Homeಮುಖಪುಟಕೆ.ಆರ್‌ ಪೇಟೆಯಲ್ಲಿ ಮುಸ್ಲಿಂ ಯುವಕರ ಬಗ್ಗೆ ಸುಳ್ಳು ಸುದ್ದಿ: ಕೊನೆಗೆ ಸಿಕ್ಕ ಆರೋಪಿಗಳು ಬೇರೆ ಧರ್ಮದವರು!

ಕೆ.ಆರ್‌ ಪೇಟೆಯಲ್ಲಿ ಮುಸ್ಲಿಂ ಯುವಕರ ಬಗ್ಗೆ ಸುಳ್ಳು ಸುದ್ದಿ: ಕೊನೆಗೆ ಸಿಕ್ಕ ಆರೋಪಿಗಳು ಬೇರೆ ಧರ್ಮದವರು!

ಈ ಪ್ರಕರಣ ಸತ್ಯ ತಿಳಿಯುವ ಮುನ್ನ ಸುಳ್ಳು ಸುದ್ದಿ ಹರಡಬಾರದೆಂಬ ಪಾಠವನ್ನು ಕಲಿಸಿದೆ.

- Advertisement -
- Advertisement -

ಕೃಷ್ಣರಾಜಪೇಟೆ ತಾಲ್ಲೂಕಿನ ತೆಂಡೇಕೆರೆ ಚೆಕ್ ಪೋಸ್ಟ್ ನಲ್ಲಿ ಚೆಕ್ ಪೋಸ್ಟ್ ಅಧಿಕಾರಿಗಳು ಹಾಗೂ ಪೋಲಿಸರಿಗೆ ಬೆದರಿಸಿ ಆಟೋದಲ್ಲಿ ಪರಾರಿಯಾಗಿದ್ದ ಮೂವರು ಯುವಕರನ್ನು ತಹಶಿಲ್ದಾರ್‌ ಶಿವಮಾಧು ಸೇರಿದಂತೆ ಹಲವು ಮಾಧ್ಯಮಗಳು ಮುಸ್ಲಿಂ ಯುವಕರು ಎಂದು ತಪ್ಪು ಸುದ್ದಿ ಹರಡಿದ್ದರಿಂದ ತಾಲ್ಲೂಕಿನಾದ್ಯಂತ ಆತಂಕ ಉಂಟಾಗಿತ್ತು.

ಆದರೆ ಕೆ.ಆರ್.ಪೇಟೆ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್ ಮತ್ತು ಗ್ರಾಮಾಂತರ ಪೋಲೀಸ್ ಸಬ್ ಇನ್ಸ್ ಪೆಕ್ಟರ್ ಲಕ್ಷ್ಮಣ್ ಅವರ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿದ ನಂತರ ಆರೋಪಿಗಳು ಪತ್ತೆಯಾಗಿದ್ದು ಅವರನ್ನು ಬೂಕನಕೆರೆ ಹೋಬಳಿಯ ಬಳ್ಳೇಕೆರೆ ಗ್ರಾಮದ ಮಹೇಶ್.ಬಿನ್ ಕೆಂಪಟ್ಟಿಗೌಡ, ಅಭಿಶೇಕ್ ಬಿನ್ ಮಹೇಶ,  ಶ್ರೀನಿವಾಸ್ ಬಿನ್ ಪುಟ್ಟರಾಜು ಎಂದು ಗುರುತಿಸಲಾಗಿದೆ.

ವಿಡಿಯೋ ನೋಡಿ

ಮುಸ್ಲಿಮ್ ಯುವಕರ ಬಗ್ಗೆ ಸುಳ್ಳು ಸುದ್ದಿಗಳು

ಕ್ವಾರಂಟೈನ್‌ನಲ್ಲಿದ್ದ ಮುಸ್ಲಿಮ್ ಹುಡುಗರು ಕೆ.ಆರ್ ಪೇಟೆ ತುಂಬಾ ಓಡಾಡಿದ್ದಾರೆ ಎಂಬ ಸುಳ್ಳು ಹರಡುವಿಕೆ. ಕೊನೆಗೆ ಸಿಕ್ಕಿದ್ದು ಬೇರೆ ಧರ್ಮದವರು. ಸುಳ್ಳು ಸುದ್ದಿ ಹರಡುವ ಮುನ್ನ ಪರಿಶೀಲಿಸಿ..

Posted by Naanu Gauri on Thursday, April 9, 2020

ಇದರಿಂದಾಗಿ ತಾಲ್ಲೂಕಿನ ಜನತೆಯಲ್ಲಿ ಉಂಟಾಗಿದ್ದ ಆತಂಕವನ್ನು ಕೃಷ್ಣರಾಜಪೇಟೆ ಗ್ರಾಮಾಂತರ ಪೋಲಿಸರು ದೂರ ಮಾಡಿದ್ದಾರೆ. ಅಲ್ಲದೇ ಈ ಪ್ರಕರಣ ಸತ್ಯ ತಿಳಿಯುವ ಮುನ್ನ ಸುಳ್ಳು ಸುದ್ದಿ ಹರಡಬಾರದೆಂಬ ಪಾಠವನ್ನು ಕಲಿಸಿದೆ.

ಬಂಧಿತರ ಪೈಕಿ ಮಹೇಶ್ ಬೆಂಗಳೂರಿನಲ್ಲಿ ಆಟೋ ಓಡಿಸುವ ವೃತ್ತಿ ಮಾಡುತ್ತಿದ್ದು, ಯುಗಾದಿ ಹಬ್ಬಕ್ಕೆ ಸ್ವಗ್ರಾಮ ಬಳ್ಳೇಕೆರೆಗೆ ಬಂದಿದ್ದರು. ಹಾಗಾಗಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಮಹೇಶ್ ಕೈಗೆ ಗ್ರಾಮ ಪಂಚಾಯಿತಿ ಯವರು ಸೀಲ್ ಹಾಕಿ ಹೋಂ ಕ್ವಾರಂಟೈನ್ ನಲ್ಲಿ ಇರುವಂತೆ ಆದೇಶ ನೀಡಿದ್ದರು. ಆದರೆ ಸ್ನೇಹಿತರೊಂದಿಗೆ ಚನಕುರಳಿಗೆ ಮೆಡಿಕಲ್‌ಗೆ ಹೋಗಿ ವಾಪಸ್ ಬರುವಾಗ ತೆಂಡೇಕೆರೆ ಚೆಕ್ ಪೋಸ್ಟ್ ನಲ್ಲಿ ಅಧಿಕಾರಿಗಳು ಹಿಡಿದುಕೊಳ್ಳುವ ಭಯದಿಂದ ನಮಗೆ ಕೊರೋನೊ ಇದೆ ಮುಟ್ಟಿದರೆ ನಿಮಗೂ ಕೊರೋನೋ ಬರುತ್ತದೆ ನೋಡಿ ಎಂದು ಕೈಯಲ್ಲಿದ್ದ ಸೀಲ್ ತೋರಿಸಿ ಭಯಹುಟ್ಟಿಸಿ ಯುವಕರು ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ನಡೆದ 12 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದ್ದು, ಆರೋಪಿಗಳು ರಾತ್ರಿ ತೆಂಡೆಕರೆ ಚೆಕ್‌ಪೋಸ್ಟ್‌ ಬಳಿ ಹೋಗಿದ್ದು ನಾವೆ. ಔಷಧಿ ತರಲು ಚಿನಕುರಳಿಗೆ ಹೋಗಿದ್ದೇವು. ಪೊಲೀಸ್‌ ಭಯದಿಂದ ಅಲ್ಲಿಂದ ತಪ್ಪಿಸಿಕೊಂಡಿದ್ದೆವು ಎಂದು ಒಪ್ಪಿಕೊಂಡಿದ್ದಾರೆ.

ಆದರೆ ಇಂದು ಬೆಳಿಗ್ಗೆಯಿಂದಲೇ ಕೆ.ಆರ್‌ ಪೇಟೆ ಮತ್ತು ಜಿಲ್ಲೆಯಾದ್ಯಂತ ಕೊರೊನಾ ಸೋಂಕಿತ ಮುಸ್ಲಿಮರು ಕೆ.ಆರ್‌ ಪೇಟೆ ಸುತ್ತುತ್ತಾ ಇತರರಿಗೂ ಹರಡುತ್ತಿದ್ದಾರೆ ಹುಷಾರಾಗಿರಿ ಎಂಬ ಸುಳ್ಳುಗಳನ್ನು ವೈರಲ್‌ ಮಾಡಲಾಗಿತ್ತು. ಆದರೆ ಆರೋಪಿಗಳು ಮುಸ್ಲಿಮರಲ್ಲ ಎಂಬುದು ಬಂಧನದ ನಂತರ ಸ್ಪಷ್ಟವಾಗಿದೆ.


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ


ಎರಡು ದಿನಗಳ ಕೆಳಗೆ ತಾನೇ ಮುಖ್ಯಮಂತ್ರಿ ಯಡಿಯೂರಪ್ಪನವರು ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದ ವಿರುದ್ಧ ಸುಳ್ಳು ಸುದ್ದಿ ಹರಡಿದರೆ ಕ್ರಮ ಖಚಿತ ಎಂದು ಎಚ್ಚರಿಕೆ ನೀಡಿದ್ದೆರು. ಆದರೂ ಸಹ ಅಧಿಕಾರಿಗಳು ಸೇರಿದಂತೆ ಈ ಸುಳ್ಳು ಸುದ್ದಿ ಹರಡುವ, ಕೋಮುದ್ವೇಷ ಹರಡುವ ಕೆಲಸಗಳು ನಿಂತಿಲ್ಲ. ಈ ಕುರಿತು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ.


ಇದನ್ನೂ ಓದಿ: ಮುಖ್ಯಮಂತ್ರಿಗಳ ಎಚ್ಚರಿಕೆಯ ನಂತರವೂ ಸುಳ್ಳು ಸುದ್ದಿ ಹರಡುತ್ತಿರುವ ಪೋಸ್ಟ್‌ ಕಾರ್ಡ್‌ ಕನ್ನಡ: ಕ್ರಮ ಯಾವಾಗ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...