Homeಮುಖಪುಟಊಟ, ಉದ್ಯೋಗ, ಸ್ವಾವಲಂಬನೆ ಎಲ್ಲರ ಹಕ್ಕಾಗಲಿ: 103ನೇ ಜನ್ಮದಿನದಂದು HS ದೊರೆಸ್ವಾಮಿಯವರ ಆಶಯ

ಊಟ, ಉದ್ಯೋಗ, ಸ್ವಾವಲಂಬನೆ ಎಲ್ಲರ ಹಕ್ಕಾಗಲಿ: 103ನೇ ಜನ್ಮದಿನದಂದು HS ದೊರೆಸ್ವಾಮಿಯವರ ಆಶಯ

ಸರಳ, ಅರ್ಥಪೂರ್ಣ ಆಚರಣೆಯಲ್ಲಿ ಫೇಸ್‌ಬುಕ್‌ ಲೈವ್‌ ಮೂಲಕ ಬಡತನ ನಿರ್ಮೂಲನೆಗೆ ಮುಂದಾಗೋಣ ಎಂದು ದೊರೆಸ್ವಾಮಿಯವರ ಕರೆ. ಸಾವಿರಾರು ಜನರಿಂದ ಶುಭಾಶಯಗಳ ಅರ್ಪಣೆ.

- Advertisement -
- Advertisement -

’ಹಲವರು ಹುಟ್ಟುತ್ತಲೇ ಮುದುಕರು ಆದರೆ ಕೆಲವರು ಸಾಯುವವರೆಗೂ ಚಿರಯುವಕರು ಎಂಬ ನಾಣ್ಣುಡಿಯಂತೆ’ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ, ನಾಡಿನ ಸಾಕ್ಷಿಪ್ರಜ್ಞೆ ಎಚ್‌.ಎಸ್‌ ದೊರೆಸ್ವಾಮಿಯವರು ಇಂದಿಗೂ ಜನಪರರ ಪಾಲಿಗೆ ರಾಕ್‌ಸ್ಟಾರ್‌ ಆಗಿಯೇ ಲವಲವಿಕೆಯಿಂದ ದೃಢವಾಗಿದ್ದಾರೆ.

ಬಡಜನರ ಪರ ಸದಾ ಹೋರಾಟನಿರತ ಸ್ವಾತಂತ್ರ್ಯ ಸೇನಾನಿಯವರು ಇಂದಿಗೆ 103 ವರ್ಷಕ್ಕೆ ಕಾಲಿಟ್ಟಿದ್ದಾರೆ. ಕೊರೊನಾ ಸಾಂಕ್ರಾಮಿಕದ ಲಾಕ್‌ಡೌನ್‌ ಕಾರಣದಿಂದ ಹೆಚ್ಚು ಜನ ಸೇರದೇ ಮೂರ್ನಾಲ್ಕು ಮಂದಿ ಮಾತ್ರ ಅವರಿಗೆ ಇಂದು ಶುಭ ಹಾರೈಸಿ, ಅವರ ಹೋರಾಟದೊಂದಿಗೆ ತಾವಿದ್ದೇವೆ ಎಂಬ ಮಾತುಕೊಡುವ ಮೂಲಕ ಅರ್ಥಪೂರ್ಣ ಆಚರಣೆ ಇಂದು ಅವರ ಜೆ.ಪಿ ನಗರದ ನಿವಾಸದಲ್ಲಿ ಜರುಗಿತು.

ಬಿಳಿಬಣ್ಣದ ಪಂಚೆ, ಅಂಗಿ, ಟವೆಲ್‌ ಹಾಕಿ ಬೆಳಿಗ್ಗಿನಿಂದಲೇ ಬರುತ್ತಿರುವ ಎಲ್ಲಾ ಕರೆಗಳಿಗೂ ದೊರೆಸ್ವಾಮಿಯವರು ಲವಲವಿಕೆಯಿಂದಲೇ ಉತ್ತರಿಸುತ್ತಿದ್ದರು. ಕನ್ನಡ, ತಮಿಳು ಮತ್ತು ತೆಲಗು ಮೂರು ಭಾಷೆಯಿಂದಲೂ  ಹೋರಾಟಗಾರರು, ಅಭಿಮಾನಿಗಳು, ಸಂಬಂಧಿಕರು ಕರೆ ಮಾಡಿ ಶುಭಹಾರೈಕೆಗಳಿಗೆ ತಿಳಿಸುತ್ತಿದ್ದರು. ಅಷ್ಟರಲ್ಲಿ ವಿಡಿಯೋ ಮಾಡುವ ಮುಂಚೆನೇ ಸಿಹಿ ತಿಂದುಬಿಡುತ್ತೇನಪ್ಪ ಎಂದು ಅವರು ಕೇಸರಿಬಾತ್‌ ಸವಿದರು.

ನಂತರ ತಮ್ಮ ಜನ್ಮದಿನದ ಸಂದರ್ಭದಲ್ಲಿ ಫೇಸ್‌ಬುಕ್‌ ಲೈವ್‌ ಮೂಲಕ ನಾಡಿಗೆ ಒಂದು ಸಂದೇಶ ನೀಡಬೇಕೆಂದು ಕೇಳಿದಾಗ ದೊರೆಸ್ವಾಮಿಯವರು ಹೇಳಿದ್ದಿಷ್ಟು. “ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷದ ಮೇಲಾಗಿದೆ. ಆದರೆ ಅಸಮಾನತೆ ಅಷ್ಟೇ ಪ್ರಮಾಣದಲ್ಲಿ ಹೆಚ್ಚುತ್ತಿದೆ. ನಮ್ಮ ದೇಶದಲ್ಲಿ ಒಟ್ಟು ಆದಾಯದ ಮೂರನೇ ಎರಡು ಭಾಗ ಮಾತ್ರ ಎಲ್ಲಾ ಸಾಮಾನ್ಯ ಜನರಿಗ ತಲುಪುತ್ತಿದೆ. ಆದರೆ ಕೇವಲ 10% ಜನರು ಮೂರನೇ ಒಂದು ಭಾಗ ಆದಾಯವನ್ನು ಪಡೆಯುತ್ತಿದ್ದಾರೆ. ಇದು ಆತಂಕಕಾರಿ ವಿಚಾರ. ಅಸಮಾನತೆಯನ್ನು ಪ್ರಭುತ್ವಗಳೇ ಬೆಳೆಸುತ್ತಿವೆ. ಈ ಅಸಮಾನತೆ ತೊಲಗಿ ಸಾಮಾನ್ಯ ಜನರು ಸಹ ಬದುಕಿ ಬಾಳುವ ಹಕ್ಕಿದೆ ಎಂಬ ಸಮಾಜ ಬರಬೇಕಿದೆ. ಎಲ್ಲರಿಗೂ ಊಟ, ಉದ್ಯೋಗ, ಸ್ವಾವಲಂಬನೆಯಿಂದ ಬದುಕುವ ಅವಕಾಶ ಸಿಗಬೇಕಿದೆ” ಎಂದರು.

ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ, ನಾಡಿನ ಸಾಕ್ಷಿಪ್ರಜ್ಞೆ ದೊರೆಸ್ವಾಮಿಯವರ 103ನೇ ಜನ್ಮದಿನದ ಸಂದರ್ಭ…

Posted by Naanu Gauri on Thursday, April 9, 2020

ಜವಾಬ್ದಾರಿಯುತ ಪ್ರಜೆಯಾಗಿ ಜನರನ್ನು ಬೆಳೆಸುವಂತ ಕೆಲಸ ಸರ್ಕಾರದ್ದಾಗಿದೆ. ಬಡತನ ನಿರ್ಮೂಲನೆಯಾಗಬೇಕಿದೆ. ಇಂದಿಗೂ ದೇಶದಲ್ಲಿ 100ಕ್ಕೆ 30 ಜನ ಹಸಿವಿನಿಂದ ಮಲಗುವ ಪರಿಸ್ಥಿತಿ ಇದೆ. 13 ಪಂಚವಾರ್ಷಿಕ ಯೋಜನೆಗಳು ಮುಗಿದಿವೆ. ಇದರ ಫಲಿತಾಂಶ ಎಂದರೆ ಬಡವ ಮತ್ತಷ್ಟು ಬಡವನಾದ. ಶ್ರೀಮಂತರು ಮತ್ತಷ್ಟು ಶ್ರೀಮಂತರಾಗಿದ್ದಾರೆ. ಬಡವ ಮತ್ತು ಬಲ್ಲಿದನ ನಡುವೆ ಅಂತರವನ್ನು ಹೆಚ್ಚು ಮಾಡುವ ವ್ಯವಸ್ಥೆಯೂ ಇಂದಿಗೂ ಬಲಾಢ್ಯವಾಗಿದೆ.

ಬಡವರ ಬಗ್ಗೆ ಮೊದಲು ಚಿಂತನೆಯಾಗಬೇಕೆಂದು ಗಾಂಧೀಜಿಯವರು ಹೇಳುತ್ತಿದ್ದರು. ಸ್ವರಾಜ್ಯದಲ್ಲಿ ಮೊದಲು ಬಡತನ ನಿರ್ಮೂಲನೆಯಾಗಬೇಕೆಂದು ಹೇಳಿದ್ದರು. ಆದರೆ ಸ್ವಾತಂತ್ರ್ಯ ನಂತರ ಆಳಿದವರು ಬಡತನ ನಿರ್ಮೂಲನೆ ಮಾಡುವ ಬದಲು ಬಡತನವನ್ನು ಬೆಳೆಸುವ ಕೆಲಸ ಮಾಡಿದ್ದಾರೆ. 2 ಪಂಚವಾರ್ಷಿಕ ಯೋಜನೆಗಳನ್ನು ಬಡತನ ನಿರ್ಮೂಲನೆಗಾಗಿ ಮೀಸಲಿಟ್ಟಿದ್ದರೆ ಪರಿಸ್ಥಿತಿ ಬದಲಾಗುತ್ತಿತ್ತು.

ನಮ್ಮ ಜನ ಈಗಲಾದರೂ ಸಾಮಾನ್ಯ ಜನರ ಏಳಿಗೆಗಾಗಿ, ಅವರಿಗೆ ಸಮಾನತೆಯನ್ನು ತರುವುದಕ್ಕಾಗಿ, ಅವರು ಬದುಕಿ ಬಾಳುವುದಕ್ಕಾಗಿ ಪ್ರಯತ್ನಿಸಬೇಕು ಎಂದು ಬಯಸುತ್ತೇನೆ ಎಂದರು.

ಸಮಾಜವಾದಿ ಚಿಂತಕರಾದ ಸಿ.ಜಿ.ಕೆ.ರೆಡ್ಡಿ, ರವಿಚಂದ್ರ ಸರ್, ಸಂವಿಧಾನ ಉಳಿವಿಗಾಗಿ ಕರ್ನಾಟಕದ ಗೌರಿ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಮರಿಸ್ವಾಮಿ, ನಾಗರಾಜ್, ಸುವರ್ಣ ಕರ್ನಾಟಕ ರಕ್ಷಣಾ ಸೇನೆಯ ರಾಮಚಂದ್ರ, ಎಸ್.ರಾಘವೇಂದ್ರ ಗೌಡ್ರು ಮತ್ತು ಗೆಳೆಯರು ಬೇರೆ ಬೇರೆ ಸಮಯದಲ್ಲಿ ಬಂದು ಶುಭ ಹಾರೈಸಿದರು.

ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ, ನಾಡಿನ ಸಾಕ್ಷಿಪ್ರಜ್ಞೆ ದೊರೆಸ್ವಾಮಿಯವರ 103ನೇ ಜನ್ಮದಿನದ ಸಂದರ್ಭ…

Posted by Naanu Gauri on Thursday, April 9, 2020

ಫೇಸ್‌ಬುಕ್‌, ವಾಟ್ಸಾಪ್‌ ಮೂಲಕ ಬಂದ ಸಂದೇಶಗಳನ್ನು, ಅಭಿಮಾನದ ಮಾತುಗಳನ್ನು ದಿನವಿಡೀ ಕುಮಾರ್‌ ಸಮತಳರವರು ದೊರೆಸ್ವಾಮಿಯವರಿಗೆ ಓದಿ ಹೇಳಿದರು. ಬಹುಸಂತೋಷದಿಂದಲೇ ದೊರೆಸ್ವಾಮಿಯವರು ಅದನ್ನೆಲ್ಲ ಆಲಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...