HomeUncategorizedFact Check: ಮುಸ್ಲಿಮರಿಂದ ಕಲ್ಲು ತೂರಾಟ- ಯುಪಿ ವೈದ್ಯೆ ವಂದನಾ ತಿವಾರಿ ಸಾವು: ಈ ಸುದ್ದಿ...

Fact Check: ಮುಸ್ಲಿಮರಿಂದ ಕಲ್ಲು ತೂರಾಟ- ಯುಪಿ ವೈದ್ಯೆ ವಂದನಾ ತಿವಾರಿ ಸಾವು: ಈ ಸುದ್ದಿ ನಿಜವಲ್ಲ

- Advertisement -
- Advertisement -

COVID-19 ಪರೀಕ್ಷಿಸಲು ನಿರಾಕರಿಸಿದ ವೈದ್ಯೆಗೆ ಸ್ಥಳೀಯ ಮುಸ್ಲಿಮರು ಕಲ್ಲು ತೂರಿದ್ದರಿಂದ ಉತ್ತರ ಪ್ರದೇಶದ ಮಹಿಳಾ ವೈದ್ಯೆಯೊಬ್ಬಳು ಸಾವನ್ನಪ್ಪಿದ್ದಾರೆ ಎಂದು ಹೇಳುವ ಹಲವಾರು ಫೇಸ್‌ಬುಕ್ ಪೋಸ್ಟ್‌ಗಳು ವೈರಲ್‌ ಆಗಿವೆ. ಆದರೆ ಆ ಸುದ್ದಿ ಸುಳ್ಳಾಗಿದ್ದು ವೈರಲ್‌ ಫೋಟೊದಲ್ಲಿರುವ ಮಹಿಳೆಯರು ಮಧ್ಯಪ್ರದೇಶ ಫಾರ್ಮಾಸಿಸ್ಟ್‌ ಆಗಿದ್ದು ಅವರು ಮಿದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಆಸ್ಪತ್ರೆಯ ಹಾಸಿಗೆಯಲ್ಲಿ ಮಹಿಳೆಯೊಬ್ಬಳು ಬಾಯಿಯಲ್ಲಿ ಇಂಟ್ಯೂಬೇಶನ್ ಟ್ಯೂಬ್ ಇಟ್ಟುಕೊಂಡಿರುವ ಚಿತ್ರವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಘಟನೆಗೆ ಕೋಮು ಬಣ್ಣವನ್ನು ನೀಡಲಾಗುತ್ತಿದೆ.

ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ಮುಸ್ಲಿಮರು ಕಲ್ಲು ತೂರಾಟದಿಂದ ಗಾಯಗೊಂಡ ವೈದ್ಯ ಮಹಿಳೆ ಈಗ ಮೃತಪಟ್ಟಿದ್ದಾಳೆ. ಅಲ್ಲಿ ಅವರು ಶಂಕಿತ COVID-19 ರೋಗಿಗಳನ್ನು ಪರೀಕ್ಷಿಸಲು ಹೋಗಿದ್ದರು ಎಂದು ಒಂದು ಪೋಸ್ಟ್‌ನಲ್ಲಿ ಬರೆದಿದ್ದರೆ ಮತ್ತೊಂದು ಪೋಸ್ಟ್‌ ಈ ಕೆಳಗಿನಂತಿದೆ.

‘ಸ್ನೇಹಿತರೇ, ದುಃಖದ ಸುದ್ದಿ ಇದೆ. ಡಾಕ್ಟರ್ ವಂದನಾ ತಿವಾರಿ ಇನ್ನಿಲ್ಲ. ಕೊರೊನಾವೈರಸ್ ರೋಗಿಗಳನ್ನು ಪರೀಕ್ಷಿಸಲು ಅವರು ಕಳೆದ ವಾರ ಉತ್ತರ ಪ್ರದೇಶಕ್ಕೆ ಹೋಗಿದ್ದರು ಆದರೆ ಜಿಹಾದಿಗಳು ಅವಳ ಮೇಲೆ ಹಲ್ಲೆ ನಡೆಸಿ ತೀವ್ರವಾಗಿ ಗಾಯಗೊಂಡರು. ಇತರರ ಪ್ರಾಣ ಉಳಿಸಲು ಹೋರಾಡುತ್ತಿದ್ದ ಆ ಯೋಧೆ ಏಳು ದಿನಗಳ ಕಾಲ ಸಾವಿನೊಂದಿಗೆ ಹೋರಾಡಿದ ನಂತರ ಇಲ್ಲವಾಗಿದ್ದಾರೆ. ಸಂತಾಪಗಳು’.

ಮಧ್ಯಪ್ರದೇಶದ ಇಂದೋರ್‌ನಲ್ಲಿ 2020ರ ಏಪ್ರಿಲ್ 2 ರಂದು ಆರೋಗ್ಯ ಅಧಿಕಾರಿಗಳ ಐದು ಸದಸ್ಯರ ತಂಡವು ಕೊರೊನಾ ಪರೀಕ್ಷೆಗಾಗಿ ಭೇಟಿ ನೀಡಿತ್ತು. ಇಂದೋರ್‌ನ ಟಾಟ್ ಪ್ಯಾಟಿ ಬಖಾಲ್ ಪ್ರದೇಶಕ್ಕೆ ಭೇಟಿ ನೀಡಿದಾಗ ಅವರ ಮೇಲೆ ಹಲ್ಲೆಯಾಗಿತ್ತು. ಆ ಸುದ್ದಿಗೂ ಈ ಸುದ್ದಿಗೂ ಗೊಂದಲ ಉಂಟು ಮಾಡಿರುವುದರಿಂದ ಬಹಳಷ್ಟು ಜನ ಈ ಸುದ್ದಿಯನ್ನು ನಿಜವೆಂದು ನಂಬಿಬಿಟ್ಟಿದ್ದಾರೆ. ಹಾಗಾಗಿಯೇ ಈ ಪೋಸ್ಟ್‌ಗಳನ್ನು ಸಹ ಸಾವಿರಾರು ಜನ ಲೈಕ್‌ ಮತ್ತು ಷೇರ್‌ ಮಾಡಿದ್ದಾರೆ.

ಸತ್ಯವೇನು?

ಚಿತ್ರದಲ್ಲಿರುವ ಮಹಿಳೆ ವಂದನಾ ತಿವಾರಿ ಮಧ್ಯಪ್ರದೇಶದ ಶಿವಪುರಿಯ ಜಿಲ್ಲಾ ವೈದ್ಯಕೀಯ ಕಾಲೇಜಿನಲ್ಲಿ  ಔಷಧಿ ಅಧಿಕಾರಿಯಾಗಿದ್ದರು (pharmacist) ಎಂದು ಸ್ಥಳೀಯ ಪತ್ರಿಕೆ ಭೋಪಾಲ್ ಸಮಾಚಾರ್‌ನಲ್ಲಿನ ಲೇಖನವೊಂದು ವರದಿ ಮಾಡಿದೆ. ತಿವಾರಿ ಅವರನ್ನು ಏಪ್ರಿಲ್ 1, 2020 ರಂದು ಗ್ವಾಲಿಯರ್‌ನ ಬಿರ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ ಅವರು ಏಪ್ರಿಲ್ 7 ರಂದು ನಿಧನರಾದರು ಎಂದು ಲೇಖನದಲ್ಲಿ ಉಲ್ಲೇಖಿಸಲಾಗಿದೆ. ಮಿದುಳಿನ ರಕ್ತಸ್ರಾವವು ಅವಳ ಸಾವಿಗೆ ಕಾರಣವೆಂದು ಹೇಳಲಾಗಿದೆ.

ತಿವಾರಿ ವೈದ್ಯಕೀಯ ಕಾಲೇಜಿನಲ್ಲಿ ಮಾರ್ಚ್ 31 ರವರೆಗೆ ಕರ್ತವ್ಯದಲ್ಲಿದ್ದಾರೆ ಎಂದು ಆಸ್ಪತ್ರೆಯ ಡೀನ್ ಇಲಾ ಗುಜರಿಯಾ ತಿಳಿಸಿದ್ದಾರೆ. “ಗ್ವಾಲಿಯರ್ನಲ್ಲಿ ಪ್ರವೇಶ ಪಡೆದಿದ್ದರಿಂದ ಆಕೆಯ ಚಿಕಿತ್ಸೆಯ ಬಗ್ಗೆ ನಮಗೆ ಹೆಚ್ಚಿನ ಮಾಹಿತಿ ಇಲ್ಲ. ಅವರು ಏಪ್ರಿಲ್ 1 ರಿಂದ ಕರ್ತವ್ಯಕ್ಕೆ ಗೈರುಹಾಜರಾಗಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಹಾಗಾಗಿ  ವಂದನಾ ತಿವಾರಿಗೆ ಯುಪಿ ಗ್ರಾಮವೊಂದರಲ್ಲಿ ಮುಸ್ಲಿಮರಿಂದ ಹಲ್ಲೆ ನಡೆಸಲಾಗಿದೆ ಎಂಬ ಹೇಳಿಕೆ ಸುಳ್ಳು ಎಂದು ಘಟನೆಗಳ ಟೈಮ್‌ಲೈನ್ ತೋರಿಸುತ್ತದೆ.

ಪೊಲೀಸ್ ವರಿಷ್ಠಾಧಿಕಾರಿ ಶಿವಪುರಿ ರಾಜೇಶ್ ಚಂದೇಲ್ “ಆಕೆಯನ್ನು ಶಿವಪುರಿ ಆಸ್ಪತ್ರೆಯಲ್ಲಿ ನಿಯೋಜಿಸಲಾಗಿತ್ತು. ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದ ಆಕೆಗೆ ಗ್ವಾಲಿಯರ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಸಹ ನಡೆಸಲಾಯಿತು. ಆದರೂ ಬದುಕುಳಿಯಲಿಲ್ಲ. ಇನ್ನು ಆಕೆ ಉತ್ತರ ಪ್ರದೇಶದಲ್ಲಿ ಹಲ್ಲೆಗೊಳಗಾಗಿರುವುದು ಸಂಪೂರ್ಣ ಸುಳ್ಳು ಸುದ್ದಿ ಎಂದಿದ್ದಾರೆ.

ಯುಪಿ ಪೊಲೀಸರ ಅಧಿಕೃತ ಫ್ಯಾಕ್ಟ್ ಚೆಕ್ ಹ್ಯಾಂಡಲ್‌ ಸಹ ಟ್ವೀಟ್ ಮಾಡಿ, ವಂದನಾ ತಿವಾರಿ ಅವರ ಸಾವಿಗೆ ಉತ್ತರ ಪ್ರದೇಶದೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ.

ಮಧ್ಯಪ್ರದೇಶ ಸರ್ಕಾರದ ಪಿಆರ್ ಇಲಾಖೆಯು ವಂದನಾ ತಿವಾರಿ ಸಾವಿನ ಬಗ್ಗೆ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಕಚೇರಿ ಶಿವಪುರಿ ನೀಡಿದ ಹೇಳಿಕೆಯನ್ನು ಟ್ವೀಟ್ ಮಾಡಿದೆ. ವೈರಲ್ ಪೋಸ್ಟ್‌ಗಳಲ್ಲಿ ಹೇಳಿರುವಂತೆ ಕಲ್ಲು ತೂರಾಟದ ಘಟನೆಯ ಬಗ್ಗೆ ಹೇಳಿಕೆಯಲ್ಲಿ ಎಲ್ಲಿಯೂ ಉಲ್ಲೇಖವಿಲ್ಲ.

ಇದು ಭಾರತೀಯ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ತಪ್ಪು ಮಾಹಿತಿ ಹರಡುತ್ತಿರುವ ಇತ್ತೀಚಿನ ಉದಾಹರಣೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...