HomeUncategorizedಥೂ....ಮುಂದಿನ ಎಲೆಕ್ಷನ್ನಿನ್ಯಾಗೆ ನಾನು ಬ್ಲೂಜೆಪಿ ಪರುವಾಗಿ ಪ್ರಚಾರ ಮಾಡಕಿಲ್ಲ, ಮಾಡಕಿಲ್ಲ, ಮಾಡಕಿಲ್ಲsss

ಥೂ….ಮುಂದಿನ ಎಲೆಕ್ಷನ್ನಿನ್ಯಾಗೆ ನಾನು ಬ್ಲೂಜೆಪಿ ಪರುವಾಗಿ ಪ್ರಚಾರ ಮಾಡಕಿಲ್ಲ, ಮಾಡಕಿಲ್ಲ, ಮಾಡಕಿಲ್ಲsss

- Advertisement -
- Advertisement -

ಪ್ರಿಯ ಕೇಳುಗರಿಗೆಲ್ಲ ನಮಸ್ಕಾರ. ಆಘಾತವಾಣಿ ವಾರ್ತಾವಾಚನಕ್ಕೆ ಸ್ವಾಗತ. ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತು. ಇದೀಗ ವಾರ್ತೆಗಳ ವಿವರ.
ಬಾಬಾ ಲಾಂದೇವನಿಂದ ಹೆಡ್ಡಾಫೀಸಿಗೆ ಬಗನಿಗೂಟ: ಕಂಗಾಲಾಗಿ ಕುಳಿತುಕೊಂಡಿವೆ ನಾಗಪುರದ ಕ್ರಿಮಿಕೀಟ
ಕಳೆದ ಲೋಕಸಭಾ ಚುನಾವಣೆಯಲ್ಲಿ ಅಣ್ಣ ಹಜಾರೆ ಜೊತೆ ಸೇರಿ ಭ್ರಷ್ಟಾಚಾರ ನಿರ್ಮೂಲನೆ, ಲೋಕಪಾಲ ಮಸೂದೆ ಇನ್ನಿತ್ಯಾದಿ ಜನಪ್ರಿಯ ಸ್ಲೋಗನ್‍ಗಳ ರಿಯಾಯಿತಿ ದರದ ಮಾರಾಟಕ್ಕಿಳಿದಿದ್ದ ಬಾಬಾ ಲಾಂದೇವ್ ನಂತರ ಬ್ಲೂಜೆಪಿ ಗೆದ್ದ ನಂತರ ಧರಿಸಿದ್ದ ಚೂಡಿದಾರ್ ಸಮೇತ ನಾಗಪುರದ ಕುದುರೆರೇಸ್ ಹೆಡ್ಡಾಫೀಸಿನ ಬಚ್ಚಲುಮನೆಗೆ ನೆಗೆದಿದ್ದರು. ತನ್ನ ಮೂರಡಿ ಗಡ್ಡವನ್ನು ನಿರ್ಮಾಪುಡಿ ನೀರಿನಲ್ಲಿ ನೆನೆಸಿ ನಾಗಪುರದ ಹೆಡ್ಡಾಫೀಸ್ ನೆಲ ಒರೆಸುತ್ತ ತನ್ನ ತಪಂಜಲಿ ಕಂಪನಿಯನ್ನು ಬೆಳೆಸಿಕೊಂಡ ಲಾಂದೇವ್ ಇದೀಗ ಹೆಡ್ಡಾಫೀಸ್ ಗಢವಗಳ ಮುಖಕ್ಕೆ ಡಿಚ್ಚಿ ಹೊಡೆದಿರುವ ವರ್ತಮಾನ ಲಭ್ಯವಾಗಿದೆ. ಮುಂದಿನ ಎಲೆಕ್ಷನ್ನಿನಲ್ಲಿ ನಾನು ಬ್ಲೂಜೆಪಿ ಪರವಾಗಿ ಪ್ರಚಾರ ಮಾಡುವುದಿಲ್ಲ, ನನ್ನ ಬಾಯೊಳಗೆ ಹುಣ್ಣಾಗಿದ್ದು ಮೊದಲಿನಂತೆ ಈಗ ಭಾಷಣ ಜಡಿಯಲು ಸಾಧ್ಯವಾಗುತ್ತಿಲ್ಲ, ಆದ್ದರಿಂದ ಬ್ಲೂಜೆಪಿಯವರು ಅವರ ಗುಂಡಿಯನ್ನು ಅವರೇ ತೋಡಿಕೊಳ್ಳಲಿ, ಬೇಕಿದ್ರೆ, ಅದೇ ಗುಂಡಿಯೊಳಗೆ ಬಿದ್ದು ಅವರ ಮುಖದ ಮೇಲೆ ಅವರೇ ಮಣ್ಣು ಎಳೆದುಕೊಳ್ಳಲಿ, ನಾನು ಗೋಮೂತ್ರವನ್ನು 100 ಡಿಗ್ರಿಯಲ್ಲಿ ಕುದಿಸಿ, ಅದಕ್ಕೆ ಕರ್ಪೂರ ಚಕ್ಕೆ ಲವಂಗ ಮಿಕ್ಸ್ ಮಾಡಿ ಪೆಟ್ರೋಲ್ ಕಂಡುಹಿಡಿದು 35 ರುಪಾಯಿಗೆ ಲೀಟರಿನಂತೆ ಮಾರಿಕೊಂಡು ಬದುಕ್ಕೋತೀನಿ ಎಂದ ಲಾಂದೇವನ ಮಾತು ಕೇಳಿದ ನಾಗಪುರದ ವಯೋವೃದ್ಧ ಕ್ರಿಮಿಕೀಟಗಳು ಗಾಬರಿಬಿದ್ದು ಮೂಛೆರ್É ಹೋಗಿದ್ದಾರೆಂದು ತಿಳಿದುಬಂದಿದೆ.

********

ರೋಗಪೀಡಿತ ಮಂತ್ರಿಗಳೆಲ್ಲ ಫಾರಿನ್ನಿಗೆ ಹಾರ್ತಾವ್ರಲ್ಲ: ಚರಂಡಿಗ್ಯಾಸ್ ತಜ್ಞ ಮೋದಿ ಮಾತಿಗೆ ಬೆಲೆಯೇ ಇಲ್ಲ
ಜಿಲ್ಲೆಗೊಂದರಂತೆ ಆಯುರ್ವೇದ ಆಸ್ಪತ್ರೆ ತೆಗೀತೀನಿ, ಅಡ್ಮಿಟ್ ಆದವ್ರಿಗೆ ಗ್ಲೂಕೋಸ್ ಬದಲು ಗಂಜಲ ಹೆಟ್ಟಿ ರೋಗ ವಾಸಿ ಮಾಡ್ತೀನಿ, ಆಹಾರಪಥ್ಯಕ್ಕೆ ಬದಲಾಗಿ ಗೋವಿನಸೆಗಣಿ, ಹಾಸಿಗೆ ಬೆಡ್ ಬದಲು ಭತ್ತದ ಹುಲ್ಲಿನ ಮೆದೆ ಮೇಲೆ ರೋಗಿ ಮಲಗಿಸ್ತೀನಿ, ಹೀಗೆಂದು ಎರಡೂ ಕೈಯಲ್ಲಿ ಢಮಢಮನೆ ಎದೆ ಚಚ್ಚಿಕೊಂಡು ಆಯುರ್ವೇದದ ಬಗ್ಗೆ ಕಕ್ಕಿಕೊಂಡ ಮೋದಿ ಮಾತನ್ನು ಯಾರೂ ಮೂಸದೆ ಇರುವ ವರ್ತಮಾನ ತಿಳಿದುಬಂದಿದೆ. ಈ ಫುಲ್‍ಟೈಂ ಮೆಮೋರಿ ಲಾಸ್ ಗಿರಾಕಿಯ ಕ್ರಿಸ್ತಪೂರ್ವ ಕಾಲದ ಹೆಲ್ತ್ ಟ್ರೀಟ್‍ಮೆಂಟ್ ತಗೊಂಡ್ರೆ ಅಡ್ಮಿಟ್ ಆದ ಎರಡೇ ಗಂಟೆಗೆ ಕೈಲಾಸಕ್ಕೆ ಪಾರ್ಸೆಲ್ ಆಗೋದು ಗ್ಯಾರಂಟಿ ಎಂದರಿತ ಗೋವಾ ಮುಖ್ಯಮಂತ್ರಿ ಮನೋಹರ ಟುರಿಕ್ಕರ್ ಮೊನ್ನೆಯಷ್ಟೇ ಅಮೆರಿಕಕ್ಕೆ ಚಿಕಿತ್ಸೆಗಂತ ಓಡಿಹೋಗಿ ವಾಪಸ್ ಬಂದರು. ಇದೀಗ ಕೇಂದ್ರ ಕೆಮಿಕಲ್ & ಗೊಬ್ಬರದ ಮಂತ್ರಿ ಡೆಂಟಲ್ ಅನಂತ್ಕುಮಾರ್ ಲಂಡನ್ನಿಗೆ ಆರೋಗ್ಯ ಚಿಕಿತ್ಸೆಗೆ ಓಡಿಹೋಗಿದ್ದಾರೆ. ನಮ್ಮ ಟಣಾಟಣ ಸಂಸ್ಕøತಿಯ ಆರೋಗ್ಯವಿದ್ಯೆ, ವೇದಪುರಾಣ, ಆಯುರ್ವೇದ ಚರಕ ಪಂಡಿತನ ಜ್ಞಾನ ಆಧರಿಸಿದ ಚಿಕಿತ್ಸೆ ತಗೊಳ್ಳಿ ಎಂದು ಪುಂಗುವ ಈ ಪುಂಗಿವಾದಕರು ತಮಗೇನಾದರೂ ರೋಗ ಬಡಿದರೆ ಊರಿಗೆ ಮುಂಚೆ ದೇಶ ಬಿಟ್ಟು ವಿದೇಶಿ ಲಕ್ಸುರಿ ಆಸ್ಪತ್ರೆಗಳ ಬೆಡ್ ಮೇಲೆ ಮಕಾಡೆ ಮಲಗುವ ಈ ಐಚಿತ್ರಕ್ಕೆ ಭಕ್ತಗಣವೇ ಬೇಸ್ತುಬಿದ್ದಿರುವುದಾಗಿ ತಿಳಿದುಬಂದಿದೆ. ‘ಸ್ವದೇಶಿ ವೈದ್ಯಪದ್ದತಿಯ ಬಗ್ಗೆ ರಾತ್ರಿಹಗಲು ಬಡಬಡಿಸುವ ಈ ಮಂದಿ ಚಿಕಿತ್ಸೆಗಾಗಿ ಫಾರಿನ್‍ಗೆ ಹಾರುತ್ತಿದ್ದಾರೆಂದರೆ ಇವರಿಗೆ ಯಾವುದೋ ಗುಹ್ಯರೋಗಳು ಒಕ್ಕರಿಸಿಕೊಂಡಿರಬಹುದು; ತಮ್ಮ ಗೌಪ್ಯತೆಯನ್ನು ಕಾಪಾಡಿಕೊಳ್ಳಲಿಕ್ಕಾಗಿಯೇ ಫಾರಿನ್‍ಗೆ ಹಾರುತ್ತಿರಬಹುದು’ ಎಂಬ ವಿಶ್ಲೇಷಣೆ ಅವರ ವಿರೋಧಿಗಳ ಪಡಸಾಲೆಯಿಂದ ಕೇಳಿಬಂದಿದೆ.

********

ಸರ್ಕಾರಿ ಬ್ಯಾಂಕ್ ಹೆಸರು ಕಿವಿಗೆ ಬಿದ್ದರೆ ಶ್ರೀಸಾಮಾನ್ಯ ಪರಾರಿ: ದರೋಡೆಕೋರರ ಕಷ್ಟ ನಿವಾರಿಸಲು ಏಕಗವಾಕ್ಷಿ ನೀತಿ ಜಾರಿ
ಓದು ಬರಹ ಗೊತ್ತಿಲ್ಲದ ಅನ್ನೆಜುಕೇಟೆಡ್ ಮುಠ್ಠಾಳರ ಕೊಂಪೆಯಾಗಿರುವ ಕೇಂದ್ರ ಸರ್ಕಾರದ ಮಟಾಶ್ ಯೋಜನೆಗಳಿಂದ ದೇಶದ ಸರ್ಕಾರಿ ಬ್ಯಾಂಕುಗಳು ಕಾಲು ಕಿಸಿದುಕೊಂಡು ಮಲಗಿರುವ ಹೊತ್ತಿನಲ್ಲೇ, ಜನರು ಈ ಬ್ಯಾಂಕ್‍ಗಳಲ್ಲಿ ಹಣ ಡಿಪಾಸಿಟ್ ಮಾಡುವ ಅಂದರ್‍ಬಾಹರ್ ಅಪಾಯಕಾರಿ ಆಟಕ್ಕೆ ಬೆನ್ನು ತಿರುಗಿಸಿ ದಿಕ್ಕಾಪಾಲಾಗಿ ಓಡುತ್ತಿರುವ ಸುದ್ದಿ ಬಂದಿದೆ. ಸರ್ಕಾರಿ ಬ್ಯಾಂಕುಗಳಲ್ಲಿ ಜನರು ಇಡುತ್ತಿದ್ದ ಠೇವಣಿಯ ಮೊತ್ತ ಕಳೆದ 4 ದಶಕಗಳಲ್ಲೇ ಅತ್ಯಂತ ಕನಿಷ್ಠಮಟ್ಟ ತಲುಪಿದೆಯೆಂದು ಸರ್ಕಾರದ ವರದಿಯಿಂದಲೇ ಬಯಲಾಗಿದೆ. ಜನರ ಠೇವಣಿ ದುಡ್ಡನ್ನು ಬ್ಯಾಂಕುಗಳು ವಂಚಕ ಕಂಪನಿಗಳಿಗೆ ಕೊಡುವುದು, ಕಂಪನಿ ಮಾಲೀಕರು, ಕೇಂದ್ರ ಸರ್ಕಾರದ ಮೂರೂಬಿಟ್ಟ ಮಂತ್ರಿಗಳಿಗೆ ಪುಳಿಯೊಗರೆ ಪಾರ್ಟಿ ಕೊಟ್ಟು ಹಣದ ಸಮೇತ ದೇಶ ಬಿಟ್ಟು ಓಡಿಹೋಗುವುದು ಹೆಚ್ಚುತ್ತಿರುವುದರ ಹಿನ್ನೆಲೆಯಲ್ಲಿ ಬ್ಯಾಂಕಿನಲ್ಲಿ ಹಣವಿಡುವುದಕ್ಕಿಂತ ಆ ದುಡ್ಡನ್ನು ನಾವೇ ಪರಪರ ಹರಿದು ಬಿಸಾಕುವುದು ಬೆಟರ್ ಎಂಬ ತೀರ್ಮಾನಕ್ಕೆ ಜನರು ಬಂದಿರುವ ಸೂಚನೆಯಿದೆಯೆಂದು ಆರ್ಥಿಕ ತಜ್ಞರು ಅಂದಾಜಿಸಿದ್ದಾರೆ. ಇದರೊಡನೆ ದೇನಾ ಬ್ಯಾಂಕ್, ವಿಜಯಾಬ್ಯಾಂಕ್, ಬ್ಯಾಂಕ್ ಆಫ್ ಬರೋಡ ಬ್ಯಾಂಕ್‍ಗಳನ್ನು ಒಂದುಗೂಡಿಸಿ ಒಂದೇ ಬ್ಯಾಂಕ್ ಮಾಡಲು ಹೊರಟಿರೋ ಮುಠ್ಠಾಳ ಮಡೆಯರ ಹುನ್ನಾರವೇನೆಂದು ಆರ್ಥಿಕತಜ್ಞರಲ್ಲಿ ವಿಚಾರಿಸಿದಾಗ.. ಬ್ಯಾಂಕ್ ವಂಚಕರು ಸೆಪರೇಟ್ ಸೆಪರೇಟಾಗಿ ಬ್ಯಾಂಕುಗಳಿಗೆ ಸಾವಿರಾರು ಕೋಟಿ ಮುಂಡಾಮೋಚಲು ತೊಂದರೆಯಾಗಿರುವುದರಿಂದ ಒಂದೇ ಬ್ಯಾಂಕಿನಲ್ಲಿ ದೊಡ್ಡಮೊತ್ತದ ಸಾಲದ ದರೋಡೆ ನಡೆಸಲು “ಏಕಗವಾಕ್ಷಿ ಟ್ಯಾಕ್ಸ್‍ಮನಿ ದರೋಡೆ’ ಸ್ಕೀಂ ಕೆಳಗೆ ಈ ಬ್ಯಾಂಕುಗಳನ್ನು ವಿಲೀನಗೊಳಿಸಲಾಗಿದೆಯೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

********

ಕಾಲೆತ್ತಿಕೊಂಡ ಧಡಿಯೂರಪ್ಪನ ಆಪರೇಷನ್ ಕಮಲ: ಬೆರಕೆ ಸರ್ಕಾರ ಉರುಳಿಸೋ ಯತ್ನ ವಿಫಲ
ಅಧಿಕಾರದಲ್ಲಿದ್ದಾಗ ಚೆಕ್ಕು, ಡಿಡಿ, ಮನಿಯಾರ್ಡರ್‍ನಲ್ಲೆಲ್ಲ ಲಂಚ ಗೆಬರಿದ ಕಳ್ಳಗಂಟನ್ನು ಬಿಚ್ಚದೆ, ಬೆಂಗಳೂರು ಸಕಲೇಶಪುರ ಮುಂತಾದ ಊರುಗಳ ಪಿಕ್‍ಪಾಕೆಟರ್‍ಗಳು, ದರೋಡೆಕೋರರು, ಮಣ್ಣುಕಳ್ಳರ ಹಿಂದೆ ಬಿದ್ದಿರುವ ಧಡಿಯೂರಪ್ಪ ‘ನಿನ್ನ ಮಿನಿಸ್ಟರ್ ಮಾಡ್ತೀನಿ ಕೈ-ದಳ ಪಕ್ಷದ ಎಮ್ಮೆಲ್ಲೆಗಳನ್ನ ಪರ್ಚೇಸ್ ಮಾಡ್ಕೊಡು’ ಎಂದು ದುಂಬಾಲು ಬಿದ್ದಿದ್ದರೆಂಬ ಸುದ್ದಿ ವರದಿಯಾಗಿದೆ. ಅತ್ತ ಜಾರಕಿಹೊಳಿ ಬ್ರದರ್ಸ್ ಒದ್ದ ಎಡಗಾಲಿನ ಏಟಿಗೆ ಬುರುಡೆ ತೂತು ಮಾಡಿಕೊಂಡು ಬ್ಯಾಂಡೇಜ್ ಹಾಕಿಸಿಕೊಳ್ಳೋ ಲೆವೆಲ್ಲಿಗೆ ಬಂದಿರುವ ಬ್ಲೂಜೆಪಿ ಪಕ್ಷದ ಪ್ಲಾನು ಎರಡೂ ಕಾಲೆತ್ತಿಕೊಂಡು ಕಿಸಕೊಂಡು ಬಿದ್ದಿದ್ದು ಮತ್ತೊಮ್ಮೆ ಮುಖಭಂಗವಾಗಿದೆ. ಹೊಲಿಸಿಕೊಂಡಿದ್ದ ಹೊಸ ಕೋಟನ್ನು ಮಡಚಿಡುತ್ತ ಗೋಳಾಡುತ್ತಲೇ ವಾಮಿಟ್ ಶಾಗೆ ಫೋನ್ ಮಾಡಿದ ಧಡಿಯೂರಪ್ಪ ‘ಹಲೋ ಹಲೋ, ನಮ್ ಪ್ಲಾನಿಗೆ ವಾಂತಿಬೇಧಿಯಾಗಿ ಸ್ಕೆಚ್ಚು.. ಪಚ್ಚ್ ಎಂದಿದೆ.. ಮುಂದೆ ಯಾವತಿಪ್ಪೆ ಸೆಗಣಿ ತಿಂದರೆ ಅಧಿಕಾರ ಪಡೆಯಬಹುದು ಹೇಳಿ’ ಎಂದು ಕೇಳಿದರಂತೆ. ಅದಕ್ಕೆ ವಾಮಿಟ್ ಶಾ “ಅರೇ ಧಡಿಯೂರಪ್ಪಾಜೀ.. ಆಪ್ ಕೈಕೂ ಬಾರ್ ಬಾರ್ ಅಗಣಿ ಹಾಕಕ್ಕೆ ಹೋಗಿ.. ಉಸ್ಕೋ ಸಿಗಿಸ್ಕೋತೀರಿ, ಫಿರ್‍ಸೆ ಮತ್ ಫೋನ್ ಕರ್ನಾ.. ಮುಝೆ ಬಹೋತ್ ದರ್ದ್ ಹೋತಾ ಹಯ್, ಆಪ್ ಏಕ್ ಕಾಮ್ ಕೀಜಿಯೇ, ಏಕ್ ಚೊಂಬು ಉಠಾಕೆ ಕೋಯಿ ಡ್ಯಾಮ್ ಕಡೀಕೆ ಜಾವೋ. ವಾಪಸ್ ಮತ್ ಆನಾ.. ಡ್ಯಾಮ್ ಕೆ ಅಂದರ್ ಜಂಪ್ ಮಾರ್ಕೆ ಡೂಬ್ ಮರೋ” ಎಂದು ಬೈದು ಫೋನ್ ಕುಕ್ಕಿದರೆಂದು ಬಲ್ಲ ಮೂಲಗಳು ತಿಳಿಸಿವೆ.
ಇಲ್ಲಿಗೆ ನಮ್ಮ ವಾರ್ತಾಪ್ರಸಾರ ಮುಕ್ತಾಯವಾಯಿತು. ಮತ್ತೆ ನಮ್ಮ ನಿಮ್ಮ ಬೇಟಿ, ಮುಂದಿನವಾರ ಇದೇ ಸಮಯಕ್ಕೆ. ಮತ್ತೆ ಸಿಗೋಣ. ಅಲ್ಲಿಯವರೆಗೂ ನಮಸ್ಕಾರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...