Homeಮುಖಪುಟಮತ್ತೆ ಕರ್ತವ್ಯಕ್ಕೆ ಬನ್ನಿ ಎಂದ ಕೇಂದ್ರ: IAS ಅಲ್ಲ, ಸ್ವಯಂಸೇವಕನಾಗಿ ಮಾತ್ರ ಬರುತ್ತೇನೆ ಎಂದ ಕಣ್ಣನ್

ಮತ್ತೆ ಕರ್ತವ್ಯಕ್ಕೆ ಬನ್ನಿ ಎಂದ ಕೇಂದ್ರ: IAS ಅಲ್ಲ, ಸ್ವಯಂಸೇವಕನಾಗಿ ಮಾತ್ರ ಬರುತ್ತೇನೆ ಎಂದ ಕಣ್ಣನ್

- Advertisement -
- Advertisement -

ಹೆಚ್ಚುತ್ತಿರುವ ಅಸಹಿಷ್ಣುತೆ ಹಾಗೂ ವಾಕ್ ಸ್ವಾತಂತ್ರ್ಯವನ್ನು ಮೊಟಕುಗೊಳಿಸಲಾಗಿದೆ ಎಂದು ಎಂಟು ತಿಂಗಳ ಹಿಂದೆ ಐಎಎಸ್ ಹುದ್ದೆಗೆ ರಾಜಿನಾಮೆ ನೀಡಿದ್ದ ಕಣ್ಣನ್ ಗೋಪಿನಾಥನ್ ಅವರಿಗೆ ಮರಳಿ ಕರ್ತವ್ಯಕ್ಕೆ ಬರುವಂತೆ ಕೇಂದ್ರ ಸರ್ಕಾರ ಕೇಳಿಕೊಂಡಿದೆ.

ಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ತಕ್ಷಣ ತಮ್ಮ ಕರ್ತವ್ಯಕ್ಕೆ ಸೇರಲು ಕೇಂದ್ರ ಸರ್ಕಾರ ತಿಳಿಸಿದೆಯಾದರು ಕಣ್ಣನ್ ಅವರು ಸರ್ಕಾರಿ ಸೇವೆಯಲ್ಲಿ ಮತ್ತೆ ಸೇರ್ಪಡೆಗೊಳ್ಳುವ ಯಾವುದೇ ಯೋಜನೆ ಇಲ್ಲ ಎಂದು ಹೇಳಿದ್ದಾರೆ.

“ನನ್ನನ್ನು ಕರ್ತವ್ಯಕ್ಕೆ ಮತ್ತೆ ಸೇರಲು ಕೇಳಿಕೊಂಡ ಸರ್ಕಾರದಿಂದ ಪತ್ರವೊಂದನ್ನು ಸ್ವೀಕರಿಸಿದ್ದೇನೆ. ನನ್ನನ್ನು ಅವರ ಅಧೀನೆಯಲ್ಲಿ ಇಡಲು ಇದನ್ನು ಕಳುಹಿಸಿದ್ದಾರೆ, ಕೊರೋನಾ ವಿರುದ್ದ ನಾನು ಈಗಾಲೇ ಕೆಲಸ ಮಾಡುತ್ತಿದ್ದೇನೆ. ಈ ಸಂಕಷ್ಟದ ಸಮಯದಲ್ಲಿ ವಾಲಂಟೀಯರ್‌ ಆಗಿ ಕೆಲಸ ಮಾಡುತ್ತೇನೆಯೇ ಹೊರತು ಮತ್ತೇ ಐಎಎಸ್ ಸೇವೆಗೆ ಸೇರುವುದಿಲ್ಲ” ಎಂದು ಅವರು ಟ್ವೀಟ್ ಮಾಡಿದ್ದಾರೆ.

“ನಾನು ಇದೀಗ ಕೆಲವು ಸೇವೆಯಲ್ಲಿ ತೊಡಗಿದ್ದೇನೆ. ಇದನ್ನು ಮುಂದುವರಿಸಲು ನಾನು ಬಯಸುತ್ತೇನೆ. ಸರ್ಕಾರ ಬಯಸಿದರೆ ನಾನು ದಾದ್ರಾ ಮತ್ತು ನಗರ ಹವೇಲಿ ಮತ್ತು ದೇಶದ ಯಾವುದೇ ಭಾಗಗಳಿಗೆ ಹೋಗತ್ತೇನೆ, ಆದರೆ ಸ್ವಯಂಸೇವಕರಾಗಿ ಮಾತ್ರ. ಐಎಎಸ್ ತೊರೆಯುವುದು ಚೆನ್ನಾಗಿ ಯೋಚಿಸಿ ಕೈಗೊಂಡ ನಿರ್ಧಾರ ಹಾಗೂ ಅದಕ್ಕೆ ನಾನು ಬದ್ದನಾಗಿದ್ದೇನೆ ”ಎಂದು ಕಣ್ಣನ್ ಹೇಳಿದ್ದಾರೆ.

ಗೋಪಿನಾಥನ್ ಎಂಟು ತಿಂಗಳ ಹಿಂದೆ ರಾಜಿನಾಮೆ ನೀಡಿದ್ದರೂ, ಸರ್ಕಾರ ಇನ್ನೂ ಅವರ ರಾಜೀನಾಮೆಯನ್ನು ಸ್ವೀಕರಿಸಿಲ್ಲ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ನಾನು ರಾಜಿನಾಮೆ ನೀಡಿದ್ದು ಏಕೆಂದರೆ… : ಮಾಜಿ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್ ಸಂದರ್ಶನ


“ನನ್ನನ್ನು ಸರ್ಕಾರವೂ ಹಿಂತಿರುಗಲು ಕೇಳಿಕೊಳ್ಳುವುದು ಒಳ್ಳೆಯ ಉದ್ದೇಶದಿಂದಲ್ಲ ಎಂದು ನಾನು ಭಾವಿಸುತ್ತೇನೆ. ಕೊರೊನಾ ವಿರುದ್ದ ನಾನು ಮಹಾರಾಷ್ಟ್ರದ ಕೆಲವು ಎನ್‌ಜಿಒಗಳೊಂದಿಗೆ ಈಗಾಗಲೇ ಕೆಲಸ ಮಾಡುತ್ತಿದ್ದೇನೆ. ಸೇವೆ ಮಾಡಲು ನನಗೆ ಐಎಎಸ್ ಟ್ಯಾಗ್ ಅಗತ್ಯವಿಲ್ಲ. ನನ್ನ ಪ್ರಸ್ತುತ ಸ್ವಾತಂತ್ರ್ಯದ ಬಗ್ಗೆ ನನಗೆ ಸಂತೋಷವಿದೆ ”ಎಂದು ಅವರು ಹೇಳಿದರು.

ಈ ಹಿಂದೆ ಕೇರಳದಲ್ಲಿ ಉಂಟಾದ 2018ರ ಪ್ರವಾಹದ ಸಂದರ್ಭದಲ್ಲಿ ಅವರು ದಾದ್ರಾ ಮತ್ತು ನಗರ ಹವೇಲಿ ಆಡಳಿತದ ಚೆಕ್ ಹಸ್ತಾಂತರಿಸಿ ಸದ್ದಿಲ್ಲದೆ ಸ್ಥಳದಿಂದ ಹೊರಟು ಹೋಗಿದ್ದರು. ರಜೆಯಲ್ಲಿದ್ದಾಗ ಪರಿಹಾರ ಸಾಮಗ್ರಿಗಳನ್ನು ಲೋಡ್ ಮಾಡುವ ಮತ್ತು ಇಳಿಸುವ ಮೂಲಕ ಎಂಟು ದಿನಗಳ ಕಾಲ ವಿವಿಧ ಪರಿಹಾರ ಶಿಬಿರಗಳಲ್ಲಿ ಕೆಲಸ ಮಾಡಿದ್ದ ಕಣ್ಣನ್ ತನ್ನ ಬ್ಯಾಚ್-ಮೇಟ್ ಆಗಿದ್ದ ಎರ್ನಾಕುಲಂ ಜಿಲ್ಲಾಧಿಕಾರಿ ವೈ ಎಸ್ ಸಫರುಲ್ಲಾ ಅವರನ್ನು ಗುರುತಿಸಿದ ನಂತರ ಅಲ್ಲಿಂದ ಅವರು ಹೊರಟು ಹೋಗಿದ್ದರು.

ಗೋಪಿನಾಥನ್ ಅವರ ಸೇವೆಯ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ನಂತರದ ದಿನಗಳಲ್ಲಿ ವೈರಲ್ ಆಗಿತ್ತು. ಕಣ್ಣನ್ ಗೋಪಿನಾಥನ್ ಆಲಪ್ಪುಳ ಜಿಲ್ಲೆಯ ಎರಾಮಲ್ಲೂರ್ ಮೂಲದವರು. ಇವರು ರಾಜಿನಾಮೆ ನೀಡುವಾಗ ದಾದ್ರಾ ಮತ್ತು ನಗರ ಹವೇಲಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...