Homeಅಂಕಣಗಳುಕರೋನಾಕ್ಕೆ ಕೊನೆಯಿದ್ದೀತು, ಆದರೆ ಈ ಮುಸ್ಲಿಮ್ ದ್ವೇಷಕ್ಕೆ ಮದ್ದೇನು?

ಕರೋನಾಕ್ಕೆ ಕೊನೆಯಿದ್ದೀತು, ಆದರೆ ಈ ಮುಸ್ಲಿಮ್ ದ್ವೇಷಕ್ಕೆ ಮದ್ದೇನು?

- Advertisement -
- Advertisement -

ತಬ್ಲೀಘೀ ಜಮಾಅತ್ ಸಂಘಟನೆಯ ಹೆಸರನ್ನು ಮುಸಲ್ಮಾನ ಸಮುದಾಯದ ಆಚೆಗೆ ಮೊನ್ನೆ ಮೊನ್ನೆಯ ತನಕ ಕೇಳಿದವರ ಸಂಖ್ಯೆ ಅತಿ ವಿರಳ. ತಬ್ಲೀಘೀ ಜಮಾಅತ್ ನ ಅಕ್ಷರಶಃ ಅರ್ಥ ಧರ್ಮಪ್ರಸಾರ. ಇದೊಂದು ಸುನ್ನಿ ಮುಸಲ್ಮಾನ ಮಿಶನರಿ ಆಂದೋಲನ. ಸಾಮಾನ್ಯ ಮುಸಲ್ಮಾನರನ್ನು ತಲುಪಿ ಅವರ ಧರ್ಮಶ್ರದ್ಧೆಯನ್ನು ಮರುಜಾಗೃತಗೊಳಿಸುವುದು ಇದರ ಉದ್ದೇಶ. ರೂಢಿ ಆಚಾರಗಳು, ದಿರಿಸು, ಹಾಗೂ ವ್ಯಕ್ತಿಗತ ನಡವಳಿಕೆಯ ಮೇಲೆ ಒತ್ತು ನೀಡಲಾಗುತ್ತದೆ. ಆ ಆಂದೋಲನವನ್ನು ಹರಿಯಾಣದ ಮೇವಾಟ್ ಎಂಬಲ್ಲಿ 1927ರಲ್ಲಿ ಹುಟ್ಟಿ ಹಾಕಿದ್ದು ಧಾರ್ಮಿಕ ವಿದ್ವಾಂಸ ಮೌಲಾನಾ ಮಹಮ್ಮದ್ ಇಲ್ಯಾಸ್ ಖಾಂದಾಲಾ. ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದ್ದ ಮೇವಾಟ್ ನ ಮುಸಲ್ಮಾನ ರೈತರು ಬಹುತೇಕ ಹಿಂದೂ ರೂಢಿ ಆಚಾರಗಳನ್ನು ಪಾಲಿಸುತ್ತಿದ್ದರು. ಅವರನ್ನು ಪುನಃ ಇಸ್ಲಾಮ್ ತೆಕ್ಕೆಗೆ ಕರೆತಂದು ಇಸ್ಲಾಮ್ ನ ಸುವರ್ಣಯುಗ (ಖಿಲಾಫತ್) ಸ್ಥಾಪಿಸುವ ಗುರಿಯೊಂದಿಗೆ ಶುರುವಾದ ಚಳವಳಿಯಿದು. ವೇಗವಾಗಿ ಬೆಳೆಯಿತು. 150 ದೇಶಗಳಲ್ಲಿ ಸುಮಾರು ಎಂಟು ಕೋಟಿ ಅನುಯಾಯಿಗಳುಂಟು. ಸಾಮಾನ್ಯವಾಗಿ ರಾಜಕೀಯೇತರ ಮತ್ತು ಶಾಂತಿಪ್ರಿಯ ಆಂದೋಲನ. ಮತಾಂತರದ ಉದ್ದೇಶವಿಲ್ಲದ್ದು.

ದಕ್ಷಿಣ ದೆಹಲಿಯ ಮರ್ಕಾಝ್ ನಿಜಾಮುದ್ದೀನ್ ತಬ್ಲೀಘೀ ಜಮಾಅತ್ ನ ಪ್ರಧಾನ ಕೇಂದ್ರ. ಆರು ಅಂತಸ್ತುಗಳ ಕಟ್ಟಡ. ಇದೇ ಮಾರ್ಚ್ 13ರಿಂದ 15ರ ನಡುವೆ ಅಲ್ಲಿ ಜರುಗಿದ ಅಂತಾರಾಷ್ಟ್ರೀಯ ಸಮ್ಮೇಳನವೊಂದಕ್ಕೆ ನಾಲ್ಕು ಸಾವಿರ ಮಂದಿ ಸೇರಿದ್ದರು. ದೇಶದ ನಾನಾ ರಾಜ್ಯಗಳಿಂದ ಮಾತ್ರವಲ್ಲದೆ ಬಾಂಗ್ಲಾದೇಶ, ಇಂಡೋನೇಶ್ಯಾ, ಮಲೇಶಿಯಾ, ಸಿಂಗಪುರ ಮುಂತಾದ ದೇಶಗಳಿಂದ ಪ್ರತಿನಿಧಿಗಳು ಭಾಗವಹಿಸಿದ್ದರು. ನಿಜಾಮುದ್ದೀನ್ ಸೋಂಕಿನ ಮೂಲ ಈ ವಿದೇಶೀಯರೇ ಎಂದು ಶಂಕಿಸಲಾಗಿದೆ.

ಸಮ್ಮೇಳನ ಮತ್ತು ಹಿಂದು ಮುಂದಿನ ದಿನಗಳಲ್ಲಿ (ಮಾ.10-24) ಒಟ್ಟು ಆರೇಳು ಸಾವಿರ ಮಂದಿಯಾದರೂ ಈ ಕೇಂದ್ರವನ್ನ ಹೊಕ್ಕು ಬಳಸಿರುವ ಅಂದಾಜಿದೆ. ಸಮ್ಮೇಳನ ಮುಗಿದ ನಂತರ ಇನ್ನೂ ಅಲ್ಲಿಯೇ ಸಿಕ್ಕಿ ಹಾಕಿಕೊಂಡಿದ್ದ 2346 ಮಂದಿಯನ್ನು ಇದೇ ಏಪ್ರಿಲ್ ಒಂದರಂದು ಖಾಲಿ ಮಾಡಿಸಿ ಆಸ್ಪತ್ರೆಗಳು ಮತ್ತು ಕ್ವಾರಂಟೈನ್ ಕೇಂದ್ರಗಳಲ್ಲಿ ಇರಿಸಲಾಗಿದೆ. ಈ ಮೊದಲು ಇಲ್ಲಿಂದ ನಾನಾ ರಾಜ್ಯಗಳಿಗೆ ತೆರಳಿದವರು ತಮಗೆ ಅರಿವಿಲ್ಲದೆಯೇ ಕರೋನಾ ಸೋಂಕನ್ನು ಹೊತ್ತೊಯ್ದಿದ್ದರು.

ನಿಜಾಮುದ್ದೀನ್ ಪೊಲೀಸ್ ಠಾಣೆಯ ಮೂಗಿನಡಿಯಲ್ಲೇ ಈ ಸಮ್ಮೇಳನವನ್ನು ನಡೆಯಗೊಟ್ಟ ಸರ್ಕಾರಿ ಆಡಳಿತವೂ ಈ ಪ್ರಕರಣದ ದೋಷವನ್ನು ಹೊರಲೇಬೇಕು. ಆದರೆ ಸೋಂಕಿನ ದಿನಗಳಲ್ಲಿ ಇಷ್ಟು ದೊಡ್ಡ ಸಮ್ಮೇಳನವನ್ನು ತಬ್ಲೀಘೀ ಸೂತ್ರಧಾರರು ಮುಂದೂಡದೆ ನಡೆಸಿದ್ದು ಹೊಣೆಗೇಡಿತನ ಮಾತ್ರವಲ್ಲದೆ ಕ್ರಿಮಿನಲ್ ಕೃತ್ಯವೂ ಹೌದು.

‘ಸಾಮಾಜಿಕ ದೂರ’ ಕಾಯ್ದುಕೊಳ್ಳಬೇಕೆಂಬ ಕಟ್ಟಳೆಯನ್ನು ಲೇವಡಿ ಮಾಡಿದ ತಬ್ಲೀಘಿ ಮುಖ್ಯಸ್ಥರ ನಡವಳಿಕೆ ಖಂಡನೀಯ.
ತಬ್ಲೀಘೀ ಜಮಾಅತ್ ಇಡೀ ಮುಸಲ್ಮಾನ ಸಮುದಾಯದ ಪ್ರಾತಿನಿಧಿಕ ಸಂಸ್ಥೆಯೇನೂ ಅಲ್ಲ. ಆದರೆ ತನ್ನ ತೀವ್ರ ಉಡಾಫೆಯ ಮತ್ತು ಬೇಜವಾಬ್ದಾರಿ ವ್ಯವಹಾರದಿಂದಾಗಿ ಇಡೀ ಮುಸಲ್ಮಾನ ಸಮುದಾಯವನ್ನು ಬಹುಸಂಖ್ಯಾತ ಕೋಮುವಾದಿಗಳ ದ್ವೇಷದ ದಳ್ಳುರಿಗೆ ತಳ್ಳಿದೆ. ಸಿಎಎ ಮತ್ತು ಎನ್.ಆರ್.ಸಿ. ವಿವಾದ ಹಿನ್ನೆಲೆಗೆ ಸರಿದ ನಂತರ ಹಿಂದು-ಮುಸ್ಲಿಮ್ ಮತ್ತು ಭಾರತ-ಪಾಕಿಸ್ತಾನದ ಕಿಚ್ಚನ್ನು ಹೊತ್ತಿಸಿ ಬೇಳೆ ಬೇಯಿಸುವವರು ನಿರುದ್ಯೋಗಿಗಳೂ, ಹತಾಶರೂ ಆಗಿಬಿಟ್ಟಿದ್ದರು. ಕರೋನ ವೈರಸ್ ಮಹಾಮಾರಿಯಲ್ಲಿ ಕೋಮುವಾದವನ್ನು ನುಗ್ಗಿಸುವ ಬಗೆ ಕಾಣದೆ ಕಂಗೆಟ್ಟಿದ್ದರು. ಹೀಗೆ ಹಸಿದು ಕಾದು ಕುಳಿತಿದ್ದ ರಣಹದ್ದುಗಳಿಗೆ ಹಸಿಮಾಂಸವನ್ನಾಗಿ ಅಮಾಯಕ ಮುಸ್ಲಿಮ್ ಸಮುದಾಯವನ್ನು ಉಣಬಡಿಸಿದೆ ತಬ್ಲೀಘೀ ಜಮಾಅತ್.

ವಿಶೇಷವಾಗಿ ಕಳೆದ ಐದಾರು ವರ್ಷಗಳಿಂದ ಹಿಂದೂ ಕಟ್ಟರ್ ವಾದಿಗಳ ದ್ವೇಷದ ಕಾವಲಿಯಲ್ಲಿ ಬೇಯತೊಡಗಿದ್ದ ಸಮುದಾಯವನ್ನು ಕರೋನಾ ಕಳಂಕದ ಬೆಂಕಿಗೆ ಎಸೆದಿದೆ. ದೇಶಾದ್ಯಂತ ತಲೆ ಎತ್ತಿ ನಿಂತಿರುವ ಮತಾಂಧ ಫೇಕ್ ನ್ಯೂಸ್ ಫ್ಯಾಕ್ಟರಿಗಳು ದಿನ ಬೆಳಗಾಗುವುದರೊಳಗೆ ಸಕ್ರಿಯವಾಗಿವೆ. ಹಳೆಯ ಮತ್ತು ಸಂಬಂಧವೇ ಇಲ್ಲದ ನಾನಾ ವಿಡಿಯೋಗಳನ್ನು ಬಳಸಿ ಮುಸಲ್ಮಾನರ ವಿರುದ್ದ ಸುಳ್ಳು ಸುದ್ದಿಗಳ ಪ್ರವಾಹವನ್ನೇ ಹರಿಯಬಿಟ್ಟಿವೆ. ಆಳುವವರ ಕಾಲು ನೆಕ್ಕಿ ಕುಂಯ್ಗುಡುವ ಟೀವಿ ಸುದ್ದಿ ಮಾಧ್ಯಮಗಳಂತೂ ತಬ್ಲೀಘಿ ಅವಿವೇಕದ ಹಿನ್ನೆಲೆಯಲ್ಲಿ ಹಗಲಿರುಳು ಮುಸ್ಲಿಮ್ ದ್ವೇಷವನ್ನು ಕಾರತೊಡಗಿವೆ. ಗೋರಕ್ಷಣೆಯ ಹೆಸರಿನಲ್ಲಿ ಮುಸಲ್ಮಾನರನ್ನು ರಸ್ತೆ ರಸ್ತೆಗಳಲ್ಲಿ ಹಾಡುಹಗಲೇ ಜಜ್ಜಿ ಕೊಂದ ನಂತರ, ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕಸಿದುಕೊಂಡ ನಂತರ, ಸಿಎಎ-ಎನ್ನಾರ್ಸಿ ತಂದು ಅವರ ನಾಗರಿಕತೆಯನ್ನು ಕಸಿಯುವ ಕಾರ್ಯಸೂಚಿಗೆ ವೇಗ ದೊರೆತ ನಂತರ, ದಿಲ್ಲಿ ಕೋಮು ಗಲಭೆಗಳಲ್ಲಿ ಅವರಿಗೆ ‘ಗುಜರಾತ್ ಮಾದರಿಯ ಪಾಠ ಕಲಿಸಿದ’ ನಂತರ ಕರೋನಾ ಕಾಲಿಟ್ಟಿತ್ತು. ಹಠಾತ್ತನೆ ಮುಸ್ಲಿಮ್ ದ್ವೇಷದ ಕಾರ್ಯಕ್ರಮಕ್ಕೆ ತಾತ್ಕಾಲಿಕ ತೆರೆ ಬಿದ್ದಿತ್ತು.

ಹಿಂದು-ಮುಸ್ಲಿಮ್ ದ್ವೇಷದಿಂದಲೇ ತಮ್ಮ ಅಸ್ತಿತ್ವ ಕಟ್ಟಿಕೊಂಡಿರುವವರು ಚಡಪಡಿಸಿದ್ದರು. ಅವರ ಪಾಲಿನ ವರವಾಗಿ ಬಂದದ್ದು ತಬ್ಲೀಘೀ ಪ್ರಕರಣ. ಮೂರನೆಯ ದರ್ಜೆಯ ಪ್ರಜೆಗಳಂತೆ ಬಿದ್ದಿರಬೇಕೆಂಬ ಇಂಗಿತವನ್ನು ಮುಸಲ್ಮಾನರಿಗೆ ಬಗೆಬಗೆಯಾಗಿ ರವಾನಿಸುತ್ತ ಬಂದಿರುವ ಆಳುವ ವರ್ಗ ತಬ್ಲೀಘೀ ಪ್ರಕರಣವನ್ನು ಕರೋನಾ ಭಯೋತ್ಪಾದನೆ, ಕರೋನಾ ಜಿಹಾದ್ ಎಂದೆಲ್ಲ ವಿಷ ಕಾರಿದೆ. ಕರೋನಾ ಜಾತಿ ಧರ್ಮಗಳನ್ನು ನೋಡಿ ಅಂಟುವ ರೋಗವಲ್ಲ ಎಂಬ ವಿವೇಕದ ಒಂದು ಮಾತನ್ನು ದೇಶ ನಡೆಸುವವರು ಆಡಿಲ್ಲ. ಆಡುವ ಮನಸ್ಥಿತಿಯೂ ಅವರದಲ್ಲ.

ಈ ಎಲ್ಲ ವಿಷದ ಬಿತ್ತನೆ, ಫೇಕ್ ನ್ಯೂಸ್ ಹಾಗೂ ಟೀವಿ ಛಾನೆಲ್ಲುಗಳ ದ್ವೇಷ ಪ್ರಸಾರದ ಪರಿಣಾಮವಾಗಿ ಸಾಮಾನ್ಯ ಮುಸಲ್ಮಾನರ ಬದುಕು ದುರ್ಭರವಾಗತೊಡಗಿದೆ. ಮುಸಲ್ಮಾನ ದ್ವೇಷ ಹಳ್ಳಿ ಹಳ್ಳಿಗಳನ್ನು ಪ್ರವೇಶಿಸತೊಡಗಿದೆ. ಅವರ ಬಹಿಷ್ಕಾರದ ಘಟನೆಗಳು ಕೇಳಿಬರುತ್ತಿವೆ. ಬೆಂಗಳೂರಿನ ಪದ್ಮನಾಭನಗರ ಬಡಾವಣೆಯಲ್ಲಿ ಸೊಪ್ಪು ಮಾರಲು ಬಂದ ಮುಸಲ್ಮಾನನ್ನು ಓಡಿಸಲಾಗಿದೆ.

ಅಂದಿನ ಅನ್ನವನ್ನು ಅಂದೇ ದುಡಿದು ಉಣ್ಣಬೇಕಿರುವ ದೇಶದ ಕೋಟ್ಯಂತರ ಅಸಂಘಟಿತ ಕಾರ್ಮಿಕರು ಲಾಕ್ ಡೌನ್ ನಿಂದ ಕಂಗೆಟ್ಟಿದ್ದಾರೆ. ಇದೇ ವರ್ಗಕ್ಕೆ ಸೇರಿರುವ ಮುಸಲ್ಮಾನ ನಿರ್ಗತಿಕರು ಲಾಕ್ ಡೌನ್ ಗಾಯದ ಮೇಲೆ ಕೋಮುದ್ವೇಷದ ಬರೆಯನ್ನೂ ಎಳೆಸಿಕೊಳ್ಳುವ ದುಪ್ಪಟ್ಟು ಸಂಕಟಕ್ಕೆ ಗುರಿಯಾಗಿದ್ದಾರೆ.

ನಿಜಾಮುದ್ದೀನ್ ಮರ್ಕಾಝ್ ಗೆ ಮುನ್ನ ಫೆಬ್ರವರಿಯಲ್ಲಿ ಮಲೇಷಿಯಾದಲ್ಲಿ ಜರುಗಿದ ಅಂತಾರಾಷ್ಟ್ರೀಯ ತಬ್ಲೀಘೀ ಸಮ್ಮೇಳನದಲ್ಲಿ 16 ಸಾವಿರ ಮಂದಿ ಭಾಗವಹಿಸಿದ್ದರು. ನೆರೆಹೊರೆಯ ಥಾಯ್ಲೆಂಡ್ ಮತ್ತು ಬ್ರೂನೇ ದೇಶಗಳಿಗೆ ಕರೋನಾ ಹಬ್ಬಿತ್ತು. ಪಾಕಿಸ್ತಾನದ ಲಾಹೋರಿನಲ್ಲಿ ಒಂದೂವರೆ ಲಕ್ಷ ಮಂದಿಯ ಮಾರ್ಚ್ ಸಮ್ಮೇಳನವನ್ನು ಕಡೆಯ ನಿಮಿಷಗಳಲ್ಲಿ ರದ್ದು ಮಾಡಲಾಗಿತ್ತು. ಆದರೆ ಆ ಹೊತ್ತಿಗಾಗಲೆ ದೂರ ದೇಶಗಳಿಂದ ಪ್ರತಿನಿಧಿಗಳು ಇಳಿದುಬಿಟ್ಟಿದ್ದರು. ಕರೋನಾ ಸೋಂಕನ್ನು ಕೆಣಕಿದ್ದರು.

ಮಾರ್ಚ್ 20ರ ಹೊತ್ತಿಗೆ ಪವಿತ್ರ ಮೆಕ್ಕಾ ಮತ್ತು ಮದೀನಾದಲ್ಲಿ ಜನಸಂದಣಿಯ ಪ್ರಾರ್ಥನೆಗಳನ್ನು ಸೌದಿ ಅರೇಬಿಯಾ ನಿಲ್ಲಿಸಿಬಿಟ್ಟಿದೆ. ಇಸ್ಲಾಮಿಕ್ ಗಣರಾಜ್ಯ ಇರಾನ್ ಸೇರಿದಂತೆ ಅರಬ್ ಜಗತ್ತಿನ ಎಲ್ಲೆಡೆ ಮಸೀದಿಗಳು ಮತ್ತಿತರೆ ಪವಿತ್ರ ಸ್ಥಾನಗಳಲ್ಲಿ ಸಾಮಾಜಿಕ ದೂರದ ನಿರ್ಬಂಧಗಳನ್ನು ವಿಧಿಸಲಾಗಿದೆ.

ಇಮಾಮ್ ಸೈಯದ್ ಅಹ್ಮದ್ ಬುಖಾರಿ, ಇಮಾಮ್ ಮುಫ್ತಿ ಮುಕರ್ರಮ್ ಅಹ್ಮದ್ ಹಾಗೂ ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಹಾಗೂ ದೇವೋಬಂದ್ ದಾರುಲ್ ಉಲೂಮ್ ನ ಫತ್ವಾ ಮಾತ್ರವಲ್ಲದೆ ಅನೇಕ ಮಸೀದಿಗಳು ಗುಂಪು ಪ್ರಾರ್ಥನೆಗಳು ಕರೋನಾ ಸೋಂಕಿಗೆ ದಾರಿ ಮಾಡುತ್ತವೆ ಎಂದು ಸಾರಿ ಆಗಿದೆ. ಆದರೂ ಕೆಲವೆಡೆ ಇಂತಹ ಪ್ರಾರ್ಥನೆಗಳು ನಡೆಯುತ್ತಿವೆ. ಸಾಂಕ್ರಾಮಿಕ ರೋಗಗಳು ಮತ್ತು ಮಹಾಮಾರಿಗಳ ವಿಪತ್ತು ಎರಗಿದಾಗ ಯಾರೂ ಮತ್ತೊಬ್ಬರ ಮನೆಗೆ ಹೋಗಕೂಡದು ಮತ್ತು ಯಾರನ್ನೂ ತಮ್ಮ ಮನೆಗೆ ಕರೆಯಬಾರದು ಎಂದು ಪ್ರವಾದಿ ಮಹಮ್ಮದರು ಹೇಳಿದ್ದಾರೆ. ಭಾರೀ ಮಳೆ ಸುರಿಯುತ್ತಿದ್ದ ಒಂದು ದಿನ ಪ್ರಾರ್ಥನೆಯ ಹೊತ್ತು ಸಮೀಪಿಸಿದಾಗ ನಿಮ್ಮ ಮನೆಗಳಲ್ಲೇ ಪ್ರಾರ್ಥಿಸಿ ಎಂದು ಪ್ರವಾದಿ ಹೇಳಿದ್ದರು. ಒಂಟೆಗಳಿಗೆ ಮಾರಣಾಂತಿಕ ಸಾಂಕ್ರಾಮಿಕ ಜಾಡ್ಯ ತಗುಲಿದಾಗ ಸೋಂಕಿತ ಒಂಟೆಗಳನ್ನು ಆರೋಗ್ಯವಂತ ಒಂಟೆಗಳಿಂದ ದೂರ ಇಡುವಂತೆಯೂ ಸೂಚಿಸಿದ್ದರಂತೆ. ಹೀಗಿರುವಾಗ ಮಸೀದಿಗಳಲ್ಲಿ ಪ್ರಾರ್ಥಿಸುವುದನ್ನು ನಿರ್ಬಂಧಿಸಿರುವ ಸರ್ಕಾರ ಮುಸಲ್ಮಾನ ಸಮುದಾಯದ ಒಗ್ಗಟ್ಟನ್ನು ಮುರಿಯತೊಡಗಿದೆ ಎಂಬ ಧರ್ಮಗುರುಗಳ ಮಾತುಗಳು ಅಸಂಬದ್ಧ. ಸಾಮಾನ್ಯ ಅಮಾಯಕ ಮುಸ್ಲಿಮರನ್ನು ಕಾವಲಿಯಿಂದ ಕೆಂಡಕ್ಕೆ ತಳ್ಳುವ ಈ ಕೃತ್ಯ ನಿಲ್ಲಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...