Homeಮುಖಪುಟಲಾಕ್‌ಡೌನ್ 15 ದಿನ ವಿಸ್ತರಣೆಗೆ ಹಲವು ಮುಖ್ಯಮಂತ್ರಿಗಳು ಹೇಳಿದ್ದೇನು?

ಲಾಕ್‌ಡೌನ್ 15 ದಿನ ವಿಸ್ತರಣೆಗೆ ಹಲವು ಮುಖ್ಯಮಂತ್ರಿಗಳು ಹೇಳಿದ್ದೇನು?

- Advertisement -
- Advertisement -

ಕೊರೊನಾ ಲಾಕ್‌ಡೌನ್ ಅನ್ನು ಎಪ್ರಿಲ್ 30 ವರೆಗೆ ಮುಂದುವರೆಸಲು, ಪ್ರಧಾನಿ ಮೋದಿ ಮತ್ತು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ವಿಡಿಯೋ ಸಭೆಯಲ್ಲಿ ಒಪ್ಪಿಕೊಂಡಿದ್ದಾರೆ.

ಇಂದು ವಿಡಿಯೋ ಸಮ್ಮೇಳನದಲ್ಲಿ ಮುಖ್ಯಮಂತ್ರಿಗಳೊಂದಿಗೆ ನಾಲ್ಕು ಗಂಟೆಗಳ ಕಾಲ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಕೊರೊನಾ ಲಾಕ್‌ಡೌನ್ ಅನ್ನು ಎರಡು ವಾರಗಳವರೆಗೆ ವಿಸ್ತರಿಸಲಾಗುವುದು ಎಂದು ಸೂಚಿಸಿದ್ದಾರೆ. ಈ ಹಿಂದೆ ಘೋಷಿಸಿದ್ದ 21 ದಿನಗಳ ಲಾಕ್‌ಡೌನ್ ಮಂಗಳವಾರ ಕೊನೆಕೊಳ್ಳುತ್ತದೆ.

“ಪ್ರಧಾನಿ ಲಾಕ್‌ಡೌನ್ ವಿಸ್ತರಿಸಿ ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ. ಲಾಕ್‌ಡೌನ್ ಅನ್ನು ಮೊದಲೇ ಪ್ರಾರಂಭಿಸಿದ್ದರಿಂದ, ಮುಂದುವರಿದ ದೇಶಗಳಿಗಿಂತ ಭಾರತದ ಪರಿಸ್ಥಿತಿ ಉತ್ತಮವಾಗಿದೆ. ಅದನ್ನು ಈಗ ನಿಲ್ಲಿಸಿದರೆ ಎಲ್ಲಾವು ನಷ್ಟವಾಗುತ್ತದೆ. ಲಾಕ್ ಡೌನ್ ವಿಸ್ತರಿಸುವುದು ಮುಖ್ಯವಾಗಿದೆ” ಸಭೆಯ ಕೆಲವೇ ನಿಮಿಷಗಳ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಒಡಿಶಾ ಮತ್ತು ಪಂಜಾಬ್ ಈಗಾಗಲೇ ಲಾಕ್ ಡೌನ್ ವಿಸ್ತರಣೆಯನ್ನು ಘೋಷಿಸಿವೆ. ಬಿಹಾರ ಸರ್ಕಾರ ಕೇಂದ್ರಕ್ಕೆ ಬರೆದ ಪತ್ರದಲ್ಲಿ ಲಾಕ್ ಡೌನ್ ಅನ್ನು ವಿಸ್ತರಿಸಲು ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ; ಆದರೆ ಗ್ರಾಮೀಣ ನಿರ್ಮಾಣ ಮತ್ತು ಪ್ರವಾಹ ಪರಿಹಾರ ಕಾರ್ಯಗಳನ್ನು ಮುಂದುವರೆಸಲು ಬಯಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಬಿಹಾರದಲ್ಲಿ ಕಳೆದ ವರ್ಷ ಭಾರಿ ಪ್ರವಾಹ ಬಂದಿದ್ದರಿಂದ ಅಲ್ಲಿ ಪುನರ್ನಿರ್ಮಾಣ ಕಾರ್ಯಗಳು ಇನ್ನೂ ನಡೆಯುತ್ತಿವೆ.

ಲಾಕ್‌ಡೌನ್ ಅನ್ನು ಈಗಲೇ ತೆಗೆದುಹಾಕಿ ಕೊರೊನಾ ಪ್ರಕರಣಗಳು ಹೆಚ್ಚಾದರೆ ಅದನ್ನು ಎದುರಿಸಲು ಅಗತ್ಯವಾದ ಬೃಹತ್ ಸಂಪನ್ಮೂಲಗಳು ಇಲ್ಲ ಎಂದು ವಿಡಿಯೋ ಸಮ್ಮೇಳನದಲ್ಲಿ ಭಾಗವಹಿಸಿದ ಹೆಚ್ಚಿನ ಮುಖ್ಯಮಂತ್ರಿಗಳು ಹೇಳಿದರು. ಬಿಜೆಪಿ ಅಲ್ಲದ ಎಲ್ಲ ಮುಖ್ಯಮಂತ್ರಿಗಳು ಪ್ರಧಾನಿಯ ಬಳಿ ಪರಿಹಾರ ಪ್ಯಾಕೇಜ್ ಕೇಳಿದರು.

ಲಾಕ್ ಡೌನ್ ವಿಸ್ತರಣೆಯನ್ನು ಘೋಷಿಸಲು ಪ್ರಧಾನಿ ಮೋದಿ ಮತ್ತೆ ರಾಷ್ಟ್ರಕ್ಕೆ ದೂರದರ್ಶನ ಭಾಷಣ ಮಾಡುವ ಸಾಧ್ಯತೆ ಇದೆ. ಇಂದು ನಡೆದ ಸಭೆಯ ಅಂತ್ಯದ ವೇಳೆಗೆ, ಕೈಗಾರಿಕೆಗಳನ್ನು ಶ್ರೇಣೀಕೃತ ರೀತಿಯಲ್ಲಿ ಮತ್ತೆ ತೆರೆಯಲು ಅವಕಾಶ ನೀಡುವುದಾಗಿ ಪ್ರಧಾನಿ ಮೋದಿ ಹೇಳಿದರು.

“ಲಾಕ್‌ಡೌನ್ ಅನ್ನು ವಿಸ್ತರಿಸಿ. ಕೊರೊನಾ ವೈರಸ್ ಅನ್ನು ಎದುರಿಸಲು ಮೂಲಸೌಕರ್ಯಗಳ ಕೊರತೆಯಿಲ್ಲ, ಆದರೆ ನೀತಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದೇ ಪ್ರಶ್ನೆ. ಪ್ರಧಾನಿ ಮೋದಿ ಯಾವಾಗಲೂ ರಾಜ್ಯಗಳ ಸಲಹೆಗಳನ್ನು ಸ್ವಾಗತಿಸಿದ್ದಾರೆ” ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಹೇಳಿದ್ದಾರೆ.

“ರಾಷ್ಟ್ರವ್ಯಾಪಿ ಲಾಕ್‌ಡೌನ್ ವಿಸ್ತರಿಸುವುದು ಮುಖ್ಯ …ಚಳಿಗಾಲದ ಬೆಳೆಗೆ ನಮಗೆ ಸಾಮಾನ್ಯ ಪರಿಹಾರ ನೀಡಬೇಕು” ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಪರಿಸ್ಥಿತಿಗಳು ಕಳವಳಕಾರಿ ಆಗಿರುವುದರಿಂದ ಮಂಗಳವಾರ ಕೊನೆಗೊಳ್ಳಲಿರುವ ಪ್ರಸ್ತುತ ಲಾಕ್‌ಡೌನ್ ವಿಸ್ತರಣೆಯನ್ನು ಪ್ರಧಾನಿ ಮೋದಿ ಸೂಚಿಸಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ.

ಭಾರತದಲ್ಲಿ 7,400 ಕ್ಕೂ ಹೆಚ್ಚು ಕರೋನವೈರಸ್ ಪ್ರಕರಣಗಳನ್ನು ದೃಡಪಟ್ಟಿವೆ ಮತ್ತು 239 ಸಾವುಗಳು ವರದಿಯಾಗಿದೆ. ದೆಹಲಿಯಲ್ಲಿ 903 ಪ್ರಕರಣಗಳು (ದೇಶದಲ್ಲಿ ಮೂರನೇ ಅತಿ ಹೆಚ್ಚು) ಮತ್ತು 13 ಸಾವುಗಳು ವರದಿಯಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...