Homeಮುಖಪುಟಭಾರತದಲ್ಲಿ ಕೊರೊನಾ ವೈರಸ್ ಸಮುದಾಯ ಹರಡುವಿಕೆ ಪ್ರಾರಂಭಿಸಿದೆ: ICMR

ಭಾರತದಲ್ಲಿ ಕೊರೊನಾ ವೈರಸ್ ಸಮುದಾಯ ಹರಡುವಿಕೆ ಪ್ರಾರಂಭಿಸಿದೆ: ICMR

- Advertisement -
- Advertisement -

ಯಾವುದೇ ವಿದೇಶಿ ಪ್ರಯಾಣದ ಇತಿಹಾಸ ಅಥವಾ ಕೊರೊನಾ ಸೋಂಕಿತರ ಸಂಪರ್ಕವಿಲ್ಲದೆಯೂ ಸಹ ಹೆಚ್ಚು ಹೆಚ್ಚು ಜನರು ಕೊರೊನ ವೈರಸ್‌ಗೆ ತುತ್ತಾಗುತ್ತಿದ್ದಾರೆ ಎಂಬುದು ಯಾದೃಚ್ಛಿಕ ಪರೀಕ್ಷೆಗಳಿಂದ (Random coronavirus tests) ದೃಢಪಟ್ಟಿದೆ.

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್(ICMR) ಸಂಗ್ರಹಿಸಿದ ಮಾಹಿತಿಯು ಈ ಅಂಶವನ್ನು ಹೊರಹಾಕಿದ್ದು, ಜ್ವರ ಮತ್ತು ತೀವ್ರವಾದ ಉಸಿರಾಟದ ಕಾಯಿಲೆಗಳಿರುವ ರೋಗಿಗಳ ಮೇಲೆ ನಡೆಸಿದ ಯಾದೃಚ್ಛಿಕ ಕೊರೊನಾ ವೈರಸ್ ಪರೀಕ್ಷೆಗಳಿಂದ ಶೇಕಡಾ 38 ರಷ್ಟು ರೋಗಿಗಳಿಗೆ ಪ್ರಯಾಣದ ಇತಿಹಾಸವಿಲ್ಲದಿದ್ದರೂ ಸೋಂಕು ಹರಡಿದೆ ಎಂದು ತಿಳಿದುಬಂದಿದೆ.

ಎರಡು ವಾರಗಳ ಹಿಂದೆ ಕೊರೊನ ವೈರಸ್ ಸಮುದಾಯಿಕವಾಗಿ ಹರಡುತ್ತಿಲ್ಲ ಎಂದು ICMR ಪ್ರತಿಕ್ರಿಯಿಸಿತ್ತು. ಆದರೆ ICMR ತೀವ್ರ ಉಸಿರಾಟದ ಕಾಯಿಲೆಯ ವೈರಸ್ ಸಮುದಾಯಿಕವಾಗಿ ಹರಡುತ್ತಿದೆಯೇ ಎಂದು ತಿಳಿಯಲು ಯಾದೃಚ್ಛಿಕ ಪರೀಕ್ಷೆಗಳನ್ನು (Random coronavirus tests)  ನಡೆಸುತ್ತಿದೆ ನಂತರ ಅವರ ಡಾಟಾದಲ್ಲಿ ಮಹತ್ತರ ಬದಲಾವಣೆಗಳು ಕಂಡಿಬಂದಿವೆ.

ಇತ್ತೀಚಿಗಿನವರೆಗೆ ಭಾರತದ ಹೆಚ್ಚಿನ ರೋಗಿಗಳು ತಮ್ಮ ವಿದೇಶ ಪ್ರವಾಸದಿಂದ ಅಥವಾ ವಿದೇಶಕ್ಕೆ ಪ್ರಯಾಣಿಸಿದ ವ್ಯಕ್ತಿಯಿಂದ ಸೋಂಕು ತಗುಲಿಸಿಕೊಂಡಿದ್ದರು. ಇದರಿಂದಾಗಿ ಅವರನ್ನು ಪ್ರತ್ಯೇಕಗೊಳಿಸಿ ರೋಗಿಗಳ ಸಂಖ್ಯೆ ಶೂನ್ಯವಾಗುವಂತೆ ಮಾಡಬಹುದಾಗಿತ್ತು. ಆದರೆ ಈಗಿನ ಸ್ಥಿತಿಯನ್ನು 3 ನೇ ಹಂತ ಅಥವಾ ಸಮುದಾಯ ಹರಡುವಿಕೆ ಎಂದು ಕರೆಯಲಾಗುತ್ತದೆ.

SARI (Severe Acute Respiratory Illness) ತೀವ್ರ ಉಸಿರಾಟದ ಕಾಯಿಲೆ, ಮತ್ತು ಐಸಿಎಂಆರ್ ವೈರಸ್ನ ಯಾವುದೇ ಸಮುದಾಯ ಹರಡುವಿಕೆ ನಡೆಯುತ್ತಿದೆಯೇ ಎಂದು ಪರೀಕ್ಷಿಸಲು ಅವರ ಮೇಲೆ ಯಾದೃಚ್ಛಿಕ ಪರೀಕ್ಷೆಗಳನ್ನು ನಡೆಸುತ್ತಿದೆ.

ಆದರೆ ಯಾದೃಚಿಕ ಪರೀಕ್ಷೆಗಳ ಬದಲು ತೀವ್ರ ಉಸಿರಾಟದ ಕಾಯಿಲೆಯಿರುವ ಎಲ್ಲಾ ರೋಗಿಗಳನ್ನು ಪರೀಕ್ಷಿಸುವಂತಹ ನೀತಿಯನ್ನು ತಂದಾಗ ಮಾರ್ಚ್ 15 ಮತ್ತು ಮಾರ್ಚ್ 21 ರ ನಡುವೆ 106 ರೋಗಿಗಳಲ್ಲಿ ಇಬ್ಬರಲ್ಲಿ ವೈರಸ್ ಇರುವುದು ಕಂಡುಬಂದಿದೆ.

ಅದರ ನಂತರ ತುಂಬಾ ಬದಲಾವಣೆಗಳು ಆಗಿದೆ. ಮಾರ್ಚ್ 22 ಮತ್ತು ಮಾರ್ಚ್ 28 ರ ನಡುವೆ ಯಾದೃಚಿಕವಾಗಿ ಪರೀಕ್ಷಿಸಲ್ಪಟ್ಟ 2,877 ರೋಗಿಗಳಲ್ಲಿ 48 (ಶೇಕಡಾ 1.7) ರೋಗಿಗಳು ಕೊರೊನಾ ಪಾಸಿಟಿವ್ ಆಗಿದ್ದಾರೆ. ಮಾರ್ಚ್ 29 ಮತ್ತು ಏಪ್ರಿಲ್ 2 ರ ನಡುವೆ 2,069 ತೀವ್ರ ಉಸಿರಾಟದ ಕಾಯಿಲೆಯ ರೋಗಿಗಳಲ್ಲಿ 54 (ಶೇಕಡಾ 2.6) ರೋಗಿಗಳಿಗೆ ಕೊರೊನ ವೈರಸ್ ಇರುವುದು ಪತ್ತೆಯಾಗಿದೆ.

ಒಟ್ಟಾರೆಯಾಗಿ 5,911 ತೀವ್ರ ಉಸಿರಾಟದ ಕಾಯಿಲೆಯ ರೋಗಿಗಳಲ್ಲಿ 104 (ಶೇಕಡಾ 1.8) ರೋಗಿಗಳಿಗೆ ಕೊರೊನ ವೈರಸ್ ಇರುವುದು ಪತ್ತೆಯಾಗಿದೆ .

ಇದರಲ್ಲಿ ನಲವತ್ತು ರೋಗಿಗಳು ಯಾವುದೇ ಅಂತರರಾಷ್ಟ್ರೀಯ ಪ್ರಯಾಣ ಅಥವಾ ಪ್ರಯಾಣಿಸಿದವರ ಸಂಪರ್ಕವನ್ನು ಹೊಂದಿಲ್ಲ. ಭಾರತದ 15 ರಾಜ್ಯಗಳ 36 ಜಿಲ್ಲೆಗಳಿಂದ ಇಂತಹ ಪ್ರಕರಣಗಳು ವರದಿಯಾಗಿವೆ. ICMR ತನ್ನ ವರದಿಯಲ್ಲಿ ” ಕೊರೊನ ವೈರಸ್ ವಿರುದ್ದ ಚಟುವಟಿಕೆಗಳನ್ನು ಗುರಿಯಾಗಿಸಲು ಈ ಜಿಲ್ಲೆಗಳಿಗೆ ಆದ್ಯತೆ ನೀಡಬೇಕಾಗಿದೆ” ಎಂದು ಹೇಳಿದೆ.

ಇದರಲ್ಲಿ ಪುರುಷರಲ್ಲೇ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ಕಂಡುಬಂದಿದೆ. ಅದರಲ್ಲೂ 40 ವರ್ಷಕ್ಕಿಂತ ಮೇಲ್ಪಟ್ಟ ರೋಗಿಗಳಲ್ಲಿ 85 ಪ್ರಕರಣಗಳು (ಶೇಕಡಾ 83.3) ಪುರುಷರಾಗಿದ್ದಾರೆ. ಎಂಭತ್ತಮೂರು ರೋಗಿಗಳು (ಶೇಕಡಾ 81.4) 40 ವರ್ಷಕ್ಕಿಂತ ಹೆಚ್ಚು ವಯಸ್ಸಿನವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...