Homeಮುಖಪುಟಪ್ರೀತಿಯ ಜರೀನ್ ತಾಜ್, : ದೇವನೂರು ಮಹದೇವರವರು ಬರೆದ ಕ್ಷಮಾಪಣಾ ಪತ್ರ

ಪ್ರೀತಿಯ ಜರೀನ್ ತಾಜ್, : ದೇವನೂರು ಮಹದೇವರವರು ಬರೆದ ಕ್ಷಮಾಪಣಾ ಪತ್ರ

ಎಲ್ಲಾ ಜಾತಿ, ಧರ್ಮಗಳಲ್ಲಿ ಇಂತಹ ಅನಾಗರಿಕತೆ ಇದ್ದೇ ಇದೆ. ಅಂತಹವರು ಇಂತಹ ಅಮಾನವೀಯವಾದ ಕೃತ್ಯಗಳಿಗೆ ಇಳಿಯುತ್ತಾರೆ. ಇಂದಿನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ನೀವು ಕಹಿ ಅನುಭವಿಸಬಾರದು ಎಂದು ಪ್ರಾರ್ಥಿಸುತ್ತೇನೆ.

- Advertisement -
- Advertisement -

ಬೆಂಗಳೂರಿನ ಸ್ವರಾಜ್‌ ಅಭಿಯಾನ್‌ ಸಂಘಟನೆಯ ಕಾರ್ಯಕರ್ತೆಯಾದ ಜರೀನ್‌ ತಾಜ್‌ರವರು ಲಾಕ್‌ಡೌನ್‌ ಘೋಷಿಸಿದಾಗಿನಿಂದಲೂ ವಲಸೆ ಕಾರ್ಮಿಕರಿಗೆ, ಬಡಜನರಿಗೆ, ಸ್ಲಂ ನಿವಾಸಿಗಳಿಗೆ ತಮ್ಮಿಂದಾದಷ್ಟು ಸಹಾಯ ಮಾಡುತ್ತಾ ಬಂದಿದ್ದಾರೆ. ಆದರೆ ಏಪ್ರಿಲ್‌ 4 ಮತ್ತು 6 ರಂದು ಬಡಜನರಿಗೆ ಆಹಾರ ಧಾನ್ಯಗಳನ್ನು ವಿತರಿಸುತ್ತಿದ್ದಾಗ ಅವರು ಮುಸ್ಲಿಂ ಎಂಬ ಕಾರಣಕ್ಕೆ ಹಲವು RSS ಬೆಂಬಲಿಗರು ಅವರ ಮೆಲೆ ಎರಡು ಬಾರಿ ಹಲ್ಲೆ ನಡೆಸಿದ್ದಾರೆ. ಈಗ ಸದ್ಯಕ್ಕೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದರಿಂದ ನೊಂದುಕೊಂಡು ಹಿರಿಯ ಸಾಹಿತಿ ಮತ್ತು ಸ್ವರಾಜ್‌ ಇಂಡಿಯಾದ ಮುಖಂಡರಾದ ದೇವನೂರು ಮಹಾದೇವರವರು ಭಾವಪೂರ್ಣ ಪತ್ರ ಬರೆದಿದ್ದಾರೆ.

ಪ್ರೀತಿಯ ಜರೀನ್ ತಾಜ್,

ಬಹಳ ದುಃಖದಿಂದ ನಿಮಗೀ ಪತ್ರವನ್ನು ಬರೆಯುತ್ತಿದ್ದೇನೆ. ವಾಸ್ತವದಲ್ಲಿ ನಿಮಗೆ ಕೃತಜ್ಞತೆಗಳನ್ನು ಸಲ್ಲಿಸಿ, ಅಭಿನಂದಿಸುವ ಸಲುವಾಗಿ ನಾನು ನಿಮ್ಮನ್ನು ಭೇಟಿ ಮಾಡಬೇಕಿತ್ತು. ಆದರೆ ಕ್ಷಮೆ ಕೇಳಿ ಪತ್ರ ಬರೆಯುವ ಸಂದರ್ಭ ಒದಗಿ ಬಂದಿರುವುದು ನೋವುಂಟು ಮಾಡಿದೆ. ಕೊರೊನಾ ಲಾಕ್‍ಡೌನ್‍ನಿಂದ ತಮ್ಮ ಊರಿಗೂ ಸೇರಲಾಗದೇ ಇದ್ದಲ್ಲೂ ಇರಲಾಗದೇ ತುತ್ತು ಅನ್ನಕ್ಕಾಗಿ ಒದ್ದಾಡುತ್ತಿದ್ದ ವಲಸೆ ಕಾರ್ಮಿಕರಿಗೆ ಅನ್ನ ನೀಡುತ್ತಿದ್ದ ನಿಮ್ಮಗಳ ಮೇಲೆ ದಾಳಿ ನಡೆದದ್ದು ಕೇಳಿ ನಿನ್ನೆಯಿಂದ ಇದ್ದಲ್ಲಿ ಇರಲಾಗುತ್ತಿಲ್ಲ. ಮೊನ್ನೆ ಸಂಜೆ 6.30ಕ್ಕೆ ಅಮೃತಹಳ್ಳಿ ಬಳಿ ನಿಮಗೆ ಬೆದರಿಕೆ ಒಡ್ಡಿ, ನಿಮ್ಮ ಮನೆ ಮಕ್ಕಳ ಮೇಲೆ ದಾಳಿ ನಡೆದದ್ದು ನನ್ನ ಗಮನಕ್ಕೆ ಬಂದಿತು. ನಿಜಕ್ಕೂ ಅದು ನಿದ್ದೆಗೆಡಿಸಿತು.


ಇದನ್ನೂ ಓದಿ: ಕಾರ್ಮಿಕರಿಗೆ ಪಡಿತರ ವಿತರಿಸುತ್ತಿದ್ದ ಸ್ವರಾಜ್ ಅಭಿಯಾನದ ಕಾರ್ಯಕರ್ತರ ಮೇಲೆ RSS ಬೆಂಬಲಿಗರಿಂದ ಹಲ್ಲೆ – ಆರೋಪ


ಎಲ್ಲಾ ಮನುಷ್ಯರಲ್ಲೂ ಭೀತಿ ಹುಟ್ಟಿಸಿರುವ ಕೊರೊನಾ ಸೋಂಕು ಹರಡದಂತೆ ದಿಢೀರ್ ಲಾಕ್‍ಡೌನ್ ಘೋಷಿಸಿದಾಗ ಅಸಹಾಯಕರು ಎಲ್ಲೆಲ್ಲಿ ಹೇಗ್ಹೇಗೆ ಸಿಕ್ಕಿಕೊಂಡರೋ ಗೊತ್ತಿಲ್ಲ. ಅಂತಹವರಿಗೆ ಆತುಕೊಳ್ಳುವುದೇ ಮನುಷ್ಯತ್ವ. ಆದರೆ ಈ ಮನುಷ್ಯತ್ವದ ಮೇಲೆಯೇ ದಾಳಿ ನಡೆದಾಗ ಮಾನವೀಯತೆಯೇ ಸೋತು ಹೋಯಿತೇನೋ ಎಂದು ದಿಗಿಲಾಯಿತು. ಆದರೆ ಜರೀನ್, ಎಲ್ಲಾ ಜಾತಿ, ಧರ್ಮಗಳಲ್ಲಿ ಇಂತಹ ಅನಾಗರಿಕತೆ ಇದ್ದೇ ಇದೆ. ಅಂತಹವರು ಇಂತಹ ಅಮಾನವೀಯವಾದ ಕೃತ್ಯಗಳಿಗೆ ಇಳಿಯುತ್ತಾರೆ. ಇಂದಿನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ನೀವು ಕಹಿ ಅನುಭವಿಸಬಾರದು ಎಂದು ಪ್ರಾರ್ಥಿಸುತ್ತೇನೆ.

ಮತ್ತೊಮ್ಮೆ ಮನವಿ ಮಾಡಿಕೊಳ್ಳುತ್ತೇನೆ, ಇದರಿಂದ ನಿಮ್ಮ ಮನಸ್ಸಿನಲ್ಲಿ ಮೂಡಿರಬಹುದಾದ ಕಹಿಯನ್ನು ತೆಗೆದುಹಾಕಿ. ನಿಮ್ಮ ಮಾನವೀಯ ಸ್ಪಂದನೆಗಳಿಗೆ ಉದಾರ ಭಾರತದ ನಾಗರಿಕ ಸಮಾಜ ಕೈ ಜೋಡಿಸುತ್ತದೆಂಬ ನಂಬಿಕೆ ನನಗಿದೆ. ಕೊರೊನಾ ಇಲ್ಲದಿದ್ದರೆ ನೇರವಾಗಿಯೇ ಬಂದು ಭೇಟಿ ಮಾಡಿ ಈ ಮಾತುಗಳನ್ನು ಹೇಳುತ್ತಿದ್ದೆ.

ಕ್ಷಮೆಯಿರಲಿ.

(ದೇವನೂರ ಮಹಾದೇವ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...