Homeಮುಖಪುಟಕಟ್ಟಡ ಕಾರ್ಮಿರ ಹಣದಲ್ಲಿಆಹಾರ-ಧಾನ್ಯ ವಿತರಿಸಿ ಪ್ರಚಾರ ಪಡೆಯುತ್ತಿರುವ ಬಿಜೆಪಿ ಶಾಸಕರು

ಕಟ್ಟಡ ಕಾರ್ಮಿರ ಹಣದಲ್ಲಿಆಹಾರ-ಧಾನ್ಯ ವಿತರಿಸಿ ಪ್ರಚಾರ ಪಡೆಯುತ್ತಿರುವ ಬಿಜೆಪಿ ಶಾಸಕರು

ಸಂಕಟದಿಂದ ಹೇಗೆ ಪಾರಾಗುವುದೆಂದು ಇಡೀ ಜಗತ್ತು ಚಿಂತಿಸುತ್ತಿದ್ದರೆ, ಬಿಜೆಪಿಯ ಕೆಲ ನಾಯಕರುಗಳು ಸರಕಾರದ ಪರಿಹಾರ ಸಾಮಗ್ರಿ ಮೇಲೆ ತಮ್ಮ ಫೋಟೋ ಹಾಕಿಕೊಂಡು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವ ಸಂಗತಿ.

- Advertisement -
- Advertisement -

ಕೋವಿಡ್-19 ಲಾಕ್‌ಡೌನ್‌ನಿಂದಾಗಿ ತತ್ತರಿಸಿಹೋಗಿರುವ ವಲಸೆ ಮತ್ತು ಕಟ್ಟಡಕಾರ್ಮಿಕರಿಗೆ ಆಹಾರ-ಧಾನ್ಯ ಹಂಚುವ ಕಾರ್ಯ ಭರ್ಜರಿ ಪ್ರಚಾರದೊಂದಿಗೆ ನಡೆಯುತ್ತಿದೆ. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಕಾರ್ಮಿಕರು ಉಳಿಸಿರುವ ಹಣದಲ್ಲೇ ಆಹಾರ-ಧಾನ್ಯಗಳನ್ನು ಖರೀದಿಸಿ ಬಿಜೆಪಿ ಶಾಸಕರು ಅಕ್ಕಿ ಪಾಕೆಟ್‌ಗಳ ಮೇಲೆ ತಮ್ಮ ಪೋಟೋಗಳನ್ನು ಹಾಕಿಕೊಂಡು ಕಟ್ಟಡ ಕಾರ್ಮಿಕರಿಗೆ ಆಹಾರಧಾನ್ಯ ಮತ್ತು ಊಟವನ್ನು ವಿತರಿಸುತ್ತಿರುವುದು ಜೋರಾಗಿ ನಡೆಯುತ್ತಿದೆ. ಹಣ ಕಟ್ಟಡ ಕಾರ್ಮಿಕರದ್ದು, ಪ್ರಚಾರ ಪಡೆಯುತ್ತಿರುವುದು ಮಾತ್ರ ಬಿಜೆಪಿ ಶಾಸಕರು. ಆಹಾರಧಾನ್ಯಗಳನ್ನು ವಿತರಿಸುವಾಗ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುತ್ತಿಲ್ಲ. ಮುಖ್ಯಮಂತ್ರಿಗಳು ಮತ್ತು ಪ್ರಧಾನಿಗಳ ಮಾತನ್ನು ಬಿಜೆಪಿ ಶಾಸಕರೇ ಉಲ್ಲಂಘಿಸುತ್ತಿದ್ದಾರೆ ಎಂದು ಆರೋಪಿಸಲಾಗುತ್ತಿದೆ.

ಕಲ್ಯಾಣ ಮಂಡಳಿಯ ಹಣವನ್ನು ಕಟ್ಟಡ ಕಾರ್ಮಿಕರಿಗೆ ಬಿಟ್ಟು ಇತರ ಉದ್ದೇಶಕ್ಕೆ ಬಳಸಿಕೊಳ್ಳಬಾರದೆಂಬ ಸುಪ್ರೀಂ ಕೋರ್ಟ್ ಆದೇಶವಿದೆ. ಆದರೂ ಕೇಂದ್ರ ಸರ್ಕಾರ ಕಲ್ಯಾಣ ಮಂಡಳಿಯಿಂದ 3 ಸಾವಿರ ಕೋಟಿ ರೂಪಾಯಿ ಹಣ ಬಳಕೆ ಮಾಡಿಕೊಂಡಿದೆ. ಹೀಗೆ ಹಣ ಬಳಕೆ ಮಾಡಿಕೊಳ್ಳುವ ಮೊದಲು ಕಲ್ಯಾಣ ಮಂಡಳಿಯ ಸಭೆ ಕರೆಯಬೇಕು. ಆದರೆ ಕಾರ್ಮಿಕರು, ಮಾಲಿಕರು ಮತ್ತು ಸರ್ಕಾರದ ಪ್ರತಿನಿಧಿಗಳು ಈ ಮಂಡಳಿಯಲ್ಲಿದ್ದರೂ ಸಭೆಯನ್ನೇ ಕರೆದಿಲ್ಲ. ಜೊತೆಗೆ ಸಲಹಾ ಮಂಡಳಿಯ ಸಭೆಯನ್ನು ಕರೆಯದೆ ಹಣ ಬಳಸಿಕೊಳ್ಳಲಾಗಿದೆ. ಈ ಮೂಲಕ ಸುಪ್ರೀಂಕೋರ್ಟ್ ಆದೇಶ ಮತ್ತು ಕಲ್ಯಾಣ ಮಂಡಳಿಯ ನಿಯಮಗಳನ್ನು ಗಾಳಿಗೆ ತೂರಲಾಗಿದೆ.

ರಾಜ್ಯ ಸರ್ಕಾರ 150 ಕೋಟಿ ರೂಪಾಯಿಗಳನ್ನು ಕಲ್ಯಾಣ ಮಂಡಳಿಯಿಂದ ತೆಗೆದುಕೊಂಡಿದೆ. ಐಎಎಸ್ ಅಧಿಕಾರಿ ಮಣಿವಣ್ಣನ್ ಉಸ್ತುವಾರಿಯಲ್ಲಿ ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೆ ಆಹಾರಧಾನ್ಯಗಳನ್ನು ಟ್ರೇಡ್ ಯೂನಿಯನ್ ಗಳ ಮೂಲಕ ವಿತರಿಸಲು ವ್ಯವಸ್ಥೆ ಮಾಡಲಾಗಿತ್ತು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಶಾಸಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೇಲೆ ಒತ್ತಡ ತಂದು ಶಾಸಕರೇ ವಿತರಿಸುವಂತೆ ನೋಡಿಕೊಂಡರು. ಪರಿಣಾಮ ಶಾಸಕ ಅರವಿಂದ ಲಿಂಬಾವಳಿ ಮತ್ತು ಬಿಜೆಪಿ ಕಾರ್ಪೋರೇಟರ್‌ಗಳು ತಮ್ಮ ಪೋಟೋಗಳನ್ನು ಅಕ್ಕಿ ಪಾಕೇಟ್‌ಗಳ ಮೇಲೆ ಮುದ್ರಿಸಿ ವಲಸೆ-ಕಟ್ಟಡ ಕಾರ್ಮಿಕರಿಗೆ ಹಂಚುವ ಕೆಲಸ ಮಾಡುತ್ತಿದ್ದಾರೆ.

ನಾನುಗೌರಿ.ಕಾಂ ಜೊತೆ ದೂರವಾಣಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ್ ಬೆಂಗಳೂರು ನಗರದಲ್ಲಿರುವ ಮುನಿರತ್ನಂ, ಅರವಿಂದ ಲಿಂಬಾವಳಿ, ಸತೀಶ್ ರೆಡ್ಡಿ, ಮಾಜಿ ಶಾಸಕ ಎನ್.ಎಸ್.ಕೃಷ್ಣಯ್ಯ ಸೇರಿದಂತೆ ಬಿಜೆಪಿ ಶಾಸಕರು ಮತ್ತು ಕಾರ್ಪೋರೇಟರ್‌ಗಳು ಕಟ್ಟಡ ಕಾರ್ಮಿಕರಿಗೆ ಆಹಾರಧಾನ್ಯಗಳ ವಿತರಣೆ ಮಾಡುವಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಸುಮಾರು 20ಲಕ್ಷಕ್ಕೂ ಹೆಚ್ಚು ಮಂದಿ ಕಟ್ಟಡ ಮತ್ತು ವಲಸೆ ಕಾರ್ಮಿಕರಿದ್ದು ಪ್ರತಿಯೊಬ್ಬ ಕಾರ್ಮಿಕನಿಗೆ 750 ರೂ ಮೌಲ್ಯದ ಆಹಾರಧಾನ್ಯಗಳನ್ನು ವಿತರಿಸಲಾಗುತ್ತಿದೆ. ಆಹಾರ ಧಾನ್ಯಗಳನ್ನು ವಿತರಿಸುವುದಕ್ಕಾಗಿಯೇ 75 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದ್ದು ಕಾರ್ಮಿಕರ ಹಣವನ್ನು
ಲೂಟಿ ಮಾಡಲಾಗುತ್ತಿದೆ ಎಂದಿದ್ದಾರೆ.

ಸಂಕಟದಿಂದ ಹೇಗೆ ಪಾರಾಗುವುದೆಂದು ಇಡೀ ಜಗತ್ತು ಚಿಂತಿಸುತ್ತಿದ್ದರೆ, ಬಿಜೆಪಿಯ ಕೆಲ ನಾಯಕರುಗಳು ಸರಕಾರದ ಪರಿಹಾರ ಸಾಮಗ್ರಿ ಮೇಲೆ ತಮ್ಮ ಫೋಟೋ ಹಾಕಿಕೊಂಡು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವ ಸಂಗತಿ. ಇದೇನು ಜನಸಾಮಾನ್ಯರಿಗೆ ಸರಕಾರ ನೀಡುವ ಪರಿಹಾರ ಸಾಮಗ್ರಿಯೋ? ಬಿಜೆಪಿ ಪಕ್ಷದ ಕೊಡುಗೆಯೋ? ಅಥವಾ ಲಿಂಬಾವಳಿಯವರ ವೈಯಕ್ತಿಕ ದಾನವೋ? ಅಥವಾ ಲಜ್ಜೆಗೇಡಿ ರಾಜಕಾರಣವೋ? ಪ್ರಧಾನಿ ಮೋದಿ ಮತ್ತು ಸನ್ಮಾನ್ಯ ಯಡಿಯೂರಪ್ಪ ಉತ್ತರ ಹೇಳುವರೇ? ಒಂದು ಸಮುದಾಯವನ್ನು ಕೊರೋನ ಮಹಾಮಾರಿಗೆ ಸಮೀಕರಿಸುವವರ ಬಗ್ಗೆ ದಿವ್ಯ ಮೌನ ತಳೆದ ಪ್ರಧಾನಿಗಳು ಬಡ ಕಾರ್ಮಿಕರ ಪರಿಹಾರ ಸಾಮಗ್ರಿಯನ್ನು ಕೆಲ ಪ್ರಚಾರಪ್ರಿಯರು ತಮ್ಮ ಫೋಟೋ ಸ್ಟಿಕರ್ ಅಂಟಿಸಿ ನೀಡುವುದಕ್ಕೆ ಸಮ್ಮತಿ ಸೂಚಿಸಿದ್ದಾರೆಯೇ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್‌ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಲಸೆ ಮತ್ತು ಕಟ್ಟಡ ಕಾರ್ಮಿಕರಿಗೆ ಊಟದ ವ್ಯವಸ್ಥೆ ನೋಡಿಕೊಳ್ಳಲು ಇಸ್ಕಾನ್ ಸಂಸ್ಥೆಗೆ ವಹಿಸಿದೆ. ಮಾಳವಿಕ ನೇತೃತ್ವದಲ್ಲಿ ಕೋವಿಡ್ ವಾರಿಯರ್ ಫೋರ್ಸ್ ರಚನೆ ಮಾಡಿದೆ. ಇದು ಅದಮ್ಯಚೇತನ ಸಂಸ್ಥೆಯೊಂದಿಗೆ ಸೇರಿಕೊಂಡು ಇದೇ ಕಲ್ಯಾಣ ಮಂಡಳಿಯ ಹಣದಲ್ಲಿ ಊಟ ವಿತರಿಸುತ್ತಿದೆ. ಸೇವಾ ಆರ್‌ಎಸ್ಎಸ್ ಹೆಸರಿನಲ್ಲೂ ಊಟ ವಿತರಣೆ ಮಾಡುತ್ತಿದೆ. ಒಂದು ಕೇಂದ್ರದಲ್ಲಿ ಆಹಾರ ತಯಾರಿಸಿ ಒಂದು ಊಟಕ್ಕೆ 24 ರೂಪಾಯಿಯಂತೆ ಸರ್ಕಾರದಿಂದ ಹಣ ಪಡೆಯುತ್ತವೆ ಈ ಸಂಸ್ಥೆಗಳು. ಮೊದಲು 300 ಗ್ರಾ ಕೊಡುತ್ತಿದ್ದರು. ಈಗ ಅದು 200 ಗ್ರಾಂಗೆ ಇಳಿದಿದೆ. ಇದರಿಂದ ಕಟ್ಟಡ ಕಾರ್ಮಿಕರ ಹೊಟ್ಟೆ ತುಂಬುವುದಿಲ್ಲ ಎಂಬ ದೂರುಗಳು ಕೇಳಿಬಂದಿವೆ.

ರಾತ್ರಿ ವೇಳೆ ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೆ ಕೊಡುವ ಊಟ ಕಳಪೆಯಾಗಿದೆ. ಒಂದುಕಡೆ ಊಟ ತಯಾರಿಸಿ ಬೆಂಗಳೂರಿನ 24 ಕಲ್ಯಾಣ ಮಂಟಪಗಳಲ್ಲಿ ಅನ್ನವನ್ನು ತಂದು ಸುರಿಯುವ ವ್ಯವಸ್ಥೆ ಇರುವುದರಿಂದ ಸ್ವಚ್ಛತೆ ಕಾಣುತ್ತಿಲ್ಲ. ಕಲ್ಯಾಣ ಮಂಟಪದ ಆವರಣದಲ್ಲಿ ಸುರಿದ ಅನ್ನವನ್ನು ಡಬ್ಬಿಗಳಿಗೆ ತುಂಬಿಕೊಡಲಾಗುತ್ತಿದೆ. ಆಹಾರಧಾನ್ಯವನ್ನು ಕೊಡುವ ನೆಪದಲ್ಲಿ ಕಲ್ಯಾಣ ಮಂಡಳಿಯಿಂದ ಬಿಡುಗಡೆಯಾಗಿರುವ ಹಣ ಸದ್ಬಳಕೆಯಾಗುತ್ತಿಲ್ಲ ಎಂಬ ಆರೋಪವಿದೆ..

ಬೆಂಗಳೂರಿನಿಂದ ನಡೆದುನಡೆದು ಗ್ರಾಮ ಸೇರುವ ಹೊತ್ತಿಗೆ ವಲಸೆ ಕಾರ್ಮಿಕ ಮಹಿಳೆ ಗಂಗಮ್ಮ ಮೃತಪಟ್ಟರು. ಕಟ್ಟಡ ಕಾರ್ಮಿಕರು ಮೃತಪಟ್ಟರೆ ಕಲ್ಯಾಣ ಮಂಡಳಿಯಿಂದ 5 ಲಕ್ಷ ರೂಪಾಯಿ ಪರಿಹಾರ ನೀಡಲು ಅವಕಾಶವಿದೆ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಕೇವಲ 3 ಲಕ್ಷ ರೂಪಾಯಿ ನೀಡುವ ಭರವಸೆ ನೀಡಿದ್ದಾರೆ. ಗಂಗಮ್ಮಳ ಸಾವನ್ನು ಕೆಲಸ ಮಾಡುವ ಸಂದರ್ಭದಲ್ಲೇ ನಡೆದಿದೆ ಎಂದು ಪರಿಗಣಿಸಿ ಆಕೆಯ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರವನ್ನು ಸರ್ಕಾರ ನೀಡಬೇಕಿದೆ ಎಂಬ ಒತ್ತಾಯವೂ ಕೇಳಿಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...