Homeನಿಜವೋ ಸುಳ್ಳೋFact check: ಇಟಲಿಯ ಉದ್ಯಮಿ ತನ್ನ ಹೋಟೆಲ್‌ನಿಂದು ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ನಿಜವೇ?

Fact check: ಇಟಲಿಯ ಉದ್ಯಮಿ ತನ್ನ ಹೋಟೆಲ್‌ನಿಂದು ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ನಿಜವೇ?

- Advertisement -
- Advertisement -

“ಇಟಲಿಯ ಕೋಟ್ಯಾಧಿಪತಿ ಹೋಟೆಲ್ ಮಾಲೀಕನೊಬ್ಬನ ಕುಟುಂಬಿಕರೆಲ್ಲರೂ ಕೊರೊನಾ ವೈರಸ್ ನಿಂದ ಸಾವಿಗೀಡಾಗಿದ್ದಕ್ಕೆ ಹತಾಶನಾಗಿ ತನ್ನ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ” ಎಂದು ತಲೆ ಬರಹ ಬರೆದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದ್ದು ಇದರ ಬಗ್ಗೆ “ಭೂಮ್ ಲೈವ್” ಫ್ಯಾಕ್ಟ್ ಚೆಕ್ ನಡೆಸಿದೆ.

ಕನ್ನಡದ ಶೀರ್ಷಿಕೆಯೊಂದಿಗೆ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹಲವಾರು ಜನರು ಫೇಸ್ಬುಕ್ಕಿನಲ್ಲಿ ಈ ವಿಡಿಯೊವನ್ನು #Coronaeffect ಹ್ಯಾಶ್ ಟ್ಯಾಗ್ ನೊಂದಿಗೆ ಶೇರ್ ಮಾಡಿದ್ದಾರೆ.

ಎಂಟರ್ಟೈನ್ಮೆಂಟ್ ಎಂಬ ಪೇಜ್ “ಇಟಲಿಯ ಕೋಟ್ಯಾಧಿಪತಿ ಹೋಟೆಲ್ ಮಾಲೀಕ, ತನ್ನ ಕುಟುಂಬದ ಎಲ್ಲಾ ಸದಸ್ಯರನ್ನು ಕೊರೋನಾ ವೈರಸ್ ನಿಂದ ಕಳೆದುಕೊಂಡು ಹತಾಶನಾಗಿ ತನ್ನ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು…” ಎಂಬ ಬರಹದೊಂದಿಗೆ ಈ ವಿಡಿಯೋ ಪ್ರಸಾರ ಮಾಡಿದೆ.

#Coronaeffect ?????

ಇಟಲಿಯ ಕೋಟ್ಯಾಧಿಪತಿ ಹೋಟೆಲ್ ಮಾಲೀಕ, ತನ್ನ ಕುಟುಂಬದ ಎಲ್ಲಾ ಸದಸ್ಯರನ್ನು ಕೊರೋನಾ ವೈರಸ್ ನಿಂದ ಕಳೆದುಕೊಂಡು ಹತಾಶನಾಗಿ ತನ್ನ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು…

Posted by Entertainment on Sunday, April 5, 2020

1 ನಿಮಿಷ 59 ಸೆಕೆಂಡುಗಳ ವೀಡಿಯೊವು ಸೈರನ್ ಮತ್ತು ಜನರು ಎತ್ತರದ ಕಟ್ಟಡವನ್ನು ನೋಡುತ್ತಾ ಗದ್ದಲ ಮಾಡುವ ಹಾಗೂ ವ್ಯಕ್ತಿಯೊಬ್ಬ ಕಟ್ಟಡದಿಂದ ಜಿಗಿಯುವುದನ್ನು ತೋರಿಸುತ್ತದೆ. ಅಲ್ಲದೆ ಬೇರೆ ಪೇಜ್ ಗಳಲ್ಲೂ ಇದೇ ವಿಡಿಯೊ ಅದೇ ತಲೆಬರಹದಲ್ಲಿ ಹಂಚಿಕೊಳ್ಳಲಾಗಿದೆ.

ಅದಲ್ಲದೆ ಬೇರೆ ಹಲವು ಜನರೂ ಈ ವಿಡಿಯೋವನ್ನು ಅದೇ ತಲೆ ಬರಹದಲ್ಲಿ ಹಂಚಿದ್ದಾರೆ.

ಫ್ಯಾಕ್ಟ್ ಚೆಕ್:

ಈ ವೀಡಿಯೋ 2015 ರ ವಿಡಿಯೊವಾಗಿದ್ದು, ಅಮೆರಿಕದ ಫಿಲಡೆಲ್ಫಿಯಾದಲ್ಲಿನ ಎತ್ತರದ ಹೋಟೆಲ್‌ನಿಂದ ಉದ್ಯಮಿಯೊಬ್ಬರು ಹಾರಿದ್ದಾಗಿದೆ ಎಂದು ಭೂಮ್ ಲೈವ್ ಇದರ ಮೂಲವನ್ನು ಕಂಡು ಹಿಡಿದು ಹೇಳಿದೆ. ಇದೇ ವೀಡಿಯೊವನ್ನು ಇತರ ಸುಳ್ಳುಗಳಿಗೆ ಕೂಡಾ ಬಳಸಿಕೊಳ್ಳಲಾಗಿತ್ತು.

ಆಗಸ್ಟ್ 2015 ರಲ್ಲಿ Ọmọ Oòdua ಎಂಬ ಫೇಸ್‌ಬುಕ್ ಪುಟದಲ್ಲಿ ಅಪ್‌ಲೋಡ್ ಮಾಡಿದ ದೀರ್ಘ ಆವೃತ್ತಿಯ ವೀಡಿಯೋ ಇದಾಗಿದ್ದು, ವೀಡಿಯೊದಲ್ಲಿನ ಶೀರ್ಷಿಕೆ ಸುಳ್ಳಾಗಿದ್ದರೂ ‘ಗ್ರಾಫಿಕ್: ಗರ್ಭಿಣಿ ಘಾನಿಯನ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡುವ ಆಘಾತಕಾರಿ ವಿಡಿಯೋ…” ಎಂದು ಬರೆಯಲಾಗಿದೆ.

Graphic: Pregnant Ghanaian Woman jumps off the Cliff

Suicide Pregnant Ghanaian Jumps BuildingShocking VideoGhanaian Woman jumps off the Cliff as Hubby sleeps with Her Mom. Pregnant Ghanaian Woman Jumps From 40 Storey Building Because Her Husband Was Sleeping With Her Mom and was carrying her husbands child,40 Storey Building jumpingMust she commit suicide?Comment your opinion and share

Posted by Ọmọ Oòdua on Monday, August 10, 2015

ವೀಡಿಯೊದಲ್ಲಿ ವ್ಯಕ್ತಿಯೂ ಕಟ್ಟಡದಿಂದ ಜಿಗಿದ ನಂತರ 49 ಸೆಕೆಂಡುಗಳಲ್ಲಿ, “215-232-2000” ನಂಬರ್ ಇರುವ ಕಾರನ್ನು ನೋಡಬಹುದು.

ಈ ಸಂಖ್ಯೆಯ ಕಾರು ಫಿಲಡೆಲ್ಫಿಯಾ ಪ್ರದೇಶದ್ದಾಗಿದ್ದು, ಈ ಕಾರು ಬಾಡಿಗೆ ಕ್ಯಾಬಿನ ಕಾರಾಗಿದೆ. ( ಕಾರುಗಳ ಬಗ್ಗೆ ಇಲ್ಲಿ ನೋಡಿ PHLcabs )

ನಂತರ ಗೂಗಲ್ ನಲ್ಲಿ ಹುಡುಕಾಟ ನಡೆಸಿದಾಗ – ಎಂಬಸಿ ಸೂಟ್ಸ್ ಹೋಟೆಲಿನ 25 ನೇ ಮಹಡಿಯಿಂದ ಹಾರಿ ವ್ಯಕ್ತಿಯೊಬ್ಬ ಹಾರಿ ಆತ್ಮಹತ್ಯೆ ಮಾಡಿದ ಬಗೆಗಿನ ಪ್ರಕರಣದ ಬಗ್ಗೆ 2015 ಸುದ್ದಿಯರುವ ವರದಿ ಲಭಿಸಿದೆ.

ಸ್ಥಳೀಯ ಮಾಧ್ಯಮವಾದ “ಫಿಲ್ಲಿ ವಾಯ್ಸ್‌”ನಲ್ಲಿ ಮೇ 2, 2015 ರಂದು ಪ್ರಕಟವಾದ ವರದಿಯೊಂದು ಈ ಘಟನೆಯನ್ನು ವಿವರಿಸಿದೆ ಹಾಗೂ ಮೇ 6, 2015 ರಂದು ಪ್ರಕಟವಾದ ಅದರ ಬಗ್ಗೆ ಮುಂದುವರೆದ ವರದಿಯೂ ಹಾರಿದ ವ್ಯಕ್ತಿಯನ್ನು ಉದ್ಯಮಿ ಎಂದು ಗುರುತಿಸಿದೆ.

ವೈರಲ್ ವೀಡಿಯೊದಲ್ಲಿ ಇರುವ ಸ್ಥಳವು ಸರಿಯಾಗಿದೆಯೇ ಎಂದು ಪರಿಶೀಲಿಸಿದಾಗ, ಅದು ಸೆಂಟರ್ ನಗರದಲ್ಲಿರುವ ಎಂಬೆಸಿ ಸೂಟ್ಸ್ ಹೋಟೆಲ್ ಎಂದು ದೃಡಪಟ್ಟಿದೆ.

ಭೂಮ್ ಲೈವ್ ಎಂಬೆಸಿ ಸೂಟ್ಸ್ ಹೋಟೆಲ್ ಅನ್ನು ಸಂಪರ್ಕಿಸಿ, ಘಟನೆ ನಡೆದಿರುವ ಬಗ್ಗೆ ದೃಡಪಡಿಸಿದೆ ಎಂದು ಹೇಳಿದೆ.

ಕೊರೊನಾ ವೈರಸ್ ಬಗ್ಗೆ ದೇಶದಾದ್ಯಂತ ಹಲವಾರು ಸುಳ್ಳುಗಳು ಹರಡುತ್ತಿದೆ. ಸರಿಯಾಗಿ ಗಮನಿಸಿದರೆ ಇಂತಹ ಸುಳ್ಳು ಸುದ್ದಿಗಳನ್ನು ಹರಡುತ್ತಿರುವಲ್ಲಿ ಹೆಚ್ಚಿನವರು ಬಲಪಂಥೀಯರಾಗಿದ್ದಾರೆ ಅಥವಾ ಬಲಪಂಥೀಯ ಗುಂಪಿನಲ್ಲಿ ಗುರುತಿಸಿ ಕೊಂಡವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...

ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು ಬಾಂಗ್ಲಾದೇಶಿ ಎಂದು ನಿಂದನೆ; ಬುಲಂದ್‌ಶಹರ್‌ನಲ್ಲಿ ಹಿಂದೂ ರಕ್ಷಾ ದಳ ನಾಯಕನ ಬಂಧನ

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಹಿಂದೂ ರಕ್ಷಾ ದಳದ ನಾಯಕನೊಬ್ಬ ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು "ಬಾಂಗ್ಲಾದೇಶಿ" ಎಂದು ಕರೆದು ಬೆದರಿಕೆ ಹಾಕುತ್ತಿರುವ ವೀಡಿಯೊ ಕಾಣಿಸಿಕೊಂಡ ನಂತರ ಆತನನ್ನು ಬಂಧಿಸಲಾಗಿದೆ. ಜಿಲ್ಲೆಯ ಖುರ್ಜಾ ನಗರದಲ್ಲಿ...

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...