Homeಮುಖಪುಟಊಟ, ಉದ್ಯೋಗ, ಸ್ವಾವಲಂಬನೆ ಎಲ್ಲರ ಹಕ್ಕಾಗಲಿ: 103ನೇ ಜನ್ಮದಿನದಂದು HS ದೊರೆಸ್ವಾಮಿಯವರ ಆಶಯ

ಊಟ, ಉದ್ಯೋಗ, ಸ್ವಾವಲಂಬನೆ ಎಲ್ಲರ ಹಕ್ಕಾಗಲಿ: 103ನೇ ಜನ್ಮದಿನದಂದು HS ದೊರೆಸ್ವಾಮಿಯವರ ಆಶಯ

ಸರಳ, ಅರ್ಥಪೂರ್ಣ ಆಚರಣೆಯಲ್ಲಿ ಫೇಸ್‌ಬುಕ್‌ ಲೈವ್‌ ಮೂಲಕ ಬಡತನ ನಿರ್ಮೂಲನೆಗೆ ಮುಂದಾಗೋಣ ಎಂದು ದೊರೆಸ್ವಾಮಿಯವರ ಕರೆ. ಸಾವಿರಾರು ಜನರಿಂದ ಶುಭಾಶಯಗಳ ಅರ್ಪಣೆ.

- Advertisement -
- Advertisement -

’ಹಲವರು ಹುಟ್ಟುತ್ತಲೇ ಮುದುಕರು ಆದರೆ ಕೆಲವರು ಸಾಯುವವರೆಗೂ ಚಿರಯುವಕರು ಎಂಬ ನಾಣ್ಣುಡಿಯಂತೆ’ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ, ನಾಡಿನ ಸಾಕ್ಷಿಪ್ರಜ್ಞೆ ಎಚ್‌.ಎಸ್‌ ದೊರೆಸ್ವಾಮಿಯವರು ಇಂದಿಗೂ ಜನಪರರ ಪಾಲಿಗೆ ರಾಕ್‌ಸ್ಟಾರ್‌ ಆಗಿಯೇ ಲವಲವಿಕೆಯಿಂದ ದೃಢವಾಗಿದ್ದಾರೆ.

ಬಡಜನರ ಪರ ಸದಾ ಹೋರಾಟನಿರತ ಸ್ವಾತಂತ್ರ್ಯ ಸೇನಾನಿಯವರು ಇಂದಿಗೆ 103 ವರ್ಷಕ್ಕೆ ಕಾಲಿಟ್ಟಿದ್ದಾರೆ. ಕೊರೊನಾ ಸಾಂಕ್ರಾಮಿಕದ ಲಾಕ್‌ಡೌನ್‌ ಕಾರಣದಿಂದ ಹೆಚ್ಚು ಜನ ಸೇರದೇ ಮೂರ್ನಾಲ್ಕು ಮಂದಿ ಮಾತ್ರ ಅವರಿಗೆ ಇಂದು ಶುಭ ಹಾರೈಸಿ, ಅವರ ಹೋರಾಟದೊಂದಿಗೆ ತಾವಿದ್ದೇವೆ ಎಂಬ ಮಾತುಕೊಡುವ ಮೂಲಕ ಅರ್ಥಪೂರ್ಣ ಆಚರಣೆ ಇಂದು ಅವರ ಜೆ.ಪಿ ನಗರದ ನಿವಾಸದಲ್ಲಿ ಜರುಗಿತು.

ಬಿಳಿಬಣ್ಣದ ಪಂಚೆ, ಅಂಗಿ, ಟವೆಲ್‌ ಹಾಕಿ ಬೆಳಿಗ್ಗಿನಿಂದಲೇ ಬರುತ್ತಿರುವ ಎಲ್ಲಾ ಕರೆಗಳಿಗೂ ದೊರೆಸ್ವಾಮಿಯವರು ಲವಲವಿಕೆಯಿಂದಲೇ ಉತ್ತರಿಸುತ್ತಿದ್ದರು. ಕನ್ನಡ, ತಮಿಳು ಮತ್ತು ತೆಲಗು ಮೂರು ಭಾಷೆಯಿಂದಲೂ  ಹೋರಾಟಗಾರರು, ಅಭಿಮಾನಿಗಳು, ಸಂಬಂಧಿಕರು ಕರೆ ಮಾಡಿ ಶುಭಹಾರೈಕೆಗಳಿಗೆ ತಿಳಿಸುತ್ತಿದ್ದರು. ಅಷ್ಟರಲ್ಲಿ ವಿಡಿಯೋ ಮಾಡುವ ಮುಂಚೆನೇ ಸಿಹಿ ತಿಂದುಬಿಡುತ್ತೇನಪ್ಪ ಎಂದು ಅವರು ಕೇಸರಿಬಾತ್‌ ಸವಿದರು.

ನಂತರ ತಮ್ಮ ಜನ್ಮದಿನದ ಸಂದರ್ಭದಲ್ಲಿ ಫೇಸ್‌ಬುಕ್‌ ಲೈವ್‌ ಮೂಲಕ ನಾಡಿಗೆ ಒಂದು ಸಂದೇಶ ನೀಡಬೇಕೆಂದು ಕೇಳಿದಾಗ ದೊರೆಸ್ವಾಮಿಯವರು ಹೇಳಿದ್ದಿಷ್ಟು. “ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷದ ಮೇಲಾಗಿದೆ. ಆದರೆ ಅಸಮಾನತೆ ಅಷ್ಟೇ ಪ್ರಮಾಣದಲ್ಲಿ ಹೆಚ್ಚುತ್ತಿದೆ. ನಮ್ಮ ದೇಶದಲ್ಲಿ ಒಟ್ಟು ಆದಾಯದ ಮೂರನೇ ಎರಡು ಭಾಗ ಮಾತ್ರ ಎಲ್ಲಾ ಸಾಮಾನ್ಯ ಜನರಿಗ ತಲುಪುತ್ತಿದೆ. ಆದರೆ ಕೇವಲ 10% ಜನರು ಮೂರನೇ ಒಂದು ಭಾಗ ಆದಾಯವನ್ನು ಪಡೆಯುತ್ತಿದ್ದಾರೆ. ಇದು ಆತಂಕಕಾರಿ ವಿಚಾರ. ಅಸಮಾನತೆಯನ್ನು ಪ್ರಭುತ್ವಗಳೇ ಬೆಳೆಸುತ್ತಿವೆ. ಈ ಅಸಮಾನತೆ ತೊಲಗಿ ಸಾಮಾನ್ಯ ಜನರು ಸಹ ಬದುಕಿ ಬಾಳುವ ಹಕ್ಕಿದೆ ಎಂಬ ಸಮಾಜ ಬರಬೇಕಿದೆ. ಎಲ್ಲರಿಗೂ ಊಟ, ಉದ್ಯೋಗ, ಸ್ವಾವಲಂಬನೆಯಿಂದ ಬದುಕುವ ಅವಕಾಶ ಸಿಗಬೇಕಿದೆ” ಎಂದರು.

ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ, ನಾಡಿನ ಸಾಕ್ಷಿಪ್ರಜ್ಞೆ ದೊರೆಸ್ವಾಮಿಯವರ 103ನೇ ಜನ್ಮದಿನದ ಸಂದರ್ಭ…

Posted by Naanu Gauri on Thursday, April 9, 2020

ಜವಾಬ್ದಾರಿಯುತ ಪ್ರಜೆಯಾಗಿ ಜನರನ್ನು ಬೆಳೆಸುವಂತ ಕೆಲಸ ಸರ್ಕಾರದ್ದಾಗಿದೆ. ಬಡತನ ನಿರ್ಮೂಲನೆಯಾಗಬೇಕಿದೆ. ಇಂದಿಗೂ ದೇಶದಲ್ಲಿ 100ಕ್ಕೆ 30 ಜನ ಹಸಿವಿನಿಂದ ಮಲಗುವ ಪರಿಸ್ಥಿತಿ ಇದೆ. 13 ಪಂಚವಾರ್ಷಿಕ ಯೋಜನೆಗಳು ಮುಗಿದಿವೆ. ಇದರ ಫಲಿತಾಂಶ ಎಂದರೆ ಬಡವ ಮತ್ತಷ್ಟು ಬಡವನಾದ. ಶ್ರೀಮಂತರು ಮತ್ತಷ್ಟು ಶ್ರೀಮಂತರಾಗಿದ್ದಾರೆ. ಬಡವ ಮತ್ತು ಬಲ್ಲಿದನ ನಡುವೆ ಅಂತರವನ್ನು ಹೆಚ್ಚು ಮಾಡುವ ವ್ಯವಸ್ಥೆಯೂ ಇಂದಿಗೂ ಬಲಾಢ್ಯವಾಗಿದೆ.

ಬಡವರ ಬಗ್ಗೆ ಮೊದಲು ಚಿಂತನೆಯಾಗಬೇಕೆಂದು ಗಾಂಧೀಜಿಯವರು ಹೇಳುತ್ತಿದ್ದರು. ಸ್ವರಾಜ್ಯದಲ್ಲಿ ಮೊದಲು ಬಡತನ ನಿರ್ಮೂಲನೆಯಾಗಬೇಕೆಂದು ಹೇಳಿದ್ದರು. ಆದರೆ ಸ್ವಾತಂತ್ರ್ಯ ನಂತರ ಆಳಿದವರು ಬಡತನ ನಿರ್ಮೂಲನೆ ಮಾಡುವ ಬದಲು ಬಡತನವನ್ನು ಬೆಳೆಸುವ ಕೆಲಸ ಮಾಡಿದ್ದಾರೆ. 2 ಪಂಚವಾರ್ಷಿಕ ಯೋಜನೆಗಳನ್ನು ಬಡತನ ನಿರ್ಮೂಲನೆಗಾಗಿ ಮೀಸಲಿಟ್ಟಿದ್ದರೆ ಪರಿಸ್ಥಿತಿ ಬದಲಾಗುತ್ತಿತ್ತು.

ನಮ್ಮ ಜನ ಈಗಲಾದರೂ ಸಾಮಾನ್ಯ ಜನರ ಏಳಿಗೆಗಾಗಿ, ಅವರಿಗೆ ಸಮಾನತೆಯನ್ನು ತರುವುದಕ್ಕಾಗಿ, ಅವರು ಬದುಕಿ ಬಾಳುವುದಕ್ಕಾಗಿ ಪ್ರಯತ್ನಿಸಬೇಕು ಎಂದು ಬಯಸುತ್ತೇನೆ ಎಂದರು.

ಸಮಾಜವಾದಿ ಚಿಂತಕರಾದ ಸಿ.ಜಿ.ಕೆ.ರೆಡ್ಡಿ, ರವಿಚಂದ್ರ ಸರ್, ಸಂವಿಧಾನ ಉಳಿವಿಗಾಗಿ ಕರ್ನಾಟಕದ ಗೌರಿ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಮರಿಸ್ವಾಮಿ, ನಾಗರಾಜ್, ಸುವರ್ಣ ಕರ್ನಾಟಕ ರಕ್ಷಣಾ ಸೇನೆಯ ರಾಮಚಂದ್ರ, ಎಸ್.ರಾಘವೇಂದ್ರ ಗೌಡ್ರು ಮತ್ತು ಗೆಳೆಯರು ಬೇರೆ ಬೇರೆ ಸಮಯದಲ್ಲಿ ಬಂದು ಶುಭ ಹಾರೈಸಿದರು.

ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ, ನಾಡಿನ ಸಾಕ್ಷಿಪ್ರಜ್ಞೆ ದೊರೆಸ್ವಾಮಿಯವರ 103ನೇ ಜನ್ಮದಿನದ ಸಂದರ್ಭ…

Posted by Naanu Gauri on Thursday, April 9, 2020

ಫೇಸ್‌ಬುಕ್‌, ವಾಟ್ಸಾಪ್‌ ಮೂಲಕ ಬಂದ ಸಂದೇಶಗಳನ್ನು, ಅಭಿಮಾನದ ಮಾತುಗಳನ್ನು ದಿನವಿಡೀ ಕುಮಾರ್‌ ಸಮತಳರವರು ದೊರೆಸ್ವಾಮಿಯವರಿಗೆ ಓದಿ ಹೇಳಿದರು. ಬಹುಸಂತೋಷದಿಂದಲೇ ದೊರೆಸ್ವಾಮಿಯವರು ಅದನ್ನೆಲ್ಲ ಆಲಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...