Homeನಿಜವೋ ಸುಳ್ಳೋಮುಖ್ಯಮಂತ್ರಿಗಳ ಎಚ್ಚರಿಕೆಯ ನಂತರವೂ ಸುಳ್ಳು ಸುದ್ದಿ ಹರಡುತ್ತಿರುವ ಪೋಸ್ಟ್‌ ಕಾರ್ಡ್‌ ಕನ್ನಡ: ಕ್ರಮ ಯಾವಾಗ?

ಮುಖ್ಯಮಂತ್ರಿಗಳ ಎಚ್ಚರಿಕೆಯ ನಂತರವೂ ಸುಳ್ಳು ಸುದ್ದಿ ಹರಡುತ್ತಿರುವ ಪೋಸ್ಟ್‌ ಕಾರ್ಡ್‌ ಕನ್ನಡ: ಕ್ರಮ ಯಾವಾಗ?

ತನ್ನ ಫೇಸ್‌ಬುಕ್‌ ಪೇಜ್‌ನಲ್ಲಿ ಮುಸ್ಲಿಮರ ವಿರುದ್ಧವಾಗಿ, ಮೋದಿಯವರ ಪರವಾಗಿ ಹಸಿ ಸುಳ್ಳುಗಳನ್ನು ಹರಡುವುದನ್ನು ಹೆಚ್ಚು ಮಾಡಿದೆ. ಈ ವಾರ ಅದು ಹರಡಿದ ಸುಳ್ಳುಗಳು ಮತ್ತು ಅವುಗಳ ಅಸಲಿಯತ್ತನ್ನು ನೋಡೋಣ ಬನ್ನಿ.

- Advertisement -
- Advertisement -

ಇಂದು ವಿಶ್ವಕ್ಕೆ ಕೊರೊನಾ ಹಬ್ಬಿದೆ. ಅದರ ವಿರುದ್ಧ ಹೋರಾಟ ನಡೆಯುತ್ತಿದೆ. ಆದರೆ ಬಹುತೇಕರು ಇಂದು ಹೇಳುತ್ತಿರುವುದೇನೆಂದರೆ “ಕೊರೊನಾ ತಡೆಯಬಹುದು. ಅದು ಒಂದಲ್ಲ ಒಂದು ದಿನ ನಾಶವಾಗುತ್ತದೆ. ಆದರೆ ಸುಳ್ಳು ಸುದ್ದಿಗಳನ್ನು ತಡೆಯಲಾಗದು” ಎಂಬುದಾಗಿದೆ. ಅಷ್ಟು ಬೃಹತ್‌ ಮಟ್ಟಕ್ಕೆ ಸುಳ್ಳು ಸುದ್ದಿ  ಬೆಳೆದುನಿಂತಿದೆ.

ಕೊರೊನಾ ವೈರಸ್‌ ರೀತಿ ಇನ್ನೊಂದು ವೈರಸ್‌ ಬೆಳೆದುನಿಂತಿದ್ದು ಸಮಾಜಕ್ಕೆ ಮಾರಕವಾಗಿದೆ. ಅದೇ ಕೋಮುದ್ವೇಷ ಮತ್ತು ಸುಳ್ಳು ಸುದ್ದಿಗಳಾಗಿವೆ. ಕೊರೊನಾ ಸಂಕಷ್ಟದಿಂದ ನಾವು ಮಹಾರಾಷ್ಟ್ರವನ್ನು ಕಾಪಾಡುತ್ತೇವೆ. ಆದರೆ ಸುಳ್ಳು ಸುದ್ದಿ ಹರಡುವವರನ್ನು ನಮ್ಮ ಸರ್ಕಾರ ಸುಮ್ಮನೆ ಬಿಡುವುದಿಲ್ಲ. ತಮಾಷೆಗಾದರೂ ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಕಿಡಿಕಾರಿದ್ದಾರೆ. ಈ ಕುರಿತು ಸಾಲು ಸಾಲು ಟ್ವೀಟ್‌ಗಳನ್ನು ಮಾಡಿದ್ದಾರೆ.

ಇನ್ನು ಕರ್ನಾಟಕದಲ್ಲಿ ಬಹುತೇಕ ಮುಖ್ಯವಾಹಿನಿ ಮಾಧ್ಯಮಗಳು ಕೊರೊನಾ ಬಂದಿರುವುದು ಮುಸ್ಲಿಮರಿಂದ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಸಂದರ್ಶನ ಮಾಡಿದ ಕನ್ನಡ ಎರಡು ಚಾನೆಲ್‌ಗಳು ಮುಸ್ಲಿಮರ ವಿರುದ್ಧ ಪ್ರಶ್ನೆ ಕೇಳಿದಾಗ ಯಡಿಯೂರಪ್ಪನವರು ಒಂದು ಕೋಮಿನ ವಿರುದ್ಧ ಮಾತಾಡಿದರೆ ಕ್ರಮ ಖಚಿತ ಎಂದು ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ


ಇಷ್ಟೆಲ್ಲ ಆದ ಮೇಲೂ ಸಹ ಕನ್ನಡದ ಫೇಕ್‌ ನ್ಯೂಸ್‌ ವೆಬ್‌ಸೈಟ್‌ ಎಂದೇ ಕುಖ್ಯಾತಿಯಾದ ಪೋಸ್ಟ್‌ಕಾರ್ಡ್‌ ಕನ್ನಡ ಮಾತ್ರ ತನ್ನ ಫೇಸ್‌ಬುಕ್‌ ಪೇಜ್‌ನಲ್ಲಿ ಮುಸ್ಲಿಮರ ವಿರುದ್ಧವಾಗಿ, ಮೋದಿಯವರ ಪರವಾಗಿ ಹಸಿ ಸುಳ್ಳುಗಳನ್ನು ಹರಡುವುದನ್ನು ಹೆಚ್ಚು ಮಾಡಿದೆ. ಈ ವಾರ ಅದು ಹರಡಿದ ಸುಳ್ಳುಗಳು ಮತ್ತು ಅವುಗಳ ಅಸಲಿಯತ್ತನ್ನು ನೋಡೋಣ ಬನ್ನಿ.

ಸುಳ್ಳು 1 : ಕೊರೊನಾ ಸೋಂಕಿತ ತಬ್ಲಿಘಿಗಳು ಬೆತ್ತಲು ಓಡಾಡಿದರು.  

ಉತ್ತರ ಪ್ರದೇಶದ ಗಾಜಿಯಾಬಾದ್, ಕಾನ್ಪುರ ಮೊದಲಾದೆಡೆ ಕ್ವಾರಂಟೈನ್‌ನಲ್ಲಿ ಬೆತ್ತಲೆ ಓಡಾಡಿದ ತಬ್ಲಿಘಿಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಯೋಗಿ ಆದಿತ್ಯನಾಥ್‌ರಂಥಾ ಖಡಕ್‌ ಮುಖ್ಯಮಂತ್ರಿ ಇದ್ದರೆ ಕೊರೋನಾ ನಿರ್ಮೂಲನೆ ಖಂಡಿತಾ ಸಾಧ್ಯ.

ಸತ್ಯ: ತಬ್ಲಿಘಿಗಳು ಬೆತ್ತಲೆ ಓಡಾಡಿದ್ದರೆ ಎಂದು ಮಾಧ್ಯಮಗಳು ತೋರಿಸಿದ ಆ ವಿಡಿಯೋ ಪಾಕಿಸ್ತಾನದ ಕರಾಚಿಯ ಮಸೀದಿಯೊಂದರಲ್ಲಿ ನಡೆದ ಘಟನೆಯಾಗಿದ್ದು ಈ ವಿಡಿಯೋವನ್ನು ಮೊದಲ ಬಾರಿಗೆ ಆಗಸ್ಟ್ 23, 2019ರಂದು ಯೂಟ್ಯೂಬ್‌ನಲ್ಲಿ ಪೋಸ್ಟ್ ಮಾಡಲಾಗಿದೆ. ಆ ವಿಡಿಯೋದಲ್ಲಿರುವ ವ್ಯಕ್ತಿ ಕರಾಚಿಯ ಪೋಲಿಸ್ ಕಮ್ಯಾಂಡೊ ಒಬ್ಬರ ಮಗನಾಗಿದ್ದು, ಆತನ ಹೆಸರು ಶಾಫಿಕ್ ಅಬ್ರೊ. ಆತ ಮನೋವೈಕಲ್ಯದಿಂದ ಬಳಲುತ್ತಿದ್ದು ಈ ಘಟನೆಯ ನಂತರ ಪೋಲಿಸರು ದಸ್ತಗಿರಿ ಮಾಡಿದ್ದರು ಎಂದು ಹಲವು ಫ್ಯಾಕ್ಟ್‌ ಚೆಕ್‌ ವೆಬ್‌ಸೈಟ್‌ಗಳು ವರದಿ ಮಾಡಿವೆ.

ಯೂಟ್ಯೂಬ್‌ನಲ್ಲಿ ವಿಡಿಯೋ. ದಿನಾಂಕ ಗಮನಿಸಿ

ವಿಡಿಯೋದಲ್ಲಿ ಚಿತ್ರತವಾಗಿರುವ ಮಸೀದಿಯ ಕರಾಚಿಯದ್ದು ಎಂಬುದಕ್ಕೆ ಮತ್ತೊಂದು ಸಾಕ್ಷಿ ಇಲ್ಲಿದೆ ನೋಡಿ.

ಸುಳ್ಳು 2: ಅಮೆರಿಕ ಭಾರತಕ್ಕೆ ಶರಣಾಗಿ ಸಹಾಯ ಕೇಳುತ್ತಿದೆ. ಭಾರತ ಮೂರು ಷರತ್ತುಗಳನ್ನು ಮುಂದಿಟ್ಟಿದೆ

ಅಂದು ಬಾರ್ಡ‌ರ್‌ನಲ್ಲಿ ಗುಂಡು ಹೊಡಿಯೋಕೂ ಅಮೆರಿಕಾ ಅಪ್ಪಣೆ ಕೇಳುತ್ತಿದ್ದ ನಾವು, ಇಂದು ಅಮೆರಿಕಾನೇ ಬಂದು ನಮ್ಮ ಸಹಾಯ ಕೇಳುವಂತೆ ದೇಶವನ್ನು ಅಭಿವೃದ್ಧಿ ಮಾಡಿದ ನರೇಂದ್ರ ಮೋದಿಯವರಿಗೆ ಧನ್ಯವಾದಗಳು ಎಂದು ಪೋಸ್ಟ್‌ ಕಾರ್ಡ್‌ ಹೇಳಿದೆ.

ಭಾರತ ಸರ್ಕಾರ ಹೈಡ್ರಾಕ್ಸಿಕ್ಲೋರೋಕ್ವಿನ್ ರಪ್ತು ಮಾಡಲು ಅಮೇರಿಕಾಗೆ ವಿಧಿಸಿದ ಷರತ್ತುಗಳು

1 ಭಾರತೀಯ ಔಷಧೀಯ ಕಂಪನಿಗಳಿಗೆ ಅಮೇರಿಕಾದಲ್ಲಿ ಮಾರುಕಟ್ಟೆಯನ್ನು ತೆರೆಯಬೇಕು.

2 FDA ಹೆಸರಿನಲ್ಲಿ ವಿಧಿಸಲಾದ ಎಲ್ಲಾ ನಿರ್ಬಂಧಗಳನ್ನು ತೆಗೆದುಹಾಕಬೇಕು.

3 ಇನ್ನು ಮುಂದೆ ಭಾರತೀಯ ಔಷಧಿಯ ಕಂಪನಿಗಳಿಗೆ ಯಾವುದೇ ತೊಂದರೆಯಾಗದಂತೆ ಕಾನೂನಿನ ಭದ್ರತೆ ಒದಗಿಸಬೇಕು

ಅಮೆರಿಕ ಈ ಮೂರು ಷರತ್ತುಗಳನ್ನು 24 ಘಂಟೆಯ ಒಳಗಾಗಿ ಒಪ್ಪಿಕೊಂಡಿತ್ತು.

ಭಾರತ ಈಗ ಯಾರಿಗೂ ಬಗ್ಗುವುದಿಲ್ಲ ಭಾರತದೆದುರು ಎಲ್ಲರೂ ಬಾಗಲೇಬೇಕು ಎಂದೂ ಸಹ ಪೋಸ್ಟ್‌ ಕಾರ್ಡ್‌ ಕೊಚ್ಚಿಕೊಂಡಿದೆ.

ಸತ್ಯ: ಇದು ಸಂಪೂರ್ಣ ಸುಳ್ಳಾಗಿದೆ. ಮೊದಲಿಗೆ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮಲೇರಿಯಾ ನಿರೋಧಕ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳ ಮೇಲಿನ ರಫ್ತು ತೆರವುಗೊಳಿಸದಿದ್ದರೆ ಪ್ರತಿಕಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ಧಮಕಿ ಹಾಕಿದ್ದರು. ಅದಕ್ಕೆ ಬೆದರಿದ ಮೋದಿಯವರು ಕೂಡಲೇ ನಿರ್ಬಂಧ ತೆರವುಗೊಳಿಸಿದರು. ನಂತರವಷ್ಟೇ ಅಮೆರಿಕಾ ಭಾರತಕ್ಕೆ ಧನ್ಯವಾದ ಹೇಳಿದ್ದು.

ಟ್ರಂಪ್‌ರವರ ಮಾತುಗಳಲ್ಲೇ ಕೇಳಿ

ಸುಳ್ಳು 3:ಚೀನಾ ನಂಬರ್‌ ಒನ್‌ ಆಗಬೇಕೆಂದು ಜೈವಿಕ ಅಸ್ತ್ರ ಬಳಸಿ ಕೊರೊನಾ ಹರಡುತ್ತಿದೆ.

ಚೀನಾ ತನ್ನ ಸಾಮಾಜಿಕ ಹೊಣೆಗಾರಿಕೆಯನ್ನು ಮರೆತು ನಿಯಮಗಳ ಉಲ್ಲಂಘಿಸಿದೆ. ನಂಬರ್‌ ಒನ್‌ ಆಗಬೇಕೆಂದು ಜೈವಿಕ ಅಸ್ತ್ರ ಬಳಸಿ ಕೊರೊನಾ ಹರಡುತ್ತಿದೆ ಎಂದು ಇದೇ ಪೋಸ್ಟ್‌ ಕಾರ್ಡ್‌ ಕನ್ನಡ ಸುಳ್ಳು ಹಬ್ಬಿಸಿದೆ.

ಸತ್ಯ: ವೈರಸ್ ಅನ್ನು ವಿನ್ಯಾಸಗೊಳಿಸಲಾಗಿದೆ ಅಥವಾ ಉದ್ದೇಶಪೂರ್ವಕವಾಗಿ ಬಿಡುಗಡೆ ಮಾಡಲಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ” ಎಂದು ಸ್ವಿಟ್ಜರ್ಲೆಂಡ್‌ನ ಬಾಸೆಲ್ ವಿಶ್ವವಿದ್ಯಾಲಯದ ಆಣ್ವಿಕ ಸಾಂಕ್ರಾಮಿಕ ರೋಗಶಾಸ್ತ್ರಜ್ಞೆ ಎಮ್ಮಾ ಹಾಡ್‌ಕ್ರಾಫ್ಟ್ ಹೇಳುತ್ತಾರೆ.

ಕ್ಯಾಲಿಫೋರ್ನಿಯಾದ ಲಾ ಜೊಲ್ಲಾದಲ್ಲಿರುವ ಸ್ಕ್ರಿಪ್ಪ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್ನ ಸಾಂಕ್ರಾಮಿಕ ರೋಗ ಸಂಶೋಧಕ ಆಂಡರ್ಸನ್ ಇದರ ಬಗ್ಗೆ ಸಂಶೋಧನೆ ನಡೆಸಿ ಇದು ಮಾನವ ನಿರ್ಮತವಲ್ಲ ನೈಸರ್ಗಿಕ ಎಂದು ಸಾರಿದ್ದಾರೆ. ಪೂರ್ಣ ವಿವರಕ್ಕೆ ಇಲ್ಲಿ ಕ್ಲಿಕ್‌ ಮಾಡಿ.

ಇನ್ನೊಂದು ಕಡೆ ಕೊರೊನಾ ವೈರಸ್ ತಯಾರಿಸಿ ಚೀನಾಕ್ಕೆ ಮಾರಾಟ ಮಾಡಿದ್ದಕ್ಕಾಗಿ ಯುಎಸ್ ಅಧಿಕಾರಿಗಳು ಹಾರ್ವರ್ಡ್ ಪ್ರಾಧ್ಯಾಪಕ ಡಾ. ಚಾರ್ಲ್ಸ್ ಲೈಬರ್ ಅವರನ್ನು ಬಂಧಿಸಿದ್ದಾರೆ ಎಂಬ ಸಂದೇಶವುಳ್ಳ ವಿಡಿಯೋ ಕ್ಲಿಪ್ ಫೇಸ್‌ಬುಕ್, ಟ್ವಿಟರ್ ಮತ್ತು ವಾಟ್ಸಾಪ್‌ನಲ್ಲಿ ಹರಿದಾಡುತ್ತಿದೆ.

ಡಾ. ಲೈಬರ್ ಅವರನ್ನು 2020 ರ ಜನವರಿಯಲ್ಲಿ ಯುಎಸ್ ಫೆಡರಲ್ ಅಧಿಕಾರಿಗಳು ಚೀನಾದಿಂದ ಪಡೆದ ಹಣದ ಮೇಲೆ “ಸುಳ್ಳು, ಕಾಲ್ಪನಿಕ ಮತ್ತು ಮೋಸದ ಹೇಳಿಕೆ ನೀಡಿದ್ದಕ್ಕಾಗಿ” ಬಂಧಿಸಿದ್ದರೆ ಹೊರತು ಅವರಿಗೂ ಕೊರೊನಾಗೂ ಸಂಬಂಧವಿಲ್ಲ.


ಇದನ್ನೂ ಓದಿ: ಕೊರೊನಾ ತಯಾರಿಸಿ ಚೈನಾಗೆ ಮಾರಿದ ಹಾರ್ವಡ್‌ ಪ್ರಾಧ್ಯಾಪಕನ ಬಂಧನ: ಮತ್ತೊಂದು ಸುಳ್ಳು ಸುದ್ದಿ


ಒಟ್ಟಿನಲ್ಲಿ ಪೋಸ್ಟ್‌ ಕಾರ್ಡ್‌ ಕನ್ನಡ ಕೋಮುದ್ವೇಷ ಹರಡುವ ಹಲವು ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುತ್ತಲೇ ಇದೆ. ಆದರೂ ಸಹ ಅವರ ಮೇಲೆ ಕ್ರಮ ಕೈಗೊಳ್ಳಲು ಆಗಿಲ್ಲ ಏಕೆ?

ಅನಂತ್‌ ಕುಮಾರ್‌ ಹೆಗಡೆ, ಶೋಭಾ ಕರಂದ್ಲಾಚೆ ಮತ್ತು ಬಸನಗೌಡ ಯತ್ನಾಳ್‌ ಥರಹದ ಬಿಜೆಪಿಯ ಜನಪ್ರತಿನಿಧಿಗಳೆ ದಿನನಿತ್ಯ ಮುಸ್ಲಿಂ ಸಮಾಜದ ವಿರುದ್ಧ ಹೇಳಿಕೆ ಕೊಡುವ ಕೆಲಸ ಮಾಡುತ್ತಿದ್ದಾರೆ. ಇನ್ನು ಅವರ ಮೇಲೆ ಈ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ನಂಬಬೇಕೆ? ಸರಿ ಸರ್ಕಾರ ಮಾಡುತ್ತೋ ಬಿಡುತ್ತೋ. ಸುಳ್ಳು ಸುದ್ದಿಗಳ ವಿರುದ್ಧ ಹೋರಾಡಲು ನಾವೇನು ಮಾಡಬೇಕು ಯೋಚಿಸೋಣ ಅಲ್ಲವೇ?

ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚುವುದು ಹೇಗೆ?

ಕಾನೂನಿನ ವ್ಯಾಪ್ತಿಯಲ್ಲಿ ಪೋಲಿಸ್ ಮತ್ತು ಇತರ ತನಿಖಾ ಏಜೆನ್ಸಿಗಳು ಇದರ ಸತ್ಯಾಸತ್ಯತೆ ಪತ್ತೆಹಚ್ಚುವ ಕೆಲಸ ಮಾಡುತ್ತಿರುತ್ತವೆ. ಜನ ಸಾಮಾನ್ಯರು ಮಾಡಬೇಕಾಗಿರುವುದು ಇಷ್ಟೇ:

  • ಸುದ್ದಿ ಮೂಲ ಪರೀಕ್ಷಿಸಿ. ಸಂದೇಶವನ್ನು ಬಿಟ್ಟು ಅದರ ಮೂಲದ ಬಗ್ಗೆ ಹುಡುಕಿ. ಯಾರು ಇದನ್ನು ನಿಮಗೆ ಕಳುಹಿಸಿದ್ದಾರೆ ಅವರು ಕೇವಲ ಸ್ನೇಹಿತರೇ, ಯಾವುದೋ ಗುಂಪಿನ ಸದಸ್ಯರೇ, ನಂಬಿಕಸ್ಥರೇ ತಿಳಿಯಿರಿ.
  • ಜಾಲತಾಣದ ಉದ್ದೇಶವೇನು, ಅವರ ಸಂಪರ್ಕ ವಿಳಾಸ ದೂರವಾಣಿ ಸಂಖ್ಯೆ ಇದೆಯೇ ನೋಡಿ.
  • ಕೇವಲ ಸುದ್ದಿಯ ತಲೆಬರಹ ಓದಬೇಡಿ, ಅವು ರೋಚಕವಾಗಿರುತ್ತವೆ, ಇಡೀ ಸುದ್ದಿ ಓದಿ ನೋಡಿ.
  • ಸುದ್ದಿಯ ಲೇಖಕರ/ಪ್ರಕಾಶಕರ ಬಗ್ಗೆ ಸ್ವಲ್ಪ ಹುಡುಕಿ, ಅವರು ಪೂರ್ವಗ್ರಹಪೀಡಿತರಾಗಿರಬಹುದು.\
  • ಸುದ್ದಿಗೆ ಏನಾದರೂ ಬೆಂಬಲಿಸುವಂತಹ ಮೂಲದ ಲಿಂಕ್ ಇದ್ದರೆ ಅದನ್ನು ಜಾಲಿಸಿ ನೋಡಿ. ಪೂರಕವಾಗಿದೆಯೇ ಇಲ್ಲವೇ ಎಂದು. ಎಷ್ಟೋ ಬಾರಿ ಅಂತಹ ಜಾಲತಾಣವೇ ಇರುವುದಿಲ್ಲ.
  • ಕೇವಲ ಒರ್ವ ದೊಡ್ಡ ವ್ಯಕ್ತಿಯ ಭಾವಚಿತ್ರವಿದೆ ಮತ್ತು ಅದರೊಂದಿಗೆ ಏನೋ ಹೇಳಿಕೆ ಇದೆ ಎಂದ ಮಾತ್ರಕ್ಕೆ ಅದು ನಿಜವಾಗುವುದಿಲ್ಲ. ಚಾಣಕ್ಯ, ನಾಟ್ರಡ್ಯಾಮಸ್, ಚರ್ಚಿಲ್, ಮೆಕಾಲೆ ಮುಂತಾದವರ ಭಾವಚಿತ್ರದ ಜೊತೆ ಏನೇನೋ ಸಂದೇಶಗಳು ಹರಿದಾಡುತ್ತಿವೆ.
  • ಸುದ್ದಿಯ ದಿನಾಂಕ ನೋಡಿ. ಹಳೆಯ ಸುದ್ದಿಗಳು ಹೊಸ ತಲೆಬರಹದೊಂದಿಗೆ ಮತ್ತೆ ಮತ್ತೆ ಕಾಣಸಿಗುತ್ತವೆ.
  • ಸುದ್ದಿಯೋ ಕೇವಲ ತಮಾಷೆಯೋ ಸರಿಯಾಗಿ ನೋಡಿ. ಏಪ್ರಿಲ್ 1ರ ಸಂದೇಶಗಳು ವರ್ಷವಿಡೀ ಸುತ್ತುತ್ತಿರುತ್ತವೆ.
  • ನಿಮ್ಮ ಸ್ವಂತ ಪೂರ್ವನಿರ್ಧಾರಿತ ನಂಬಿಕೆಗಳು ಸುಳ್ಳನ್ನೇ ನಿಜ ಎಂದು ನಂಬುವಂತೆ ಮಾಡಬಹುದು. ಅದನ್ನು ಸರಿಪಡಿಸಿಕೊಳ್ಳಿ.
  • ತಜ್ಞರನ್ನು ಸಂಪರ್ಕಿಸಿ. ಸಂದೇಶ ನಿಜವೋ ಸುಳ್ಳೋ ಎಂದು ಸಂದೇಹವಿದ್ದಲ್ಲಿ ಅದನ್ನು ಮುಂದಕ್ಕೆ ಪಸರಿಸದೇ ಅದನ್ನು ನಂಬಿಕಸ್ಥ ಸತ್ಯಾಸತ್ಯತೆ ಪರಿಶೀಲಿಸುವ ಜಾಲತಾಣಗಳಿಗೆ ಕಳುಹಿಸಿ (ಆಲ್ಟ್-ನ್ಯೂಸ್, ಬೂಮ್‌ಲೈವ್‌, ಕ್ವಿಂಟ್‌ ವೆಬ್‌ಖೂಫ್‌, ಫ್ಯಾಕ್ಟ್-ಚೆಕರ್, ಎಸ್.ಎಂ.ಹೋಕ್ಸ್ ಸ್ಲೇಯರ್ ಇತ್ಯಾದಿ). ಸತ್ಯವನ್ನು ಬೆಂಬಲಿಸುವ ಜಾಲತಾಣಗಳನ್ನು ಬೆಂಬಲಿಸಿ.

ಸುಳ್ಳು ಸುದ್ದಿ/ಅಪಪ್ರಚಾರ ಪಸರಿಸಬೇಡಿ. ಇದರಿಂದ ದೇಶಕ್ಕೆ ಯಾವ ಪ್ರಯೋಜನವೂ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...