Homeಮುಖಪುಟಮತ್ತೆ ಕರ್ತವ್ಯಕ್ಕೆ ಬನ್ನಿ ಎಂದ ಕೇಂದ್ರ: IAS ಅಲ್ಲ, ಸ್ವಯಂಸೇವಕನಾಗಿ ಮಾತ್ರ ಬರುತ್ತೇನೆ ಎಂದ ಕಣ್ಣನ್

ಮತ್ತೆ ಕರ್ತವ್ಯಕ್ಕೆ ಬನ್ನಿ ಎಂದ ಕೇಂದ್ರ: IAS ಅಲ್ಲ, ಸ್ವಯಂಸೇವಕನಾಗಿ ಮಾತ್ರ ಬರುತ್ತೇನೆ ಎಂದ ಕಣ್ಣನ್

- Advertisement -
- Advertisement -

ಹೆಚ್ಚುತ್ತಿರುವ ಅಸಹಿಷ್ಣುತೆ ಹಾಗೂ ವಾಕ್ ಸ್ವಾತಂತ್ರ್ಯವನ್ನು ಮೊಟಕುಗೊಳಿಸಲಾಗಿದೆ ಎಂದು ಎಂಟು ತಿಂಗಳ ಹಿಂದೆ ಐಎಎಸ್ ಹುದ್ದೆಗೆ ರಾಜಿನಾಮೆ ನೀಡಿದ್ದ ಕಣ್ಣನ್ ಗೋಪಿನಾಥನ್ ಅವರಿಗೆ ಮರಳಿ ಕರ್ತವ್ಯಕ್ಕೆ ಬರುವಂತೆ ಕೇಂದ್ರ ಸರ್ಕಾರ ಕೇಳಿಕೊಂಡಿದೆ.

ಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ತಕ್ಷಣ ತಮ್ಮ ಕರ್ತವ್ಯಕ್ಕೆ ಸೇರಲು ಕೇಂದ್ರ ಸರ್ಕಾರ ತಿಳಿಸಿದೆಯಾದರು ಕಣ್ಣನ್ ಅವರು ಸರ್ಕಾರಿ ಸೇವೆಯಲ್ಲಿ ಮತ್ತೆ ಸೇರ್ಪಡೆಗೊಳ್ಳುವ ಯಾವುದೇ ಯೋಜನೆ ಇಲ್ಲ ಎಂದು ಹೇಳಿದ್ದಾರೆ.

“ನನ್ನನ್ನು ಕರ್ತವ್ಯಕ್ಕೆ ಮತ್ತೆ ಸೇರಲು ಕೇಳಿಕೊಂಡ ಸರ್ಕಾರದಿಂದ ಪತ್ರವೊಂದನ್ನು ಸ್ವೀಕರಿಸಿದ್ದೇನೆ. ನನ್ನನ್ನು ಅವರ ಅಧೀನೆಯಲ್ಲಿ ಇಡಲು ಇದನ್ನು ಕಳುಹಿಸಿದ್ದಾರೆ, ಕೊರೋನಾ ವಿರುದ್ದ ನಾನು ಈಗಾಲೇ ಕೆಲಸ ಮಾಡುತ್ತಿದ್ದೇನೆ. ಈ ಸಂಕಷ್ಟದ ಸಮಯದಲ್ಲಿ ವಾಲಂಟೀಯರ್‌ ಆಗಿ ಕೆಲಸ ಮಾಡುತ್ತೇನೆಯೇ ಹೊರತು ಮತ್ತೇ ಐಎಎಸ್ ಸೇವೆಗೆ ಸೇರುವುದಿಲ್ಲ” ಎಂದು ಅವರು ಟ್ವೀಟ್ ಮಾಡಿದ್ದಾರೆ.

“ನಾನು ಇದೀಗ ಕೆಲವು ಸೇವೆಯಲ್ಲಿ ತೊಡಗಿದ್ದೇನೆ. ಇದನ್ನು ಮುಂದುವರಿಸಲು ನಾನು ಬಯಸುತ್ತೇನೆ. ಸರ್ಕಾರ ಬಯಸಿದರೆ ನಾನು ದಾದ್ರಾ ಮತ್ತು ನಗರ ಹವೇಲಿ ಮತ್ತು ದೇಶದ ಯಾವುದೇ ಭಾಗಗಳಿಗೆ ಹೋಗತ್ತೇನೆ, ಆದರೆ ಸ್ವಯಂಸೇವಕರಾಗಿ ಮಾತ್ರ. ಐಎಎಸ್ ತೊರೆಯುವುದು ಚೆನ್ನಾಗಿ ಯೋಚಿಸಿ ಕೈಗೊಂಡ ನಿರ್ಧಾರ ಹಾಗೂ ಅದಕ್ಕೆ ನಾನು ಬದ್ದನಾಗಿದ್ದೇನೆ ”ಎಂದು ಕಣ್ಣನ್ ಹೇಳಿದ್ದಾರೆ.

ಗೋಪಿನಾಥನ್ ಎಂಟು ತಿಂಗಳ ಹಿಂದೆ ರಾಜಿನಾಮೆ ನೀಡಿದ್ದರೂ, ಸರ್ಕಾರ ಇನ್ನೂ ಅವರ ರಾಜೀನಾಮೆಯನ್ನು ಸ್ವೀಕರಿಸಿಲ್ಲ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ನಾನು ರಾಜಿನಾಮೆ ನೀಡಿದ್ದು ಏಕೆಂದರೆ… : ಮಾಜಿ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್ ಸಂದರ್ಶನ


“ನನ್ನನ್ನು ಸರ್ಕಾರವೂ ಹಿಂತಿರುಗಲು ಕೇಳಿಕೊಳ್ಳುವುದು ಒಳ್ಳೆಯ ಉದ್ದೇಶದಿಂದಲ್ಲ ಎಂದು ನಾನು ಭಾವಿಸುತ್ತೇನೆ. ಕೊರೊನಾ ವಿರುದ್ದ ನಾನು ಮಹಾರಾಷ್ಟ್ರದ ಕೆಲವು ಎನ್‌ಜಿಒಗಳೊಂದಿಗೆ ಈಗಾಗಲೇ ಕೆಲಸ ಮಾಡುತ್ತಿದ್ದೇನೆ. ಸೇವೆ ಮಾಡಲು ನನಗೆ ಐಎಎಸ್ ಟ್ಯಾಗ್ ಅಗತ್ಯವಿಲ್ಲ. ನನ್ನ ಪ್ರಸ್ತುತ ಸ್ವಾತಂತ್ರ್ಯದ ಬಗ್ಗೆ ನನಗೆ ಸಂತೋಷವಿದೆ ”ಎಂದು ಅವರು ಹೇಳಿದರು.

ಈ ಹಿಂದೆ ಕೇರಳದಲ್ಲಿ ಉಂಟಾದ 2018ರ ಪ್ರವಾಹದ ಸಂದರ್ಭದಲ್ಲಿ ಅವರು ದಾದ್ರಾ ಮತ್ತು ನಗರ ಹವೇಲಿ ಆಡಳಿತದ ಚೆಕ್ ಹಸ್ತಾಂತರಿಸಿ ಸದ್ದಿಲ್ಲದೆ ಸ್ಥಳದಿಂದ ಹೊರಟು ಹೋಗಿದ್ದರು. ರಜೆಯಲ್ಲಿದ್ದಾಗ ಪರಿಹಾರ ಸಾಮಗ್ರಿಗಳನ್ನು ಲೋಡ್ ಮಾಡುವ ಮತ್ತು ಇಳಿಸುವ ಮೂಲಕ ಎಂಟು ದಿನಗಳ ಕಾಲ ವಿವಿಧ ಪರಿಹಾರ ಶಿಬಿರಗಳಲ್ಲಿ ಕೆಲಸ ಮಾಡಿದ್ದ ಕಣ್ಣನ್ ತನ್ನ ಬ್ಯಾಚ್-ಮೇಟ್ ಆಗಿದ್ದ ಎರ್ನಾಕುಲಂ ಜಿಲ್ಲಾಧಿಕಾರಿ ವೈ ಎಸ್ ಸಫರುಲ್ಲಾ ಅವರನ್ನು ಗುರುತಿಸಿದ ನಂತರ ಅಲ್ಲಿಂದ ಅವರು ಹೊರಟು ಹೋಗಿದ್ದರು.

ಗೋಪಿನಾಥನ್ ಅವರ ಸೇವೆಯ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ನಂತರದ ದಿನಗಳಲ್ಲಿ ವೈರಲ್ ಆಗಿತ್ತು. ಕಣ್ಣನ್ ಗೋಪಿನಾಥನ್ ಆಲಪ್ಪುಳ ಜಿಲ್ಲೆಯ ಎರಾಮಲ್ಲೂರ್ ಮೂಲದವರು. ಇವರು ರಾಜಿನಾಮೆ ನೀಡುವಾಗ ದಾದ್ರಾ ಮತ್ತು ನಗರ ಹವೇಲಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...