HomeUncategorizedFact Check: ಮುಸ್ಲಿಮರಿಂದ ಕಲ್ಲು ತೂರಾಟ- ಯುಪಿ ವೈದ್ಯೆ ವಂದನಾ ತಿವಾರಿ ಸಾವು: ಈ ಸುದ್ದಿ...

Fact Check: ಮುಸ್ಲಿಮರಿಂದ ಕಲ್ಲು ತೂರಾಟ- ಯುಪಿ ವೈದ್ಯೆ ವಂದನಾ ತಿವಾರಿ ಸಾವು: ಈ ಸುದ್ದಿ ನಿಜವಲ್ಲ

- Advertisement -
- Advertisement -

COVID-19 ಪರೀಕ್ಷಿಸಲು ನಿರಾಕರಿಸಿದ ವೈದ್ಯೆಗೆ ಸ್ಥಳೀಯ ಮುಸ್ಲಿಮರು ಕಲ್ಲು ತೂರಿದ್ದರಿಂದ ಉತ್ತರ ಪ್ರದೇಶದ ಮಹಿಳಾ ವೈದ್ಯೆಯೊಬ್ಬಳು ಸಾವನ್ನಪ್ಪಿದ್ದಾರೆ ಎಂದು ಹೇಳುವ ಹಲವಾರು ಫೇಸ್‌ಬುಕ್ ಪೋಸ್ಟ್‌ಗಳು ವೈರಲ್‌ ಆಗಿವೆ. ಆದರೆ ಆ ಸುದ್ದಿ ಸುಳ್ಳಾಗಿದ್ದು ವೈರಲ್‌ ಫೋಟೊದಲ್ಲಿರುವ ಮಹಿಳೆಯರು ಮಧ್ಯಪ್ರದೇಶ ಫಾರ್ಮಾಸಿಸ್ಟ್‌ ಆಗಿದ್ದು ಅವರು ಮಿದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಆಸ್ಪತ್ರೆಯ ಹಾಸಿಗೆಯಲ್ಲಿ ಮಹಿಳೆಯೊಬ್ಬಳು ಬಾಯಿಯಲ್ಲಿ ಇಂಟ್ಯೂಬೇಶನ್ ಟ್ಯೂಬ್ ಇಟ್ಟುಕೊಂಡಿರುವ ಚಿತ್ರವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಘಟನೆಗೆ ಕೋಮು ಬಣ್ಣವನ್ನು ನೀಡಲಾಗುತ್ತಿದೆ.

ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ಮುಸ್ಲಿಮರು ಕಲ್ಲು ತೂರಾಟದಿಂದ ಗಾಯಗೊಂಡ ವೈದ್ಯ ಮಹಿಳೆ ಈಗ ಮೃತಪಟ್ಟಿದ್ದಾಳೆ. ಅಲ್ಲಿ ಅವರು ಶಂಕಿತ COVID-19 ರೋಗಿಗಳನ್ನು ಪರೀಕ್ಷಿಸಲು ಹೋಗಿದ್ದರು ಎಂದು ಒಂದು ಪೋಸ್ಟ್‌ನಲ್ಲಿ ಬರೆದಿದ್ದರೆ ಮತ್ತೊಂದು ಪೋಸ್ಟ್‌ ಈ ಕೆಳಗಿನಂತಿದೆ.

‘ಸ್ನೇಹಿತರೇ, ದುಃಖದ ಸುದ್ದಿ ಇದೆ. ಡಾಕ್ಟರ್ ವಂದನಾ ತಿವಾರಿ ಇನ್ನಿಲ್ಲ. ಕೊರೊನಾವೈರಸ್ ರೋಗಿಗಳನ್ನು ಪರೀಕ್ಷಿಸಲು ಅವರು ಕಳೆದ ವಾರ ಉತ್ತರ ಪ್ರದೇಶಕ್ಕೆ ಹೋಗಿದ್ದರು ಆದರೆ ಜಿಹಾದಿಗಳು ಅವಳ ಮೇಲೆ ಹಲ್ಲೆ ನಡೆಸಿ ತೀವ್ರವಾಗಿ ಗಾಯಗೊಂಡರು. ಇತರರ ಪ್ರಾಣ ಉಳಿಸಲು ಹೋರಾಡುತ್ತಿದ್ದ ಆ ಯೋಧೆ ಏಳು ದಿನಗಳ ಕಾಲ ಸಾವಿನೊಂದಿಗೆ ಹೋರಾಡಿದ ನಂತರ ಇಲ್ಲವಾಗಿದ್ದಾರೆ. ಸಂತಾಪಗಳು’.

ಮಧ್ಯಪ್ರದೇಶದ ಇಂದೋರ್‌ನಲ್ಲಿ 2020ರ ಏಪ್ರಿಲ್ 2 ರಂದು ಆರೋಗ್ಯ ಅಧಿಕಾರಿಗಳ ಐದು ಸದಸ್ಯರ ತಂಡವು ಕೊರೊನಾ ಪರೀಕ್ಷೆಗಾಗಿ ಭೇಟಿ ನೀಡಿತ್ತು. ಇಂದೋರ್‌ನ ಟಾಟ್ ಪ್ಯಾಟಿ ಬಖಾಲ್ ಪ್ರದೇಶಕ್ಕೆ ಭೇಟಿ ನೀಡಿದಾಗ ಅವರ ಮೇಲೆ ಹಲ್ಲೆಯಾಗಿತ್ತು. ಆ ಸುದ್ದಿಗೂ ಈ ಸುದ್ದಿಗೂ ಗೊಂದಲ ಉಂಟು ಮಾಡಿರುವುದರಿಂದ ಬಹಳಷ್ಟು ಜನ ಈ ಸುದ್ದಿಯನ್ನು ನಿಜವೆಂದು ನಂಬಿಬಿಟ್ಟಿದ್ದಾರೆ. ಹಾಗಾಗಿಯೇ ಈ ಪೋಸ್ಟ್‌ಗಳನ್ನು ಸಹ ಸಾವಿರಾರು ಜನ ಲೈಕ್‌ ಮತ್ತು ಷೇರ್‌ ಮಾಡಿದ್ದಾರೆ.

ಸತ್ಯವೇನು?

ಚಿತ್ರದಲ್ಲಿರುವ ಮಹಿಳೆ ವಂದನಾ ತಿವಾರಿ ಮಧ್ಯಪ್ರದೇಶದ ಶಿವಪುರಿಯ ಜಿಲ್ಲಾ ವೈದ್ಯಕೀಯ ಕಾಲೇಜಿನಲ್ಲಿ  ಔಷಧಿ ಅಧಿಕಾರಿಯಾಗಿದ್ದರು (pharmacist) ಎಂದು ಸ್ಥಳೀಯ ಪತ್ರಿಕೆ ಭೋಪಾಲ್ ಸಮಾಚಾರ್‌ನಲ್ಲಿನ ಲೇಖನವೊಂದು ವರದಿ ಮಾಡಿದೆ. ತಿವಾರಿ ಅವರನ್ನು ಏಪ್ರಿಲ್ 1, 2020 ರಂದು ಗ್ವಾಲಿಯರ್‌ನ ಬಿರ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ ಅವರು ಏಪ್ರಿಲ್ 7 ರಂದು ನಿಧನರಾದರು ಎಂದು ಲೇಖನದಲ್ಲಿ ಉಲ್ಲೇಖಿಸಲಾಗಿದೆ. ಮಿದುಳಿನ ರಕ್ತಸ್ರಾವವು ಅವಳ ಸಾವಿಗೆ ಕಾರಣವೆಂದು ಹೇಳಲಾಗಿದೆ.

ತಿವಾರಿ ವೈದ್ಯಕೀಯ ಕಾಲೇಜಿನಲ್ಲಿ ಮಾರ್ಚ್ 31 ರವರೆಗೆ ಕರ್ತವ್ಯದಲ್ಲಿದ್ದಾರೆ ಎಂದು ಆಸ್ಪತ್ರೆಯ ಡೀನ್ ಇಲಾ ಗುಜರಿಯಾ ತಿಳಿಸಿದ್ದಾರೆ. “ಗ್ವಾಲಿಯರ್ನಲ್ಲಿ ಪ್ರವೇಶ ಪಡೆದಿದ್ದರಿಂದ ಆಕೆಯ ಚಿಕಿತ್ಸೆಯ ಬಗ್ಗೆ ನಮಗೆ ಹೆಚ್ಚಿನ ಮಾಹಿತಿ ಇಲ್ಲ. ಅವರು ಏಪ್ರಿಲ್ 1 ರಿಂದ ಕರ್ತವ್ಯಕ್ಕೆ ಗೈರುಹಾಜರಾಗಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಹಾಗಾಗಿ  ವಂದನಾ ತಿವಾರಿಗೆ ಯುಪಿ ಗ್ರಾಮವೊಂದರಲ್ಲಿ ಮುಸ್ಲಿಮರಿಂದ ಹಲ್ಲೆ ನಡೆಸಲಾಗಿದೆ ಎಂಬ ಹೇಳಿಕೆ ಸುಳ್ಳು ಎಂದು ಘಟನೆಗಳ ಟೈಮ್‌ಲೈನ್ ತೋರಿಸುತ್ತದೆ.

ಪೊಲೀಸ್ ವರಿಷ್ಠಾಧಿಕಾರಿ ಶಿವಪುರಿ ರಾಜೇಶ್ ಚಂದೇಲ್ “ಆಕೆಯನ್ನು ಶಿವಪುರಿ ಆಸ್ಪತ್ರೆಯಲ್ಲಿ ನಿಯೋಜಿಸಲಾಗಿತ್ತು. ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದ ಆಕೆಗೆ ಗ್ವಾಲಿಯರ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಸಹ ನಡೆಸಲಾಯಿತು. ಆದರೂ ಬದುಕುಳಿಯಲಿಲ್ಲ. ಇನ್ನು ಆಕೆ ಉತ್ತರ ಪ್ರದೇಶದಲ್ಲಿ ಹಲ್ಲೆಗೊಳಗಾಗಿರುವುದು ಸಂಪೂರ್ಣ ಸುಳ್ಳು ಸುದ್ದಿ ಎಂದಿದ್ದಾರೆ.

ಯುಪಿ ಪೊಲೀಸರ ಅಧಿಕೃತ ಫ್ಯಾಕ್ಟ್ ಚೆಕ್ ಹ್ಯಾಂಡಲ್‌ ಸಹ ಟ್ವೀಟ್ ಮಾಡಿ, ವಂದನಾ ತಿವಾರಿ ಅವರ ಸಾವಿಗೆ ಉತ್ತರ ಪ್ರದೇಶದೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ.

ಮಧ್ಯಪ್ರದೇಶ ಸರ್ಕಾರದ ಪಿಆರ್ ಇಲಾಖೆಯು ವಂದನಾ ತಿವಾರಿ ಸಾವಿನ ಬಗ್ಗೆ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಕಚೇರಿ ಶಿವಪುರಿ ನೀಡಿದ ಹೇಳಿಕೆಯನ್ನು ಟ್ವೀಟ್ ಮಾಡಿದೆ. ವೈರಲ್ ಪೋಸ್ಟ್‌ಗಳಲ್ಲಿ ಹೇಳಿರುವಂತೆ ಕಲ್ಲು ತೂರಾಟದ ಘಟನೆಯ ಬಗ್ಗೆ ಹೇಳಿಕೆಯಲ್ಲಿ ಎಲ್ಲಿಯೂ ಉಲ್ಲೇಖವಿಲ್ಲ.

ಇದು ಭಾರತೀಯ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ತಪ್ಪು ಮಾಹಿತಿ ಹರಡುತ್ತಿರುವ ಇತ್ತೀಚಿನ ಉದಾಹರಣೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...