Homeಮುಖಪುಟಭಾರತದಲ್ಲಿ ಕೊರೊನಾ ವೈರಸ್ ಸಮುದಾಯ ಹರಡುವಿಕೆ ಪ್ರಾರಂಭಿಸಿದೆ: ICMR

ಭಾರತದಲ್ಲಿ ಕೊರೊನಾ ವೈರಸ್ ಸಮುದಾಯ ಹರಡುವಿಕೆ ಪ್ರಾರಂಭಿಸಿದೆ: ICMR

- Advertisement -
- Advertisement -

ಯಾವುದೇ ವಿದೇಶಿ ಪ್ರಯಾಣದ ಇತಿಹಾಸ ಅಥವಾ ಕೊರೊನಾ ಸೋಂಕಿತರ ಸಂಪರ್ಕವಿಲ್ಲದೆಯೂ ಸಹ ಹೆಚ್ಚು ಹೆಚ್ಚು ಜನರು ಕೊರೊನ ವೈರಸ್‌ಗೆ ತುತ್ತಾಗುತ್ತಿದ್ದಾರೆ ಎಂಬುದು ಯಾದೃಚ್ಛಿಕ ಪರೀಕ್ಷೆಗಳಿಂದ (Random coronavirus tests) ದೃಢಪಟ್ಟಿದೆ.

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್(ICMR) ಸಂಗ್ರಹಿಸಿದ ಮಾಹಿತಿಯು ಈ ಅಂಶವನ್ನು ಹೊರಹಾಕಿದ್ದು, ಜ್ವರ ಮತ್ತು ತೀವ್ರವಾದ ಉಸಿರಾಟದ ಕಾಯಿಲೆಗಳಿರುವ ರೋಗಿಗಳ ಮೇಲೆ ನಡೆಸಿದ ಯಾದೃಚ್ಛಿಕ ಕೊರೊನಾ ವೈರಸ್ ಪರೀಕ್ಷೆಗಳಿಂದ ಶೇಕಡಾ 38 ರಷ್ಟು ರೋಗಿಗಳಿಗೆ ಪ್ರಯಾಣದ ಇತಿಹಾಸವಿಲ್ಲದಿದ್ದರೂ ಸೋಂಕು ಹರಡಿದೆ ಎಂದು ತಿಳಿದುಬಂದಿದೆ.

ಎರಡು ವಾರಗಳ ಹಿಂದೆ ಕೊರೊನ ವೈರಸ್ ಸಮುದಾಯಿಕವಾಗಿ ಹರಡುತ್ತಿಲ್ಲ ಎಂದು ICMR ಪ್ರತಿಕ್ರಿಯಿಸಿತ್ತು. ಆದರೆ ICMR ತೀವ್ರ ಉಸಿರಾಟದ ಕಾಯಿಲೆಯ ವೈರಸ್ ಸಮುದಾಯಿಕವಾಗಿ ಹರಡುತ್ತಿದೆಯೇ ಎಂದು ತಿಳಿಯಲು ಯಾದೃಚ್ಛಿಕ ಪರೀಕ್ಷೆಗಳನ್ನು (Random coronavirus tests)  ನಡೆಸುತ್ತಿದೆ ನಂತರ ಅವರ ಡಾಟಾದಲ್ಲಿ ಮಹತ್ತರ ಬದಲಾವಣೆಗಳು ಕಂಡಿಬಂದಿವೆ.

ಇತ್ತೀಚಿಗಿನವರೆಗೆ ಭಾರತದ ಹೆಚ್ಚಿನ ರೋಗಿಗಳು ತಮ್ಮ ವಿದೇಶ ಪ್ರವಾಸದಿಂದ ಅಥವಾ ವಿದೇಶಕ್ಕೆ ಪ್ರಯಾಣಿಸಿದ ವ್ಯಕ್ತಿಯಿಂದ ಸೋಂಕು ತಗುಲಿಸಿಕೊಂಡಿದ್ದರು. ಇದರಿಂದಾಗಿ ಅವರನ್ನು ಪ್ರತ್ಯೇಕಗೊಳಿಸಿ ರೋಗಿಗಳ ಸಂಖ್ಯೆ ಶೂನ್ಯವಾಗುವಂತೆ ಮಾಡಬಹುದಾಗಿತ್ತು. ಆದರೆ ಈಗಿನ ಸ್ಥಿತಿಯನ್ನು 3 ನೇ ಹಂತ ಅಥವಾ ಸಮುದಾಯ ಹರಡುವಿಕೆ ಎಂದು ಕರೆಯಲಾಗುತ್ತದೆ.

SARI (Severe Acute Respiratory Illness) ತೀವ್ರ ಉಸಿರಾಟದ ಕಾಯಿಲೆ, ಮತ್ತು ಐಸಿಎಂಆರ್ ವೈರಸ್ನ ಯಾವುದೇ ಸಮುದಾಯ ಹರಡುವಿಕೆ ನಡೆಯುತ್ತಿದೆಯೇ ಎಂದು ಪರೀಕ್ಷಿಸಲು ಅವರ ಮೇಲೆ ಯಾದೃಚ್ಛಿಕ ಪರೀಕ್ಷೆಗಳನ್ನು ನಡೆಸುತ್ತಿದೆ.

ಆದರೆ ಯಾದೃಚಿಕ ಪರೀಕ್ಷೆಗಳ ಬದಲು ತೀವ್ರ ಉಸಿರಾಟದ ಕಾಯಿಲೆಯಿರುವ ಎಲ್ಲಾ ರೋಗಿಗಳನ್ನು ಪರೀಕ್ಷಿಸುವಂತಹ ನೀತಿಯನ್ನು ತಂದಾಗ ಮಾರ್ಚ್ 15 ಮತ್ತು ಮಾರ್ಚ್ 21 ರ ನಡುವೆ 106 ರೋಗಿಗಳಲ್ಲಿ ಇಬ್ಬರಲ್ಲಿ ವೈರಸ್ ಇರುವುದು ಕಂಡುಬಂದಿದೆ.

ಅದರ ನಂತರ ತುಂಬಾ ಬದಲಾವಣೆಗಳು ಆಗಿದೆ. ಮಾರ್ಚ್ 22 ಮತ್ತು ಮಾರ್ಚ್ 28 ರ ನಡುವೆ ಯಾದೃಚಿಕವಾಗಿ ಪರೀಕ್ಷಿಸಲ್ಪಟ್ಟ 2,877 ರೋಗಿಗಳಲ್ಲಿ 48 (ಶೇಕಡಾ 1.7) ರೋಗಿಗಳು ಕೊರೊನಾ ಪಾಸಿಟಿವ್ ಆಗಿದ್ದಾರೆ. ಮಾರ್ಚ್ 29 ಮತ್ತು ಏಪ್ರಿಲ್ 2 ರ ನಡುವೆ 2,069 ತೀವ್ರ ಉಸಿರಾಟದ ಕಾಯಿಲೆಯ ರೋಗಿಗಳಲ್ಲಿ 54 (ಶೇಕಡಾ 2.6) ರೋಗಿಗಳಿಗೆ ಕೊರೊನ ವೈರಸ್ ಇರುವುದು ಪತ್ತೆಯಾಗಿದೆ.

ಒಟ್ಟಾರೆಯಾಗಿ 5,911 ತೀವ್ರ ಉಸಿರಾಟದ ಕಾಯಿಲೆಯ ರೋಗಿಗಳಲ್ಲಿ 104 (ಶೇಕಡಾ 1.8) ರೋಗಿಗಳಿಗೆ ಕೊರೊನ ವೈರಸ್ ಇರುವುದು ಪತ್ತೆಯಾಗಿದೆ .

ಇದರಲ್ಲಿ ನಲವತ್ತು ರೋಗಿಗಳು ಯಾವುದೇ ಅಂತರರಾಷ್ಟ್ರೀಯ ಪ್ರಯಾಣ ಅಥವಾ ಪ್ರಯಾಣಿಸಿದವರ ಸಂಪರ್ಕವನ್ನು ಹೊಂದಿಲ್ಲ. ಭಾರತದ 15 ರಾಜ್ಯಗಳ 36 ಜಿಲ್ಲೆಗಳಿಂದ ಇಂತಹ ಪ್ರಕರಣಗಳು ವರದಿಯಾಗಿವೆ. ICMR ತನ್ನ ವರದಿಯಲ್ಲಿ ” ಕೊರೊನ ವೈರಸ್ ವಿರುದ್ದ ಚಟುವಟಿಕೆಗಳನ್ನು ಗುರಿಯಾಗಿಸಲು ಈ ಜಿಲ್ಲೆಗಳಿಗೆ ಆದ್ಯತೆ ನೀಡಬೇಕಾಗಿದೆ” ಎಂದು ಹೇಳಿದೆ.

ಇದರಲ್ಲಿ ಪುರುಷರಲ್ಲೇ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ಕಂಡುಬಂದಿದೆ. ಅದರಲ್ಲೂ 40 ವರ್ಷಕ್ಕಿಂತ ಮೇಲ್ಪಟ್ಟ ರೋಗಿಗಳಲ್ಲಿ 85 ಪ್ರಕರಣಗಳು (ಶೇಕಡಾ 83.3) ಪುರುಷರಾಗಿದ್ದಾರೆ. ಎಂಭತ್ತಮೂರು ರೋಗಿಗಳು (ಶೇಕಡಾ 81.4) 40 ವರ್ಷಕ್ಕಿಂತ ಹೆಚ್ಚು ವಯಸ್ಸಿನವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...