HomeUncategorizedದ್ವೇಷ ಹರಡುವ ಮಾಧ್ಯಮಗಳಿಂದ ಅಭದ್ರರಾಗಿರುವ ಕರ್ನಾಟಕದ ಮುಸ್ಲಿಮರು: ಕ್ವಿಂಟ್ ವಿಶೇಷ ವಿಡಿಯೋ ವರದಿ

ದ್ವೇಷ ಹರಡುವ ಮಾಧ್ಯಮಗಳಿಂದ ಅಭದ್ರರಾಗಿರುವ ಕರ್ನಾಟಕದ ಮುಸ್ಲಿಮರು: ಕ್ವಿಂಟ್ ವಿಶೇಷ ವಿಡಿಯೋ ವರದಿ

ಹೀಗೆ ಹಲ್ಲೆಯಾದವರ ಬಗ್ಗೆ ಅಂತರ್ಜಾಲ ಪತ್ರಿಕೆ "ಕ್ವಿಂಟ್" ವಿಶೇಷ ವರದಿಯನ್ನು ಮಾಡಿದೆ. ಅದರ ಮುಖ್ಯಾಂಶಗಳು ಇಲ್ಲಿವೆ.

- Advertisement -
- Advertisement -

ಕೊರೊನಾ ವೈರಸ್ ವಿಶ್ವದಾದ್ಯಂತ ತನ್ನ ಕರಿಛಾಯೆಯನ್ನು ಬೀರುತ್ತಿರುವಾಗ ಭಾರತವನ್ನೇನು ಬಿಟ್ಟು ಬಿಡುವುದಿಲ್ಲ. ಆದರೆ ಭಾರತದ ಸಂಧರ್ಭಕ್ಕೆ ಕೊರೊನ ಬರುವಾಗ ಅದು ಇಸ್ಲಾಂ ಧರ್ಮಕ್ಕೆ ಮತಾಂತರವಾಯಿತೇ ಎನ್ನುವ ಪ್ರಶ್ನೆಯನ್ನು ಜನರು ಕೇಳುತ್ತಿದ್ದಾರೆ. ನಮ್ಮ ಮುಖ್ಯವಾಹಿನಿಯ ದೃಶ್ಯ ಮಾಧ್ಯಮ, ಪತ್ರಿಕೆಯಾದಿಯಾಗಿ ಸಾಮಾಜಿಕ ಜಾಲತಾಣ ಕೂಡಾ ಸೇರಿಕೊಂಡು ಮಾಡಿದ ಅಪಪ್ರಚಾರದಿಂದಾಗಿ ಕರ್ನಾಟಕದಾದ್ಯಂತ ಮುಸ್ಲಿಮರು ಹಲ್ಲೆಗೊಳಗಾಗಬೇಕಾಯಿತು. ಹೀಗೆ ಹಲ್ಲೆಯಾದವರ ಬಗ್ಗೆ ಅಂತರ್ಜಾಲ ಪತ್ರಿಕೆ “ಕ್ವಿಂಟ್” ವಿಶೇಷ ವರದಿಯನ್ನು ಮಾಡಿದೆ. ಅದರ ಮುಖ್ಯಾಂಶಗಳು ಹೀಗಿವೆ…

ಬಾಗಲಕೋಟೆ ಜಿಲ್ಲೆಯ ಬಿರದಾರಿ ಗ್ರಾಮದಲ್ಲಿ ಹತ್ತರಿಂದ ಹದಿನೈದು ಜನರು ಕೈಯ್ಯಲ್ಲಿ ಕಬ್ಬಿಣದ ರಾಡುಗಳನ್ನು ಹಿಡಿದು ಮೂವರು ಮುಸ್ಲಿಮರನ್ನು ಸುತ್ತುವರೆದು ಗ್ರಾಮದಿಂದ ಹೊರ ಹೋಗುವಂತೆ ಕೂಗುತ್ತಿದ್ದಾರೆ. ಮೂವರಲ್ಲಿ ಒಬ್ಬ ವ್ಯಕ್ತಿ ತುಂಬಾ ದಯನೀಯವಾಗಿ ಬೇಡುತ್ತಿರುವಾಗ “ಅವರನ್ನು ಮುಟ್ಟಬೇಡಿ ರೋಗ ಹರಡುತ್ತಾರೆ” ಎಂದು ಹಲ್ಲೆಕೋರನೊಬ್ಬ ಕೂಗುವ ಶಬ್ದ ವಿಡಿಯೋದಲ್ಲಿ ಕೇಳಿಸುತ್ತದೆ.

Attacks blaming muslims for COVID-19 reported across KarnatakaFrom heckling to assault, there has been a stark rise in attacks on Muslims, Muslim volunteers and hate speech against the community in the last week, during the 21-day lockdown over coronavirus.Full story: https://bit.ly/2x2KQor#COVID19 #Lockdown #Lockdown21 #India

Posted by Shehzad Khan on Wednesday, April 8, 2020

ಕದರಕೊಪ್ಪ ಗ್ರಾಮದಲ್ಲಿ ಮಸೀದಿಯೊಳಗೆ ಇರುವ ಮೂವರು ವ್ಯಕ್ತಿಗಳನ್ನು ನಮಾಜ್ ಮಾಡುತ್ತಿದ್ದೀರಿ ಎಂದು ಆರೋಪಿಸಿ ಅವರ ಮೇಲೆ ಆಕ್ರಮಣ ಮಾಡುತ್ತಾರೆ. ಈ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಹಲ್ಲೆಕೋರರ ವಿರುದ್ಧ ಕೇಸು ದಾಖಲಿಸುತ್ತಾರೆ.


ಇದನ್ನೂ ಓದಿ: ಮುಖ್ಯಮಂತ್ರಿಗಳ ಎಚ್ಚರಿಕೆಯ ನಂತರವೂ ಸುಳ್ಳು ಸುದ್ದಿ ಹರಡುತ್ತಿರುವ ಪೋಸ್ಟ್‌ ಕಾರ್ಡ್‌ ಕನ್ನಡ: ಕ್ರಮ ಯಾವಾಗ? 


ಬೆಂಗಳೂರಿನಲ್ಲಿ ನಡೆದ ಮತ್ತೊಂದು ಘಟನೆಯಲ್ಲಿ ಲಾಕ್ ಡೌನ್ ನಿಂದಾಗಿ ಕಷ್ಟಕ್ಕೊಳಗಾಗಿರುವ ಜನರಿಗೆ ಪಡಿತರ ಹಂಚುತ್ತಿದ್ದ ಸ್ವರಾಜ್ ಅಭಿಯಾನದ ಕಾರ್ಯಕರ್ತರಿಗೆ ಮುಸ್ಲಿಮರು ರೋಗ ಹರಡುತ್ತಿದ್ದಾರೆ ಎಂದು ಹೇಳಿ ಕ್ರಿಕೆಟ್ ಬ್ಯಾಟುಗಳಿಂದ ಹಲ್ಲೆ ನಡೆಸಿದ್ದಾರೆ. ಈ ಘಟನೆಯ ಬಗ್ಗೆ ಮಾತನಾಡಿದ ಸ್ವರಾಜ್ ಅಭಿಯಾನದ ಕಾರ್ಯಕರ್ತರಾದ ಸಯದ್ ತಬ್ರೀಜ್, ಪೋಲಿಸರಿಂದ ಅನುಮತಿ ಪಡೆದು ಪಡಿತರವನ್ನು ಹಂಚುವುದಕ್ಕೆ ಹೊರಟಾಗ ಹಿಂದಿನಿಂದ ಬಂದು ಬ್ಯಾಟ್ ಹಾಗೂ ಕೋಲುಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಹೇಳುತ್ತಾರೆ. ಅಮೃತಹಳ್ಳಿಯಿಂದ ದಾಸರಹಳ್ಳಿಗೆ ಹೋಗುತ್ತಿರುವಾಗ ಇದರ ಮದ್ಯೆ ಹದಿನೈದು ಮಂದಿ ನಮ್ಮ ಮೇಲೆ ಆಕ್ರಮಣ ನಡೆಸಿದ್ದಾರೆ, ಜೊತೆಗೆ ನಿಮ್ಮ ಪಡಿತರ ಮುಸ್ಲಿಮರಿಗೆ ಮಾತ್ರ ನೀಡಿ ಇಲ್ಲಿಗೆ ಅದರ ಅಗತ್ಯವಿಲ್ಲ ಎಂದು ಹೇಳಿ ನಮ್ಮ ಜೊತೆಯಿದ್ದ ಆರು ಮಂದಿಗೆ ಹದಿನೈದು ಮಂದಿ ಸೇರಿ ಹಲ್ಲೆ ನಡೆಸಿದ್ದಾರೆ ಎಂದು ಸ್ವರಾಜ್ ಅಭಿಯಾನದ ಕಾರ್ಯದರ್ಶಿ ಝರೀನ್ ತಾಜ್ ಹೇಳುತ್ತಾರೆ.

ಈ ಘಟನೆಗೂ ಮೊದಲು ಸ್ವರಾಜ್ ಅಭಿಯಾನದ ಪಡಿತರ ಬಂದಾಗಲೆ ಬಿಜೆಪಿ ನಾಯಕ ಇವರೊಂದಿಗೆ ನೀವು ಪಡಿತರ ಹಂಚುವಂತಿಲ್ಲ, ನೀವು ಭಯೋತ್ಪಾದಕರು, ನಿಮ್ಮಿಂದಾಗಿಯೇ ವೈರಸ್ ಹರಡುತ್ತಿದೆ ಎಂದು ಗಲಾಟೆ ಮಾಡಿದ್ದಾರೆ ಎಂದು ಹಲ್ಲೆಗೊಳಗಾದ ತಬ್ರೀಜ್ ಆರೋಪಿಸುತ್ತಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇವೆ ಅವರು ಅನುಮತಿ ಕೊಟ್ಟ ನಂತರ ನಾವು ಪಡಿತರ ಹಂಚಿದ್ದೇವೆ ಎಂದು ಅವರು ಹೇಳುತ್ತಾರೆ.

ಈ ಘಟನೆಯ ವೀಡಿಯೊದಲ್ಲಿ ಆರೆಸ್ಸೆಸ್ಸಿನ ಸಮವಸ್ತ್ರ ಧರಿಸಿರುವ ವ್ಯಕ್ತಿಗಳು, ಇವರು ಸೋಂಕು ಹರಡುತ್ತಿದ್ದಾರೆ ಇವರಿಂದ ಪಡಿತರವನ್ನು ಪಡೆಯದಂತೆ ಜನರ ಹತ್ತಿರ ಹೇಳುತ್ತಿರುವುದು ಕಾಣಬಹುದಾಗಿದೆ.

ಮತ್ತೊಂದು ಘಟನೆ: ಬೆಳಗಾವಿ ಜಿಲ್ಲೆಯ ಯಮಕನಮರಡಿ ಮತ್ತು ಸದಲಗ ಎಂಬಲ್ಲಿ ಮಸೀದಿಯನ್ನು ಆಕ್ರಮಿಸಿ ಬೆಳಕು ನಂದಿಸಲಿಲ್ಲ ಎಂದು ಆರೋಪಿಸಿ ಗಲಾಟೆ ಮಾಡಿದ್ದಕ್ಕೆ ಪೊಲೀಸರು ಸುಮಾರು ಇಪ್ಪತ್ತು ಜನರನ್ನು ಬಂಧಿಸಿದ್ದಾರೆ.

ಅಲ್ಲದೆ ಮಂಗಳೂರಿನ ಹಲವೆಡೆ ಕೊರೊನಾ ವೈರಸ್ ಹೋಗುವವರೆಗೆ ಮುಸ್ಲಿಮ್ ವ್ಯಾಪಾರಿಗಳಿಗೆ ಊರಿಗೆ ಪ್ರವೇಶವಿಲ್ಲ ಎಂದು ನಿಷೇಧ ಹೇರಿ ನೋಟಿಸುಗಳನ್ನು ಹಾಕಲಾಗಿದೆ.


ಇದನ್ನೂ ಓದಿ: ಕೆ.ಆರ್‌ ಪೇಟೆಯಲ್ಲಿ ಮುಸ್ಲಿಂ ಯುವಕರ ಬಗ್ಗೆ ಸುಳ್ಳು ಸುದ್ದಿ: ಕೊನೆಗೆ ಸಿಕ್ಕ ಆರೋಪಿಗಳು ಬೇರೆ ಧರ್ಮದವರು! 


ಮುಖ್ಯಮಂತ್ರಿ ಯಡಿಯೂರಪ್ಪ ಈಗಾಗಲೆ ಅಲ್ಪಸಂಖ್ಯಾತ ಮುಸ್ಲಿಮರ ಮೇಲೆ ದ್ವೇಷ ಹರಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಆದರೂ ಮುಸ್ಲಿಂ ಸಮುದಾಯದ ವಿರುದ್ಧ ಸುಳ್ಳುಗಳು, ಅಪಪ್ರಚಾರಗಳು ಎಗ್ಗಿಲ್ಲದೇ ನಡೆಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...