Homeಮುಖಪುಟಕೊರೋನಾ ವೈರಸ್ ಬಗ್ಗೆ ಹರಡುತ್ತಿರುವ ನಕಲಿ ಸುದ್ದಿಗಳ ವಿರುದ್ಧ ಸೈಬರ್ ವಾರಿಯರ್ಸ್ ಅಸ್ತಿತ್ವಕ್ಕೆ

ಕೊರೋನಾ ವೈರಸ್ ಬಗ್ಗೆ ಹರಡುತ್ತಿರುವ ನಕಲಿ ಸುದ್ದಿಗಳ ವಿರುದ್ಧ ಸೈಬರ್ ವಾರಿಯರ್ಸ್ ಅಸ್ತಿತ್ವಕ್ಕೆ

- Advertisement -
- Advertisement -

ಸಾಮಾಜಿಕ ಜಾಲತಾಣದಲ್ಲಿ ಕೊರೊನಾ ವಿರುದ್ದ ಹರಡುತ್ತಿರುವ ಸುಳ್ಳು ಸುದ್ದಿಗಳ ವಿರುದ್ದ ಹೋರಾಡಲು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸೈಬರ್ ಯೋಧರನ್ನು ನೇಮಿಸಿದೆ.

ಕೊರೊನಾ ಸಾಂಕ್ರಾಮಿಕದ ಬಗ್ಗೆ ವಾಟ್ಸಾಪ್, ಫೇಸ್‌ಬುಕ್‌ಗಳಲ್ಲಿ ಹರಡುತ್ತಿರುವ ಬಹಳಷ್ಟು ಸುಳ್ಳುಗಳ ವಿರುದ್ದ ಈ ಸೈಬರ್ ವಿಂಗ್ ಹೋರಾಡುತ್ತಿದೆ. ವೈದ್ಯರು, ದಾದಿಯರು ಹಾಗೂ ಇತರ ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರಿಗಿಂತ ಭಿನ್ನವಾಗಿ ಕೊರೊನಾ ವೈರಸ್ ವಿರುದ್ದ ಈ ‘ಸೈಬರ್’ ಯೋಧರು ಆನ್‌ಲೈನ್‌ನಲ್ಲಿ ಹರಡುತ್ತಿರುವ ನಕಲಿ ಮಾಹಿತಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇವರು ದೃಢೀಕೃತ ಮಾಹಿತಿಯನ್ನು ನೀಡುತ್ತಿದ್ದಾರೆ.

ಕರ್ನಾಟಕದ ಎಂಟು ”ಕರೋನಾ ವಾರಿಯರ್ ಮಾಸ್ಟರ್” ಸ್ವಯಂಸೇವಕರಲ್ಲಿ ಒಬ್ಬರಾದ ಸುಳ್ಯದ ಸಹನಾ ಎ. ತನ್ನ ಸ್ವಂತ ಜಿಲ್ಲೆಯಾದ ದಕ್ಷಿಣ ಕನ್ನಡ ಮತ್ತು ಪಕ್ಕದ ಉಡುಪಿಯಲ್ಲಿ ಕೊರೊನಾ ಹೆಸರಲ್ಲಿ ಹರಡುವ ಸೈಬರ್ ವಿಷವನ್ನು ಎದುರಿಸುವ ಉಸ್ತುವಾರಿ ವಹಿಸಿದ್ದಾರೆ. ”ಮಾಸ್ಟರ್” ಸ್ವಯಂಸೇವಕಳಾಗಿ ಅವರ ಜವಾಬ್ದಾರಿಗಳು ರಾಜ್ಯದಾದ್ಯಂತ ನಾಡಿಮಿಡಿತವನ್ನು ಪಡೆಯಲು ಸಹಾಯ ಮಾಡುತ್ತದೆ ಎನ್ನುತ್ತಾರೆ. ಇದು ಬಹುಮುಖಿ ಕಾರ್ಯಾಚರಣೆಯಾಗಿದ್ದು, DIPR ಕಾರ್ಯದರ್ಶಿ ಪಿ ಮಣಿವಣ್ಣನ್ ಅವರು ಪ್ರಾರಂಭಿಸಿದ ಪರಿಕಲ್ಪನೆಯಾಗಿದೆ.

ಇತ್ತೀಚಿನ ದಿನಗಳಲ್ಲಿ ಕರೋನಾ ವಾರಿಯರ್ಸ್‌ ಎದುರಿಸಿದ ದೊಡ್ಡ ಸವಾಲು ಎಂದರೆ ತಬ್ಲಿಘಿ ಜಮಾಅತ್ ಪ್ರತಿನಿಧಿಗಳ ಬಗ್ಗೆ ತಪ್ಪು ಮಾಹಿತಿಗಳನ್ನು ಹರಡುವುದಾಗಿದೆ. ಸಹನಾ “ಪ್ರತಿ ಜಿಲ್ಲೆ ಮತ್ತು ವಿಭಾಗೀಯ ಗುಂಪುಗಳಲ್ಲಿ ಎಲ್ಲಾ ಧರ್ಮಗಳ ಕರೋನಾ ವಾರಿಯರ್ಸ್ ಅನ್ನು ಹೊಂದಿದ್ದು, ಇದು ಸುಳ್ಳುಗಳನ್ನು ಬಿಚ್ಚಿಡಲು ಹಾಗೂ ವಾಸ್ತವಿಕ ಮಾಹಿತಿಯನ್ನು ಸಾರ್ವಜನಿಕ ವಲಯದಲ್ಲಿ ಹರಡಲು ಒಂದು ಅತ್ಯುತ್ತಮ ಕಾರ್ಯವಾಗಿದೆ” ಎಂದು ಹೇಳುತ್ತಾರೆ.

ಈಗಾಗಲೇ ಎಲ್ಲಾ ರಾಜ್ಯಗಳಲ್ಲಿಯೂ ಅಲ್ಲಿನ ಪೊಲೀಸರೇ ಈ ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚುವ ಕೆಲಸದಲ್ಲಿ ನಿರತರಾಗಿದ್ದಾರೆ. ಉತ್ತರಪ್ರದೇಶದಲ್ಲಿ ಮುಖ್ಯವಾಹಿನಿ ಮಾಧ್ಯಮಗಳಿಂದಲೇ ಅತಿ ಹೆಚ್ಚಿನ ಸುದ್ದಿಗಳ ಪ್ರಸಾರವಾದ ಅಲ್ಲಿನ ಪೊಲೀಸರು ನಿಜ ತಿಳಿಸಿದ್ದಾರೆ. ಕೆಲ ಉದಾಹರಣೆಗಳು ಇಲ್ಲಿವೆ ನೋಡಿ.

ದಕ್ಷಿಣ ಕನ್ನಡದ ತಂಡದ ಪ್ರಮುಖ ಸದಸ್ಯ ನರೇನ್ ಕೊಡುವಾಟ್ಟಟ್ ಯಾವಾಗಲೂ ಆನ್‌ಲೈನ್‌ನಲ್ಲಿ ವಾಟ್ಸಾಪ್‌ನ್ನು ನೋಡುತ್ತಾರೆ. ಅಧೀಕೃತವಲ್ಲದ ನಕಲಿ ಸುದ್ದಿಗಳನ್ನು ಕರೋನಾ ವಾರಿಯರ್ಸ್ ಬಸ್ಟ್ ಮಾಡಿದ್ದಾರೆ ಎಂದು ಪೋಸ್ಟ್ ಮಾಡುವಲ್ಲಿ ಅವರು ನಿರತರಾಗಿರುತ್ತಾರೆ. “ಈ ಸಮಯದಲ್ಲಿ ಜನರು ಅಧಿಕೃತ ಮಾಹಿತಿಯನ್ನು ಪಡೆಯುವುದು ಬಹಳ ಮುಖ್ಯ, ಅವುಗಳಲ್ಲಿ ಕೆಲವು ಸಂಪೂರ್ಣವಾಗಿ ಕೋಮುವಾದಮಯವಾಗಿದೆ” ಎಂದು ಅವರು ಹೇಳುತ್ತಾರೆ. ಲಾಕ್ ಡೌನ್ ಮಧ್ಯೆ ಜನರ ಮನಸ್ಸಿನಲ್ಲಿನ ಗೊಂದಲಗಳನ್ನು ನಿವಾರಿಸಲು ಸರ್ಕಾರದ ವಿವಿಧ ಬುಲೆಟಿನ್‌ಗಳನ್ನು, ಆದೇಶಗಳನ್ನು ಪ್ರಸಾರ ಮಾಡಲಾಗುತ್ತದೆ ಎಂದು ಅವರು ಹೇಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...