Homeಮುಖಪುಟಕೆ.ಆರ್‌ ಪೇಟೆಯಲ್ಲಿ ಮುಸ್ಲಿಂ ಯುವಕರ ಬಗ್ಗೆ ಸುಳ್ಳು ಸುದ್ದಿ: ಕೊನೆಗೆ ಸಿಕ್ಕ ಆರೋಪಿಗಳು ಬೇರೆ ಧರ್ಮದವರು!

ಕೆ.ಆರ್‌ ಪೇಟೆಯಲ್ಲಿ ಮುಸ್ಲಿಂ ಯುವಕರ ಬಗ್ಗೆ ಸುಳ್ಳು ಸುದ್ದಿ: ಕೊನೆಗೆ ಸಿಕ್ಕ ಆರೋಪಿಗಳು ಬೇರೆ ಧರ್ಮದವರು!

ಈ ಪ್ರಕರಣ ಸತ್ಯ ತಿಳಿಯುವ ಮುನ್ನ ಸುಳ್ಳು ಸುದ್ದಿ ಹರಡಬಾರದೆಂಬ ಪಾಠವನ್ನು ಕಲಿಸಿದೆ.

- Advertisement -
- Advertisement -

ಕೃಷ್ಣರಾಜಪೇಟೆ ತಾಲ್ಲೂಕಿನ ತೆಂಡೇಕೆರೆ ಚೆಕ್ ಪೋಸ್ಟ್ ನಲ್ಲಿ ಚೆಕ್ ಪೋಸ್ಟ್ ಅಧಿಕಾರಿಗಳು ಹಾಗೂ ಪೋಲಿಸರಿಗೆ ಬೆದರಿಸಿ ಆಟೋದಲ್ಲಿ ಪರಾರಿಯಾಗಿದ್ದ ಮೂವರು ಯುವಕರನ್ನು ತಹಶಿಲ್ದಾರ್‌ ಶಿವಮಾಧು ಸೇರಿದಂತೆ ಹಲವು ಮಾಧ್ಯಮಗಳು ಮುಸ್ಲಿಂ ಯುವಕರು ಎಂದು ತಪ್ಪು ಸುದ್ದಿ ಹರಡಿದ್ದರಿಂದ ತಾಲ್ಲೂಕಿನಾದ್ಯಂತ ಆತಂಕ ಉಂಟಾಗಿತ್ತು.

ಆದರೆ ಕೆ.ಆರ್.ಪೇಟೆ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್ ಮತ್ತು ಗ್ರಾಮಾಂತರ ಪೋಲೀಸ್ ಸಬ್ ಇನ್ಸ್ ಪೆಕ್ಟರ್ ಲಕ್ಷ್ಮಣ್ ಅವರ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿದ ನಂತರ ಆರೋಪಿಗಳು ಪತ್ತೆಯಾಗಿದ್ದು ಅವರನ್ನು ಬೂಕನಕೆರೆ ಹೋಬಳಿಯ ಬಳ್ಳೇಕೆರೆ ಗ್ರಾಮದ ಮಹೇಶ್.ಬಿನ್ ಕೆಂಪಟ್ಟಿಗೌಡ, ಅಭಿಶೇಕ್ ಬಿನ್ ಮಹೇಶ,  ಶ್ರೀನಿವಾಸ್ ಬಿನ್ ಪುಟ್ಟರಾಜು ಎಂದು ಗುರುತಿಸಲಾಗಿದೆ.

ವಿಡಿಯೋ ನೋಡಿ

ಮುಸ್ಲಿಮ್ ಯುವಕರ ಬಗ್ಗೆ ಸುಳ್ಳು ಸುದ್ದಿಗಳು

ಕ್ವಾರಂಟೈನ್‌ನಲ್ಲಿದ್ದ ಮುಸ್ಲಿಮ್ ಹುಡುಗರು ಕೆ.ಆರ್ ಪೇಟೆ ತುಂಬಾ ಓಡಾಡಿದ್ದಾರೆ ಎಂಬ ಸುಳ್ಳು ಹರಡುವಿಕೆ. ಕೊನೆಗೆ ಸಿಕ್ಕಿದ್ದು ಬೇರೆ ಧರ್ಮದವರು. ಸುಳ್ಳು ಸುದ್ದಿ ಹರಡುವ ಮುನ್ನ ಪರಿಶೀಲಿಸಿ..

Posted by Naanu Gauri on Thursday, April 9, 2020

ಇದರಿಂದಾಗಿ ತಾಲ್ಲೂಕಿನ ಜನತೆಯಲ್ಲಿ ಉಂಟಾಗಿದ್ದ ಆತಂಕವನ್ನು ಕೃಷ್ಣರಾಜಪೇಟೆ ಗ್ರಾಮಾಂತರ ಪೋಲಿಸರು ದೂರ ಮಾಡಿದ್ದಾರೆ. ಅಲ್ಲದೇ ಈ ಪ್ರಕರಣ ಸತ್ಯ ತಿಳಿಯುವ ಮುನ್ನ ಸುಳ್ಳು ಸುದ್ದಿ ಹರಡಬಾರದೆಂಬ ಪಾಠವನ್ನು ಕಲಿಸಿದೆ.

ಬಂಧಿತರ ಪೈಕಿ ಮಹೇಶ್ ಬೆಂಗಳೂರಿನಲ್ಲಿ ಆಟೋ ಓಡಿಸುವ ವೃತ್ತಿ ಮಾಡುತ್ತಿದ್ದು, ಯುಗಾದಿ ಹಬ್ಬಕ್ಕೆ ಸ್ವಗ್ರಾಮ ಬಳ್ಳೇಕೆರೆಗೆ ಬಂದಿದ್ದರು. ಹಾಗಾಗಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಮಹೇಶ್ ಕೈಗೆ ಗ್ರಾಮ ಪಂಚಾಯಿತಿ ಯವರು ಸೀಲ್ ಹಾಕಿ ಹೋಂ ಕ್ವಾರಂಟೈನ್ ನಲ್ಲಿ ಇರುವಂತೆ ಆದೇಶ ನೀಡಿದ್ದರು. ಆದರೆ ಸ್ನೇಹಿತರೊಂದಿಗೆ ಚನಕುರಳಿಗೆ ಮೆಡಿಕಲ್‌ಗೆ ಹೋಗಿ ವಾಪಸ್ ಬರುವಾಗ ತೆಂಡೇಕೆರೆ ಚೆಕ್ ಪೋಸ್ಟ್ ನಲ್ಲಿ ಅಧಿಕಾರಿಗಳು ಹಿಡಿದುಕೊಳ್ಳುವ ಭಯದಿಂದ ನಮಗೆ ಕೊರೋನೊ ಇದೆ ಮುಟ್ಟಿದರೆ ನಿಮಗೂ ಕೊರೋನೋ ಬರುತ್ತದೆ ನೋಡಿ ಎಂದು ಕೈಯಲ್ಲಿದ್ದ ಸೀಲ್ ತೋರಿಸಿ ಭಯಹುಟ್ಟಿಸಿ ಯುವಕರು ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ನಡೆದ 12 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದ್ದು, ಆರೋಪಿಗಳು ರಾತ್ರಿ ತೆಂಡೆಕರೆ ಚೆಕ್‌ಪೋಸ್ಟ್‌ ಬಳಿ ಹೋಗಿದ್ದು ನಾವೆ. ಔಷಧಿ ತರಲು ಚಿನಕುರಳಿಗೆ ಹೋಗಿದ್ದೇವು. ಪೊಲೀಸ್‌ ಭಯದಿಂದ ಅಲ್ಲಿಂದ ತಪ್ಪಿಸಿಕೊಂಡಿದ್ದೆವು ಎಂದು ಒಪ್ಪಿಕೊಂಡಿದ್ದಾರೆ.

ಆದರೆ ಇಂದು ಬೆಳಿಗ್ಗೆಯಿಂದಲೇ ಕೆ.ಆರ್‌ ಪೇಟೆ ಮತ್ತು ಜಿಲ್ಲೆಯಾದ್ಯಂತ ಕೊರೊನಾ ಸೋಂಕಿತ ಮುಸ್ಲಿಮರು ಕೆ.ಆರ್‌ ಪೇಟೆ ಸುತ್ತುತ್ತಾ ಇತರರಿಗೂ ಹರಡುತ್ತಿದ್ದಾರೆ ಹುಷಾರಾಗಿರಿ ಎಂಬ ಸುಳ್ಳುಗಳನ್ನು ವೈರಲ್‌ ಮಾಡಲಾಗಿತ್ತು. ಆದರೆ ಆರೋಪಿಗಳು ಮುಸ್ಲಿಮರಲ್ಲ ಎಂಬುದು ಬಂಧನದ ನಂತರ ಸ್ಪಷ್ಟವಾಗಿದೆ.


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ


ಎರಡು ದಿನಗಳ ಕೆಳಗೆ ತಾನೇ ಮುಖ್ಯಮಂತ್ರಿ ಯಡಿಯೂರಪ್ಪನವರು ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದ ವಿರುದ್ಧ ಸುಳ್ಳು ಸುದ್ದಿ ಹರಡಿದರೆ ಕ್ರಮ ಖಚಿತ ಎಂದು ಎಚ್ಚರಿಕೆ ನೀಡಿದ್ದೆರು. ಆದರೂ ಸಹ ಅಧಿಕಾರಿಗಳು ಸೇರಿದಂತೆ ಈ ಸುಳ್ಳು ಸುದ್ದಿ ಹರಡುವ, ಕೋಮುದ್ವೇಷ ಹರಡುವ ಕೆಲಸಗಳು ನಿಂತಿಲ್ಲ. ಈ ಕುರಿತು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ.


ಇದನ್ನೂ ಓದಿ: ಮುಖ್ಯಮಂತ್ರಿಗಳ ಎಚ್ಚರಿಕೆಯ ನಂತರವೂ ಸುಳ್ಳು ಸುದ್ದಿ ಹರಡುತ್ತಿರುವ ಪೋಸ್ಟ್‌ ಕಾರ್ಡ್‌ ಕನ್ನಡ: ಕ್ರಮ ಯಾವಾಗ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...