Homeಮುಖಪುಟಊಟ, ಉದ್ಯೋಗ, ಸ್ವಾವಲಂಬನೆ ಎಲ್ಲರ ಹಕ್ಕಾಗಲಿ: 103ನೇ ಜನ್ಮದಿನದಂದು HS ದೊರೆಸ್ವಾಮಿಯವರ ಆಶಯ

ಊಟ, ಉದ್ಯೋಗ, ಸ್ವಾವಲಂಬನೆ ಎಲ್ಲರ ಹಕ್ಕಾಗಲಿ: 103ನೇ ಜನ್ಮದಿನದಂದು HS ದೊರೆಸ್ವಾಮಿಯವರ ಆಶಯ

ಸರಳ, ಅರ್ಥಪೂರ್ಣ ಆಚರಣೆಯಲ್ಲಿ ಫೇಸ್‌ಬುಕ್‌ ಲೈವ್‌ ಮೂಲಕ ಬಡತನ ನಿರ್ಮೂಲನೆಗೆ ಮುಂದಾಗೋಣ ಎಂದು ದೊರೆಸ್ವಾಮಿಯವರ ಕರೆ. ಸಾವಿರಾರು ಜನರಿಂದ ಶುಭಾಶಯಗಳ ಅರ್ಪಣೆ.

- Advertisement -
- Advertisement -

’ಹಲವರು ಹುಟ್ಟುತ್ತಲೇ ಮುದುಕರು ಆದರೆ ಕೆಲವರು ಸಾಯುವವರೆಗೂ ಚಿರಯುವಕರು ಎಂಬ ನಾಣ್ಣುಡಿಯಂತೆ’ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ, ನಾಡಿನ ಸಾಕ್ಷಿಪ್ರಜ್ಞೆ ಎಚ್‌.ಎಸ್‌ ದೊರೆಸ್ವಾಮಿಯವರು ಇಂದಿಗೂ ಜನಪರರ ಪಾಲಿಗೆ ರಾಕ್‌ಸ್ಟಾರ್‌ ಆಗಿಯೇ ಲವಲವಿಕೆಯಿಂದ ದೃಢವಾಗಿದ್ದಾರೆ.

ಬಡಜನರ ಪರ ಸದಾ ಹೋರಾಟನಿರತ ಸ್ವಾತಂತ್ರ್ಯ ಸೇನಾನಿಯವರು ಇಂದಿಗೆ 103 ವರ್ಷಕ್ಕೆ ಕಾಲಿಟ್ಟಿದ್ದಾರೆ. ಕೊರೊನಾ ಸಾಂಕ್ರಾಮಿಕದ ಲಾಕ್‌ಡೌನ್‌ ಕಾರಣದಿಂದ ಹೆಚ್ಚು ಜನ ಸೇರದೇ ಮೂರ್ನಾಲ್ಕು ಮಂದಿ ಮಾತ್ರ ಅವರಿಗೆ ಇಂದು ಶುಭ ಹಾರೈಸಿ, ಅವರ ಹೋರಾಟದೊಂದಿಗೆ ತಾವಿದ್ದೇವೆ ಎಂಬ ಮಾತುಕೊಡುವ ಮೂಲಕ ಅರ್ಥಪೂರ್ಣ ಆಚರಣೆ ಇಂದು ಅವರ ಜೆ.ಪಿ ನಗರದ ನಿವಾಸದಲ್ಲಿ ಜರುಗಿತು.

ಬಿಳಿಬಣ್ಣದ ಪಂಚೆ, ಅಂಗಿ, ಟವೆಲ್‌ ಹಾಕಿ ಬೆಳಿಗ್ಗಿನಿಂದಲೇ ಬರುತ್ತಿರುವ ಎಲ್ಲಾ ಕರೆಗಳಿಗೂ ದೊರೆಸ್ವಾಮಿಯವರು ಲವಲವಿಕೆಯಿಂದಲೇ ಉತ್ತರಿಸುತ್ತಿದ್ದರು. ಕನ್ನಡ, ತಮಿಳು ಮತ್ತು ತೆಲಗು ಮೂರು ಭಾಷೆಯಿಂದಲೂ  ಹೋರಾಟಗಾರರು, ಅಭಿಮಾನಿಗಳು, ಸಂಬಂಧಿಕರು ಕರೆ ಮಾಡಿ ಶುಭಹಾರೈಕೆಗಳಿಗೆ ತಿಳಿಸುತ್ತಿದ್ದರು. ಅಷ್ಟರಲ್ಲಿ ವಿಡಿಯೋ ಮಾಡುವ ಮುಂಚೆನೇ ಸಿಹಿ ತಿಂದುಬಿಡುತ್ತೇನಪ್ಪ ಎಂದು ಅವರು ಕೇಸರಿಬಾತ್‌ ಸವಿದರು.

ನಂತರ ತಮ್ಮ ಜನ್ಮದಿನದ ಸಂದರ್ಭದಲ್ಲಿ ಫೇಸ್‌ಬುಕ್‌ ಲೈವ್‌ ಮೂಲಕ ನಾಡಿಗೆ ಒಂದು ಸಂದೇಶ ನೀಡಬೇಕೆಂದು ಕೇಳಿದಾಗ ದೊರೆಸ್ವಾಮಿಯವರು ಹೇಳಿದ್ದಿಷ್ಟು. “ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷದ ಮೇಲಾಗಿದೆ. ಆದರೆ ಅಸಮಾನತೆ ಅಷ್ಟೇ ಪ್ರಮಾಣದಲ್ಲಿ ಹೆಚ್ಚುತ್ತಿದೆ. ನಮ್ಮ ದೇಶದಲ್ಲಿ ಒಟ್ಟು ಆದಾಯದ ಮೂರನೇ ಎರಡು ಭಾಗ ಮಾತ್ರ ಎಲ್ಲಾ ಸಾಮಾನ್ಯ ಜನರಿಗ ತಲುಪುತ್ತಿದೆ. ಆದರೆ ಕೇವಲ 10% ಜನರು ಮೂರನೇ ಒಂದು ಭಾಗ ಆದಾಯವನ್ನು ಪಡೆಯುತ್ತಿದ್ದಾರೆ. ಇದು ಆತಂಕಕಾರಿ ವಿಚಾರ. ಅಸಮಾನತೆಯನ್ನು ಪ್ರಭುತ್ವಗಳೇ ಬೆಳೆಸುತ್ತಿವೆ. ಈ ಅಸಮಾನತೆ ತೊಲಗಿ ಸಾಮಾನ್ಯ ಜನರು ಸಹ ಬದುಕಿ ಬಾಳುವ ಹಕ್ಕಿದೆ ಎಂಬ ಸಮಾಜ ಬರಬೇಕಿದೆ. ಎಲ್ಲರಿಗೂ ಊಟ, ಉದ್ಯೋಗ, ಸ್ವಾವಲಂಬನೆಯಿಂದ ಬದುಕುವ ಅವಕಾಶ ಸಿಗಬೇಕಿದೆ” ಎಂದರು.

ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ, ನಾಡಿನ ಸಾಕ್ಷಿಪ್ರಜ್ಞೆ ದೊರೆಸ್ವಾಮಿಯವರ 103ನೇ ಜನ್ಮದಿನದ ಸಂದರ್ಭ…

Posted by Naanu Gauri on Thursday, April 9, 2020

ಜವಾಬ್ದಾರಿಯುತ ಪ್ರಜೆಯಾಗಿ ಜನರನ್ನು ಬೆಳೆಸುವಂತ ಕೆಲಸ ಸರ್ಕಾರದ್ದಾಗಿದೆ. ಬಡತನ ನಿರ್ಮೂಲನೆಯಾಗಬೇಕಿದೆ. ಇಂದಿಗೂ ದೇಶದಲ್ಲಿ 100ಕ್ಕೆ 30 ಜನ ಹಸಿವಿನಿಂದ ಮಲಗುವ ಪರಿಸ್ಥಿತಿ ಇದೆ. 13 ಪಂಚವಾರ್ಷಿಕ ಯೋಜನೆಗಳು ಮುಗಿದಿವೆ. ಇದರ ಫಲಿತಾಂಶ ಎಂದರೆ ಬಡವ ಮತ್ತಷ್ಟು ಬಡವನಾದ. ಶ್ರೀಮಂತರು ಮತ್ತಷ್ಟು ಶ್ರೀಮಂತರಾಗಿದ್ದಾರೆ. ಬಡವ ಮತ್ತು ಬಲ್ಲಿದನ ನಡುವೆ ಅಂತರವನ್ನು ಹೆಚ್ಚು ಮಾಡುವ ವ್ಯವಸ್ಥೆಯೂ ಇಂದಿಗೂ ಬಲಾಢ್ಯವಾಗಿದೆ.

ಬಡವರ ಬಗ್ಗೆ ಮೊದಲು ಚಿಂತನೆಯಾಗಬೇಕೆಂದು ಗಾಂಧೀಜಿಯವರು ಹೇಳುತ್ತಿದ್ದರು. ಸ್ವರಾಜ್ಯದಲ್ಲಿ ಮೊದಲು ಬಡತನ ನಿರ್ಮೂಲನೆಯಾಗಬೇಕೆಂದು ಹೇಳಿದ್ದರು. ಆದರೆ ಸ್ವಾತಂತ್ರ್ಯ ನಂತರ ಆಳಿದವರು ಬಡತನ ನಿರ್ಮೂಲನೆ ಮಾಡುವ ಬದಲು ಬಡತನವನ್ನು ಬೆಳೆಸುವ ಕೆಲಸ ಮಾಡಿದ್ದಾರೆ. 2 ಪಂಚವಾರ್ಷಿಕ ಯೋಜನೆಗಳನ್ನು ಬಡತನ ನಿರ್ಮೂಲನೆಗಾಗಿ ಮೀಸಲಿಟ್ಟಿದ್ದರೆ ಪರಿಸ್ಥಿತಿ ಬದಲಾಗುತ್ತಿತ್ತು.

ನಮ್ಮ ಜನ ಈಗಲಾದರೂ ಸಾಮಾನ್ಯ ಜನರ ಏಳಿಗೆಗಾಗಿ, ಅವರಿಗೆ ಸಮಾನತೆಯನ್ನು ತರುವುದಕ್ಕಾಗಿ, ಅವರು ಬದುಕಿ ಬಾಳುವುದಕ್ಕಾಗಿ ಪ್ರಯತ್ನಿಸಬೇಕು ಎಂದು ಬಯಸುತ್ತೇನೆ ಎಂದರು.

ಸಮಾಜವಾದಿ ಚಿಂತಕರಾದ ಸಿ.ಜಿ.ಕೆ.ರೆಡ್ಡಿ, ರವಿಚಂದ್ರ ಸರ್, ಸಂವಿಧಾನ ಉಳಿವಿಗಾಗಿ ಕರ್ನಾಟಕದ ಗೌರಿ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಮರಿಸ್ವಾಮಿ, ನಾಗರಾಜ್, ಸುವರ್ಣ ಕರ್ನಾಟಕ ರಕ್ಷಣಾ ಸೇನೆಯ ರಾಮಚಂದ್ರ, ಎಸ್.ರಾಘವೇಂದ್ರ ಗೌಡ್ರು ಮತ್ತು ಗೆಳೆಯರು ಬೇರೆ ಬೇರೆ ಸಮಯದಲ್ಲಿ ಬಂದು ಶುಭ ಹಾರೈಸಿದರು.

ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ, ನಾಡಿನ ಸಾಕ್ಷಿಪ್ರಜ್ಞೆ ದೊರೆಸ್ವಾಮಿಯವರ 103ನೇ ಜನ್ಮದಿನದ ಸಂದರ್ಭ…

Posted by Naanu Gauri on Thursday, April 9, 2020

ಫೇಸ್‌ಬುಕ್‌, ವಾಟ್ಸಾಪ್‌ ಮೂಲಕ ಬಂದ ಸಂದೇಶಗಳನ್ನು, ಅಭಿಮಾನದ ಮಾತುಗಳನ್ನು ದಿನವಿಡೀ ಕುಮಾರ್‌ ಸಮತಳರವರು ದೊರೆಸ್ವಾಮಿಯವರಿಗೆ ಓದಿ ಹೇಳಿದರು. ಬಹುಸಂತೋಷದಿಂದಲೇ ದೊರೆಸ್ವಾಮಿಯವರು ಅದನ್ನೆಲ್ಲ ಆಲಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...