Homeಮುಖಪುಟಲಾಕ್‌ಡೌನ್‌ ಸಮಯದಲ್ಲಿಯೂ ಆನ್‌ಲೈನ್‌ನಲ್ಲಿ ದಂಡದೊಂದಿಗೆ ಪರೀಕ್ಷಾ ಶುಲ್ಕ ವಸೂಲಿಗೆ ಕೆವಿಎಸ್‌ ವಿರೋಧ

ಲಾಕ್‌ಡೌನ್‌ ಸಮಯದಲ್ಲಿಯೂ ಆನ್‌ಲೈನ್‌ನಲ್ಲಿ ದಂಡದೊಂದಿಗೆ ಪರೀಕ್ಷಾ ಶುಲ್ಕ ವಸೂಲಿಗೆ ಕೆವಿಎಸ್‌ ವಿರೋಧ

ಪರೀಕ್ಷಾ ಶುಲ್ಕ ಪಾವತಿಯ ಗೊಂದಲ ನಿವಾರಿಸಲು, ಮುಂಬರುವ ದಿನಗಳಲ್ಲಿ ಪರೀಕ್ಷಾ ಶುಲ್ಕ ಹಾಗೂ ಶಾಲಾ ಕಾಲೇಜಿನ ಶುಲ್ಕಗಳಿಗೆ ರಿಯಾಯಿತಿ ನೀಡಲು ವಿದ್ಯಾರ್ಥಿ ಸಂಘಟನೆ ಆಗ್ರಹಿಸಿದೆ.

- Advertisement -
- Advertisement -

ಲಾಕ್‌ಡೌನ್‌ನಿಂದ ಬಹುತೇಕ ಭಾರತೀಯರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿರುವ ಸಮಯದಲ್ಲಿಯೂ ಆನ್‌ಲೈನ್‌ನಲ್ಲಿ ದಂಡದೊಂದಿಗೆ ಪರೀಕ್ಷಾ ಶುಲ್ಕ ವಸೂಲಿ ಮಾಡುತ್ತಿರುವ ಕೆಲ ಕಾಲೇಜುಗಳ ನಡೆಗೆ ಕೆವಿಎಸ್‌ ವಿರೋಧ ವ್ಯಕ್ತಪಡಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕೆವಿಎಸ್‌ ರಾಜ್ಯಸಂಚಾಲಕ ಸರೋವರ್‌ ಬೆಂಕಿಕರೆಯವರು “ಲಾಕ್‌ಡೌನ್‌ ಸಮಯದಲ್ಲಿ ಪರೀಕ್ಷಾ ಶುಲ್ಕ ಕಟ್ಟಬೇಕೆ, ಬೇಡವೇ ಎಂಬುದರ ಬಗ್ಗೆ ಗೊಂದಲಗಳುಂಟಾಗಿವೆ. ಬೆಂಗಳೂರು ವಿವಿ ಪರೀಕ್ಷೆ ಮತ್ತು ಶುಲ್ಕ ಪಾವತಿಯನ್ನು ಮುಂದೂಡಿದೆ. ಆದರೆ ಈ ವಿಚಾರ ಅನೇಕ ವಿದ್ಯಾರ್ಥಿಗಳಿಗೆ ತಲುಪಿಲ್ಲ. ಇದರ ದುರುಪಯೋಗಪಡಿಸಿಕೊಂಡು ಕೆಲ ಕಾಲೇಜುಗಳು ಆನ್‌ಲೈನ್‌ದಲ್ಲಿ ದಂಡದೊಂದಿಗೆ ಶುಲ್ಕ ಕಟ್ಟಿಸಿಕೊಳ್ಳುತ್ತಿರುವುದು ಅಕ್ಷಮ್ಯ” ಎಂದು ದೂರಿದ್ದಾರೆ.

ದಿನಾಂಕ 20-3-2020 ರಂದು ಬೆಂಗಳೂರಿನ ಕೇಂದ್ರಿಯ ವಿಶ್ವವಿದ್ಯಾಲಯ ಹೊರಡಿಸಿರುವ ಪತ್ರದ ಪ್ರಕಾರ ವಿದ್ಯಾರ್ಥಿಗಳು ಏಪ್ರಿಲ್ 13ರ ವರೆಗೂ ದಂಡದ ಜೊತೆ ಶುಲ್ಕ ಹಾಗೂ ಏಪ್ರಿಲ್ 17ರ ಒಳಗಾಗಿ ವಿಶೇಷ ದಂಡದ ಜೊತೆ ಶುಲ್ಕ ಪಾವತಿ ಮಾಡಲು ಕಡೆಯ ದಿನಾಂಕದ ಗಡುವು ನೀಡಲಾಗಿತ್ತು. ಆದರೆ 24ರಂದು ಲಾಕ್‌ಡೌನ್ ಘೋಷಿಸಿದ್ದರಿಂದ ವಿವಿಯು ಮಾರ್ಚ್ 25 ರಂದು ಮತ್ತೊಂದು ಸುತ್ತೋಲೆ ಹೊರಡಿಸಿ ಅನಿರ್ಧಿಷ್ಠಾವಧಿಗೆ ಪರೀಕ್ಷಾ ಶುಲ್ಕ ಹಾಗೂ ಪರೀಕ್ಷೆಯ ವೇಳಾಪಟ್ಟಿಯನ್ನು ಎರಡನ್ನೂ ಮುಂದೂಡಲಾಗಿದೆ ಎಂದು ತಿಳಿಸಿದೆ.

ಆದರೆ ಈ ವಿಚಾರ ವಿದ್ಯಾರ್ಥಿಗಳಿಗೆ ಮನವರಿಕೆಯಾಗದ ಕಾರನ ಏಪ್ರಿಲ್‌ 7ರವರೆಗೂ ಕೆಲವು ವಿದ್ಯಾರ್ಥಿಗಳಿಂದ ದಂಡಸಹಿತ ಶುಲ್ಕ ಕಟ್ಟಿಸಿಕೊಂಡ ಆರೋಪಗಳು ಕೇಳಿಬಂದಿವೆ. ಇದನ್ನು ಕೂಡಲೇ ನಿಲ್ಲಿಸಬೇಕು ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ ಒತ್ತಾಯಿಸಿದೆ.

ಹಾಗಾಗಿ ಸರ್ಕಾರ ಈ ಕೂಡಲೇ ಮಧ್ಯಪ್ರವೇಶ ಮಾಡಿ ವಿದ್ಯಾರ್ಥಿಗಳಲ್ಲಿ ಇರುವ ಪರೀಕ್ಷಾ ಶುಲ್ಕದ ಈ ಗೊಂದಲ ಹಾಗೂ ಆತಂಕವನ್ನು ನಿವಾರಣೆ ಮಾಡಬೇಕು. ಆರ್ಥಿಕ ಬಿಕ್ಕಟಿನ ಈ ಕಾಲದಲ್ಲಿ ಮುಂಬರುವ ಪರೀಕ್ಷಾ ಶುಲ್ಕ ಹಾಗೂ ಪ್ರವೇಶಾತಿ ಸಮಯದಲ್ಲಿಯೂ ಶುಲ್ಕವನ್ನು ಸಾಧ್ಯವಾದಷ್ಟು ಸರ್ಕಾರವೇ ಭರಿಸಬೇಕು, ಅಥವಾ ಕಂತುಗಳಲ್ಲಿ ಪಾವತಿಸುವ ಹಾಗೂ ಶುಲ್ಕದಲ್ಲಿ ರಿಯಾಯಿತಿಯನ್ನು ನೀಡುವ ಕ್ರಮಗಳನ್ನು ಸರ್ಕಾರ ಅಗತ್ಯವಾಗಿ ಮಾಡಬೇಕು. ಖಾಸಗೀ ಶಿಕ್ಷಣ ಸಂಸ್ಥೆಗಳ ಮೇಲೆ ನಿಯಂತ್ರಣವನ್ನೂ ಹೇರಬೇಕು ಎಂದು ಸಂಘಟನೆ ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...