಬಾರದು ಎಂದು ಪ್ರಾರ್ಥಿಸುತ್ತೇನೆ.

- Advertisement -
- Advertisement -

ಬೆಂಗಳೂರಿನ ಸ್ವರಾಜ್‌ ಅಭಿಯಾನ್‌ ಸಂಘಟನೆಯ ಕಾರ್ಯಕರ್ತೆಯಾದ ಜರೀನ್‌ ತಾಜ್‌ರವರು ಲಾಕ್‌ಡೌನ್‌ ಘೋಷಿಸಿದಾಗಿನಿಂದಲೂ ವಲಸೆ ಕಾರ್ಮಿಕರಿಗೆ, ಬಡಜನರಿಗೆ, ಸ್ಲಂ ನಿವಾಸಿಗಳಿಗೆ ತಮ್ಮಿಂದಾದಷ್ಟು ಸಹಾಯ ಮಾಡುತ್ತಾ ಬಂದಿದ್ದಾರೆ. ಆದರೆ ಏಪ್ರಿಲ್‌ 4 ಮತ್ತು 6 ರಂದು ಬಡಜನರಿಗೆ ಆಹಾರ ಧಾನ್ಯಗಳನ್ನು ವಿತರಿಸುತ್ತಿದ್ದಾಗ ಅವರು ಮುಸ್ಲಿಂ ಎಂಬ ಕಾರಣಕ್ಕೆ ಹಲವು RSS ಬೆಂಬಲಿಗರು ಅವರ ಮೆಲೆ ಎರಡು ಬಾರಿ ಹಲ್ಲೆ ನಡೆಸಿದ್ದಾರೆ. ಈಗ ಸದ್ಯಕ್ಕೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದರಿಂದ ನೊಂದುಕೊಂಡು ಹಿರಿಯ ಸಾಹಿತಿ ಮತ್ತು ಸ್ವರಾಜ್‌ ಇಂಡಿಯಾದ ಮುಖಂಡರಾದ ದೇವನೂರು ಮಹಾದೇವರವರು ಭಾವಪೂರ್ಣ ಪತ್ರ ಬರೆದಿದ್ದಾರೆ.

ಪ್ರೀತಿಯ ಜರೀನ್ ತಾಜ್,

ಬಹಳ ದುಃಖದಿಂದ ನಿಮಗೀ ಪತ್ರವನ್ನು ಬರೆಯುತ್ತಿದ್ದೇನೆ. ವಾಸ್ತವದಲ್ಲಿ ನಿಮಗೆ ಕೃತಜ್ಞತೆಗಳನ್ನು ಸಲ್ಲಿಸಿ, ಅಭಿನಂದಿಸುವ ಸಲುವಾಗಿ ನಾನು ನಿಮ್ಮನ್ನು ಭೇಟಿ ಮಾಡಬೇಕಿತ್ತು. ಆದರೆ ಕ್ಷಮೆ ಕೇಳಿ ಪತ್ರ ಬರೆಯುವ ಸಂದರ್ಭ ಒದಗಿ ಬಂದಿರುವುದು ನೋವುಂಟು ಮಾಡಿದೆ. ಕೊರೊನಾ ಲಾಕ್‍ಡೌನ್‍ನಿಂದ ತಮ್ಮ ಊರಿಗೂ ಸೇರಲಾಗದೇ ಇದ್ದಲ್ಲೂ ಇರಲಾಗದೇ ತುತ್ತು ಅನ್ನಕ್ಕಾಗಿ ಒದ್ದಾಡುತ್ತಿದ್ದ ವಲಸೆ ಕಾರ್ಮಿಕರಿಗೆ ಅನ್ನ ನೀಡುತ್ತಿದ್ದ ನಿಮ್ಮಗಳ ಮೇಲೆ ದಾಳಿ ನಡೆದದ್ದು ಕೇಳಿ ನಿನ್ನೆಯಿಂದ ಇದ್ದಲ್ಲಿ ಇರಲಾಗುತ್ತಿಲ್ಲ. ಮೊನ್ನೆ ಸಂಜೆ 6.30ಕ್ಕೆ ಅಮೃತಹಳ್ಳಿ ಬಳಿ ನಿಮಗೆ ಬೆದರಿಕೆ ಒಡ್ಡಿ, ನಿಮ್ಮ ಮನೆ ಮಕ್ಕಳ ಮೇಲೆ ದಾಳಿ ನಡೆದದ್ದು ನನ್ನ ಗಮನಕ್ಕೆ ಬಂದಿತು. ನಿಜಕ್ಕೂ ಅದು ನಿದ್ದೆಗೆಡಿಸಿತು.


ಇದನ್ನೂ ಓದಿ: ಕಾರ್ಮಿಕರಿಗೆ ಪಡಿತರ ವಿತರಿಸುತ್ತಿದ್ದ ಸ್ವರಾಜ್ ಅಭಿಯಾನದ ಕಾರ್ಯಕರ್ತರ ಮೇಲೆ RSS ಬೆಂಬಲಿಗರಿಂದ ಹಲ್ಲೆ – ಆರೋಪ


ಎಲ್ಲಾ ಮನುಷ್ಯರಲ್ಲೂ ಭೀತಿ ಹುಟ್ಟಿಸಿರುವ ಕೊರೊನಾ ಸೋಂಕು ಹರಡದಂತೆ ದಿಢೀರ್ ಲಾಕ್‍ಡೌನ್ ಘೋಷಿಸಿದಾಗ ಅಸಹಾಯಕರು ಎಲ್ಲೆಲ್ಲಿ ಹೇಗ್ಹೇಗೆ ಸಿಕ್ಕಿಕೊಂಡರೋ ಗೊತ್ತಿಲ್ಲ. ಅಂತಹವರಿಗೆ ಆತುಕೊಳ್ಳುವುದೇ ಮನುಷ್ಯತ್ವ. ಆದರೆ ಈ ಮನುಷ್ಯತ್ವದ ಮೇಲೆಯೇ ದಾಳಿ ನಡೆದಾಗ ಮಾನವೀಯತೆಯೇ ಸೋತು ಹೋಯಿತೇನೋ ಎಂದು ದಿಗಿಲಾಯಿತು. ಆದರೆ ಜರೀನ್, ಎಲ್ಲಾ ಜಾತಿ, ಧರ್ಮಗಳಲ್ಲಿ ಇಂತಹ ಅನಾಗರಿಕತೆ ಇದ್ದೇ ಇದೆ. ಅಂತಹವರು ಇಂತಹ ಅಮಾನವೀಯವಾದ ಕೃತ್ಯಗಳಿಗೆ ಇಳಿಯುತ್ತಾರೆ. ಇಂದಿನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ನೀವು ಕಹಿ ಅನುಭವಿಸಬಾರದು ಎಂದು ಪ್ರಾರ್ಥಿಸುತ್ತೇನೆ.

ಮತ್ತೊಮ್ಮೆ ಮನವಿ ಮಾಡಿಕೊಳ್ಳುತ್ತೇನೆ, ಇದರಿಂದ ನಿಮ್ಮ ಮನಸ್ಸಿನಲ್ಲಿ ಮೂಡಿರಬಹುದಾದ ಕಹಿಯನ್ನು ತೆಗೆದುಹಾಕಿ. ನಿಮ್ಮ ಮಾನವೀಯ ಸ್ಪಂದನೆಗಳಿಗೆ ಉದಾರ ಭಾರತದ ನಾಗರಿಕ ಸಮಾಜ ಕೈ ಜೋಡಿಸುತ್ತದೆಂಬ ನಂಬಿಕೆ ನನಗಿದೆ. ಕೊರೊನಾ ಇಲ್ಲದಿದ್ದರೆ ನೇರವಾಗಿಯೇ ಬಂದು ಭೇಟಿ ಮಾಡಿ ಈ ಮಾತುಗಳನ್ನು ಹೇಳುತ್ತಿದ್ದೆ.

ಕ್ಷಮೆಯಿರಲಿ.

(ದೇವನೂರ ಮಹಾದೇವ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...