Homeಮುಖಪುಟಕಟ್ಟಡ ಕಾರ್ಮಿರ ಹಣದಲ್ಲಿಆಹಾರ-ಧಾನ್ಯ ವಿತರಿಸಿ ಪ್ರಚಾರ ಪಡೆಯುತ್ತಿರುವ ಬಿಜೆಪಿ ಶಾಸಕರು

ಕಟ್ಟಡ ಕಾರ್ಮಿರ ಹಣದಲ್ಲಿಆಹಾರ-ಧಾನ್ಯ ವಿತರಿಸಿ ಪ್ರಚಾರ ಪಡೆಯುತ್ತಿರುವ ಬಿಜೆಪಿ ಶಾಸಕರು

ಸಂಕಟದಿಂದ ಹೇಗೆ ಪಾರಾಗುವುದೆಂದು ಇಡೀ ಜಗತ್ತು ಚಿಂತಿಸುತ್ತಿದ್ದರೆ, ಬಿಜೆಪಿಯ ಕೆಲ ನಾಯಕರುಗಳು ಸರಕಾರದ ಪರಿಹಾರ ಸಾಮಗ್ರಿ ಮೇಲೆ ತಮ್ಮ ಫೋಟೋ ಹಾಕಿಕೊಂಡು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವ ಸಂಗತಿ.

- Advertisement -
- Advertisement -

ಕೋವಿಡ್-19 ಲಾಕ್‌ಡೌನ್‌ನಿಂದಾಗಿ ತತ್ತರಿಸಿಹೋಗಿರುವ ವಲಸೆ ಮತ್ತು ಕಟ್ಟಡಕಾರ್ಮಿಕರಿಗೆ ಆಹಾರ-ಧಾನ್ಯ ಹಂಚುವ ಕಾರ್ಯ ಭರ್ಜರಿ ಪ್ರಚಾರದೊಂದಿಗೆ ನಡೆಯುತ್ತಿದೆ. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಕಾರ್ಮಿಕರು ಉಳಿಸಿರುವ ಹಣದಲ್ಲೇ ಆಹಾರ-ಧಾನ್ಯಗಳನ್ನು ಖರೀದಿಸಿ ಬಿಜೆಪಿ ಶಾಸಕರು ಅಕ್ಕಿ ಪಾಕೆಟ್‌ಗಳ ಮೇಲೆ ತಮ್ಮ ಪೋಟೋಗಳನ್ನು ಹಾಕಿಕೊಂಡು ಕಟ್ಟಡ ಕಾರ್ಮಿಕರಿಗೆ ಆಹಾರಧಾನ್ಯ ಮತ್ತು ಊಟವನ್ನು ವಿತರಿಸುತ್ತಿರುವುದು ಜೋರಾಗಿ ನಡೆಯುತ್ತಿದೆ. ಹಣ ಕಟ್ಟಡ ಕಾರ್ಮಿಕರದ್ದು, ಪ್ರಚಾರ ಪಡೆಯುತ್ತಿರುವುದು ಮಾತ್ರ ಬಿಜೆಪಿ ಶಾಸಕರು. ಆಹಾರಧಾನ್ಯಗಳನ್ನು ವಿತರಿಸುವಾಗ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುತ್ತಿಲ್ಲ. ಮುಖ್ಯಮಂತ್ರಿಗಳು ಮತ್ತು ಪ್ರಧಾನಿಗಳ ಮಾತನ್ನು ಬಿಜೆಪಿ ಶಾಸಕರೇ ಉಲ್ಲಂಘಿಸುತ್ತಿದ್ದಾರೆ ಎಂದು ಆರೋಪಿಸಲಾಗುತ್ತಿದೆ.

ಕಲ್ಯಾಣ ಮಂಡಳಿಯ ಹಣವನ್ನು ಕಟ್ಟಡ ಕಾರ್ಮಿಕರಿಗೆ ಬಿಟ್ಟು ಇತರ ಉದ್ದೇಶಕ್ಕೆ ಬಳಸಿಕೊಳ್ಳಬಾರದೆಂಬ ಸುಪ್ರೀಂ ಕೋರ್ಟ್ ಆದೇಶವಿದೆ. ಆದರೂ ಕೇಂದ್ರ ಸರ್ಕಾರ ಕಲ್ಯಾಣ ಮಂಡಳಿಯಿಂದ 3 ಸಾವಿರ ಕೋಟಿ ರೂಪಾಯಿ ಹಣ ಬಳಕೆ ಮಾಡಿಕೊಂಡಿದೆ. ಹೀಗೆ ಹಣ ಬಳಕೆ ಮಾಡಿಕೊಳ್ಳುವ ಮೊದಲು ಕಲ್ಯಾಣ ಮಂಡಳಿಯ ಸಭೆ ಕರೆಯಬೇಕು. ಆದರೆ ಕಾರ್ಮಿಕರು, ಮಾಲಿಕರು ಮತ್ತು ಸರ್ಕಾರದ ಪ್ರತಿನಿಧಿಗಳು ಈ ಮಂಡಳಿಯಲ್ಲಿದ್ದರೂ ಸಭೆಯನ್ನೇ ಕರೆದಿಲ್ಲ. ಜೊತೆಗೆ ಸಲಹಾ ಮಂಡಳಿಯ ಸಭೆಯನ್ನು ಕರೆಯದೆ ಹಣ ಬಳಸಿಕೊಳ್ಳಲಾಗಿದೆ. ಈ ಮೂಲಕ ಸುಪ್ರೀಂಕೋರ್ಟ್ ಆದೇಶ ಮತ್ತು ಕಲ್ಯಾಣ ಮಂಡಳಿಯ ನಿಯಮಗಳನ್ನು ಗಾಳಿಗೆ ತೂರಲಾಗಿದೆ.

ರಾಜ್ಯ ಸರ್ಕಾರ 150 ಕೋಟಿ ರೂಪಾಯಿಗಳನ್ನು ಕಲ್ಯಾಣ ಮಂಡಳಿಯಿಂದ ತೆಗೆದುಕೊಂಡಿದೆ. ಐಎಎಸ್ ಅಧಿಕಾರಿ ಮಣಿವಣ್ಣನ್ ಉಸ್ತುವಾರಿಯಲ್ಲಿ ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೆ ಆಹಾರಧಾನ್ಯಗಳನ್ನು ಟ್ರೇಡ್ ಯೂನಿಯನ್ ಗಳ ಮೂಲಕ ವಿತರಿಸಲು ವ್ಯವಸ್ಥೆ ಮಾಡಲಾಗಿತ್ತು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಶಾಸಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೇಲೆ ಒತ್ತಡ ತಂದು ಶಾಸಕರೇ ವಿತರಿಸುವಂತೆ ನೋಡಿಕೊಂಡರು. ಪರಿಣಾಮ ಶಾಸಕ ಅರವಿಂದ ಲಿಂಬಾವಳಿ ಮತ್ತು ಬಿಜೆಪಿ ಕಾರ್ಪೋರೇಟರ್‌ಗಳು ತಮ್ಮ ಪೋಟೋಗಳನ್ನು ಅಕ್ಕಿ ಪಾಕೇಟ್‌ಗಳ ಮೇಲೆ ಮುದ್ರಿಸಿ ವಲಸೆ-ಕಟ್ಟಡ ಕಾರ್ಮಿಕರಿಗೆ ಹಂಚುವ ಕೆಲಸ ಮಾಡುತ್ತಿದ್ದಾರೆ.

ನಾನುಗೌರಿ.ಕಾಂ ಜೊತೆ ದೂರವಾಣಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ್ ಬೆಂಗಳೂರು ನಗರದಲ್ಲಿರುವ ಮುನಿರತ್ನಂ, ಅರವಿಂದ ಲಿಂಬಾವಳಿ, ಸತೀಶ್ ರೆಡ್ಡಿ, ಮಾಜಿ ಶಾಸಕ ಎನ್.ಎಸ್.ಕೃಷ್ಣಯ್ಯ ಸೇರಿದಂತೆ ಬಿಜೆಪಿ ಶಾಸಕರು ಮತ್ತು ಕಾರ್ಪೋರೇಟರ್‌ಗಳು ಕಟ್ಟಡ ಕಾರ್ಮಿಕರಿಗೆ ಆಹಾರಧಾನ್ಯಗಳ ವಿತರಣೆ ಮಾಡುವಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಸುಮಾರು 20ಲಕ್ಷಕ್ಕೂ ಹೆಚ್ಚು ಮಂದಿ ಕಟ್ಟಡ ಮತ್ತು ವಲಸೆ ಕಾರ್ಮಿಕರಿದ್ದು ಪ್ರತಿಯೊಬ್ಬ ಕಾರ್ಮಿಕನಿಗೆ 750 ರೂ ಮೌಲ್ಯದ ಆಹಾರಧಾನ್ಯಗಳನ್ನು ವಿತರಿಸಲಾಗುತ್ತಿದೆ. ಆಹಾರ ಧಾನ್ಯಗಳನ್ನು ವಿತರಿಸುವುದಕ್ಕಾಗಿಯೇ 75 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದ್ದು ಕಾರ್ಮಿಕರ ಹಣವನ್ನು
ಲೂಟಿ ಮಾಡಲಾಗುತ್ತಿದೆ ಎಂದಿದ್ದಾರೆ.

ಸಂಕಟದಿಂದ ಹೇಗೆ ಪಾರಾಗುವುದೆಂದು ಇಡೀ ಜಗತ್ತು ಚಿಂತಿಸುತ್ತಿದ್ದರೆ, ಬಿಜೆಪಿಯ ಕೆಲ ನಾಯಕರುಗಳು ಸರಕಾರದ ಪರಿಹಾರ ಸಾಮಗ್ರಿ ಮೇಲೆ ತಮ್ಮ ಫೋಟೋ ಹಾಕಿಕೊಂಡು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವ ಸಂಗತಿ. ಇದೇನು ಜನಸಾಮಾನ್ಯರಿಗೆ ಸರಕಾರ ನೀಡುವ ಪರಿಹಾರ ಸಾಮಗ್ರಿಯೋ? ಬಿಜೆಪಿ ಪಕ್ಷದ ಕೊಡುಗೆಯೋ? ಅಥವಾ ಲಿಂಬಾವಳಿಯವರ ವೈಯಕ್ತಿಕ ದಾನವೋ? ಅಥವಾ ಲಜ್ಜೆಗೇಡಿ ರಾಜಕಾರಣವೋ? ಪ್ರಧಾನಿ ಮೋದಿ ಮತ್ತು ಸನ್ಮಾನ್ಯ ಯಡಿಯೂರಪ್ಪ ಉತ್ತರ ಹೇಳುವರೇ? ಒಂದು ಸಮುದಾಯವನ್ನು ಕೊರೋನ ಮಹಾಮಾರಿಗೆ ಸಮೀಕರಿಸುವವರ ಬಗ್ಗೆ ದಿವ್ಯ ಮೌನ ತಳೆದ ಪ್ರಧಾನಿಗಳು ಬಡ ಕಾರ್ಮಿಕರ ಪರಿಹಾರ ಸಾಮಗ್ರಿಯನ್ನು ಕೆಲ ಪ್ರಚಾರಪ್ರಿಯರು ತಮ್ಮ ಫೋಟೋ ಸ್ಟಿಕರ್ ಅಂಟಿಸಿ ನೀಡುವುದಕ್ಕೆ ಸಮ್ಮತಿ ಸೂಚಿಸಿದ್ದಾರೆಯೇ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್‌ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಲಸೆ ಮತ್ತು ಕಟ್ಟಡ ಕಾರ್ಮಿಕರಿಗೆ ಊಟದ ವ್ಯವಸ್ಥೆ ನೋಡಿಕೊಳ್ಳಲು ಇಸ್ಕಾನ್ ಸಂಸ್ಥೆಗೆ ವಹಿಸಿದೆ. ಮಾಳವಿಕ ನೇತೃತ್ವದಲ್ಲಿ ಕೋವಿಡ್ ವಾರಿಯರ್ ಫೋರ್ಸ್ ರಚನೆ ಮಾಡಿದೆ. ಇದು ಅದಮ್ಯಚೇತನ ಸಂಸ್ಥೆಯೊಂದಿಗೆ ಸೇರಿಕೊಂಡು ಇದೇ ಕಲ್ಯಾಣ ಮಂಡಳಿಯ ಹಣದಲ್ಲಿ ಊಟ ವಿತರಿಸುತ್ತಿದೆ. ಸೇವಾ ಆರ್‌ಎಸ್ಎಸ್ ಹೆಸರಿನಲ್ಲೂ ಊಟ ವಿತರಣೆ ಮಾಡುತ್ತಿದೆ. ಒಂದು ಕೇಂದ್ರದಲ್ಲಿ ಆಹಾರ ತಯಾರಿಸಿ ಒಂದು ಊಟಕ್ಕೆ 24 ರೂಪಾಯಿಯಂತೆ ಸರ್ಕಾರದಿಂದ ಹಣ ಪಡೆಯುತ್ತವೆ ಈ ಸಂಸ್ಥೆಗಳು. ಮೊದಲು 300 ಗ್ರಾ ಕೊಡುತ್ತಿದ್ದರು. ಈಗ ಅದು 200 ಗ್ರಾಂಗೆ ಇಳಿದಿದೆ. ಇದರಿಂದ ಕಟ್ಟಡ ಕಾರ್ಮಿಕರ ಹೊಟ್ಟೆ ತುಂಬುವುದಿಲ್ಲ ಎಂಬ ದೂರುಗಳು ಕೇಳಿಬಂದಿವೆ.

ರಾತ್ರಿ ವೇಳೆ ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೆ ಕೊಡುವ ಊಟ ಕಳಪೆಯಾಗಿದೆ. ಒಂದುಕಡೆ ಊಟ ತಯಾರಿಸಿ ಬೆಂಗಳೂರಿನ 24 ಕಲ್ಯಾಣ ಮಂಟಪಗಳಲ್ಲಿ ಅನ್ನವನ್ನು ತಂದು ಸುರಿಯುವ ವ್ಯವಸ್ಥೆ ಇರುವುದರಿಂದ ಸ್ವಚ್ಛತೆ ಕಾಣುತ್ತಿಲ್ಲ. ಕಲ್ಯಾಣ ಮಂಟಪದ ಆವರಣದಲ್ಲಿ ಸುರಿದ ಅನ್ನವನ್ನು ಡಬ್ಬಿಗಳಿಗೆ ತುಂಬಿಕೊಡಲಾಗುತ್ತಿದೆ. ಆಹಾರಧಾನ್ಯವನ್ನು ಕೊಡುವ ನೆಪದಲ್ಲಿ ಕಲ್ಯಾಣ ಮಂಡಳಿಯಿಂದ ಬಿಡುಗಡೆಯಾಗಿರುವ ಹಣ ಸದ್ಬಳಕೆಯಾಗುತ್ತಿಲ್ಲ ಎಂಬ ಆರೋಪವಿದೆ..

ಬೆಂಗಳೂರಿನಿಂದ ನಡೆದುನಡೆದು ಗ್ರಾಮ ಸೇರುವ ಹೊತ್ತಿಗೆ ವಲಸೆ ಕಾರ್ಮಿಕ ಮಹಿಳೆ ಗಂಗಮ್ಮ ಮೃತಪಟ್ಟರು. ಕಟ್ಟಡ ಕಾರ್ಮಿಕರು ಮೃತಪಟ್ಟರೆ ಕಲ್ಯಾಣ ಮಂಡಳಿಯಿಂದ 5 ಲಕ್ಷ ರೂಪಾಯಿ ಪರಿಹಾರ ನೀಡಲು ಅವಕಾಶವಿದೆ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಕೇವಲ 3 ಲಕ್ಷ ರೂಪಾಯಿ ನೀಡುವ ಭರವಸೆ ನೀಡಿದ್ದಾರೆ. ಗಂಗಮ್ಮಳ ಸಾವನ್ನು ಕೆಲಸ ಮಾಡುವ ಸಂದರ್ಭದಲ್ಲೇ ನಡೆದಿದೆ ಎಂದು ಪರಿಗಣಿಸಿ ಆಕೆಯ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರವನ್ನು ಸರ್ಕಾರ ನೀಡಬೇಕಿದೆ ಎಂಬ ಒತ್ತಾಯವೂ ಕೇಳಿಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...