Homeಮುಖಪುಟಪೋಸ್ಟ್‌ಕಾರ್ಡ್ ಹರಡಿದ ಸುಳ್ಳು: ಹೈಡ್ರಾಕ್ಸಿಕ್ಲೊರೋಕ್ವಿನ್ ಔಷಧಿ ಕಂಡುಹಿಡಿದದ್ದು ಯಾರು?

ಪೋಸ್ಟ್‌ಕಾರ್ಡ್ ಹರಡಿದ ಸುಳ್ಳು: ಹೈಡ್ರಾಕ್ಸಿಕ್ಲೊರೋಕ್ವಿನ್ ಔಷಧಿ ಕಂಡುಹಿಡಿದದ್ದು ಯಾರು?

- Advertisement -
- Advertisement -

ಸುಳ್ಳು ಸುದ್ದಿ ಎಂಬುದು ಕೊರೋನಾಗಿಂತ ಮಾರಣಾಂತಿಕ ವೈರಸ್ ಎಂಬುದರಲ್ಲಿ ಎರಡು ಮಾತಿಲ್ಲ. ಅದರಲ್ಲೂ ಕೊರೋನಾ ಹರಡುವಿಕೆ ಅತಿಯಾದಂತೆಲ್ಲಾ ಸುಳ್ಳು ಸುದ್ದಿಯ ಹರಡುವಿಕೆಯೂ ಎಗ್ಗಿಲ್ಲದೆ ಸಾಗುತ್ತಲೇ ಇದೆ. ಇನ್ನೂ ಕರ್ನಾಟಕದ ಮಟ್ಟಿಗೆ ಈ ಸುಳ್ಳು ಸುದ್ದಿಗಳ ಶೂರರು ಯಾರು? ಸುಳ್ಳೇ ಮನೆ ದೇವರು ಎಂದು ನಂಬಿ ಜೈಲುವಾಸವನ್ನೂ ಅನುಭವಿಸಿ ಬಂದವರು ಯಾರು? ಎಂಬುದನ್ನು ಕನ್ನಡಿಗರಿಗೆ ಬಿಡಿಸಿ ಹೇಳಬೇಕಿಲ್ಲ. ಏಕೆಂದರೆ ಇವೆಲ್ಲಾ ಪೋಸ್ಟ್ ಕಾರ್ಡ್ ಕನ್ನಡ ಎಂಬ ಪೋರ್ಟಲ್ ಕೆಲಸ ಎಂಬುದು ಬಹುತೇಕರಿಗೆ ಗೊತ್ತು.

ಸುಳ್ಳು ಸುದ್ದಿಗೆ ಇಡೀ ರಾಜ್ಯದಲ್ಲಿ ಕುಖ್ಯಾತಿ ಪಡೆದಿರುವ ಪೋಸ್ಟ್ ಕಾರ್ಡ್, ದಿನಕ್ಕೊಂದು ಸುಳ್ಳು ಹೇಳಿ ಮನರಂಜನೆ ನೀಡುವಲ್ಲಿ ಎತ್ತಿದ ಕೈ. ಅಂದಹಾಗೆ ಈ ಪೋರ್ಟಲ್ ಇಂದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿರುವ ಸುಳ್ಳು ಯಾವುದು ಗೊತ್ತಾ? ಅದೇ ಪ್ರಸ್ತುತ ಕೊರೋನಾ ಸೋಂಕಿನ ಚಿಕಿತ್ಸೆಗೆ ಉಪಯೋಗಿಸಲಾಗುತ್ತಿರುವ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಔಷಧಿ ಪಿತಾಮಹ ಆಚಾರ್ಯ ಪ್ರಫುಲ್ಲಚಂದ್ರ ರಾಯ್ ಎಂಬುದು.

Posted by Postcard ಕನ್ನಡ on Friday, April 10, 2020

ಪಶ್ಚಿಮ ಬಂಗಾಳ ಮೂಲದ ಆಚಾರ್ಯ ಪ್ರಫುಲ್ಲಾಚಂದ್ರ ರಾಯ್ ಭಾರತದ ರಸಾಯನ ಶಾಸ್ತ್ರದ ಪಿತಾಮಹ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ದೇಶದ ರಸಾಯನ ಶಾಸ್ತ್ರ ಕ್ಷೇತ್ರಕ್ಕೆ ಇವರು ನೀಡಿರುವ ಕೊಡುಗೆ ಅಪಾರ ಮತ್ತು ಶ್ಲಾಘನೀಯ ಎಂಬುದರಲ್ಲಿ ಎರಡು ಮಾತಿಲ್ಲ. ಈ ಕುರಿತು ಭಾರತೀಯರೆನಿಸಿಕೊಂಡವರೆಲ್ಲರಿಗೂ ಅಪಾರ ಗೌರವ ಇದೆ. ಆದರೆ, ಪ್ರಸ್ತುತ ಚರ್ಚೆಯ ಕೇಂದ್ರವಾಗಿರುವ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಔಷಧವನ್ನು ಕಂಡು ಹಿಡಿದದ್ದು ಇವರಲ್ಲ ಎಂಬುದೇ ಸತ್ಯ. ಏಕೆಂದರೆ ಅವರು ನಿಧನವಾಗಿದ್ದು 1944ರಲ್ಲಿ. ಔಷಧಿ ಕಂಡುಹಿಡಿದಿದ್ದು 1945ರ ನಂತರ.

ಆದರೆ ಪೋಸ್ಟ್‌ ಕಾರ್ಡ್‌ ಹರಡಿದ ಈ ಹಸಿ ಸುಳ್ಳನ್ನು ಎರಡು ಸಾವಿರಕ್ಕೂ ಹೆಚ್ಚು ಜನ ಲೈಕ್‌ ಮಾಡಿದರೆ, 1800 ಜನ ಷೇರ್‌ ಮಾಡಿದ್ದಾರೆ.

ಹಾಗಾದ್ರೆ ಈ ಔಷಧಿ ಕಂಡು ಹಿಡಿದದ್ದು ಯಾರು? ಇಲ್ಲಿದೆ ಅಸಲಿ ಅತ್ಯ

ಅಸಲಿಗೆ ಮಲೇರಿಯಾಗೆ ಔಷಧ ಕಂಡು ಹಿಡಿಯುವ ನಿಟ್ಟಿನಲ್ಲಿ ಮೊಟ್ಟಮೊದಲ ಬಾರಿಗೆ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಔಷಧವನ್ನು ಕಂಡು ಹಿಡಿದದ್ದು ಜರ್ಮನಿಯ ಬಾಯರ್ ಫಾರ್ಮ. ಇದನ್ನು ಅನ್ವೇಷಿಸಲಾದ ವರ್ಷ 1945.

ಇವತ್ತು ಜಗತ್ತಿನ 70% ’ಹೈಡ್ರಾಕ್ಸಿಕ್ಲೋರೋಕ್ವೀನ್’ ನನ್ನು ಭಾರತ ಉತ್ಪಾದಿಸುತ್ತದೆ. ಭಾರತದ ಹೀಗೆ ಅತಿಹೆಚ್ಚು ಪ್ರಮಾಣದಲ್ಲಿ ಈ ಔಷಧವನ್ನು ಉತ್ಪಾದಿಸುತ್ತದೆ ಎಂದರೆ ಅದಕ್ಕೆ ಏಕೈಕ ಕಾರಣ ಈ ದೇಶ ಮಲೇರಿಯಾ ಮತ್ತು ಡೆಂಗ್ಯೂ ಬಾಧಿತ ರಾಷ್ಟ್ರ ಎಂಬುದೊಂದೆ.

ಆದರೆ, 1945ನೇ ವರ್ಷದಲ್ಲಿ ಜರ್ಮನಿ ಮೂಲದ ಫಾರ್ಮಾ ಕಂಪೆನಿಯಿಂದ ಮಲೇರಿಯಾಗೆ ಕಂಡು ಹಿಡಿಯಲ್ಪಟ್ಟ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಎಂಬ ಔಷಧಿಯನ್ನು, 1944ಕ್ಕೂ ಮುಂಚಿತವಾಗಿಯೇ ಮೃತಪಟ್ಟ ಆಚಾರ್ಯ ಪ್ರಫುಲ್ಲಚಂದ್ರ ರೇ ಹೇಗೆ ಕಂಡು ಹಿಡಿದರು ಎಂಬುದು ಮಾತ್ರ ಈವರೆಗೆ ತರ್ಕಕ್ಕೆ ನಿಲುಕದ್ದಾಗಿದೆ.


ಇದನ್ನೂ ಓದಿ: ಮುಖ್ಯಮಂತ್ರಿಗಳ ಎಚ್ಚರಿಕೆಯ ನಂತರವೂ ಸುಳ್ಳು ಸುದ್ದಿ ಹರಡುತ್ತಿರುವ ಪೋಸ್ಟ್‌ ಕಾರ್ಡ್‌ ಕನ್ನಡ: ಕ್ರಮ ಯಾವಾಗ? 


ಈ ಸುಳ್ಳು ಹರಡುವುದರ ಹಿಂದೆ ಒಂದು ಕಾರಣವೂ ಇದೆ. ಅದೆಂದರೆ ಈ ಹೈಡ್ರಾಕ್ಸಿಕ್ಲೋರೋಕ್ವಿನ್ ಸದ್ಯಕ್ಕೆ ಕೊರೊನಾಗೆ ಔಷಧಿಯಾಗಿ ಬಳಕೆಯಾಗುತ್ತಿದೆ. ಭಾರತದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವುದರಿಂದ ಪ್ರಧಾನಿಗಳು ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ಮಾಡುವುದನ್ನು ಮಾರ್ಚ್‌ 25ರಂದು ನಿಷೇಧಿಸಿದರು. ಕಾರಣ ಸ್ಪಷ್ಟ ನಮ್ಮ ದೇಶಕ್ಕೆ ಸಾಕಷ್ಟು ಮಾತ್ರೆಗಳು ಬೇಕು ಎಂಬುದಷ್ಟೆ. ಆದರೆ ಏಪ್ರಿಲ್‌ 7ರಂದು ಅಮೆರಿಕಾ ಟ್ರಂಪ್‌ರವರು ಭಾರತ ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ಮಾಡದಿದ್ದರೆ ಪ್ರತಿಕಾರ ತೀರಿಸಿಕೊಳ್ಳುವುದಾಗಿ ಬೆದರಿಕೆ ಹಾಕಿದರು. ಕೂಡಲೇ ನಮ್ಮ ಪ್ರಧಾನಿಗಳು ರಫ್ತು ಮೇಲಿನ ನಿಷೇಧ ತೆರವುಗೊಳಿಸಿದರು. ಆದ ಡ್ಯಾಮೇಜ್‌ ಕಂಟ್ರೋಲ್‌ ಮಾಡಿಕೊಳ್ಳಲು ಪೋಸ್ಟ್‌ ಕಾರ್ಡ್‌ ಈ ರೀತಿ ಸುಳ್ಳು ಹರಡುತ್ತಿದೆ.

ಪೊಲೀಸರೇ ಕ್ರಮ ಎಂದು?

ಕೊರೋನಾ ಭೀತಿ ಹಿನ್ನೆಲೆ ಮಾಧ್ಯಮ ಮತ್ತು ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹಬ್ಬಿಸುವವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸ್ವತಃ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದರು. ಆದರೆ, ಪೋಸ್ಟ್ ಕಾರ್ಡ್ ಎಂಬ ಪೋರ್ಟಲ್ ಸುಳ್ಳು ಹೇಳುವುದನ್ನೇ ತನ್ನ ಕುಲಕಸುಬನ್ನಾಗಿಸಿಕೊಂಡಿದೆ.

ಇದೇ ಕಾರಣಕ್ಕೆ ಓ ಪೋರ್ಟಲ್ ಮುಖ್ಯಸ್ಥ ಇತ್ತೀಚೆಗೆ ಜೈಲು ಪಾಲಾಗಿ ಹಿಂದಿರುಗಿದ್ದರು. ಆದರೂ, ಸುಳ್ಳು ಹೇಳುವುದನ್ನು ಮಾತ್ರ ಬಿಟ್ಟಿಲ್ಲ. ಸಂದಿಗ್ಧ ಪರಿಸ್ಥಿತಿಯಲ್ಲೂ ಸುಳ್ಳು ಹೇಳುವ ಇಂತವರ ವಿರುದ್ಧ ಕ್ರಮ ಎಂದು ಎಂಬುದು ಹಲವರ ಪ್ರಶ್ನೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...