Homeನೂರರ ನೋಟಆದರೂ ಸಹ ನನ್ನ ಬಾಯಿಂದ ‘ಮುಗಿಸಿಬಿಡಿ’ ಎಂಬ ಮಾತು ಬರಬಾರದಾಗಿತ್ತು ಎಂದು ಆತ್ಮ ಹೇಳುತ್ತದೆ: ದೊರೆಸ್ವಾಮಿ

ಆದರೂ ಸಹ ನನ್ನ ಬಾಯಿಂದ ‘ಮುಗಿಸಿಬಿಡಿ’ ಎಂಬ ಮಾತು ಬರಬಾರದಾಗಿತ್ತು ಎಂದು ಆತ್ಮ ಹೇಳುತ್ತದೆ: ದೊರೆಸ್ವಾಮಿ

ದೇವನೂರು ಮಹದೇವ ಮತ್ತು ಸಚಿವ ಸುರೇಶ್‌ಕುಮಾರ್ ಮಧ್ಯೆ ನಡೆದ ಈ ಪತ್ರ ವ್ಯವಹಾರ ಬಹಳ ಆತ್ಮೀಯತೆಯಿಂದ ಕೂಡಿದೆ. ರಾಗದ್ವೇಷರಹಿತವಾದ ಈ ಬಗೆಯ ಪತ್ರ ವ್ಯವಹಾರ ಸಮಾಜದಲ್ಲಿ, ದ್ವೇಷ ಬೆಳೆಸುವ ಈ ದಿನಗಳಲ್ಲಿ ಸಾಮರಸ್ಯ ತರಲು ಸಹಕಾರಿಯಾಗುವುದೆಂದು ನಾನು ಭಾವಿಸುತ್ತೇನೆ.

- Advertisement -
- Advertisement -

ನನ್ನ ವಿಷಯದಲ್ಲಿ ದೇವನೂರು ಮಹದೇವ ಮತ್ತು ಸಚಿವ ಸುರೇಶ್‌ಕುಮಾರ್ ಮಧ್ಯೆ ನಡೆದ ಪತ್ರ ವ್ಯವಹಾರವನ್ನು ಇಲ್ಲಿ ಮುದ್ರಿಸಲಾಗಿದೆ.

ಉಭಯತ್ರರೂ ನನ್ನ ಸ್ನೇಹಿತರು ಹಾಗೂ ಹಿತೈಷಿಗಳು. ದೇವನೂರು ಮಹದೇವ ಅವರು ತಮ್ಮ ಪತ್ರದಲ್ಲಿ ಅಸಲಿಯನ್ನು ನಕಲಿ ಮಾಡುವುದು ಸರಿಯೇ ಎಂದು ಪ್ರಶ್ನೆ ಮಾಡಿದ್ದಾರೆ. ನನ್ನ ಮೇಲೆ ಸಲ್ಲದ ಆರೋಪ ಹೊರೆಸಿ ನನ್ನನ್ನು ನಕಲಿ ಹೋರಾಟಗಾರ ಪಾಕ್ ಏಜೆಂಟ್ ಎಂದೆಲ್ಲ ಆಧಾರ ರಹಿತ ಆಪಾದನೆ ಮಾಡಿ ತೇಜೋವಧೆ ಮಾಡಿರುವ ಬಸವ ಗೌಡ ಯತ್ನಾಳ್ ನಾನು ನಕಲಿ ಪತ್ರಕರ್ತ, 38 ದಿನಗಳ ಪೌರವಾಣಿ ಸಂಪಾದಕ, ಅರುಳು ಮರುಳು ಎಂದೆಲ್ಲ ಅಪ್ಪಟ್ಟ ಸುಳ್ಳು ಆರೋಪಗಳನ್ನು ಮಾಡಿ ನನ್ನ ಚಾರಿತ್ರ್ಯ ವಧೆ ಮಾಡಿರುವ ಬಾಬುಕೃಷ್ಣಮೂರ್ತಿ ಮುಂತಾದ ಮಹನೀಯರೆಲ್ಲರನ್ನೂ ಕುರಿತು ದೇವನೂರು ಮಹದೇವ ನೊಂದು ನುಡಿದಿದ್ದಾರೆ.

ಮಹಾದೇವು ಮುಂದುವರೆದು ಕೊಳೆತ ಹಣ್ಣುಗಳ ಜೊತೆ ತಾಜಾ ಹಣ್ಣುಗಳು ಬೆರೆತುಹೊದಾಗ, ಅವೂ ಕೆಡಬಹುದೇ ಎಂದು ಪ್ರಶ್ನೆ ಮಾಡಿದ್ದಾರೆ. ಮಹದೇವರ ಈ ಮಾತು ಸುರೇಶ್‌ಕುಮಾರ್ ಅವರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಸುರೇಶ್‌ಕುಮಾರ್ ಅವರು ದೇವನೂರು ಮಹದೇವ ಅವರಿಗೆ ಈ ಪ್ರಶ್ನೆಗೆ ಉತ್ತರ ಕೊಡುವುದರಲ್ಲಿ ಮುಗ್ಗರಿಸಿ, ನನ್ನವರನ್ನು ಡಿಫೆಂಡ್ ಮಾಡಿಕೊಳ್ಳುವುದು ನನ್ನ ಧರ್ಮ ಎಂದು ಉತ್ತರಿಸಿದ್ದಾರೆ. ಅವರು ಯಾರನ್ನು ಡಿಫೆಂಡ್ ಮಾಡಿಕೊಂಡರು ಎಂಬುದನ್ನೂ ತಿಳಿಸಿದ್ದಾರೆ.


ಇದನ್ನೂ ಓದಿ: ದೊರೆಸ್ವಾಮಿಯವರ ವಿಚಾರವಾಗಿ ಎಸ್.ಸುರೇಶ್ ಕುಮಾರ್ ಅವರಿಗೆ ದೇವನೂರು ಮಹಾದೇವರವರು ಬರೆದ ಬಹಿರಂಗ ಪತ್ರ

ಇದನ್ನೂ ಓದಿ: ದೊರೆಸ್ವಾಮಿ ವಿಚಾರವಾಗಿ ದೇವನೂರು ಪತ್ರಕ್ಕೆ ಸುರೇಶ್‌ ಕುಮಾರ್‌ ಪ್ರತಿಕ್ರಿಯೆ..


ಬ್ರಿಟಿಷರ ವಿರುದ್ಧ ಅಷ್ಟೊಂದು ತೀವ್ರತೆಯಿಂದ ಹೋರಾಡಿದ ವೀರಸಾವರ್ಕರ್ ಕರಿನೀರುಶಿಕ್ಷೆ ಅನುಭವಿಸುವಾಗ ಏಕೆ ಶತ್ರು ಬ್ರಿಟಿಷರಿಗೆ ಶರಣಾಗತರಾದರು? ಬ್ರಿಟಿಷರು ಹಾಕಿದ ಎಲ್ಲ ಷರತ್ತುಗಳಿಗೆ ಅಂದರೆ ನಾನು ಬಿಡುಗಡೆಯಾದರೆ ನನ್ನ ಜಿಲ್ಲೆಬಿಟ್ಟು ಹೊರಗೆ ಓಡಾಡುವುದಿಲ್ಲ. ಪತ್ರಿಕೆಗಳಿಗೆ ಲೇಖನ ಬರೆಯುವುದಿಲ್ಲ. ನಿಮ್ಮ ಆಜ್ಞಾಪಾಲಕನಾಗಿರುತ್ತೇನೆ ಎಂದೆಲ್ಲ ಬರೆದುಕೊಡಲು ಅವರ ಮನಸ್ಸು ಹೇಗೆ ಒಪ್ಪಿಕೊಂಡಿತು? ಧರ್ಮ ಗ್ಲಾನಿ ಅವರಲ್ಲಿ ಹೇಗೆ ಉಂಟಾಯಿತು? ಎಂದು ವೀರ ಸಾವರ್ಕರ್ ನಡವಳಿಕೆಯನ್ನು ಒಪ್ಪಿಕೊಳ್ಳುವ ಮೊದಲು ಚಿಂತಿಸಬೇಡವೇ ಸುರೇಶ್‌ಕುಮಾರ್ ಅವರೇ?

ನನ್ನನ್ನು ಶಾಸನ ಸಭೆಯಲ್ಲಿ ಮೇಲ್ಮನೆ ಸದಸ್ಯ ಬಿಜೆಪಿ ಎಂಎಲ್‌ಸಿ ರವಿಕುಮಾರ್ ನನಗೆ ಅಂತರಾಷ್ಟ್ರೀಯ ವ್ಯಕ್ತಿಗಳ ಸಂಬಂಧ ಇದೆ ಎಂದು ವಿಧಾನ ಪರಿಷತ್ತಿನಲ್ಲಿ ಹೇಳಿದ್ದಾರೆ. ಮಂತ್ರಿ ಈಶ್ವರಪ್ಪನವರು ನಾನು ಯಾರದ್ದೋ ಜೊತೆಗಿರುವ ಫೋಟೊ ತೋರಿಸಿ ಪಾಕಿಸ್ತಾನದ ನಂಟು ನನಗಿದೆ ಎಂದು ವಿಧಾನಸಭೆಯಲ್ಲಿ ಹೇಳಿದ್ದಾರೆ. ನಾನು ಅತಿಥಿಯಾಗಿ ಹೋಗಿರುವ ನೂರಾರು ಸಮಾರಂಭಗಳಲ್ಲಿ ಸಮಾರಂಭ ಮುಗಿದ ಮೇಲೆ ಜನ ನನ್ನ ಜೊತೆ ಫೋಟೊ ತೆಗೆಸಿಕೊಳ್ಳಲು ಮುಗಿಬೀಳುತ್ತಾರೆ. ಹೀಗೆ ಫೋಟೊ ತೆಗೆಸಿಕೊಂಡವರು ಸಾವಿರಾರು ಜನ, ಅದರಲ್ಲಿ ಇದೂ ಒಂದಿರಬಹುದು. ಅಷ್ಟಕ್ಕೇ ನನ್ನನ್ನು ನಕ್ಸಲಿಯ, Anti National, ಪಾಕಿಸ್ತಾನಿ ಏಜೆಂಟ್ ಎಂದು ಕರೆಯವರು ಮೊದಲು ನನ್ನ ಅರಾಷ್ಟ್ರಿಕತೆಗೆ, ಪಾಕಿಸ್ತಾನ್ ಏಜೆಂಟ್ ಎಂಬುದಕ್ಕೆ ಬೇರೆ ಪುರಾವೆಗಳನ್ನು ನೀಡುವ ಒಂದು ಫೋಟೊ ತೋರಿಸಿ. ಇಂತಹ ಗುರುತರ ಆಪಾದನೆ ಮಾಡುವುದು ಮಂತ್ರಿವರ್ಯರಿಗೆ, ಶಾಸಕರಿಗೆ ಗೌರವ ತರುವುದಿಲ್ಲ.

ಅನಂತಕುಮಾರ್ ರಾಷ್ಟ್ರವಿರೊಧಿ ವ್ಯಕ್ತಿ ಎಂದು ಹೇಳಿ ನನಗೆ ಧಿಕ್ಕಾರ ಹೇಳಿದ್ದು, ಮಂತ್ರಿಗಳಾದ ಸೋಮಣ್ಣ, ಈಶ್ವರಪ್ಪ ಮುಂತಾದವರು ನನ್ನ ಮೇಲೆ ಆರೊಪಗಳನ್ನು ಮಾಡಿದ್ದು ನಿಮಗೆ ಸಮ್ಮತ ಮತ್ತು ಅವರನ್ನೆಲ್ಲ ಬೆಂಬಲಿಸುವುದು ನಿಮ್ಮ ಧರ್ಮ ಎಂದು ನಿಮ್ಮ ಹೃದಯ ಒಪ್ಪುತ್ತದೆಯೇ?

ವೀರಸಾವರ್ಕರರಿಗೂ, ಭಗತ್‌ಸಿಂಗ್‌ಗೂ ಬ್ರಿಟಿಷರ ಬಗೆಗೆ ಒಂದೇ ಬಗೆಯ ಭಾವನೆ ಇತ್ತು. ಬ್ರಿಟಿಷರನ್ನು ಭಾರತದಿಂದ ಓಡಿಸಲು ಅವರದೇ ಕಾರ್ಯಕ್ರಮವಿತ್ತು, ಭಗತ್‌ಸಿಂಗ್‌ಗೆ ಮರಣದಂಡನೆ ವಿಧಿಸಿ ಸೆರೆಮನೆಯಲ್ಲಿಟ್ಟಿದ್ದರು. ಆಗ ಅವರ ತಂದೆ ಬ್ರಿಟಿಷರಿಗೆ ಪತ್ರ ಬರೆದು ‘ನನ್ನ ಮಗ ತಿಳಿಯದೆ ಈ ಹತ್ಯೆ ಮಾಡಿದ್ದಾನೆ ದಯವಿಟ್ಟು ಅವನಿಗೆ ಪ್ರಾಣಭಿಕ್ಷೆ ನೀಡಿ’ ಎಂದು ಪತ್ರ ಬರೆದಿರುವ ವಿಚಾರ ಭಗತ್‌ಸಿಂಗ್‌ಗೆ ಗೊತ್ತಾಯಿತು. ನನ್ನ ತಂದೆ ಪುತ್ರ ಮೋಹದಿಂದ ನನ್ನ ಪ್ರಾಣ ಉಳಿಸಲು ನಮ್ಮ ಶತ್ರುಗಳಾದ ಬ್ರಿಟಿಷರಲ್ಲಿ ನನ್ನ ಪ್ರಾಣಭಿಕ್ಷೆ ಕೋರಿದ್ದಾರೆ ಇವರೆಂತಹ ತಂದೆ! ನನ್ನನ್ನು ಬ್ರಿಟಿಷರು ಪ್ರಾಣಭಿಕ್ಷೆ ನೀಡಿ ಬಿಡುಗಡೆ ಮಾಡಿದರೂ ನಾನೂ ಬ್ರಿಟಿಷ್ ಅಧಿಕಾರಿಗಳನ್ನು ಕೊಲ್ಲುವ ಕಾರ್ಯವನ್ನು ಮುಂದುವರೆಸುತ್ತೇನೆ ಎಂದು ಘರ್ಜಿಸಿದರು.

ತನ್ನ ಉಸಿರುವವರೆಗೆ ದೇಶಭಕ್ತಿಯನ್ನು ಬೆಳಗಿದ ಭಗತ್‌ಸಿಂಗ್ ಎಲ್ಲಿ? ಹೋರಾಟದ ಮಧ್ಯೆಯೇ ಶತ್ರುವಿಗೆ ಶರಣಾಗತನಾಗಿ, ಸ್ವಾತಂತ್ರ್ಯ ಹೋರಾಟಕ್ಕೆ ಕಪ್ಪು ಮಸಿ ಬಳಿದ ವೀರಸಾವರ್ಕರ್ ಎಲ್ಲಿ? ತನ್ನವರನ್ನು ಬೆಂಬಲಿಸುವ ಆತುರದಲ್ಲಿ ಹೋರಾಟದ ಚರಿತ್ರೆಯನ್ನೇ ಮರೆತರು ಸಚಿವ ಸುರೇಶ್‌ಕುಮಾರ್!

ಇನ್ನು ಎರಡನೆಯ ವಿಷಯವೆಂದರೆ ನಾನು ಮೋದಿಯವರನ್ನು ಮುಗಿಸಿಬಿಡಿ ಎಂದು ಹೇಳಿದೆನೆಂಬುದು. ಈ ಮಾತನ್ನು ನಾನು ಆಡಿರುವುದು ಕರ್ನಾಟಕದಲ್ಲಿ ನಡೆದ ವಿಧಾನಸಭೆ ಚುನಾವಣೆ ಸಮಯದಲ್ಲಿ. ಮಹದೇವು ಈ ವಿಚಾರದಲ್ಲಿ ವಿವರಿಸಿ ಸಮಜಾಯಿಸಿ ನೀಡಿದ್ದಾರೆ. ಇದು ಚುನಾವಣೆ ಸಂದರ್ಭದಲ್ಲಿ ಹೇಳಿದ ಮಾತು. ಚುನಾವಣೆಯಲ್ಲಿ ಹೇಗಾದರೂ ಮಾಡಿ ವಿರೋಧ ಪಕ್ಷಗಳಾದ ಕಾಂಗ್ರೆಸ್, ಜಾತ್ಯಾತೀತ ಜನತಾದಳಗಳನ್ನು ಸೋಲಿಸಬೇಕೆಂದು ಮೋದಿ ಪಣ ತೊಟ್ಟಿದ್ದ ಸಂದರ್ಭ ಅದು. ಆದರೆ ಆ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಬೇಕಾದಷ್ಟು ಸ್ಥಾನಗಳು ಮೋದಿಯ ಬಿಜೆಪಿಗೆ ಲಭಿಸಲೇ ಇಲ್ಲ.

ಆದರೂ ಸಹ ನನ್ನ ಬಾಯಿಂದ ‘ಮುಗಿಸಿಬಿಡಿ’ ಎಂಬ ಮಾತು ಬರಬಾರದಾಗಿತ್ತು ಎಂದು ಆತ್ಮ ಹೇಳುತ್ತದೆ.

ದೇವನೂರು ಮಹದೇವ ಮತ್ತು ಸಚಿವ ಸುರೇಶ್‌ಕುಮಾರ್ ಮಧ್ಯೆ ನಡೆದ ಈ ಪತ್ರ ವ್ಯವಹಾರ ಬಹಳ ಆತ್ಮೀಯತೆಯಿಂದ ಕೂಡಿದೆ. ರಾಗದ್ವೇಷರಹಿತವಾದ ಈ ಬಗೆಯ ಪತ್ರ ವ್ಯವಹಾರ ಸಮಾಜದಲ್ಲಿ, ದ್ವೇಷ ಬೆಳೆಸುವ ಈ ದಿನಗಳಲ್ಲಿ ಸಾಮರಸ್ಯ ತರಲು ಸಹಕಾರಿಯಾಗುವುದೆಂದು ನಾನು ಭಾವಿಸುತ್ತೇನೆ.


ಇದನ್ನೂ ಓದಿ: ಊಟ, ಉದ್ಯೋಗ, ಸ್ವಾವಲಂಬನೆ ಎಲ್ಲರ ಹಕ್ಕಾಗಲಿ: 103ನೇ ಜನ್ಮದಿನದಂದು HS ದೊರೆಸ್ವಾಮಿಯವರ ಆಶಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...